Breaking News

ವಸತಿ ಯೋಜನೆಯಡಿ ಆಯ್ಕೆಯಾದ ವಿವಿಧ ಪಲಾನುಭವಿಗಳು ಸಕಾಲದಲ್ಲಿ ವಸತಿ ನಿರ್ಮಿಸಿ :ಶಾಸಕ ಎಂ ಆರ್ ಮಂಜುನಾಥ್

Various beneficiaries selected under housing scheme construct housing on time: Legislator M R Manjunath

ಜಾಹೀರಾತು


ವರದಿ : ಬಂಗಾರಪ್ಪ ಸಿ .
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ
ಲೋಕ್ಕನಹಳ್ಳಿ, ಚಿಕ್ಕಮಾಲಾಪುರ, ಸೇರಿದಂತೆ ಇನ್ನಿತರ ಗ್ರಾ.ಪಂ.ವ್ಯಾಪ್ತಿಯಲ್ಲಿ ಆಯ್ಕೆಯಾದ ವಸತಿ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವನ್ನು ಶಾಸಕ ಎಂ.ಆರ್. ಮಂಜುನಾಥ್ ವಿತರಣೆ ಮಾಡಿದರು.
ಲೊಕ್ಕನಹಳ್ಳಿಯ ಹಾಲಿನ ಕೇಂದ್ರದ ಆವರಣದಲ್ಲಿ, ಬಸವ ವಸತಿ, ಡಾ.ಬಿ.ಆರ್. ಅಂಬೇಡ್ಕರ್ ನಿವಾಸ್ (ಗ್ರಾಮೀಣ) ವಸತಿ ಯೋ ಜನೆಯಡಿ ಫಲಾನುಭ ವಿಗಳನ್ನು ಗುರುತಿಸಲಾಗಿರುವವರಿಗೆ ಆದೇಶ ಪತ್ರಗಳನ್ನು ನೀಡಿದ ನಂತರ ಮಾನಾಡಿದ ಶಾಸಕರು ಈಗಾಗಲೇ ಸರ್ಕಾರಗಳು ಗುಡಿಸಲು ಮುಕ್ತ ರಾಜ್ಯವಾಗಿಸುವ ಗುರಿಯೊಂದಿಗೆ
ಅನೇಕ ವಸತಿ ಸೌಲಭ್ಯಗಳನ್ನು ನೀಡುತ್ತಾ ಬಂದಿವೆ. ಕ್ಷೇತ್ರಕ್ಕೆ ಇನ್ನೂ 20 ರಿಂದ 25 ಸಾವಿರ ಮನೆಗಳ ಅವಶ್ಯಕತೆ ಗುಡಿಸಲು ಮುಕ್ತವಾಗಿಸಲು ನಾವೇಲ್ಲರು ಪಣ ತೊಡೋಣ ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಮುಗಿದ ನಂತರ ಎಲ್ಲಾ ಗ್ರಾಮಗಳ ಪ್ರತಿ ಮನೆಗೆ ಭೇಟಿ ನೀಡಿ ವಸತಿ ರಹಿತರನ್ನು ಗುರುತಿಸಿ ಸೌಕರ್ಯ ಒದಗಿಸಲಾಗುವುದು. ಅಲ್ಲದೆ ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಮಪುರ, ಗರಿಕೆಕಂಡಿ ಮುಖ್ಯ ರಸ್ತೆಗೆ 25 ಕೋಟಿ ವೆಚ್ಚದ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು ಇನ್ನುಳಿದಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳನ್ನು ಗುಂಡಿ ಮುಕ್ತ ವಾಗಿಸಲಾಗುವುದು ಎಂದರು .
ಇದೇ ಸಮಯದಲ್ಲಿ ಸರ್ಕಾರದಿಂದ ಬಿಡುಗಡೆಗೊಂಡ ನೀರಿನ ಸಮಸ್ಯೆಗಳನ್ನು ನೀವಾರಿಸಲು ಪ್ರತಿ ಪಂಚಾಯತಿ ಯಿಂದ ದೂರು ನೀಡುವ ದೂರವಾಣಿಯನ್ನು ಸಾರ್ವಜನಿಕರಿಗೆ ನೀಡಲಾಯಿತು . 08224220130..8277506000
ಇದೇ ಸಂದರ್ಭದಲ್ಲಿ ತಾಪಂ ಇಒ ಉಮೇಶ್, ಹಲವು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಒ, ಅರ್ಹ ವಸತಿ ಫಲಾನುಭವಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.