Breaking News

ಮದುವೆ ಆಮಂತ್ರಣದಲ್ಲಿ ಮತದಾನ ಜಾಗೃತಿ ಮೂಡಿಸಿದ ಪ್ರಭುರಾಜ

Prabhuraja created voting awareness in the wedding invitation

ಜಾಹೀರಾತು
WhatsApp Image 2024 04 13 At 6.31.17 PM 300x168

ಕೊಪ್ಪಳ: ತಾಲೂಕಿನ ಗೊಂಡಬಾಳ ಗ್ರಾಮದ ಯುವ ಕೃಷಿಕ ಮತ್ತು ಕನ್ನಡಕ ವ್ಯಾಪಾರಿ ಪ್ರಭುರಾಜ್ ಜಾಗಿರ್ದಾರ್ ತಮ್ಮ ಮದುವೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಮಾಜ ಸೇವಕ ಮಂಜುನಾಥ ಗೊಂಡಬಾಳ ಅವರ ಸಲಹೆ ಮೇರೆಗೆ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಚಿತ್ರಗಳನ್ನು ಮತ್ತು ಘೋಷಣೆಗಳನ್ನು ಮುದ್ರಿಸಲಾಗಿದೆ ಜನರಿಗೆ ಕಾಡು ಕೊಡುವ ಮೂಲಕ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸುತ್ತಿರುವುದಾಗಿ ಪ್ರಭುರಾಜ್ ಜಹೀರ್ದಾರ್ ತಮ್ಮ‌ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಕಾರ್ಡಿನ ಒಂದು ಬದಿ ಪ್ರಭುರಾಜ‌ ಮತ್ತು ವಧು ಪವಿತ್ರಾ ಅವರು ಮತದಾನದ ಗುರುತು‌ತೋರಿಸುವ ಚಿತ್ರದ ಜೊತೆಗೆ ಕೇಂದ್ರ ಚುನಾವಣಾ ಆಯೋಗದ ರಾಯಭಾರಿ ತೆಂಡುಲ್ಕರ್‌ ಮತ್ತು ಅವರ ಪತ್ನಿ ಅದೇ ರೀತಿ‌ ಮತದಾನದ‌ ಗುರುತು ತೋರಿಸುವ ಚಿತ್ರ ಹಾಗೂ ಚುನಾವಣೆ ಆಯೋಗದ ಲೋಗೊ ಹಾಗೂ ಘೋಷಣೆಗಳನ್ನು ಮುದ್ರಿಸಲಾಗಿದೆ.

WhatsApp Image 2024 04 13 At 6.31.19 PM 1024x327


ಈ ಕುರಿತು ಜಿಲ್ಲಾಧಿಕಾರಿ ನಳಿನ್ ಅತುಲ್, ಜಿಲ್ಲಾ ಪಂಚಾಯತ ಸಿಇಒ ರಾಹುಲ್ ರತ್ನಂ‌ ಪಾಂಡೆ, ಜಿಲ್ಲಾ ಚುನಾವಣೆ ವೀಕ್ಷಕ ಚಂದ್ರಶೇಖರ, ತಾಲ್ಲೂಕು ಪಂಚಾಯತ ಇಒ ದುಂಡಪ್ಪ ತುರಾದಿ, ಜಿ.ಪಂ. ಸಿಎಒ ಅಮೀನ್‌ ಅತ್ತಾರ್, ಯುವ ಸಬಲೀಕರಣ‌ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್ ಮುಂತಾದವರಿಗೆ ಆಮಂತ್ರಣ ನೀಡಿ ಮದುವೆಗೆ ಬರುವಂತೆ ಕೋರಿದ್ದು, ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಎಲ್ಲರೂ ಶುಭ ಕೋರಿದ್ದಾರೆ. ಎಪ್ರಿಲ್ 26 ರಂದು ಕೊಪ್ಪಳ‌ ತಾಲೂಕಿನ ಹ್ಯಾಟಿ ಮುಂಡರಗಿ ಗ್ರಾಮದ ಶ್ರೀ ನಂದಿಬಂಡಿ ಬಸವೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಲಿದ್ದು ಅಲ್ಲಿ ಮತದಾನ ಮಾಡುವ ಜಾಗೃತಿ ಫಲಕ ಹಾಕಿ ಪ್ರಮಾಣ ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲಿಯೇ ಪರಿಸರ ಜಾಗೃತಿ ಸಹ ಏರ್ಪಡಿಸಿದ್ದು, ನೀರನ್ನು ಮಿತವಾಗಿ ಬಳಸುವ ಹಾಗೂ ಗಿಡ ನೆಟ್ಟು ಪರಿಸರ ಸಂರಕ್ಷಣೆ‌ ಮಾಡುವ ಜಾಗೃತಿ ಮೂಡಿಸಲಾಗುವದು ಎಂದು ತಿಳಿಸಿದ್ದಾರೆ.

About Mallikarjun

Check Also

screenshot 2025 10 15 21 38 17 03 6012fa4d4ddec268fc5c7112cbb265e7.jpg

ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.