Legal action if domestic gas is used for commercial purposes
ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ
ವಿಜಯನಗರ, (ಹೊಸಪೇಟೆ):ಗೃಹ ಬಳಕೆಗಾಗಿ ರಿಯಾಯಿತಿ ದರದಲ್ಲಿ ನೀಡಲಾಗುವ ಅಡುಗೆ ಅನಿಲ ಸಿಲಿಂಡರ್ಗಳನ್ನು ಜಿಲ್ಲೆಯ ವಾಣಿಜ್ಯ ಸಂಸ್ಥೆಗಳಲ್ಲಿ ನಿಯಮಬಾಹಿರವಾಗಿ ಬಳಸುತ್ತಿರುವುದನ್ನು ಪತ್ತೆ ಹಚ್ಚಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಹಾರ ನಿರೀಕ್ಷಕರು ಶನಿವಾರ ಜಿಲ್ಲೆಯಾದ್ಯಂತ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಹೋಟೆಲ್, ಬೇಕರಿ, ಫಾಸ್ಟ್ ಫುಡ್ ಸೆಂಟರ್, ಜನನಿಬಿಡ ಆಟೋ ಹಾಗೂ ಬಸ್ ನಿಲ್ದಾಣಗಳ ಬಳಿಯಿರುವ ಉಪಾಹಾರ ಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಲೀಕರಿಗೆ ಗೃಹ ಬಳಕೆ ಸಿಲಿಂಡರ್ಗಳನ್ನು ಯಾವುದೇ ಕಾರಣಕ್ಕೂ ವಾಣಿಜ್ಯ ಉದ್ದೇಶಗಳಿಗೆ ಬಳಸಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ ಗೃಹ ಬಳಕೆ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ರುವುದು ಕಂಡುಬಂದಲ್ಲಿ, ಅಂತಹ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಮಾಲೀಕರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ಆಹಾರ ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಎಚ್ಚರಿಕೆ ನೀಡಿದರು.
Municipal Council budget pre-meeting on March 16th Public invited to participate by civic commissioner
ಮಾ.16ರಂದು ನಗರಸಭೆ ಬಜೆಟ್ ಪೂರ್ವಭಾವಿ ಸಭೆ ಸಾರ್ವಜನಿಕರು ಭಾಗವಹಿಸಲು ಪೌರಾಯುಕ್ತರು ಕರೆ
ಗಂಗಾವತಿ:ನಗರಸಭೆಯ 2026-27ನೇ ಸಾಲಿನ ಆಯ-ವ್ಯಯದ ಬಜೆಟ್ ಮಂಡಣೆ ಕುರಿತು ಮಾ.16 ರಂದು ಸೋಮವಾರ ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ.
ಈ ಸಭೆಗೆ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ನಗರಸಭೆ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ವ್ಯಾಪಾರಸ್ಥರು, ಉದ್ಯಮಿಗಳು, ಸಾರ್ವಜನಿಕರು, ಪತ್ರಕರ್ತರು ಆಗಮಿಸಿ ಬಜೆಟ್ ಮಂಡನೆ ಕುರಿತು ತಮ್ಮ ಸಲಹೆ ನೀಡಬೇಕು ಎಂದು ಪೌರಾಯುಕ್ತ ವಿರುಪಾಕ್ಷಮೂರ್ತಿ ಕರೆ ನೀಡಿದ್ದಾರೆ. ಈ ಕುರಿತು ಅವರು ಮಾಧ್ಯಮಗಳಿಗೆ ಪ್ರಕಟಣೆ ನೀಡಿದ್ದಾರೆ.
ಮಾ.16ರಂದು ಸಂಜೆ 4 ಗಂಟೆಗೆ ಗಂಗಾವತಿ ನಗರಸಭೆಯ ಸಭಾಂಗಣದಲ್ಲಿ ನಗರಸಭೆಯ 2026-27ನೇ ಸಾಲಿನ ಆಯ-ವ್ಯಯ ಮುಂಗಡ ಪತ್ರದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ಗಂಗಾವತಿ ನಗರದ ಅಭಿವೃದ್ಧಿ, ತೆರಿಗೆ ಸಂಗ್ರಹ, ಕುಡಿಯುವ ನೀರು ಸೌಲಭ್ಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಹಾಗೂ ಸೌಂದರೀಕರಣಕ್ಕೆ 2026-27ರಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಡೆಯುವ ಆಯ ವ್ಯಯದ ಕುರಿತು ಚರ್ಚಿಸಲು ಮತ್ತು ಬಜೆಟ್ ಮಂಡನೆಗೆ ತಮ್ಮಿಂದ ಸೂಕ್ತ ಲಸಹೆಗಳನ್ನು ಸ್ವೀಕರಿಸಲು ಈ ಬಜೆಟ್ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ. ಸರ್ವರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಪೌರಾಯುಕ್ತರು ಕೊರಿದ್ದಾರೆ.
