Breaking News

ಗಂಗಾವತಿ-ವಿಜಯಪುರ ರೇಲ್ವೆಗಾಗಿ ಸಂಸದರಿಗೆ ಅಶೋಕಸ್ವಾಮಿ ಹೇರೂರ ಒತ್ತಾಯ

Ashokaswamy Heroor urges MPs for Gangavati-Vijaypur railway

ಜಾಹೀರಾತು
IMG 20231106 WA0189 300x222

ಗಂಗಾವತಿ: ಗಂಗಾವತಿ-ವಿಜಯಪುರ ರೇಲ್ವೆ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಮಹಾ ಮಂಡಳದ ನಿರ್ದೇಶಕ ಅಶೋಕಸ್ವಾಮಿ ಹೇರೂರ,ಸಂಸದ ಕರಡಿ ಸಂಗಣ್ಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಸೊಲ್ಲಾಪುರ ಮತ್ತು ಮುಂಬೈ ರೇಲ್ವೆ ಸೌಲಭ್ಯದಿಂದ ಗಂಗಾವತಿ ಜನತೆ ವಂಚಿತರಾಗಿರುವುದರಿಂದ ಗಂಗಾವತಿ-ವಿಜಯಪುರ ರೇಲ್ವೆ ಪ್ರಾರಂಭಿಸಿ,ಈ ಭಾಗದ ಜನತೆಗೆ ಸೌಲಭ್ಯ ಒದಗಿಸಬೇಕೆಂದು ಕೋರಿದ್ದಾರೆ.

ಈ ಪತ್ರದ ಪ್ರತಿಯನ್ನು ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಅವರಿಗೂ ಕಳುಹಿಸಿ, ಅಧಿಕಾರಿಗಳಲ್ಲಿಯೂ ಈ ಬಗ್ಗೆ ಮನವಿ ಮಾಡಿದ್ದಾರೆ.

ಸಂಸದ ಸಂಗಣ್ಣ ಕರಡಿ ಮತ್ತು ರೇಲ್ವೆ ಇಲಾಖೆಯ ಅಧಿಕಾರಿಗಳು ತಮ್ಮ ಬೇಡಿಕೆಗೆ ಸ್ಪಂಧಿಸುತ್ತಾರೆ ಎಂಬ ಆಶಾ ಭಾವನೆಯನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಅಶೋಕಸ್ವಾಮಿ ಹೇರೂರ ಆಶಾ ಭಾವನೆ ವ್ಯಕ್ತ ಪಡಿಸಿದ್ದಾರೆ.

About Mallikarjun

Check Also

ಉಪ ಲೋಕಾಯುಕ್ತರಿಂದ ಅ.30, 31 ರಂದು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ

Public inquiry reception program by the Deputy Lokayukta on October 30th and 31st ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.