Breaking News

ನಗರಕ್ಕೆ ಇಂದುವಾಲ್ಮೀಕಿ ಶ್ರೀಗಳು ಜಾತ್ರೆಯ ಸಭೆ

Valmiki shrilu jatra meeting for the city today

ಜಾಹೀರಾತು
ಜಾಹೀರಾತು

ಕೊಪ್ಪಳ: ನಗರದ ಹಳೆ ಜಿಲ್ಲಾ ಆಸ್ಪತ್ರೆ ಹಿಂದುಗಡೆ ಇರುವ ವಾಲ್ಮೀಕಿ ಭವನದಲ್ಲಿ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು ಆಗಮಿಸಿ ಸಮುದಾಯದ ವಿಶೇಷ ಸಭೆಯನ್ನು ನವೆಂಬರ್ ೨೯ ರಂದು ಬೆಳಿಗ್ಗೆ ೯.೩೦ ಕ್ಕೆ ನಡೆಸುವರು ಎಂದು ಸಮಾಜದ ಯುವ ಮುಖಂಡ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ಟಿ. ರತ್ನಾಕರ ಅವರು ವಹಿಸಲಿದ್ದಾರೆ, ಸಭೆಯಲ್ಲಿ ಗುರುಪೀಠದ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ್, ತಾಲೂಕ ಅಧ್ಯಕ್ಷ ಶರಣಪ್ಪ ನಾಯಕ, ರಾಜ್ಯ ಕಾರ್ಯದರ್ಶಿ ಸುರೇಶ್ ಡೊಣ್ಣಿ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಪಾಲ್ಗೊಳ್ಳುವರು. ಸದರಿ ಸಭೆಯು ಅತ್ಯಂತ ಮಹತ್ವದ್ದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದು, ನಂತರ ಕುಕನೂರು, ಯಲಬುರ್ಗಾ ಮತ್ತು ಗಜೇಂದ್ರಗಡಕ್ಕೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಗಿಣಿಗೇರ ಮುಖಾಂತರ ಕೊಪ್ಪಳಕ್ಕೆ ಹೋಗುವ ಮೇಲ್ ಸೇತುವೆ ಮೇಲೆ ವಿದ್ಯುತ್ ದೀಪ ಅಳವಡಿಸಲು ಮನವಿ.

Request to install electric lights on the overhead bridge leading to Koppal via Ginigera. ಕೊಪ್ಪಳ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.