Breaking News

ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಅವರಿಂದ ವಸತಿ ನಿಲಯದ ವ್ಯವಸ್ಥೆ ಪರಿಶೀಲನೆ

Inspection of hostel arrangement by District Collector, GPAM CEO

ಕೊಪ್ಪಳ ಅಕ್ಟೋಬರ್ 08 (ಕ.ವಾ.) : ಉಪ ಲೋಕಾಯುಕ್ತರು ಅಕ್ಟೋಬರ್ 08ರಂದು ವಸತಿ ನಿಲಯಗಳಿಗೆ
ಅನಿರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಕಿನ್ನಾಳ ರಸ್ತೆಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಆಗಮಿಸಿ ವಸತಿ ನಿಲಯದ ಸ್ಥಿತಿಗತಿ ಪರಿಶೀಲಿಸಿದರು.
ನಿಲಯದ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಅಲ್ಲಿನ ಊಟದ ವ್ಯವಸ್ಥೆ, ಕುಡಿಯುವ ನೀರು, ಕಟ್ಟಡದ ವ್ಯವಸ್ಥೆ ಸೇರಿದಂತೆ ನಾನಾ ಮಾಹಿತಿ ಪಡೆದರು. ಊಟ ಸರಿಯಾಗಿರುವುದಿಲ್ಲ. ಕಟ್ಟಡವು ಇಕ್ಕಟ್ಟಾಗಿದೆ. ಅಧಿಕಾರಿಗಳು ಭೇಟಿ ನೀಡಿಲ್ಲ. ಬೆಡ್ ಇಲ್ಲ. ಬಿಸಿ ನೀರು ಬರುತ್ತಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದರು.
ವಾರದೊಳಗೆ ಎಲ್ಲ ವ್ಯವಸ್ಥೆಯನ್ನು ಸರಿಪಡಿಸಲು ಕ್ರಮ ವಹಿಸುವುದಾಗಿ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಓ ಅವರು ತಿಳಿಸಿದರು.
ಊಟ ಮಾಡಿದರು: ಗಂಟೆಗೂ ಹೆಚ್ಚು ಕಾಲ ವಸತಿ ನಿಲಯದಲ್ಲಿದ್ದು ವಸತಿ ನಿಲಯದ ವ್ಯವಸ್ಥೆಯ ಬಗ್ಗೆ ಸಮಗ್ರ ಮಾಹಿತಿ ಪಡೆದ ಬಳಿಕ ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಮತ್ತು ಅಪರ ಜಿಲ್ಲಾಧಿಕಾರಿಗಳು ವಸತಿ ನಿಲಯದ ವಿದ್ಯಾರ್ಥಿಗಳೊಂದಿಗೆ ವಸತಿ ನಿಲಯದಲ್ಲಿ ಊಟ ಮಾಡಿ ಆಹಾರದ ಗುಣಮಟ್ಟ‌‌ ಪರೀಕ್ಷಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಜು ಹಾಗೂ ಇನ್ನೀತರರು ಇದ್ದರು.

About Mallikarjun

Check Also

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.