Breaking News

ನ.6, 7 ರಂದು ಮಾನವ ಹಕ್ಕುಗಳ ಆಯೋಗದ ಸದಸ್ಯರ ಕೊಪ್ಪಳ ಜಿಲ್ಲಾ ಪ್ರವಾಸ

Human Rights Commission members to visit Koppal district on November 6th and 7th
ನ.6, 7 ರಂದು ಮಾನವ ಹಕ್ಕುಗಳ ಆಯೋಗದ ಸದಸ್ಯರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ  ನವೆಂಬರ್ 04, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಸದಸ್ಯರಾದ ನ್ಯಾ. ಎಸ್.ಕೆ.ವಂಟಿಗೋಡಿ ಅವರು ನವೆಂಬರ್ 6 ಮತ್ತು 7 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅವರು ನವೆಂಬರ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಸರ್ಕಾರಿ ಪ್ರವಾಸಿ ಮಂದಿರಕ್ಕೆ ತೆರಳುವರು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾದ ಪ್ರಕರಣ ಸಂಖ್ಯೆ: 3095/10/24/2025(ಎಫ್‌ಬಿ) ಗೆ ಸಂಬಂಧಿಸಿದಂತೆ ಕೊಪ್ಪಳ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಮತ್ತು ತಹಶೀಲ್ದಾರ ಹಾಗೂ ಸಂಬAಧಿಸಿದ ಅಧಿಕಾರಿಗಳೊಂದಿಗೆ ಪ್ರಕರಣದ ಬಗ್ಗೆ ಸಭೆ ನಡೆಸುವರು.
ನವೆಂಬರ್ 7 ರಂದು ಮಧ್ಯಾಹ್ನ 12.30 ಕ್ಕೆ ಕೊಪ್ಪಳದಿಂದ ನಿರ್ಗಮಿಸಿ 1.30 ಕ್ಕೆ ಗಂಗಾವತಿಗೆ ತೆರಳುವರು. ಗಂಗಾವತಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನದ ಊಟದ ನಂತರ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾದ ಸ್ವಯಂ ಪ್ರೇರಿತ ದೂರು ಸಂಖ್ಯೆ: 3950/10/24/2024(ಎಫ್‌ಬಿ) ಗೆ ಸಂಬಂಧಿ ಸಿಎ ಗಂಗಾವತಿ ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಮತ್ತು ತಹಶೀಲ್ದಾರ ಹಾಗೂ ಸಂಬAಧಿಸಿದ ಅಧಿಕಾರಿಗಳೊಂದಿಗೆ ಪ್ರಕರಣದ ಬಗ್ಗೆ ಸಭೆ ನಡೆಸುವರು.
ಅಂದು ಸಂಜೆ 6 ಗಂಟೆಗೆ ಗಂಗಾವತಿಯಿಂದ ನಿರ್ಗಮಿಸಿ 7.30 ಕ್ಕೆ ವಿಜಯನಗರದ ವೈಕುಂಠ ಅತಿಥಿಗೃಹಕ್ಕೆ ತೆರಳಿ ವಾಸ್ತವ್ಯ ಮಾಡುವರು ಎಂದು ಗೌರವಾನ್ವಿತ ಸದಸ್ಯರ  ಆಪ್ತ ಸಹಾಯಕರಾದ ರೂಪಾ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.