Breaking News

ನಂ.೫ ಡಿಸ್ಟಿçಬ್ಯೂಟರ್ ಉಪ ಕಾಲುವೆ ದುರಸ್ತಿಗೆ ರೈತರ ಆಗ್ರಹ

Farmers demand repair of No. 5 distributor sub-canal

ಜಾಹೀರಾತು
Screenshot 2025 06 24 19 56 23 64 6012fa4d4ddec268fc5c7112cbb265e7

ಕೊಪ್ಪಳ: ಜಿಲ್ಲೆಯ ಅಗಳಕೇರಿ ಮತ್ತು ಹಿಟ್ನಾಳ ಸೀಮೆಯಲ್ಲಿ ಹಾದು ಹೋಗುವ ತುಂಗಭದ್ರಾ ಎಡದಂಡೆ ನಾಲೆಯ ೫ನೇ ವಿತರಣಾ ಕಾಲುವೆಯ ೧ನೇ ಪಿ.ಓ. ಕಾಲುವೆ ತ್ಯಾಜ್ಯದಿಂದ ತುಂಬಿಕೊAಡಿದ್ದು ದುರಸ್ತಿಗೊಳಿಸುವಂತೆ ಕೃಷಿಕರು ತುಂಗಭದ್ರಾ ಜಲಮಂಡಳಿಗೆ ಮನವಿ ಮಾಡಿದ್ದಾರೆ.

ನಾಲೆಯ ೫ನೇ ವಿತರಣಾ ಕಾಲುವೆಯಿಂದ ಕೋಳೂರಮ್ಮ ದೇವಿಯ ದೇವಾಲಯ ಹಿಂಭಾಗ ಮತ್ತು ಅಗಳಕೇರಿ ಹಳ್ಳದವರೆಗೆ ಹಾದು ಹೋಗಿರುವ ಉಪ ಕಾಲುವೆ ನೀರು ಪಕ್ಕದ ರೈತರ ಜಮೀನಿನಲ್ಲಿ ಊಟಿಯ ಸ್ವರೂಪದಲ್ಲಿ ಗೋಚರಿಸಿದೆ. ಸುಮಾರು ಅರ್ಧ ಕಿ.ಮೀ. ಉದ್ದದ ಉಪ ಕಾಲುವೆಯ ತುಂಬ ತ್ಯಾಜ್ಯದ ಗಿಡಗಳು ಬೆಳೆದು ನಿಂತಿವೆ. ಸಾಲದ್ದಕ್ಕೆ ಈ ಉಪ ಕಾಲುವೆಗೆ ವ್ಯರ್ಥವಾದ ಹಾಸಿಗೆ, ಬಟ್ಟೆಗಳನ್ನು ಬಿಸಾಡುವುದರಿಂದ ನೀರು ಜಮೆಗೊಂಡು ಮುಂದಕ್ಕೆ ಹರಿಯದಂತಾಗಿದೆ.

ಇದರಿಂದ ಕಾಲುವೆಯ ಕೆಳಭಾಗದ ರೈತರ ಜಮೀನಿನಲ್ಲಿ ನೀರು ಊಟಿ ಉಲ್ಬಣಿಸಿ, ವರ್ಷಪೂರ್ತಿ ನೀರು ಗದ್ದೆಯಲ್ಲಿ ಸಂಗ್ರಹಗೊಳ್ಳುತ್ತಿದೆ. ಇದರಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಭತ್ತ ನಾಟಿ ಮಾಡುವ ರೈತರ ಕೃಷಿ ಚಟುವಟಿಕೆಗಳಿಗೆ ಸಮಸ್ಯೆ ಉಲ್ಬಣಿಸಿದೆ. ತುಂಗಭದ್ರಾ ಜಲ ಮಂಡಳಿ ಅಧಿಕಾರಿಗಳು ತ್ಯಾಜ್ಯವನ್ನು ಸ್ವಚ್ಛಗೊಳಿಸಿ, ಸಿಮೆಂಟ್ ಕಾಂಕ್ರೀಟ್ ಕಾಲುವೆ ನಿರ್ಮಿಸಿ ರೈತರಿಗೆ ನೆರವಾಗಬೇಕು. ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆ ಹಿಡಿಯಬೇಕೆಂದು ಕೋಳೂರಮ್ಮ ಗುಡಿ ವ್ಯಾಪ್ತಿಯ ರೈತರು `ಕಾಡಾ’ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

About Mallikarjun

Check Also

screenshot 2025 10 09 18 37 46 40 e307a3f9df9f380ebaf106e1dc980bb6.jpg

ಕರ್ನಾಟಕ ಇತಿಹಾಸ ಅಕಾಡೆಮಿ ಪ್ರಶಸ್ತಿಗಳು ಪ್ರಕಟ, ಡಾ. ಶರಣಬಸಪ್ಪ ಕೋಲ್ಕಾರ ಸಂಶೋಧನಾ ಶ್ರೀ ಪ್ರಶಸ್ತಿ ಗೆ ಭಾಜನ  

Karnataka Itihasa Academy Awards announced, Dr. Sharanabasappa Kolkara Research Award conferred ಬೆಂಗಳೂರು:  ಕರ್ನಾಟಕ ಇತಿಹಾಸ ಅಕಾಡೆಮಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.