Breaking News

ಗಂಗಾವತಿ ನಗರದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ:ಖಂಡನೆವಿಜಯ ದೊರೆರಾಜು

Desecration of Ambedkar statue in Gangavati Nagar: Condemned Vijaya Doraraj

ಜಾಹೀರಾತು
Image 10
Screenshot 2024 01 08 14 43 39 29 E307a3f9df9f380ebaf106e1dc980bb6 300x167

ಗಂಗಾವತಿ: ನಗರದ ಕೋರ್ಟ್ ಮುಂಭಾಗದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಪುತ್ಥಳಿಗೆ ಕೆಲವು ಕಿಡಿಗೇಡಿಗಳು ಅಪಮಾನವೆಸಗಿರುವುದು ತೀವ್ರ ಖಂಡನೀಯ ಎಂದು ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿಯಾದ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಂಗಾವತಿ ನಗರವು ಇತ್ತೀಚೆಗೆ ಶಾಂತಿ ಸೌಹಾರ್ಧತೆಗೆ ಹೆಸರುವಾಸಿಯಾಗಿದ್ದು, ಯಾವುದೆ ಕೋಮು ಗಲಭೆಗಳು ನಡೆಯದಂತೆ ಸಾರ್ವಜನಿಕರು ಸೌಹಾರ್ಧತಯುತವಾಗಿ ಜೀವನ ಸಾಗಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರು ಅಂಬೇಡ್ಕರ್ ಪುತ್ಥಳಿಗೆ ರಕ್ಷಣೆಯಾಗಿರುವ ಸಿ.ಸಿ ಕ್ಯಾಮೇರಾಗಳನ್ನು ತೆರವುಗೊಳಿಸಿರುವುದು ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿತನವಾಗಿದೆ. ಇದರಿಂದಾಗಿ ಕೆಲವು ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್‌ರವರ ಪುತ್ಥಳಿಗೆ ಮಧ್ಯರಾತ್ರಿ ಟೊಮೊಟೊ ಸಾರ್ಸ್ ಎರಚುವ ಮೂಲಕ ಪುತ್ಥಳಿಯನ್ನು ಮಲೀನಗೊಳಿಸಿರುತ್ತಾರೆ. ಇಂಥವರನ್ನು ಪತ್ತೆಹಚ್ಚಿ ಅವರ ಮೇಲೆ ಶಿಸ್ತು ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ನಮ್ಮ ಪಕ್ಷ ಒತ್ತಾಯಿಸುತ್ತದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಸಣ್ಣ ಹನುಮಂತಪ್ಪ ಹುಲಿಹೈದರ, ಅಬ್ದುಲ್, ಅಮೀರ್ ಅಲಿ, ಚಾಂದ್‌ಪಾಷಾ ಸೇರಿದಂತೆ ಪ್ರಗತಿಪರ, ದಲಿತಪರ ಸಂಘಟನೆಗಳ ಮುಖಂಡರು ಹಾಜರಿದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.