ಅಡುಗೆ ಅನಿಲದ ಬಗೆಗಿನ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ: ಡಾ.ಸುರೇಶ್ ಬಿ.ಇಟ್ನಾಳ

Don't listen to false rumors about cooking gas: Dr. Suresh B. Itnal

ಅಡುಗೆ ಅನಿಲದ ಬಗೆಗಿನ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ: ಡಾ.ಸುರೇಶ್ ಬಿ.ಇಟ್ನಾಳ

ಜಾಹೀರಾತು

ಕೊಪ್ಪಳ ಮಾರ್ಚ್ 16, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ದಾಸ್ತಾನು ಲಭ್ಯವಿದ್ದು, ಗ್ರಾಹಕರು ಗಾಬರಿಗೊಳ್ಳಬಾರದು ಹಾಗೂ ಸಿಲಿಂಡರ್ ಕೊರತೆ ಉಂಟಾಗಿದೆ ಎಂಬ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಡಾ.ಸುರೇಶ್. ಬಿ. ಇಟ್ನಾಳ ಅವರು ತಿಳಿಸಿದ್ದಾರೆ.


ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲ ಕೊರತೆ ಇಲ್ಲವಾದ್ದರಿಂದ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಹಾಗೂ ಗೃಹ ಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು ಕೊರತೆಗಳು ಇದ್ದಲ್ಲಿ ಕೊಪ್ಪಳ ಜಿಲ್ಲೆಯ ಗೃಹ ಬಳಕೆ ಅಡುಗೆ ಅನಿಲ ಗ್ರಾಹಕರು .

ಸಹಾಯವಾಣಿ ಸಂಖ್ಯೆ: 08539-221515 ಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.