ಬ್ರಹ್ಮಶ್ರೀನಾರಾಯಣಗುರುಜಯಂತಿ:ಪುಷ್ಪನಮನ ಸಲ್ಲಿಕೆ

H.Mallikarjun
H.Mallikarjun - Kalyanasiri
1 Min Read

Brahmashree Narayan Guru Jayanti: Offering floral tributes

ಜಾಹೀರಾತು


ಕೊಪ್ಪಳ ಆಗಸ್ಟ್ 31 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 31ರಂದು ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಸಮಾಜದ ಅಧ್ಯಕ್ಷರಾದ ಈರಣ್ಣ ಹುಲಿಗಿ, ಮುಖಂಡರಾದ ಗಟ್ಟೆಪ್ಪ ಹೊಸಳ್ಳಿ, ನಾಗರಾಜ ಹೊಸಳ್ಳಿ, ಫಕೀರಪ್ಪ ಲಾಚನಕೇರಿ, ವೆಂಕಟೇಶಪ್ಪ ಗಂಗಾವತಿ, ಮಂಜುನಾಥ ಲಾಚನಕೇರಿ, ನಾಗರಾಜ, ಮರಿಯಪ್ಪ ಈಳಿಗೇರಾ, ಜಿಲ್ಲಾಧಿಕಾರಿ ಕಚೇರಿಯ ಮಹೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು
ಸಿಬ್ಬಂದಿ ಮತ್ತಿತರರು ಇದ್ದರು.

Total Views: 0
Share This Article