Breaking News

ಶಿವಯೋಗಿ ಸಿದ್ದರಾಮ ಜಯಂತಿ ಆಚರಿಸಲು ಪೂರ್ವಭಾವಿ ಸಭೆ

Preliminary meeting to celebrate Shivayogi Siddarama Jayanti


ಹನೂರು : ಶಿವಯೋಗಿ ಸಿದ್ಧರಾಮ ಜಯಂತಿ ಪ್ರಯುಕ್ತ ಶಾಸಕ ಎಂ.ಆರ್.ಮಂಜುನಾಥ್ ಅವರ ನೇತೃತ್ವದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯು ಬೋವಿ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಜರುಗಿತು.
ಇದೆ ವೇಳೆ ಮುಖಂಡರು ಮಾತನಾಡಿ, ಚಿತ್ರದುರ್ಗ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಹಿಮ್ಮಡಿ ಸ್ವಾಮೀಜಿ ಅವರು ಜಯಂತಿಗೆ ಆಗಮಿಸಬೇಕಾಗಿದೆ ಹೀಗಾಗಿ ಇದೆ ಭಾನುವಾರದಂದು ಜಯಂತಿ ಸಂಬಂಧ ಮುಖಂಡರ ಸಭೆ ಏರ್ಪಡಿಸಲಾಗುವುದು ಬಳಿಕ ಶ್ರೀಗಳ ಸೂಚನೆ, ಮಾರ್ಗದರ್ಶನದಲ್ಲಿ ದಿನಾಂಕ ನಿಗಧಿ ಮಾಡಿ ತಿಳಿಸಲಾಗುವುದು ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಜಯಂತಿ ಮಾಡಲು ದಿನಾಂಕ ನಿಗಧಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಗುರುಪ್ರಸಾದ್, ಜಿಲ್ಲಾ ಬೋವಿ ಸಂಘದ ಗೌರವ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ಎಸ್.ಆರ್ ಮಹದೇವ್, ಮುಖಂಡರಾದ ಕಾಳಿಯಪ್ಪ, ಕೃಷ್ಣ, ಚಿನ್ನರಾಜು, ರಂಗಸ್ವಾಮಿ ಮತ್ತಿತರರು ಹಾಜರಿದ್ದರು….

About Mallikarjun

Check Also

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.