Breaking News

ಗಾಂದಿನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾಗಿ ಹಾಗೂ ಬಿಬಿಎಮ್ ಪಿ ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯರಾಗಿ ಉಮೇಶ್ ಬಾಬು ಆಯ್ಕೆ .

Umesh Babu has been selected as the chairman of guarantee scheme of Gandhinagar assembly constituency and member of BBMP guarantee scheme committee.

ಜಾಹೀರಾತು
Screenshot 2024 03 07 18 24 09 82 6012fa4d4ddec268fc5c7112cbb265e7 237x300

ವರದಿ:ಬಂಗಾರಪ್ಪ ಸಿ ಹನೂರು .

ಬೆಂಗಳೂರು : ಕಳೆದ ವಿಧಾನ ಸಭಾ ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದವತಿಯಿಂದ ಚುನಾವಣಾ ಪೂರ್ವ ನೀಡಿದ ಭರವಸೆಗಳನ್ನು ಜನರಿಗೆ ಈಡೆರಿಸಿದ್ದು ಅದರ ಅನುಷ್ಠಾನಕ್ಕಾಗಿ ಗಾಂದಿನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಹಾಗೂ ಬಿಬಿಎಮ್ ಪಿ ಗ್ಯಾರಂಟಿ ಸಮಿತಿಯ ಸದಸ್ಯರಾಗಿ ಉಮೇಶ್ ಬಾಬು ರವರನ್ನು ರಾಜ್ಯ ಸರ್ಕಾರವು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ವತಿಯಿಂದ ಸರ್ಕಾರವು ಆದೇಶದಲ್ಲಿ ತಿಳಿಸಲಾಗಿದೆ .

ಇದೇ ವಿಷಯವಾಗಿ ಮಾತನಾಡಿದ ಉಮೇಶ್ ಬಾಬು ರವರು ನಮ್ಮ ಸಚಿವರಾದ ದಿನೇಶ್ ಗುಂಡೂರಾವ್ ರವರ ಆದೇಶದಂತೆ ರಾಜ್ಯ ಸರ್ಕಾರವು
ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಬಿ ಬಿ ಎಮ್ ಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ಸರ್ಕಾರವು ರಚಿಸಿದ್ದು ಅದರಂತೆ ನಮ್ಮ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಗೂ ಸರ್ಕಾರದ ಯೋಜನೆಯನ್ನು ತಲುಪಿಸಲು ಪ್ರಾಮಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.