
ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ನಿಸ್ವಾರ್ಥ ಸೇವೆಯಿಂದ ಮಾಡುತ್ತೇನೆ: ಎ.ಭಾರತಿ
I will fulfill the responsibility given by the party with selfless service: A. Bharathi

ಗಂಗಾವತಿ: ಭಾರತೀಯ ಜನತಾ ಪಾರ್ಟಿ ನಗರ ಘಟಕ ಮತ್ತು ಗ್ರಾಮೀಣ ಘಟಕದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಗಿದ್ದು, ಬಿಜೆಪಿ ನಗರ ಘಟಕ ಅಧ್ಯಕ್ಷ ಚಂದ್ರಶೇಖರ್ ಹೀರೂರು ಮತ್ತು ಗ್ರಾಮೀಣ ಘಟಕ ಅಧ್ಯಕ್ಷ ಡಿ.ಕೆ.ಆಗೋಲಿ ಇಬ್ಬರೂ ಕೂಡಿಕೊಂಡು ಕ್ಷೇತ್ರದ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರ ನಿರ್ದೇಶನದ ಮೇರೆಗೆ ಹೊಸ ಸಾರಥಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ, ಪಕ್ಷಕ್ಕೆ ನಿಷ್ಠೆ ಮತ್ತು ಸ್ವಾಭಿಮಾನದಿಂದ ಕೆಲಸ ಮಾಡುವ ಕಾರ್ಯಕರ್ತರಿಗೆ ಈ ಬಾರಿ ಆಯ್ಕೆ ಮಾಡಿದ್ದಾರೆ. ನಗರದಲ್ಲಿ ಎ.ಭಾರತಿ ಗಂಡ ಕೃಷ್ಣ ಆಗಲೂರು ಇವರು ಬಿಜೆಪಿ ಪಕ್ಷದಲ್ಲಿ ಸುಮಾರು 20 ವರ್ಷಗಳ ಹೆಚ್ಚು ಕಾಲ ಪಕ್ಷಕ್ಕಾಗಿ ಸಕ್ರಿಯವಾಗಿ ಕಾರ್ಯಕರ್ತೆಯಾಗಿ ನಿರಂತರ ಪಕ್ಷದಲ್ಲಿದ್ದರೂ ಸಹ ಗುರುತಿಸಲಿಲ್ಲ ಆದರೆ, ಗಂಗಾವತಿ ಕ್ಷೇತ್ರಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರು ಬಂದು ಕೆ.ಆರ್.ಪಿ ಪಕ್ಷಕ್ಕೆ ವಿಧಾನಸಭೆಗೆ ಸ್ಪರ್ಧಿಸಿದ್ದರು ಆನಂತರ ಬಿಜೆಪಿಯಲ್ಲಿದ್ದ ಇವರು ಗಾಲಿ ಜನಾರ್ದನ್ ರೆಡ್ಡಿ ಅವರ ಕೆಆರ್ಪಿಗೆ ಸೇರಿಕೊಂಡು ನಗರ ಮಂಡಲ ಮಹಿಳಾ ಸದಸ್ಯರಾಗಿ ಸಕ್ರಿಯವಾಗಿ ಕೆಲಸವನ್ನು ಮಾಡಿದ್ದು, ಇವರ ಸೇವೆಯನ್ನು ಗುರುತಿಸಿದ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾಗಿ ನಮ್ಮ ನಿರ್ದೇಶನ ಮಾಡಿದ್ದರು ಮತ್ತು ಈಗ ಬಿಜೆಪಿ ಬಿಜೆಪಿಗೆ ಹೊಸ ಪದಾಧಿಕಾರಿಗಳ ಆಯ್ಕೆ ಮಾಡುವಲ್ಲಿ ಶಾಸಕರಾದ ಜನಾರ್ದನ ರೆಡ್ಡಿ ಅವರು ನಗರ ಬಿಜೆಪಿ ಮಹಿಳಾ ಮೊರ್ಚ ಮಂಡಲ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಬಹಳ ವರ್ಷಗಳಿಂದ ಬಿಜೆಪಿಯಲ್ಲಿ ವರ್ತಿಸಿಕೊಂಡೆ ಸಕ್ರಿಯ ರಾಜಕಾರಣದಲ್ಲಿ ತೊಡಗಿರುವ ಇವರು ಮುಂದಿನ ದಿನಮಾನಗಳಲ್ಲಿ ನಡೆಯುವ ಪ್ರತಿಯೊಂದು ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಕಾರ್ಯಕರ್ತರನ್ನು ಒಗ್ಗೂಡಿಸಿ ಮತ್ತು ಬಿಜೆಪಿ ಪಕ್ಷದ ಕೇಂದ್ರ ಸರ್ಕಾರ ಮತ್ತು ಈ ಹಿಂದೆ ನಡೆಸಿದ ರಾಜ್ಯ ಸರ್ಕಾರದ ಅಭಿವೃದ್ಧಿಗಳ ಬಗ್ಗೆ ಯೋಜನೆಗಳ ಬಗ್ಗೆ ವಿವರವಾದ ವಿಷಯಗಳನ್ನು ಪ್ರತಿಯೊಬ್ಬರ ಮಹಿಳೆಯರಿಗೆ ಮನಮುಟ್ಟುವಂತೆ ತಲುಪಿಸಿ, ಮಹಿಳೆಯರ ಮತಗಳನ್ನು ಸೆಳೆದುಕೊಳ್ಳುವ ಚಾಣಾಕ್ಷತನ ಇವರಿಗೆ ಇರುವುದರಿಂದ, ಕ್ಷೇತ್ರದ ಶಾಸಕರು ಇವರನ್ನು ನಗರ ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆಂದು ತಿಳಿದು ಬಂದಿದೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ಪಕ್ಷ ನನ್ನನ್ನು ಗುರುತಿಸಿ ಒಂದು ಜವಾಬ್ದಾರಿಯನ್ನು ನೀಡಿ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಶ್ರದ್ಧೆ ಮತ್ತು ನಿಸ್ವಾರ್ಥ ಸೇವೆಯಿಂದ ಪಕ್ಷಕ್ಕಾಗಿ ಸಂಘಟನೆ ಮಾಡಿ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆಂದು ತಿಳಿಸಿದರು.




