Breaking News

ಅರಿವು ಕೇಂದ್ರಗಳ ಸದುಪಯೋಗ ಪಡೆಯಿರಿ ತಾಪಂ ಇಓ ಶ್ರೀರಾಮರೆಡ್ಡಿ ಪಾಟೀಲ್ ಮಾಹಿತಿ

Make the most of the awareness centers. Information from TAP EO Shri Rama Reddy Patil.

ಜಾಹೀರಾತು
Screenshot 2025 06 18 16 04 21 11 6012fa4d4ddec268fc5c7112cbb265e7

ಗಂಗಾವತಿ : ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರ ಗ್ರಾಮೀಣ ಮಟ್ಟದಲ್ಲಿ ಅರಿವು ಕೇಂದ್ರಗಳನ್ನು ತೆರೆದಿದ್ದು, ಇವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಮರೆಡ್ಡಿ ಪಾಟೀಲ್ ಅವರು ಹೇಳಿದರು.

ನಗರದ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಅರಿವು ಕೇಂದ್ರಗಳ ಸಲಹಾ ಸಮಿತಿ ಸದಸ್ಯರುಗಳಿಗೆ ಬುಧವಾರ ಆಯೋಜಿಸಿದ್ದ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಅರಿವು ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರಗಳಲ್ಲಿ ದಿನಪತ್ರಿಕೆ, ಕಥೆ, ಸಾಹಿತ್ಯ ಪುಸ್ತಕಗಳು ಇರುತ್ತವೆ. ಜೊತೆಗೆ ಸ್ಪರ್ಧಾತ್ಮಕ ವಿಷಯ ಸಂಬಂಧಿಸಿದ ಪುಸ್ತಕಗಳು ಇದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುತ್ತಿರುವ ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬೇಕು. ಕಂಪ್ಯೂಟರ್ ಶಿಕ್ಷಣ ಕಲಿಕೆಗೆ ನೆರವಾಗಲು ಎಲ್ಲ ಕೇಂದ್ರಗಳಲ್ಲಿ ಕಪ್ಯೂಟರ್ ಗಳು ಇದ್ದು, ಇದರ ಸದ್ಬಳಕೆ ಆಗಬೇಕು. ಈ ಬಗ್ಗೆ ಸಲಹಾ ಸಮಿತಿಯವರು ಹಂತಃಂತವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದು ಹೇಳಿದರು.

ವಿಷಯ ನಿರ್ವಾಹಕರಾದ ಶಿವಮೂರ್ತಯ್ಯ ಕಂಪಾಪೂರಮಠ, ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಶೇಖರಪ್ಪ ಸಿಂಧೋಗಿ, ದೇವರಾಜ, ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಂಥಾಲಯ ಮೇಲ್ವಿಚಾರಕರು ಇದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.