ಆನೆಗುಂದಿ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ

Cleanliness campaign led by Anegundi Gram Panchayat

ಆನೆಗುಂದಿ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ

ಜಾಹೀರಾತು


ಗಂಗಾವತಿ. ತಾಲೂಕಿನ ಆನೆಗುಂದಿ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಮಂಗಳವಾರದಂದು ಜಿಲ್ಲಾಧಿಕಾರಿಗಳು ಕೊಪ್ಪಳ, ಇವರ ಆದೇಶದಂತೆ ಆನೆಗುಂದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಪೊಲೀಸ್ ಇಲಾಖೆ ಸಿಬ್ಬಂದಿಗಳು ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿಗಳೊಂದಿಗೆ nrlm ಇಲಾಖೆ ಸಿಬ್ಬಂದಿ ರವರು ಆನೆಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಂಜನಾದ್ರಿ ಬೆಟ್ಟದ ಮುಂಭಾಗದ ಅಂಗಡಿ ಮತ್ತು ಹೋಟೆಲ್ಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕುರಿತು ನೋಟಿಸ್ ಅನ್ನು ನೀಡಲಾಯಿತು ಹಾಗೆಯೇ ಏಕ ಬಳಕೆ ಪ್ಲಾಸ್ಟಿಕ್( ಕ್ಯಾರಿ ಬ್ಯಾಗ್ ಪ್ಲಾಸ್ಟಿಕ್ ಸ್ಪೂನ್, ಟೀ ಕಪ್ಸ್, ಪ್ಲಾಸ್ಟಿಕ್ ಗ್ಲಾಸ್, ಸ್ಟ್ರಾ,) ಬಳಸುತ್ತಿದ್ದ ಅಂಗಡಿಗಳಿಂದ ಜಪ್ತಿ ಮಾಡಲಾಯಿತು.ಹಾಗೂ ಪ್ಲಾಸ್ಟಿಕ್ ಬಳಸುವಂತಹ ಅಂಗಡಿಗಳಿಗೆ 500 ರೂ ದಂಡ ಕಟ್ಟಿಸಿಕೊಳ್ಳಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಪಿಡಿಒ ಮಲ್ಲಿಕಾರ್ಜುನ್ ಕಡಿವಾಳ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ದುಷ್ಪರಿಣಾಮ ಹಾಗೂ ಪರಿಸರದ ಕಲುಷಿತಗೊಳಿತು ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಕಿಷ್ಕಿಂದ ಹಾಗೂ ಪಂಪ ಸರೋವರ ಮತ್ತಿತರ ಭಾಗಗಳಲ್ಲಿ ಜನ ಜಾಗೃತಿ ಜೊತೆಗೆ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡದಂತೆ ತಿಳಿಸಿ ದರು. ಈ ಸಂದರ್ಭದಲ್ಲಿ l ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು