Breaking News

ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿಮಾಡಿ, ಸಮಾಲೋಚನೆ ನಡೆಸಿ ಬಳಿಕ ಮನವಿಪತ್ರ ಸಲ್ಲಿಕೆ

Today in Delhi, I met Union Civil Aviation Minister Kinjarapu Ramamohan Naidu, held discussions and then submitted a petition.

ಜಾಹೀರಾತು


ದೆಹಲಿ: ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ರ‍್ಕಾರವು ದಿನಾಂಕ ೬-೧೦-೨೦೦೫ ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (೨) (v) ಪ್ರಕಾರ ಕರ‍್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ರ‍್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ರ‍್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ ೨ (ಗಿI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮರ‍್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ರ‍್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ.

ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ ೨೪೦ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ರ‍್ಕಾರವು ೩೧೯.೧೪ ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.

ನವೆಂಬರ್ ೨೦೨೪ ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು ೭ ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ ₹೭೦ ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆ.ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮರ‍್ಗ ಬದಲಾವಣೆಗೆ ೩೧.೮೨ ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ ೧೦೧.೮೨ ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ, ರಾಜ್ಯ ರ‍್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ೨೪೦ ಎಕರೆ ಭೂ ಸ್ವಾಧೀನಕ್ಕೆ ತಗಲುವ ೩೧೯.೧೪ ಕೋಟಿ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ ೧೦೧.೮೪ ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಕೇಳಿ ಮನವಿ ಪತ್ರ ಸಲ್ಲಿಸಲಾಯಿತು ಎಂದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *