Breaking News

ಸಹಾಯಕ ಆಯುಕ್ತರ ಕಚೇರಿ: ಅಶೋಕಸ್ವಾಮಿ ಹೇರೂರ ಸ್ವಾಗತ.

Office of the Assistant Commissioner: Welcome to Ashokaswamy Heroor.

ಗಂಗಾವತಿ: ನಗರದಲ್ಲಿ ಸಹಾಯಕ ಆಯುಕ್ತರ ಕಚೇರಿ ಆರಂಭಿಸುತ್ತಿರುವುದನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಸ್ವಾಗತಿಸಿದ್ದಾರೆ.

ನೂತನವಾಗಿ ಕೊಪ್ಪಳ ಜಿಲ್ಲೆ ಆರಂಭವಾದಗಿನಿಂದಲೇ ಗಂಗಾವತಿ ನಗರದಲ್ಲಿ ಸಹಾಯಕ ಔಷಧ ನಿಯಂತ್ರಕರ ಕಚೇರಿ ಆರಂಭಿಸುವಂತೆ ಸಂಸ್ಥೆಯಿಂದ ನಿರಂತರವಾಗಿ ಪತ್ರ ವ್ಯವಹಾರ ನಡೆಸಲಾಗಿತ್ತು ಎಂದು ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕರರೂ ಆಗಿರುವ ಹೇರೂರ ತಿಳಿಸಿದ್ದಾರೆ.

ಕಾಂಗ್ರೆಸ್‌ ಧುರಿಣೆ ಶೈಲಜಾ ಹಿರೇಮಠ, ಡಾ.ಶಿವಕುಮಾರ ಪಾಟೀಲ್,ಗುಡ್ಲಾನೂರ ಮಂಜುನಾಥ ನೇತ್ರತ್ವದಲ್ಲಿ ಅಶೋಕಸ್ವಾಮಿ ಹೇರೂರ ಮತ್ತಿತರರು ಸಚಿವ ಶಿವರಾಜ ತಂಗಡಿಯವರಿಗೆ ಕಿಷ್ಕಿಂದಾ ಜಿಲ್ಲಾ ರಚನೆ, ಸಹಾಯಕ ಆಯುಕ್ತರ ಕಚೇರಿ ಮತ್ತು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಅಸ್ತಿತ್ವಕ್ಕೆ ತರಲು ಒತ್ತಾಯಿಸಲಾಗಿತ್ತು.

ಇದರಂತೆ ಗಂಗಾವತಿ ಶಾಸಕರಾದ ಜನಾರ್ಧನ ರೆಡ್ಡಿಯವರಿಗೂ ಮನವಿ ಸಲ್ಲಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಅಲ್ಲದೆ,ಕಿಷ್ಕಿಂದಾ ಜಿಲ್ಲಾ ಹೋರಾಟ ಸಮಿತಿ ಹಾಗೂ ಗಂಗಾವತಿ ವಕೀಲರ ಸಂಘ ಇವುಗಳ ಒತ್ತಾಸೆಯ ಮೇರೆಗೆ ಗಂಗಾವತಿ ನಗರದಲ್ಲಿ ಸಹಾಯಕ ಪ್ರಾದೇಶಿಕ ಕಚೇರಿ ಆರಂಭವಾಗಲು ಕಾರಣವಾಯಿತು ಎಂದು ಅಶೋಕಸ್ವಾಮಿ ಸಂತೋಷ ವ್ಯಕ್ತಪಡಿಸಿದ್ದಾರೆ.

About Mallikarjun

Check Also

ಮತದಾನ ಮಾಡದವರ ಪೌರತ್ವ ನಿಷೇಧಿಸಿ: ಸಗ್ರೀವಾ

ಗಂಗಾವತಿ.ಮೇ.06: ಲೋಕಸಭಾ ಚುನಾವಣೆ ನಿಮಿತ್ತ ಮೇ.07ರಂದು ನಡೆಯುವ ಮತದಾನದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಬೇಕು. ಮತದಾನ ಮಾಡದೆ ಹೊರ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.