Breaking News
ಸಸಿ ನೆಟ್ಟು ನೀರುಣಿಸುವ ಮೂಲಕ ದಾಪಂತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು

ಮಾನವಿ ತಾಲೂಕಿನ ಭೋಗಾವತಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ನಡೆದ ವಿಶ್ವಕರ್ಮ ಬಂಧುಗಳ ಮದುವೆ ಸಮಾರಂಭದಲ್ಲಿ 501ಸಸಿಗಳ ವಿತರಣಾ ಕಾರ್ಯಕ್ರಮ ನೆರವೇರಿತು.ಈ ಸಂದರ್ಭದಲ್ಲಿ ನವ ದಂಪತಿಗಳು ಸಸಿ ನೆಟ್ಟು ನೀರುಣಿಸುವ ಮೂಲಕ ತಮ್ಮ ಮದುವೆ ಸಮಾರಂಭವನ್ನು ವಿಶೇಷವಾಗಿ ಆಚರಿಸಿಕೊಂಡರು.

ಜಾಹೀರಾತು
https://youtu.be/54mDmaz0YxQ?si=IlxLl6zRdn1CsS_E
ಜಾಹೀರಾತು

ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯರಿಗೆ,ಅತಿಥಿಗಳಿಗೆ, ಗಣ್ಯವ್ಯಕ್ತಿಗಳಿಗೆ,ಸಂಭಂದಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.ಮದುವೆ ಸಮಾರಂಭದಲ್ಲಿ501ಸಸಿಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಎಲ್ಲ ಸಾರ್ವಜನಿಕರು,ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ.ಮ.ಘ. ಚ.ಮಹಾಂತಲಿಂಗ ಶಿವಾಚಾರ್ಯ ಕರೆಗುಡ್ಡ ಹಾಗೂ ಅಬ್ಬಾಸಲಿ ತಾತನವರು,ವನಸಿರಿ ಫೌಂಡೇಶನ್ ಸದಸ್ಯರು, ಕುಟುಂಬದ ಸದಸ್ಯರು,ಪರಿಸರ ಪ್ರೇಮಿಗಳು,ವಿಶ್ವಕರ್ಮ ಸಮಾಜದ ಬಂಧುಗಳು ಹಾಗೂ ಊರಿನ ಯುವಕರು,ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು.

Leave a Reply

Your email address will not be published. Required fields are marked *