Let's have a plastic-free lifestyle: Nagaraj S. Guttedar
ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್
ಗಂಗಾವತಿ: ನಗರದ ಪ್ರತಿಷ್ಠಿತ ಸಂಕಲ್ಪ ಮಹಿಳಾ ಮಹಾವಿದ್ಯಾಲಯದ ವಿದ್ಯರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಕರ್ಯಕ್ರಮದ ಅಡಿಯಲ್ಲಿ ಹಿರೇಜಂತಕಲ್ ಹಾಗೂ ವಿಪ್ರ ಪ್ರದೇಶದಲ್ಲಿ ಶ್ರಮದಾನ ಮಾಡುವ ಮೂಲಕ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ವಸ್ತುಗಳನ್ನು ಆಯ್ದು ಪ್ರದೇಶವನ್ನು ಸ್ವಚ್ಛಗೊಳಿಸುತ್ತಿರುವ ಸಂರ್ಭದಲ್ಲಿ ಅಲ್ಲಿಗೆ ಭೇಟಿ ನೀಡಿ ಮಾತನಾಡಿದ ಸಂಕಲ್ಪ ಪದವಿ ಮಹಿಳಾ ಮಹಾವಿದ್ಯಾಲಯ ಕರ್ಯಾಧ್ಯಕ್ಷರು ಹಾಗೂ ವಕೀಲರಾದ ನಾಗರಾಜ್ ಗುತ್ತೇದಾರ್ ಅವರು, ಪರಿಸರಕ್ಕೆ ಮಾರಕವಾದ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಾವುಗಳೆಲ್ಲ ಸ್ವ ಇಚ್ಛೆಯಿಂದ ತ್ಯಜಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಜೀವನಶೈಲಿಗೆ ಬದಲಾಗಬೇಕಿದೆ.
ಆ ಮೂಲಕ ಹಿರಿಯರಿಂದ ಬಳುವಳಿಯಾಗಿ ಬಂದ ಸುಂದರ-ಸ್ವಚ್ಚ ಪರಿಸರವನ್ನು ಯಥಾವತ್ತಾಗಿ ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಸಾಧ್ಯವಾಗುತ್ತದೆ.
ನಾಗರೀಕತೆಯ ಬೆಳವಣಿಗೆಯ ಭಾಗವಾಗಿ ದಿನನಿತ್ಯದ ಜೀವನಶೈಲಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಅತಿಯಾಗಿ ಅವುಗಳು ಪರಿಸರಕ್ಕೆ ಮತ್ತು ಮಾನವನ ಆರೋಗ್ಯಕ್ಕೆ ತೀವ್ರವಾದ ಹಾನಿಯನ್ನು ಉಂಟುಮಾಡುತ್ತಿವೆ ಎಂದು ತಿಳಿಸಿದರು.
ಪ್ಲಾಸ್ಟಿಕ್ ವಸ್ತುಗಳ ಬದಲಾಗಿ ರ್ಯಾಯ ಬಳಕೆಯ ಕಡೆಗೆ ನಾವೆಲ್ಲ ಗಮನಹರಿಸುವ ಮೂಲಕ ಆರೋಗ್ಯ ಪರ್ಣ ಸಮಾಜ ನರ್ಮಾಣಕ್ಕೆ ಮುನ್ನುಡಿ ಬರೆಯಬೇಕಾಗಿದೆ ಎಂದು ಕರೆ ನೀಡಿದರು. ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಹಲವಾರು ಕಾಯ್ದೆ ಕಾನೂನುಗಳಿದ್ದರೂ ಸಹ ಜನ ಅವುಗಳನ್ನು ಗಮನಿಸದೆ ಮುಂದುವರೆದಲ್ಲಿ ಮಾನವ ಸಂಕುಲ ಅಪಾಯಕ್ಕೆ ಸಿಲುಕುವುದರಲ್ಲಿ ಅನುಮಾನವಿಲ್ಲ.
ಹಾಗಾಗಿ ಈ ಪವಿತ್ರ ಪರಿಸರದಲ್ಲಿ ವಾಸಿಸುವ ನಾವೆಲ್ಲರೂ ನಮ್ಮ ಸ್ವ-ಇಚ್ಚೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಹಾಗೂ ನಮ್ಮಗಳ ಆರೋಗ್ಯಯುತ ಜೀವನಕ್ಕೆ ಸಂಕಲ್ಪ ಮಾಡಬೇಕಾಗಿದೆ ಎಂದು ತಿಳಿಸಿದರು. ೨೦೨೧ ಆಗಸ್ಟ್ ೧೨ರಂದು ಕೇಂದ್ರ ಹಾಗೂ ರಾಜ್ಯ ರ್ಕಾರಗಳು ಹೊರಡಿಸಿದ ಅಧಿಸೂಚನೆಯಂತೆ ರಾಜ್ಯದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧವಿದ್ದರೂ ಅದನ್ನು ಸಂಪರ್ಣವಾಗಿ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ.
ಹಾಗಾಗಿ ನಾವೆಲ್ಲರೂ ರಕ್ಕಸ ಪ್ಲಾಸ್ಟಿಕ್ ಅನ್ನು ತ್ಯಜಿಸಿ ಉತ್ತಮ ಪರಿಸರ ಮತ್ತು ಸ್ವಸ್ಥ ಸಮಾಜ ನರ್ಮಾಣಕ್ಕೆ ಕೈಜೋಡಿಸಬೇಕಿದೆ ಎಂದು ಶಿಬಿರರ್ಥಿಗಳಿಗೆ ಕರೆ ನೀಡಿದರು. ಈ ಸಂರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕರ್ಯಕ್ರಮ ಅಧಿಕಾರಿಗಳಾದ ರಮೇಶ್, ಶಿವಶರಣ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿಯಾದ ರಾಹುಲ್ ಉಪಸ್ಥಿತರಿದ್ದರು.
Women need legal knowledge: Lawyer Nandini's advice on Women's Day
ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ ದಿನಾಚರಣೆ ನ್ಯಾಯವಾದಿ ನಂದಿನಿ ಸಲಹೆ
ಗಂಗಾವತಿ : 14 ಪ್ರತಿ ಕ್ಷೇತ್ರದಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚು ಸಾಧನೆ ಮಾಡಿದ್ದಾರೆ ಎಂದು ನ್ಯಾಯವಾದಿ ನಂದಿನಿ ಶ್ಲಾಘಿಸಿದರು.
ನಗರದ ಬಿಜೆಪಿ ಕಛೇರಿಯಲ್ಲಿ ನಗರ ಘಟಕ ಮಹಿಳಾ ಅಧ್ಯಕ್ಷರ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
‘ಮಹಿಳೆ ತಾಯಿ , ಮಗಳು, ಅಕ್ಕ-ತಂಗಿ, ಗೆಳತಿ, ಹೆಂಡತಿಯಾಗಿ ಸರ್ವರಿಗೂ ಒಳಿತು ಬಯಸುತ್ತ ಸಂಸಾರ ನೌಕೆಯನ್ನು ಉತ್ತಮವಾಗಿ ಸಾಗಿತ್ತಿದ್ದಾರೆ. ಮಹಿಳೆಯನ್ನು ದೇವತೆಗಳಿಗೆ ಹೋಲಿಕೆ ಮಾಡಲಾಗುತ್ತದೆ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಕೊಡಬೇಕು ಎಂಬ ಉದ್ಧೇಶದಿಂದ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಕಾನೂನಿನಲ್ಲಿ ಸಿಗುವ ಸ್ಥಾನಮಾನ, ಮಹಿಳೆಯರ ಶೋಷಣೆ ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚೆ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಪುರುಷರಂತೆ ಮಹಿಳೆಯರೂ ಇರಬೇಕು ಎಂಬ ಉದ್ದೇಶ ಸಂವಿಧಾನ ವಿಶೇಷ ಸ್ಥಾನಮಾನ ಕೊಟ್ಟಿದೆ. ಎಲ್ಲಾ ರಂಗದಲ್ಲಿಯೂ ಇಂದು ತಮ್ಮ ಛಾಪು ಮೂಡಿಸಿದ್ದಾರೆ. ಮಹಿಳೆಯರಿಗೆ ಕಾನೂನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.
‘ಮಹಿಳೆ ತಾಯಿ , ಮಗಳು, ಅಕ್ಕ-ತಂಗಿ, ಗೆಳತಿ, ಹೆಂಡತಿಯಾಗಿ ಸರ್ವರಿಗೂ ಒಳಿತು ಬಯಸುತ್ತ ಸಂಸಾರ ನೌಕೆಯನ್ನು ಉತ್ತಮವಾಗಿ ಸಾಗಿತ್ತಿದ್ದಾರೆ. ಮಹಿಳೆಯನ್ನು ದೇವತೆಗಳಿಗೆ ಹೋಲಿಕೆ ಮಾಡಲಾಗುತ್ತದೆ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಕೊಡಬೇಕು ಎಂಬ ಉದ್ಧೇಶದಿಂದ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಕಾನೂನಿನಲ್ಲಿ ಸಿಗುವ ಸ್ಥಾನಮಾನ, ಮಹಿಳೆಯರ ಶೋಷಣೆ ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚೆ ಅತ್ಯಗತ್ಯವಾಗಿದೆ ಎಂದು ಹೇಳಿದರು. ನಂತರ ಮಾತನಾಡಿದ ಬಿಜೆಪಿ ಮಹಿಳಾ ನಗರ ಘಟಕ ಅಧ್ಯಕ್ಷ ಭಾರತಿ ಕೃಷ್ಣ ಆಗಲೂರು ಪ್ರಥಮ ಬಾರಿಗೆ ಬಿಜೆಪಿ ಕಚೇರಿಯಲ್ಲಿ ಮಹಿಳಾ ದಿನಾಚರಣೆ ಆಚರಣೆ ಮಾಡಿದಕ್ಕೆ ನನಗೆ ಸಂತೋಷವಾಗಿ ಅದೆ ರೀತಿ ನಮಗೆ ಸಹಾಯ ಮತ್ತು ಸಹಕಾರ ನೀಡಿದ ಜನಪ್ರಿಯ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷರು ನಗರ ಘಟಕ ಅಧ್ಯಕ್ಷರು ಮತ್ತು ಬಿಜೆಪಿ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷರು ಕಾರ್ಯದರ್ಶಿ ಅದರ ಜೊತೆಗೆ ಗಂಗಾವತಿ ಎಲ್ಲಾ ಸಹೋದರಿಯರು ನನಗೆ ಪ್ರೋತ್ಸಾಹ ನೀಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾಡಕ್ಕೆ ಕೈ ಜೋಡಿಸಿದ್ದಾರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಪ್ರಮಾಣದ ಮಹಿಳೆಯರನ್ನು ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ ಎಂದು ಭರವಸೆ ನೀಡಿದರು. ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಮಹಿಳೆಯರಿಗೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಿದರು.. ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಜಿಲ್ಲಾಧ್ಯಕ್ಷರಾದ ರತ್ನಕುಮಾರಿ,ಪ್ರಧಾನ ಕಾರ್ಯದರ್ಶಿ ಶೈಲಜಾ,ಕೀರ್ತಿ ಪಾಟೀಲ್, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ಮಾಲಾ ನಾಯಕ, ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಡಿ.ಕೆ.ಆಗೋಲಿ, ನಗರ ಘಟಕ ಅಧ್ಯಕ್ಷರಾದ ಚಂದ್ರಶೇಖರ ಹಿರೂರು,ಮಹಿಳೆಯರಾದ ಕಮಲಮ್ಮ,ಲಲಿತಾ,ಹುಲಿಗೆಮ್ಮ ನಾಯಕ,ವಿಜಯಲಕ್ಷ್ಮಿ ಹಿರೇಮಠ, ಕಲ್ಲಮ್ಮ,ಸೌಭಾಗ್ಯ, ರಾಜೇಶ್ವರಿ,ರಾಧಾ ಉಮೇಶ,ಸೇರಿದಂತೆ ಇತರರು ಇದ್ದರು
Government warns Samar International Islamic School for starting school enrollment in violation of court order
ಸರ್ಕಾರ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಾಲಾ ದಾಖಲಾತಿ ಪ್ರಾರಂಭಿಸಿದ ಸಾಮರ್ ಇಂಟರ್ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಗೆ ಎಚ್ಚರಿಕೆ
ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಶಿಕ್ಷಣ ಸಂಯೋಜಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸೂಚನೆ.
ಬೆಂಗಳೂರು,ಮಾ.14: ಥಣಿಸಂದ್ರದ ಸಾಮರ್ ಇಂಟರ್ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ನ ಮಾನ್ಯತೆ ರದ್ದಾಗಿದ್ದು, ಹೈಕೋರ್ಟ್ ಶಾಲಾ ದಾಖಲಾತಿ ಪ್ರಾರಂಭಿಸದಂತೆ ಆದೇಶಿಸಿದೆ.
ಸರ್ಕಾರ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಾಲಾ ದಾಖಲಾತಿ ಮಾಡಿಕೊಳ್ಳುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಶಾಲಾ ಶಿಕ್ಷಣ ಇಲಾಖೆ ಶಾಲಾ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದೆ.
ಹೈಕೋರ್ಟ್ ನಲ್ಲಿ ಪ್ರಕರಣ ವಿಚಾರಣಾ ಹಂತದಲ್ಲಿದ್ದು, 2026-2027 ನೇ ಸಾಲಿಗೆ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದಲ್ಲಿ ನ್ಯಾಯಾಲಯದ ನಿಂದನೆ ಮಾಡಿದಂತಾಗುತ್ತದೆ.
ಆದ್ದರಿಂದ ಹೈಕೋರ್ಟ್ ಆದೇಶದವರೆವಿಗೂ ಯಾವುದೇ ದಾಖಲಾತಿ ಪ್ರಾರಂಭಿಸಬಾರದು.
ಆದೇಶವನ್ನು ಉಲ್ಲಂಘಿಸಿ ದಾಖಲಾತಿ ಮಾಡಿಕೊಂಡರೆ ತಮ್ಮ ಶಾಲೆಯ ವಿರುದ್ಧ ನ್ಯಾಯಾಂಗ ನಿಂದನೆ ವರದಿಯನ್ನು ನ್ಯಾಯಾಲಯಕ್ಕೆ ಹಾಗೂ ಇಲಾಖಾ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ದಕ್ಷಿಣ ವಲಯದ -14 ರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಗಂಗೊಂಡನಹಳ್ಳಿಯ ಅಬ್ದುಲ್ ಹಮೀದ್ ಪಾಷ ಹಾಗೂ ಭಾರತಿ ನಗರದ ಅರ್ಷಿಯ ಮೊದಮ್ಮದಿ ಸರಿಷ್ ಸಲ್ಲಿಸಿರುವ ದೂರಿನ ಮೆರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಆಡಳಿತ ಮಂಡಳಿಗೆ ಸ್ಪಷ್ಟವಾದ ಎಚ್ಚರಿಕೆ ನೀಡಿದ್ದಾರೆ.
