Breaking News

ಮುಂದುವರೆದ ತಾಪಂ ಕಚೇರಿಗೆ ಭೇಟಿ ಕಾರ್ಯಕ್ರಮ: ಜಿಪಂ ಸಿಇಓ ಬುಧವಾರ ಕಾರಟಗಿಯಲ್ಲಿ ಲಭ್ಯ

Visit program to Tamam office continued: GPAM CEO available in Karatagy on Wednesday

ಜಾಹೀರಾತು

ಕೊಪ್ಪಳ  ಆಗಸ್ಟ್ 21 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಪ್ರತಿ ಮಂಗಳವಾರ ಆಯಾ ತಾಲೂಕು ಪಂಚಾಯತ್ ಕಾರ್ಯಾಲಯಗಳಿಗೆ ಭೇಟಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಅವರು ಬರುವ ಬುಧವಾರ ಆಗಸ್ಟ್ 23ರಂದು ಕಾರಟಗಿ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ನವಲಿ ರಸ್ತೆಯಲ್ಲಿರುವ ಕಾರಟಗಿ ತಾಲೂಕಿನ ತಾಪಂ ಕಾರ್ಯಾಲಯದಲ್ಲಿ ಹಾಜರಿದ್ದು ಕಾರಟಗಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಅಹವಾಲುಗಳ ಕುರಿತು ಚರ್ಚಿಸಲಿದ್ದಾರೆ. ಆದ್ದರಿಂದ ಕಾರಟಗಿ ತಾಲೂಕಿನ ವ್ಯಾಪ್ತಿಗೆ ಬರುವ ಸಾರ್ವಜನಿಕರು ಹಾಗೂ ಜನ ಪ್ರತಿನಿಧಿಗಳು ಜಿಪಂ ಸಿಇಓ ಅವರನ್ನು ಭೇಡಿ ಮಾಡಿ ತಮ್ಮ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೃಷ್ಣಮೂರ್ತಿ ಪಿ ಅವರು ತಿಳಿಸಿದ್ದಾರೆ.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *