Breaking News

ಬಸ್ ಚಾಲಕನ ಮೊಬೈಲ್ ಗೀಳು! ಪ್ರಯಾಣಿಕರ ಜೀವಕ್ಕೆ ಹೊಣೆ ಯಾರು…?

Bus driver's mobile phone addiction! Who is responsible for the lives of passengers?
Screenshot 2025 08 19 09 37 44 35 6012fa4d4ddec268fc5c7112cbb265e72153990336066691671 1024x900

ಪ್ರಯಾಣಿಕರ ಜೀವದ ಜೊತೆ ಆಟವಾಡುತ್ತಿರುವ ಚಾಲಕ

ಜಾಹೀರಾತು

ಮೂಡಲಗಿ : ಕರ್ನಾಟಕರಸ್ತೆ ಸಾರಿಗೆ ಸಂಸ್ಥೆಯ ಗೋಕಾಕ ಘಟಕದ ಚಾಲಕರೊಬ್ಬರು ಮೊಬೈಲ್ ಬಳಕೆ ಮಾಡುತ್ತ ಚಾಲನೆ ಮಾಡಿದ್ದು, ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ.ದಿನೇ ದಿನೇ ಅಪಘಾತ ಹೆಚ್ಚುತ್ತಿದು ಕಾರಣ ಮೊಬೈಲ್ ಬಳಕೆ ಒಂದು ಪ್ರಮುಖ ಕಾರಣವಾಗಿದೆ ಎನ್ನುತ್ತಾರೆ ಪ್ರಯಾಣಿಕರು.

ಗೋಕಾಕ ಘಟಕದ ಚಾಲಕರೊಬ್ಬರು(ಅ, 18)ಚಾಲನಾ ಸಮಯದಲ್ಲಿ ಮೊಬೈಲ್ ಬಳಕೆ ಮಾಡಿದ್ದು ಪ್ರಯಾಣಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಶ್ರಾವಣ ಮಾಸದ ಕಡೆಯ ಸೋಮವಾರವಿರುವುದರಿಂದ ಈ ಬಸ್ಸಲ್ಲಿ ಸುಮಾರು 70 ರಿಂದ 80 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳವಂತೆ ಒತ್ತಾಯಿಸಿದ್ದಾರೆ.

ಬಸ್ ಗೋಕಾಕಯಿಂದ ಮೂಡಲಗಿ ಮಾರ್ಗವಾಗಿ ವಿಜಯಪುರ ಹೋಗುತ್ತಿತ್ತು. ನಿಪ್ಪಾಣಿ-ರಾಯಚೂರು ಹೈ-ವೆ ರಸ್ತೆ ತುಂಬಾ ಚಿಕ್ಕದಾಗಿ ಇರುವುದರಿಂದ ವಾರಕ್ಕೊಂದು ಅಪಘಾತವನ್ನು ನೋಡುತ್ತಿರುವ ಪ್ರಯಾಣಿಕರು ತಮ್ಮ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಸ್ಥಿತಿ ನಿರ್ಮಾಣವಾಗಿದೆ.ಬೈಕ್ ಬಿಟ್ಟು ಬಸ್ ಅಲ್ಲಿ ಹೋದ್ರೆ ಬಸ್ ಚಾಲಕರಂತೂ ಬೇಕಾಬಿಟ್ಟಿಯಾಗಿ ಚಾಲನೆ ಮಾಡುವುದು ಮೊಬೈಲ್ ಬಳಸುವುದು.ಇನ್ನು ದಿನನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ.ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೋಯ್ಯುವುದು ಚಾಲಕನ ಕರ್ತವ್ಯವಾಗಿದೆ,ಈ ಬಸ್ ಚಾಲಕನ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಯಾಣಿಕರು ಸಂಸ್ಥೆಯ ಮೇಲಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ವರದಿ: ಮೂಡಲಗಿ

About Mallikarjun

Check Also

screenshot 2025 10 09 09 44 42 09 40deb401b9ffe8e1df2f1cc5ba480b12.jpg

ಭೀಮಣ್ಣ ಖಂಡ್ರೆಯವರು ಶರಣ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಅನರ್ಹ -ಸದ್ಗುರು ಬಸವಪ್ರಭು ಸ್ವಾಮೀಜಿ 

Bhimanna Khandre is not eligible for the Sharan Samaj Seva Ratna award - Sadhguru Basavaprabhu …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.