Breaking News

ಜಿಲ್ಲಾ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

Athletes from the district sports hostel selected for state-level competition

Screenshot 2025 10 15 19 57 49 30 E307a3f9df9f380ebaf106e1dc980bb65109360657962527757 1024x460

ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಬೀದರ್‌ನಲ್ಲಿ ಜರುಗಿದ ಕಲಬುರಗಿ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಬೀದರ್‌ನಲ್ಲಿ ಜರುಗಿದ ಕಲಬುರಗಿ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅನಿತಾ, ಶಾರದಾ, ಸ್ಪೂರ್ತಿ, ಸಿಂಧು, ಅರ್ಚನಾ, ಮಾನಸ ಮತ್ತು ಭೂಮಿಕಾ ಅವರನ್ನೊಳಗೊಂಡ ತಂಡ, 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದೀಕ್ಷಿತಾ, ಕಾವೇರಿ, ಲತಾ, ಸ್ಪೂರ್ತಿ, ಪ್ರಿಯಾಂಕ, ಪಾರ್ವತಿ ಹಾಗೂ ಯಲ್ಲಮ್ಮ ಅವರನ್ನೊಳಗೊಂಡ ತಂಡ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಿಖಿಲ್, ರಿಷಿನಾಯಕ್, ಅಭಿಲಾಶ್, ಎಂ.ಡಿ.ಇಮ್‌ದಾದ್ ಶೇಖ್, ಶ್ರೀಶೈಲ್, ಚೇತನ್ ಹಾಗೂ ಪೂಜಿತ್ ಸಿಧು ಅವರನ್ನೊಳಗೊಂಡ ತಂಡಗಳು ಪ್ರಥಮ ಸ್ಥಾನ ಗಳಿಸಿ, ಅ.16 ರಂದು ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಕ್ರೀಡಾಪಟುಗಳಿಗೆ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ್, ವಾಲಿಬಾಲ್ ತರಬೇತುದಾರ ಸುರೇಶ, ಖೇಲೋ ಇಂಡಿಯಾ ವಾಲಿಬಾಲ್ ತರಬೇತುದಾರರಾದ ದೀಪಾ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.