Breaking News

ಕಾರ್ಲ್ ಮಾರ್ಕ್ಸ್,ರವರ 143ನೇ ಜನ್ಮದಿನ

Karl Marx’s 143rd birthday

ಜಾಹೀರಾತು
Screenshot 2025 03 14 20 00 41 72 E307a3f9df9f380ebaf106e1dc980bb6

 ಇಂದು ಕೊಪ್ಪಳದ ಎಸ್. ಯು. ಸಿ. ಐ (ಕಮ್ಯುನಿಸ್ಟ್ ) ಪಕ್ಷದ ಕಚೇರಿಯಲ್ಲಿ ಕಾರ್ಮಿಕರ ವರ್ಗದ ಮಹಾನಾಯಕ ವೈಜ್ಞಾನಿಕ ಸಮಾಜವಾದದ ಪಿತಾಮಹ ಕಾರ್ಲ್ ಮಾರ್ಕ್ಸ್ ರವರ ಜನ್ಮದಿನವನ್ನು ಆಚರಣೆ ಮಾಡಲಾಯಿತು.

 ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಂಘಟನಾ ಸಮಿತಿ ಕಾರ್ಯದರ್ಶಿಗಳಾದ ಶರಣುಗಡ್ಡಿ ಮಾತನಾಡಿ,”ಕಾರ್ಲ್ ಮಾರ್ಕ್ಸ್, ಕತ್ತಲೆಯಲ್ಲಿ ಸಿಲುಕಿದ್ದ ಹತಭಾಗ್ಯರ ಬದುಕಿಗೆ ಬೆಳಕು ನೀಡಿದ ‘ಪ್ರೊಮೀಥಿಯಸ್!’ (ಗ್ರೀಕ್ ಪುರಾಣದಲ್ಲಿ, ಸ್ವರ್ಗದಿಂದ ಭೂಮಿಗೆ ಬೆಳಕು ತಂದವನು). ಯಾವ ಶೋಷಿತ ಜನರ ರಕ್ತವನ್ನು ಜಿಗಣೆಯಂತೆ ಶ್ರೀಮಂತ ಬಂಡವಾಳಿಗರು ಹಿರುತ್ತಿದ್ದರೋ, ಆ ಜನರ ಕೈಗೆ ಅವರು ಮಾರ್ಕ್ಸ್ ವಾದದ ಅಸ್ತ್ರವನ್ನು ನೀಡಿದರು. “ಮಾನವನು ಹುಟ್ಟಿನಿಂದಲೇ ಸ್ವತಂತ್ರ; ಆದರೆ ಎಲ್ಲಕಡೆಯೂ ಶೃಂಖಲೆಗಳಿಂದ ಬಂಧಿಸಲ್ಪಟ್ಟಿದ್ದಾನೆ” ಎಂದು ರೂಸೋ ಹೇಳಿದ. ಆದರೆ, “ಜಗತ್ತಿನ ಕಾರ್ಮಿಕರಿಗೆ ಕಳೆದುಕೊಳ್ಳಲು ಏನೂ ಉಳಿದಿಲ್ಲ. ಆದರೆ ಗೆಲ್ಲಲು ಇಡೀ ಜಗತ್ತೆ ಇದೆ” ಎಂಬುದನ್ನು ಮಾರ್ಕ್ಸ್ ತಮ್ಮ ಕ್ರಾಂತಿಕಾರಿ ಸಂಗಾತಿ ಮಹಾನ್ ಎಂಗೆಲ್ಸ್ ರ ಜೊತೆಗೂಡಿ ತೋರಿಸಿಕೊಟ್ಟರು. ಎಂದು ಮಾತನಾಡಿದರು.

 ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಶರಣು,ಶರಣಬಸವ ಪಾಟೀಲ್, ಆರ್ ವಿ ಕಾಮನೂರ್, ಗಂಗರಾಜ ಅಳ್ಳಳ್ಳಿ, ಮಂಜುಳಾ ಮಜ್ಜಿಗೆ, ಶಾರದಾ ಗಡ್ಡಿ, ಉಪಸ್ಥಿತರಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.