Breaking News

22ನೇ ಕಲ್ಯಾಣ ಪರ್ವಕ್ಕೆ ಬಸವ ಧರ್ಮ ಪೀಠ ಸಂಪೂರ್ಣವಾಗಿ ಸಜ್ಜು

Basava Dharma Peetha is fully equipped for 22nd Kalyana Parva

ಜಾಹೀರಾತು

ಹುಮನಾಬಾದ: ಮನುಕುಲದ ಉದ್ಧಾರಕ ಅಣ್ಣ ಬಸವಣ್ಣನವರು ಮೆಟ್ಟಿದ ಧರೆ ಪಾವನ ಭೂಮಿ ಬಸವಕಲ್ಯಾಣದ ಬಸವ ಪೀಠದ ಮಹಾಮನೆಯ ಆವರಣದಲ್ಲಿ 22ನೇ ಕಲ್ಯಾಣ ಪರ್ವ ಕಾರ್ಯಕ್ರಮ ಆಚರಣೆಗೆ ಬಸವ ಧರ್ಮ ಪೀಠ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಬಸವಕುಮಾರ ಸ್ವಾಮಿಜಿ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀಗಳು ಪೂಜ್ಯ ಗಂಗಾ ಮಾತಾಜಿಯವರ ಅಧ್ಯಕ್ಷತೆಯಲ್ಲಿ ಹಾಗೂ ಪರಮ ಪೂಜ್ಯ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿಗಳವರ
ನೇತೃತ್ವದಲ್ಲಿ ಇದೆ ತಿಂಗಳು 28,29,30ರ ಈ ಮೂರು ದಿವಸಗಳ ಕಾಲ ಅತ್ಯಂತ ಶಿಸ್ತು ಬದ್ಧವಾಗಿ, ಅರ್ಥಪೂರ್ಣವಾಗಿ ಕಾರ್ಯಕ್ರಮವು
ಸಾಗಲಿದೆ ಎಂದರು.

ಪರಮ ಪೂಜ್ಯ ಅನಿಮಿಷಾನಂದ ಸ್ವಾಮಿಜಿಗಳು ಮಾತನಾಡಿ ಕಲ್ಯಾಣ ಪರ್ವಕ್ಕೆ ಕರ್ನಾಟಕ, ತೆಲಂಗಾಣ ಮಹಾರಾಷ್ಟ್ರ, ತಮಿಳುನಾಡು, ಗೋವಾ ಸೇರಿದಂತೆ ಮೊದಲಾದ ರಾಜ್ಯಗಳಿಂದ ಸಾವಿರಾರು ಶರಣ ಬಂಧುಗಳು ಭಾಗವಹಿಸಲಿದ್ದಾರೆ. ವರ್ಷಕ್ಕೆ ಒಮ್ಮೆಯಾದರೂ ಕಲ್ಯಾಣ ಪರ್ವಕ್ಕೆ ಬಂದು ಧನ್ಯರಾಗಬೇಕು. ಅಂದಾಗಲೇ ಮಾತ್ರ ನಮ್ಮ ಜೀವನ ಪಾವನವಾಗುತ್ತದೆ ಎಂದರು.

ಈ ಪವಿತ್ರ ಕಲ್ಯಾಣ ಪರ್ವ ಸಮಾವೇಶಕ್ಕೆ ಜಾತಿ,ಮತ ಪಂಥಗಳ ಭೇದವಿಲ್ಲದೆ, ಸರ್ವರಿಗೂ ಆದರದ ಸ್ವಾಗತವಿದೆ.ಬಸವಾಭಿಮಾನಿಗಳ ದೇಹದಲ್ಲಿ ಜೀವ ಇರುವವರೆಗೂ ಒಮ್ಮೆಯಾದರೂ ಕಲ್ಯಾಣ ಪರ್ವದಲ್ಲಿ ಭಾಗಿಯಾಗಿ ಪಾವನರಾಗಬೇಕು.

ಪರಮ ಪೂಜ್ಯ ಬಸವಪ್ರಕಾಶ ಸ್ವಾಮಿಜಿ ಮಾತನಾಡಿ ಮೂರು ದಿವಸಗಳ ಕಾಲ ಯೋಗ , ಇಷ್ಟಲಿಂಗ ಪೂಜೆ, ಪ್ರಾರ್ಥನೆ,ಶರಣ ಸ್ಮರಣೆ, ಧರ್ಮಚಿಂತನೆ,ವಿಚಾರಗೋಷ್ಟಿ, ವಚನ ಸಂಗೀತ, ವಚನ ನೃತ್ಯ ,ಪೀಠಾರೋಹಣ,ಪಥ ಸಂಚಲನ, ಪ್ರಶಸ್ತಿ ಪ್ರದಾನ ಸೇರಿದಂತೆ ಇತ್ಯಾದಿ ಕಾರ್ಯಕ್ರಮಗಳು ನೆರವೇರಲಿವೆ ಎಂದರು.

  • ಸಂಗಮೇಶ ಎನ್ ಜವಾದಿ.
    ಸಾಹಿತಿ,ಪತ್ರಕರ್ತರು, ಪರಿಸರ ಸಂರಕ್ಷಕರು.

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.