Breaking News

ಕರಡಿ ವೃದ್ದನ ಮೇಲೆ ದಾಳಿ ಗಂಭೀರ ಗಾಯ,,!

Bear attacks elderly man, one person seriously injured!

ಜಾಹೀರಾತು
WhatsApp Image 2025 07 11 At 8.59.31 PM

ಕೊಪ್ಪಳ.ಸುದ್ದ

ಕುಕನೂರು : ತಾಲೂಕಿನ ರ್ಯಾವಣಕಿ ಗ್ರಾಮದ ಮೊರಾರ್ಜಿ ಶಾಲೆಯ ಹಿಂಭಾಗದಲ್ಲಿ ರೈತರು ಹೋಲದಲ್ಲಿ ಕಾರ್ಯ ನಿರತರಾದಾಗ ಹಿಂದಿನಿಂದ ಬಂದ ಕರಡಿಯೊಂದು ವೃದ್ದನ ಮೇಲೆ ದಾಳಿ ನಡೆಸಿದೆ.

ರ್ಯಾವಣಕಿ ಗ್ರಾಮದ ನಾಗಪ್ಪ ಬೆಂಚಳ್ಳಿ ಹಾಗೂ ಆತನ ಪುತ್ರ ಶುಕ್ರವಾರದಂದು ಹೊಲಕ್ಕೆ ತೆರಳಿದ್ದರು.ಈಗ ಹೊಲದಲ್ಲಿ ಕಳೆ ಕೀಳುವುದು, ಬೆಳೆಗಳಿಗೆ ಕ್ರೀಮಿ ನಾಶಕ ಸಿಂಪಡಿಸುವುದು, ಗೊಬ್ಬರ ಹಾಕುವುದು ಮಾಡುವ ಸಮಯವಾದ್ದರಿಂದ ಹೋಲಕ್ಕೆ ತೆರಳಿದ ಸಂದರ್ಭದಲ್ಲಿ ಮಗ ಹೊಲದ ಒಂದು ಬದುವಿನಲ್ಲಿ, ತಂದೆ ಒಂದು ಬದುವಿನಲ್ಲಿ ಕೆಲಸ ಮಾಡುವಾಗ ಕರಡಿ ಏಕಾ ಏಕಿ ದಾಳಿ ನಡೆಸಿದ್ದು, ವೃದ್ದ ನಾಗಪ್ಪ ಕೂಗುವದಕ್ಕೂ ಬಿಡದಂತೆ ದಾಳಿ ಮಾಡಿದೆ.

ಆದರೂ ಮೇಲೆದ್ದು ಮಗನನ್ನು ಕೂಗಿದಾಗ ಕರಡಿ ಸಿಕ್ಕ ಸಿಕ್ಕಲ್ಲಿ ತೆರಚಿ ಗಂಭೀರವಾಗಿ ಗಾಯಗೊಳಿಸಿದ್ದು, ಕೂಡಲೇ ಮಗ ಜೋರಾದ ದ್ವನಿಯಲ್ಲಿ ಓಡಿಸುತ್ತಾ ಬಂದಿದ್ದನ್ನು ಗಮನಿಸಿದ ಪಕ್ಕದ ಜಮೀನಿನವರು ಓಡಿ ರಕ್ಷಣೆಗೆ ಬರುವಷ್ಟರಲ್ಲಿ ರಕ್ತ, ಸಿಕ್ತವಾಗಿ ನಾಗಪ್ಪ ಗಾಯಗೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಪತ್ರಿಕೆಗೆ ಮಾಹಿತಿಯೊದಗಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕಿನ ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಾಗಪ್ಪನವರನನ್ನು ಕರೆದುಕೊಂಡು ಹೋಗಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಎರಡು ದಿನಗಳ ಹಿಂದೆ ಮೂರು ಕರಡಿಗಳು ಆಹಾರ ಅರಸಿ ಈ ಭಾಗದ ಕಡೆಗೆ ಓಡಾಟ ನಡೆಸಿದ್ದು, ಅವುಗಳ ರಕ್ಷಣೆಗೆ ಗುಡ್ಡಗಾಡು ಇಲ್ಲದಿರುವುದರಿಂದ ಹಿಗೇ ಏಕಾ ಏಕಿ ದಾಳಿಗೆ ಮುಂದಾಗುತ್ತಿದ್ದು, ಅರಣ್ಯ ಇಲಾಖೆಯವರು ಕರಡಿಗಳನ್ನು ಬಂಧಿಸಲು ಓಡಾಟ ನಡೆಸಿದ್ದಾರೆ. ಇನ್ನೂ ಪ್ರತಿಯೊಬ್ಬರೂ ಜಮೀನುಗಳಿಗೆ ತೆರಳುವ ಮುನ್ನ ತಮ್ಮ ರಕ್ಷಣೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

About Mallikarjun

Check Also

ಉಪ ಲೋಕಾಯುಕ್ತರಿಂದ ಅ.30, 31 ರಂದು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ

Public inquiry reception program by the Deputy Lokayukta on October 30th and 31st ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.