ದೂರು ಆಧರಿಸಿ ಪ್ರೌಢ ಶಾಲಾ ವಿಭಾಗದ ಶಿಕ್ಷಣ ಸಂಯೋಜಕರಾದ ರಂಗನಾಥ ಅವರಿಗೆ ಈ ಬಗ್ಗೆ ಪರಿಶೀಲಿಸಿ ಮೂರು ದಿನಗಳ ಒಳಗಾಗಿ ಸೂಕ್ತ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.
ಮಾನ್ಯತೆ ಇಲ್ಲದ ಈ ಸಂಸ್ಥೆ 6 ರಿಂದ 8 ನೇ ತರಗತಿಗೆ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಿದೆ, ಹೈ ಕೋರ್ಟ್ ನಲ್ಲಿ ದಾಖಲಾತಿ ಮಾಡಿಕೊಳ್ಳುವುದಿಲ್ಲ ಎಂದು ಒಪ್ಪಿ ಶಾಲಾ ನಡೆಸುತ್ತಿದ್ದು ಈ ಎಲ್ಲಾ ನೀತಿ, ನಿಯಮ, ಕಾನೂನುಗಳನ್ನು ಉಲ್ಲಂಘಿಸಿದ್ದು, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಇವರು ಶಾಲಾ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದರು. ಶಾಲಾ ಆಡಳಿತ ಮಂಡಳಿ ಧೋರಣೆಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಗೊಂದಲಕ್ಕೆ ಸಿಲುಕಿದ್ದಾರೆ.
ಕೂಡಲೇ ಮಧ್ಯ ಪ್ರವೇಶಿಸಿ ಸ್ಪಷ್ಟ ನಿರ್ದೇಶನ ನೀಡಬೇಕೆಂದು ದೂರುದಾರರು ಕೋರಿದ್ದರು. ಆಡಳಿತ ಮಂಡಳಿಯವರು ಶಾಲಾ ದಾಖಲಾತಿಯನ್ನು ಗುಪ್ತವಾಗಿ ಪ್ರಾರಂಭಿಸಿದ್ದು, ಸಂಗ್ರಹಿಸುತ್ತಿರುವ ಹಣಕ್ಕೆ ರಸೀದಿ ನೀಡುತ್ತಿಲ್ಲ. ನ್ಯಾಯಾಲಯದ ಅನುಮತಿ ಇಲ್ಲದೇ ಮುಂದಿನ ಶೈಕ್ಷಣಿಕ ಸಾಲಿಗೆ ದಾಖಲಾತಿ ಪ್ರಾರಂಭಿಸಬಾರದು.
ಮುಂದಿನ ವಿಚಾರಣೆವರೆಗೆ ಶಾಲೆಯ ಎಲ್ಲಾ ಚಟುವಟಿಕೆಗಳಿಗೆ ನ್ಯಾಯಾಲಯ ತಡೆ ನೀಡಿದೆ. ಹೀಗಿದ್ದರೂ ಶಾಲಾ ದಾಖಲಾತಿ ಪ್ರಾರಂಭಿಸಿರುವುದು ಸರಿಯಲ್ಲ ಎಂದು ದೂರುದಾರರು ಸರ್ಕಾರದ ಗಮನ ಸೆಳೆದಿದ್ದಾರೆ.
Karnataka Provincial Farmers' Association demands justice for Kudathini land victims.
ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ.
ಬಳ್ಳಾರಿ: ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕುಡತಿನಿ ಸೇರಿದಂತೆ ಹಲವು ಗ್ರಾಮಗಳ ರೈತರ ಭೂ ಸಮಸ್ಯೆಗೆ ನ್ಯಾಯ ಒದಗಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಸರ್ಕಾರವನ್ನು ಆಗ್ರಹಿಸಿದೆ.
ಸಂಘದ ಆರೋಪದ ಪ್ರಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕುಡತಿನಿ, ಹರಗಿನಡೋಣಿ, ಜಾನೆಕುಂಟೆ, ವೇಣಿವೀರಾಪುರ, ಕೊಳಗಲ್ಲು, ಎರ್ರೆಂಗಳಿ ಮತ್ತು ಸಿದ್ದಮ್ಮನಹಳ್ಳಿ ಗ್ರಾಮಗಳ ಸುಮಾರು 13 ಸಾವಿರ ಎಕರೆ ಜಮೀನುಗಳನ್ನು ರೈತರ ಒಪ್ಪಿಗೆ ಇಲ್ಲದೆ ಕೈಗಾರಿಕೆಗಳಿಗಾಗಿ ಸ್ವಾಧೀನಪಡಿಸಿಕೊಂಡು ಕಳಪೆ ಬೆಲೆ ನಿಗದಿ ಮಾಡಲಾಗಿದೆ. ಇದರಿಂದ ಸಾವಿರಾರು ರೈತ ಕುಟುಂಬಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದ್ದಾರೆ.
ಕಳೆದ 16 ವರ್ಷಗಳಿಂದ ಕೈಗಾರಿಕೆಗಳು ಸ್ಥಾಪನೆಯಾಗದೆ ರೈತರಿಗೆ ಉದ್ಯೋಗವೂ ಸಿಗಲಿಲ್ಲ, ಇದರಿಂದ ರೈತರು ದೊಡ್ಡ ನಷ್ಟ ಅನುಭವಿಸಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ತಿಳಿಸಿದೆ.
