Breaking News

ಗಂಗಾವತಿ-ಕಲಬುರ್ಗಿ ರೋಡ್ ಹಂಪ್ಸ್ ತೆರುವಿಗೆ ಪಾದೇಶಿಕ ಆಯುಕ್ತರ ಸೂಚನೆ.

Notice of Regional Commissioner for removal of Gangavati-Kalaburgi road humps.

ಗಂಗಾವತಿ: ಗಂಗಾವತಿ-ಕಲಬುರ್ಗಿ ರಾಜ್ಯ ಹೆದ್ದಾರಿಯಲ್ಲಿ ಕನಕಗಿರಿ-ತಾವರಗೇರಾ-ಮುದಗಲ್-ಲಿಂಗ್ಸೂರ್-ತಿಂತಿಣಿ ಬ್ರಿಡ್ಜ್ ಮಾರ್ಗದಲ್ಲಿ ವಿಪರಿತವಾಗಿ ನಿರ್ಮಿಸಲಾಗಿರುವ ರೋಡ್ ಹಂಪ್ಸ್ ಗಳ ತೆರುವಿಗೆ ಕ್ರಮಕೈಗೊಳ್ಳುವಂತೆ ಕಲಬುರ್ಗಿಯ ವಿಭಾಗೀಯ ಪ್ರಾದೇಶಿಕ ಆಯುಕ್ತರು ಆದೇಶಿದ್ದಾರೆ.

ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಈ ಬಗ್ಗೆ ಬರೆದಿರುವ ಪತ್ರವನ್ನು ಉಲ್ಲೇಖಿಸಿ, ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡಗಳು, ಈಶಾನ್ಯ ವಲಯ,ಲೋಕೋಪಯೋಗಿ ಭವನ,ಕಲಬುರ್ಗಿ ಇವರಿಗೆ ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಸೂಚಿಸಿದ್ದಾರೆ.

ಈ ಬಗ್ಗೆ ಕ್ರಮ ಕೈಗೊಂಡು,ವಾಣಿಜ್ಯೊಧ್ಯಮ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರಿಗೆ ಮಾಹಿತಿ ನೀಡಬೇಕೆಂದು ಪ್ರಾದೇಶಿಕ ಆಯುಕ್ತರು, ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಟೋಲ್ ಸಂಗ್ರಹಿಸುತ್ತಿದ್ದು ,ಸಹಸ್ರಾರು ರೋಡ ಹಂಪ್ಸ್ ಗಳನ್ನು ನಿರ್ಮಿಸಲಾಗಿದೆ,ಇದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಅಶೋಕಸ್ವಾಮಿ ಹೇರೂರ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿದ್ದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.