Breaking News

ಬೆಂಗಳೂರು ವಿವಿ: ಯುವೋತ್ಸವ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗೆ ಭರ್ಜರಿ ರೆಸ್ಪಾನ್ಸ್

Bangalore University: Youth Festival students' cultural talent receives overwhelming response

Screenshot 2025 10 15 19 49 34 26 6012fa4d4ddec268fc5c7112cbb265e78457165471292888530 1024x736

ಬೆಂಗಳೂರು: ಅ.15: ಬೆಂಗಳೂರು ವಿಶ್ವವಿದ್ಯಾಲಯದ
ಜ್ಞಾನಭಾರತಿ ಆವರಣದಲ್ಲಿರುವ ಬಿಎ ವಿಭಾಗದ ಆಶ್ರಯದಲ್ಲಿ ನಡೆದ ಎರಡು ದಿನಗಳ ಕಾಲ ಯುವೋತ್ಸವ ರಾಜ್ಯ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳ ಭರ್ಜರಿಯಾಗಿ ನಡೆಯಿತು.

ಜಾಹೀರಾತು

ಮಂಗಳೂರಿನಿಂದ ಕೋಲಾರದವರೆಗೆ ನಾನಾ ಜಿಲ್ಲೆಗಳಿಂದ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಉತ್ಸಾಹಕ್ಕೆ ಸಾಕ್ಷಿಯಾಯಿತು.

ಇದೇ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಬೆಂಗಳೂರು ವಿವಿಯ ಕುಲಪತಿ ಪ್ರೊ. ಜಯಕಾರ ಎಸ್.ಎಂ. ಅವರು ರಾಜ್ಯದ ಎಲ್ಲೆಡೆಯಿಂದ ವಿದ್ಯಾರ್ಥಿಗಳ ಗಣನೀಯ ಪ್ರತಿಸ್ಪಂದನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಇದೊಂದು ವಿದ್ಯಾರ್ಥಿ ಸಮೂಹದ ಸಮಗ್ರ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ಹೊಂದಿದೆ ಹಾಗೆಯೇ ಪಠ್ಯೇತರ ಚಟುವಟಿಕೆಗಳು ಯುವಜನರ ಸರ್ವಾಂಗೀಣ ವಿಕಾಸಕ್ಕೆ ಅತ್ಯಂತ ಅಗತ್ಯ, ಇವು ಸೃಜನಶೀಲತೆ, ಆತ್ಮವಿಶ್ವಾಸವನ್ನು ಬೆಳೆಸುವುದರೊಂದಿಗೆ ನಾಯಕತ್ವ, ಟೀಮ್ ವರ್ಕ್, ಸಮಯ ನಿರ್ವಹಣೆ ಹಾಗೂ ಸೆಳೆಯಲಾರದ ಜೀವನಪಾಠಗಳನ್ನು ಕಲಿಸುತ್ತದೆ ಎಂದರು.

ಅಭ್ಯಾಸದೊಂದಿಗೆ ಮಾನಸಿಕ ನೆಮ್ಮದಿ, ದೈಹಿಕ ಆರೋಗ್ಯವು ಈ ಚಟುವಟಿಕೆಗಳಿಂದ ಉತ್ತೇಜನವು ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡುವಂತೆ ಮಾಡಲು ನಮ್ಮ ವಿವಿಯ ಪ್ರತಿಯೊಂದು ಸ್ನಾತಕೋತ್ತರ ವಿಭಾಗದಲ್ಲೂ ಸಾಂಸ್ಕೃತಿಕ ಹಂಚಿಕೆಯಡಿಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಒಂದು ಆಸನವನ್ನು ಮೀಸಲಿರಿಸಲಾಗಿದೆ ಎಂದರು.

ಪ್ರೊ. ಎಸ್.ಆರ್. ಕೇಶವ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಎರಡು ದಿನಗಳ ಸ್ಪರ್ಧೆಯಲ್ಲಿ ಪ್ರಬಂಧ ಸ್ಪರ್ಧೆ ಬಹುಮಟ್ಟಿಗೆ ಜನಪ್ರಿಯವಾಗಿದ್ದು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದನ್ನು ಅವರು ಹಂಚಿಕೊಂಡರು.

ನಂತರದಲ್ಲಿ ವಾದ-ವಿವಾದ, ಭಾಷಣ, ನಾಟ್ಯ, ಜನಪದ ನೃತ್ಯ, ಹಾಡು ಮತ್ತು ನಾಟಕಗಳು ಹೆಚ್ಚಿನ ಆಕರ್ಷಣೆಯಾಗಿ ಹೊರಹೊಮ್ಮಿದವು. ಕೊನೆಯಲ್ಲಿ ಸಾಂಸ್ಕೃತಿಕ ಹಬ್ಬದ ಕೊನೆಗೆ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಚನ್ನಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಒಟ್ಟು ಪ್ರಶಸ್ತಿಗಳನ್ನು ಗೆದ್ದು ಒಟ್ಟು ಚಾಂಪಿಯನ್ ಸ್ಥಾನ ಗಳಿಸಿತು. ಬಿಡದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಇದೇ ಸಂದರ್ಭದಲ್ಲಿ ಪ್ರೊ. ಸುರೇಂದ್ರ ಕುಮಾರ್, ಪ್ರೊ.ರಾಮಕೃಷ್ಣಯ್ಯ, ಬಿಎ ವಿಭಾಗದ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು, ಮತ್ತಿತರರು ಭಾಗವಹಿಸಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.