ಆದ್ದರಿಂದ ವಂಚಕ ಭೂ ಬೆಲೆ ರದ್ದುಪಡಿಸಿ, ರೈತರಿಗೆ ನ್ಯಾಯಸಮ್ಮತ ಭೂ ಬೆಲೆ ನಿಗದಿ ಮಾಡಬೇಕು ಅಥವಾ ಜಮೀನುಗಳನ್ನು ಮರಳಿ ನೀಡಬೇಕು. ಜೊತೆಗೆ 16 ವರ್ಷಗಳ ನಿರುದ್ಯೋಗ ಭತ್ಯೆಯಾಗಿ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಸರ್ಕಾರವನ್ನು ಒತ್ತಾಯಿಸಿದೆ.
ಈ ಕುರಿತು ರೈತ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ಹೊಸಳ್ಳಿ, ಜಿಲ್ಲಾ ಕಾರ್ಯದರ್ಶಿ ಶಿವಣ್ಣ ಬೆಣಕಲ್ ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.
Construction of a money shed by adding an 11 KV electricity pole in Ward 31 of Goragodanahalli. The wise silence of BESCOM officials.
ಗೊರಗೋಡನಹಳ್ಳಿ 31ನೇ ವಾರ್ಡ್ ನಲ್ಲಿ 11 ಕೆ ವಿ ವಿದ್ಯುತ್ ಕಂಬ ಸೇರಿಸಿಕೊಂಡು ಧನದ ಶೆಡ್ ನಿರ್ಮಾಣ.ಬೆಸ್ಕಾಂ ಅಧಿಕಾರಿಗಳ ಜಾಣ ಮೌನ.ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದರೂ ಕ್ರಮವಹಿಸಿಲ್ಲ.
ತಿಪಟೂರು.ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ್ ಅವರ ತವರಿನ ಕ್ಷೇತ್ರದಲ್ಲೇ ದಿನೇ ದಿನೇ ದಲಿತ ಕುಟುಂಬಗಳು ಅನ್ಯಾಯಕ್ಕೆ ಒಳಗಾಗುತ್ತಿರುವ ಘಟನೆ ಬೆಳಕಿಗೆ ಬರುತ್ತಲೇ ಇವೆ .
ತಿಪಟೂರು ನಗರದ 31ನೇ ವಾರ್ಡ್ನ ಗೊರಗೊಂಡನಹಳ್ಳಿ ಗ್ರಾಮದ ದಲಿತ ಕುಟುಂಬಗಳು ಸವರ್ಣೀಯರ ದೌರ್ಜನ್ಯ ಹಾಗೂ ದಬ್ಬಾಳಿಕೆಯಿಂದ ಭಯಭೀತದ ಜೀವನ ಸಾಗಿಸುವಂತಾಗಿದೆ ಎಂದು ದಲಿತ ಕುಟುಂಬಗಳು ಆರೋಪಿಸಿದ್ದಾರೆ.
ಸ್ವಾತಂತ್ರ್ಯ ಬಂದು ಸುಮಾರು ದಶಕಗಳೇ ಕಳೆದರೂ ದಲಿತರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬ ತಮ್ಮ ಅಳಲನ್ನ ಗ್ರಾಮಸ್ಥರು ಮಾಧ್ಯಮದ ಮುಂದೆ ತೊಡಿಕೊಂಡರು.
ಗೊರಗೊಂಡನಹಳ್ಳಿ ಗ್ರಾಮದ ಸರ್ವೆ ನಂ. 90/4ಎ2ರಲ್ಲಿ ರಸ್ತೆಗೆ ಅಡ್ಡವಾಗಿ ದನದ ಸಾಕಾಣಿಕೆ ಶೆಡ್ ಸಂಪೂರ್ಣವಾಗಿ ಕಬ್ಬಿಣದ ದಿಂದ ಮಾಡಲಾಗಿದ್ದು 11 ಕೆ.ವಿ. ವಿದ್ಯುತ್ ಲೈನ್ ಕಂಬ ಶೆಡ್ ಒಳಗೆ ಸೇರಿಸಿಕೊಂಡು ನಿರ್ಮಾಣ ಮಾಡಿರುವುದರಿಂದ ಯಾವಾಗ ಬೇಕಾದರೂ ಅಪಘಾತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರ ಆತಂಕವಾಗಿದೆ
ಗ್ರಾಮದ ಸವರ್ಣೀಯರಾದ ಚೇರ್ಮನ್ ಶಿವನಂಜಪ್ಪ ಅವರ ಕುಟುಂಬದವರು ಈ ಶೆಡ್ ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಶೆಡ್ನಲ್ಲಿ ಸುಮಾರು 7-9 ಸೀಮೆ ಹಸುಗಳನ್ನು ಸಾಕಲಾಗುತ್ತಿದೆ. ಆದರೆ ವಿದ್ಯುತ್ ಕಂಬದ ಪಕ್ಕದಲ್ಲೇ ಈ ಶೆಡ್ ನಿರ್ಮಾಣವಾದರೂ, ಒಂದು ವರ್ಷದ ಹಿಂದೆ ತೆರವುಗೊಳಿಸಲು ಅರ್ಜಿ ಸಲ್ಲಿಸಿದರು ಕೆ.ಇ.ಬಿ. ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದಲಿತ ಕುಟುಂಬಗಳು ಆರೋಪಿಸುತ್ತಿವೆ.
ಈ ಬಗ್ಗೆ ಮಾತನಾಡಿದ ದಲಿತ ಸಮುದಾಯದ ಕಾಂತರಾಜ್, “ಒಂದು ವರ್ಷದ ಹಿಂದೆ ಕೆ.ಇ.ಬಿ. ಇಲಾಖೆಗೆ ದೂರು ನೀಡಿದ್ದೇವೆ. ಆದರೆ ಇಂದಿಗೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ರಾಜಕೀಯ ಒತ್ತಡವೋ ಅಥವಾ ಬೇರೆ ಕಾರಣವೋ ಗೊತ್ತಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಲ್ಲದೆ, ಈ ವಿಷಯವನ್ನು ಪ್ರಶ್ನಿಸಲು ಹೋದಾಗ ನಮ್ಮ ಮೇಲೆ ಹಲ್ಲೆ ಮಾಡಲು ಮಚ್ಚು ಹಾರೆಗಳನ್ನು ತಂದು ದೌರ್ಜನ್ಯ ಹಲ್ಲೇ ಮಾಡಲು ಬರುತ್ತಾರೆ ಎಂದು ಅವರ ಆರೋಪವಾಗಿದೆ
ಇದರಿಂದ ದಲಿತ ಕುಟುಂಬಗಳು ನಿರಂತರ ಮಾನಸಿಕ ಒತ್ತಡದಲ್ಲಿ ಬದುಕುವ ದುಸ್ಥಿತಿ ನಿರ್ಮಾಣವಾಗಿದೆ
ಅದೇ ರೀತಿ, ಶೆಡ್ನಿಂದ ಬರುವ ಗಂಜಲು ಮತ್ತು ತ್ಯಾಜ್ಯವನ್ನು ನೇರವಾಗಿ ಚರಂಡಿ ಹಾಗೂ ರಸ್ತೆಗೆ ಬಿಡಲಾಗುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ಮಲೇರಿಯಾ ಡೆಂಗ್ಯೂ ಅಂತಹ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ
ಈ ಹಿನ್ನೆಲೆಯಲ್ಲಿ ತಕ್ಷಣವೇ ಅಪಾಯಕಾರಿಯಾದ 11 ಕೆ.ವಿ. ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಅಕ್ರಮವಾಗಿ ನಿರ್ಮಿಸಿರುವ ಶೆಡ್ ಮತ್ತು ಬೇಲಿಗಳನ್ನು ತೆರವುಗೊಳಿಸಬೇಕು. ಇಲ್ಲವಾದರೆ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ದಲಿತ ಕುಟುಂಬಗಳು ಎಚ್ಚರಿಕೆ ನೀಡಿದ್ದಾರೆ.
ಈ ವಿಷಯವನ್ನು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಎಸ್. ಪರಮೇಶ್ವರ್ ಪರಿಶೀಲಿಸಿ ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರ ದಲಿತ ಕುಟುಂಬಗಳ ಆಗ್ರಹವಾಗಿದೆ
ಸಂಬಂಧಪಟ್ಟವರ ಮೇಲೆ ಎಸ್ಸಿ/ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.
