
ಕೂಲಿ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಕಾರ್ಮಿಕರ ಸಂಘದಿಂದ ಮನವಿ: ಅಧ್ಯಕ್ಷ ದೇವರಾಜ ನಾಯಕ

Appeal from Mahatma Gandhi Employment Guarantee Workers' Association demanding fulfillment of various demands of wage laborers: President Devaraj Nayak

ಗಂಗಾವತಿ: ತಾಲ್ಲೂಕಿನ ಮರಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಮರಳಿ. ಆಚಾರ ನರಸಾಪುರ. ಪ್ರಗತಿ ನಗರ. ಬಸವಣ್ಣ ಕ್ಯಾಂಪ್ ಗದ್ವಾಲ ಕ್ಯಾಂಪ್ ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ, ‘ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಕಾರ್ಮಿಕರ ಸಂಘ’ದ ವತಿಯಿಂದ ಮರಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸವರಾಜಗೌಡ ನಾಯಕ ಅವರ ಮುಖಾಂತರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಕಾರ್ಮಿಕರ ಸಂಘದ ಪದಾಧಿಕಾರಿಗಳು ಮತ್ತು ನೂರಾರು ಕಾರ್ಮಿಕರು ಮರಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉದ್ಯೋಗ ಖಾತ್ರಿಯ ಫಲಾನುಭವಿಗಳು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ನಂತರ ಕಚೇರಿಯ ಮುಂದೆ ಪ್ರತಿಭಟಿಸಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು.ಉದ್ಯೋಗ ಖಾತ್ರಿ ಕಾರ್ಮಿಕರ ಸಂಘದ ಅಧ್ಯಕ್ಷ ದೇವರಾಜ ನಾಯಕ ಅವರು ಮಾತನಾಡಿ ಉದ್ಯೋಗ ಖಾತ್ರಿಗೆ ಸಂಬಂಧಿಸಿದಂತೆ 11 ಬೇಡಿಕೆಗಳಿಗಾದ ಕಳೆದ ಹಲವು ವಾರಗಳಿಂದ ಕಾರ್ಮಿಕರಿಗೆ ಪಾವತಿಯಾಗಬೇಕಿರುವ 100 ದಿನಗಳ ಬಾಕಿ ಕೂಲಿಯನ್ನು ತಕ್ಷಣವೇ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಬೇಕು.ಮೇಟಿಗಳಿಗೆ 2022 ರಿಂದ ಇಲ್ಲಿವರೆಗೆ ಪ್ರೋತ್ಸಾಹ ಧನ ಬರಿಸಬೇಕು. ಅಪಘಾತ ವಿಮೆ. ಮಾರ್ಚ್ 15ರ ಒಳಗೆ 14 ದಿನ ಕೆಲಸವನ್ನು ಕೊಡುವುದು ಸೇರಿದಂತೆ 11 ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಸಲ್ಲಿಸಿದ್ದೇವೆ.ಗ್ರಾಮೀಣ ಭಾಗದ ಬಡ ಜನರ ಜೀವನಾಡಿಯಾಗಿರುವ ಉದ್ಯೋಗ ಖಾತ್ರಿ ಯೋಜನೆಯು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಕೂಲಿ ಪಾವತಿಯಲ್ಲಿನ ವಿಳಂಬದಿಂದ ಕಾರ್ಮಿಕರ ಕುಟುಂಬಗಳು ಸಂಕಷ್ಟದಲ್ಲಿವೆ. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಒಂದು ವಾರದೊಳಗೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಮನವಿ ಸ್ವೀಕರಿಸಿ ಮಾತನಾಡಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ ಗೌಡ ನಾಯಕ ಅವರು ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರವೇ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ
ಗೌರವ ಅಧ್ಯಕ್ಷರಾದ ದೊಡ್ಡಬಸಪ್ಪ ಕಲ್ಮಟ್ಟಿ.ಉಪಾಧ್ಯಕ್ಷ ಯಂಕಣ್ಣ. ಪ್ರಧಾನ ಕಾರ್ಯದರ್ಶಿ ಯಮನೂರಪ್ಪ ಚುಕ್ಕಾಡಿ , ಖಜಾಂಚಿ ಹನುಮಂತಪ್ಪ ಜಂಗ್ಲಿ ಸೇರಿದಂತೆ ಉದ್ಯೋಗ ಖಾತ್ರಿಯ ಮೇಟಿಗಳು.ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಮಹಿಳಾ ಕಾರ್ಮಿಕರು ಉಪಸ್ಥಿತರಿದ್ದರು.



