Breaking News

ಸರ್ವೇ ನಂತರ ಹಕ್ಕುಪತ್ರ ವಿತರಣೆ ತಾಪಂಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಮಾಹಿತಿ

Distribution of title deeds after survey, information from TAP Executive Officers Rama Reddy Patil

ಜಾಹೀರಾತು
Screenshot 2025 06 13 18 34 07 62 6012fa4d4ddec268fc5c7112cbb265e7

ಗಂಗಾವತಿ: ತಾಲೂಕಿನ ಶ್ರೀರಾಮನಗರದ ಗುಂತಗಲ್ ಕ್ಯಾಂಪ್ ಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಶುಕ್ರವಾರ ಭೇಟಿ ನೀಡಿ ಹಕ್ಕುಪತ್ರ ವಿತರಣೆ ಕುರಿತು ಮಾಹಿತಿ ಪಡೆದರು.

ನಂತರ ಅವರು ಮಾತನಾಡಿ, ಈಗಾಗಲೇ 2022ರಲ್ಲಿ101 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಬಾಕಿ ಉಳಿದ ಫಲಾನುಭವಿಗಳ ಹಕ್ಕುಪತ್ರ ವಿತರಣೆಗೆ ಕಾಲವಕಾಶ ಬೇಕಾಗುತ್ತದೆ. ಈ ವಿಷಯವನ್ನು ಸಚಿವರಾದ ಶಿವರಾಜ ತಂಗಡಗಿ ಹಾಗೂ ಜಿಲ್ಲಾ ಮಟ್ಟದ ಮೇಲಧಿಕಾರಿಗಳ ಗಮನಕ್ಕೆ ತರಲಾವುದು. ಜೊತೆಗೆ ತಾಲೂಕು ಪಂಚಾಯತ್ ಮತ್ತು ಕಂದಾಯ ಅಧಿಕಾರಿಗಳ ತಂಡ ರಚಿಸಿ ಕೂಲಂಕುಶವಾಗಿ ಸರ್ವೇ ಮಾಡಿಸಿ ವರದಿ ಪಡೆಯಲಾಗುವುದು. ನಂತರ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಶ್ರೀರಾಮನಗರ ಗ್ರಾಪಂ ಅಧ್ಯಕ್ಷರಾದ ಶಾಂತಪ್ಪ, ಸದಸ್ಯರಾದ ಶುಂಕಣ್ಣ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ ಕುರಡಿ, ಗ್ರಾಪಂ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.

ಪ್ರಗತಿ ನಗರಕ್ಕೆ ಭೇಟಿ: ಮರಳಿ ಗ್ರಾಪಂ ವ್ಯಾಪ್ತಿಯ ಪ್ರಗತಿ ನಗರದ ಸರ್ವೇ ನಂಬರ್ 18/2, 21/2 ಸ್ಥಳಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಭೇಟಿ ನೀಡಿ ಹಕ್ಕುಪತ್ರ ವಿತರಣೆ ಕುರಿತು ಸ್ಥಳ ಪರಿಶೀಲನೆ ಮಾಡಿದರು. ಗ್ರಾಪಂ ಪಿಡಿಓ ಬಸವರಾಜಗೌಡ್ರು, ಗ್ರಾಪಂ ಸಿಬ್ಬಂದಿಗಳು ಇದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.