Breaking News

ಚರಂಡಿಪಾಲಾಗುತ್ತಿರುವ ಕುಡಿಯುವ ನೀರು,ಕಣ್ಣು ಮುಚ್ಚಿ ಕುಳಿತ ನಗರಸಭೆ ಅಧಿಕಾರಿಗಳು

Drinking water flowing into drains, municipal officials sitting with their eyes closed

ಜಾಹೀರಾತು
IMG 20231028 WA0251 135x300

ಗಂಗಾವತಿ.ಅ.28: ಕಳೆದ ಒಂದು ವಾರದಿಂದ ಕುಡಿಯುವ ನೀರು ರಸ್ತೆ ತಂಬಾ ಹರಿದು ಚರಂಡಿ ಪಾಲಾಗಿ ಪೋಲಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಜಂತಕಲ್ ರೋಡ್ ನ ಬೈ ಪಾಸ್ ರಸ್ತೆಯ ಬಳಿ ಕುಡಿಯುವ ನೀರು ಪೂರೈಕೆಯ ಪೈಪ್ ಒಡೆದು ಒಂದು ವಾರ ಕಳೆದಿದೆ. ನೀರು ಪೋಲಾಗುತ್ತಿರುವ ಬಗ್ಗೆ ಸ್ಥಳೀಯರು ನಗರಸಭೆ ಸಿಬ್ಬಂದಿಗೆ ಮಾಹಿತಿ ನೀಡಿದರೂ ಕ್ಯಾರೇ ಎಂದಿಲ್ಲ. ಮಳೆಯ ಕೊರತೆಯಿಂದಾಗಿ ಕೆರೆ, ಜಲಾಶಯಗಳು ಒಣಗುತ್ತಿವೆ. ಜಿಲ್ಲೆಯಲ್ಲಿ ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಜಿಲ್ಲಾಡಳಿತ ನೀರನ್ನು ಪೋಲು ಮಾಡದೆ ಮಿತವಾಗಿ ಬಳಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತಿದೆ. ಆದರೆ ನಗರಸಭೆ ಸಿಬ್ಬಂದಿ ಮಾತ್ರ ಇದ್ಯಾವುದೂ ತಮಗೆ ಸಂಬಂಧವಿಲ್ಲ ಎಂಬಂತೆ ಕಣ್ಮುಚ್ಚಿ ಕುಳಿತಿದ್ದಾರೆ. ನಗರಸಭೆ ಸಿಬ್ಬಂದಿ ಇತ್ತ ಗಮನ ಹರಿಸಿ ಒಡೆದು ಹೋದ ಕುಡಿಯುವ ನೀರು ಪೂರೈಕೆಯ ಪೈಪ್ ನ್ನು ಕೂಡಲೇ ಬದಲಾಯಿಸಿ ಅತ್ಶಮೂಲ್ಶವಾದ ಜೀವಜಲ ರಸ್ತೆಗೆ ಹರಿದು ಪೋಲಾಗುವುದನ್ನ ತಡೆಯಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

About Mallikarjun

Check Also

screenshot 2025 10 15 21 38 17 03 6012fa4d4ddec268fc5c7112cbb265e7.jpg

ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.