ಜಾಹೀರಾತು

anti-terrorism Day: Oath taking ceremony
ಜಾಹೀರಾತು


ಭಯೋತ್ಪಾದನಾ ವಿರೋಧಿ ದಿನ: ಪ್ರಮಾಣ ವಚನ ಸ್ವೀಕಾರ
ಕೊಪ್ಪಳ ಮೇ 21 (ಕರ್ನಾಟಕ ವಾರ್ತೆ): ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಪ್ರಮಾಣ ವಚನ ಬೋಧಿಸಿದರು. ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಖಜಾನಾಧಿಕಾರಿಗಳಾದ ಕೆ.ಸುರೇಶ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪ್ರಮಾಣ ವಚನ ಸ್ವೀಕರಿಸಿದರು.
Total Views:
0