ಈಗಾದರೂ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಹಾಗೂ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸುತ್ತಾರ ಎಂದು ಕಾದುನೋಡಬೇಕಾಗಿದೆ. ವರದಿ ಮಂಜು ಗುರುಗದಹಳ್ಳಿ
ಲಿಂಗ ಸಾಮರಸ್ಯದಿಂದ ಮಹಿಳಾ ಸಬಲೀಕರಣ ಸಾಧ್ಯ ಡಾ. ಸುಷ್ಮಾ ಹೂಗಾರ
Women empowerment is possible through gender harmony. Dr. Sushma Hoogara
ವಿಜಯನಗರ(ಹೊಸಪೇಟೆ): ವಿಜಯನಗರ ಮಹಾವಿದ್ಯಾಲಯ, ಹೊಸಪೇಟೆ ಎನ್.ಎಸ್.ಎಸ್ ಘಟಕದಿಂದ ಆಯೋಜಿಸಿದ ವಿಶೇಷ ವಾರ್ಷಿಕ ಶಿಬಿರದ ಮೂರನೇ ದಿನದ ವಿಶೇಷ ಉಪನ್ಯಾಸಕ ಕಾರ್ಯಕ್ರಮದಲ್ಲಿ ಮಹಿಳೆ ಮತ್ತು ಪುರುಷ ತಮ್ಮ ನ್ಯೂನ್ಯತೆ ಮತ್ತು ಶಕ್ತಿಗಳನ್ನು ಅರಿತುಕೊಂಡು ಇಬ್ಬರೂ ಸಮ ಎಂದು ಸ್ವೀಕಾರ ಮಾಡಿಕೊಂಡು ಹೊಂದಾಣಿಕೆಯನ್ನು ರೂಢಿಸಿಕೊಂಡಲ್ಲಿ ಮಾತ್ರ ಬದುಕು ಅರ್ಥಪೂರ್ಣ ಎಂದು ವಿಜಯನಗರ ಕಾಲೇಜಿನ ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೂಷ್ಮಾಹೂಗಾರ್ ಮಾಹಿತಿ ನೀಡಿದರು.ವಿಜಯನಗರ ಕಾಲೇಜಿನ ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೂಷ್ಮಾಹೂಗಾರ್ ಅವರು ಮಹಿಳಾ ಸಬಲೀಕರಣ ಹಾಗೂ ಲಿಂಗಸಾಮರಸ್ಯದ ಅನಿವಾರ್ಯತೆಯ ಕುರಿತು ಮಾತನಾಡಿದರು.ಇಂದಿನ ಕಾಲದ ಮಹಿಳೆ,ಶಿಕ್ಷಣ ಪಡೆದಿದ್ದಾಳೆ,ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದಾಳೆ. ಆದರೆ ಇವುಗಳ ಆಧಾರದ ಮೇಲೆ ಮಹಿಳೆ ಸಬಲೆಯಾಗಿದ್ದಾಳೆ ಎಂದರೆ ಅದು ಕೇವಲ ಕಲ್ಪನೆ , ಮೊದಲಿನ ಕಾಲಕ್ಕೂ ಈಗಿನ ಕಾಲಕ್ಕೂ ಹೋಲಿಸಿದರೆ ಕೇವಲ ಶೋಷಣೆ ಆಯಾಮಗಳು ಬದಲಾಗಿವೆ, ಹೊರತು ಕಡಿಮೆಯಾಗಿಲ್ಲ. ಮಹಿಳಾ ಸಬಲೀಕರಣದ ಪ್ರಕ್ರಿಯೆ ನಡೆಯಬೇಕಾಗಿರುವುದು ಸಮಾಜದಲ್ಲಲ್ಲ ಸ್ತ್ರೀ ಹಾಗೂ ಪುರುಷನ ವೈಚಾರಿಕತೆಯಲ್ಲಿ ಮತ್ತು ಅವರ ದೃಷ್ಟಿ ಕೋನದಲ್ಲಿ ಬದಲಾವಣೆ ಅನಿವಾರ್ಯತೆ ಇದೆ. ಆತ್ಮವಿಶ್ವಾಸ ಆತ್ಮ ಗೌರವ ಮನುಷ್ಯನ ಅತಿ ದೊಡ್ಡ ಸಂಪತ್ತು, ಪ್ರತಿ ಮಹಿಳೆ ಆತ್ಮವಿಶ್ವಾಸ ಮತ್ತು ಆತ್ಮ ಗೌರವದಿಂದ ಜೀವನ ನಡೆಸಬೇಕು ಹಾಗೆಯೇ ಪ್ರತಿ ಸವಾಲುಗಳನ್ನು ಅವಕಾಶಗಳನ್ನಾಗಿ ಬದಲಾಯಿಸುವ ಛಲ ಹೊಂದಿರಬೇಕು ಎಂದು ಕರೆ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರಿಬಸಯ್ಯ ಅವರು ಮಹಿಳೆ ಮತ್ತು ಪುರುಷ ಎಂಬ ಭೇದಭಾವನ್ನು ಮಾಡದೇ ಎಲ್ಲರೂ ಮುನ್ನಡದರೆ ಸಮಸಮಾಜವನ್ನು ಕಾಣಲು ಸಾಧ್ಯ ಎಂದು ಹೇಳಿದರು. ಈ ವೇಳೆ ಎನ್. ಎಸ್. ಎಸ್ ನ ಕಾರ್ಯಕ್ರಮಾಧಿಕಾರಿ ಡಾ.ಗಾದೆಪ್ಪ ಹಾಗೂ ಡಾ. ವಿರೇಶ್ ಉಪಸ್ಥಿತರಿದ್ದರು ಮತ್ತು ಶಿಬಿರಾರ್ಥಿಗಳು, ಕಾಲೇಜಿನ ಉಪನ್ಯಾಸಕರು ಭಾಗವಹಿಸಿದ್ದರು.
ಇಂದಿನ ಸಮಸ್ಯೆಗಳ ವಿರುದ್ಧ ಸಂಘಟಿತ ಹೋರಾಟಕ್ಕೆ ಸ್ಫೂರ್ತಿ ಅಂತರರಾಷ್ಟ್ರೀಯ ಮಹಿಳಾ ದಿನ – ವಿಜಯಲಕ್ಷ್ಮಿ
ಕೊಪ್ಪಳ: ತಾಲೂಕಿನ ಹುಲಿಗಿದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(AIMSS) ಹಾಗೂ ಚಿಗುರು ಸಂಜೀವಿನಿ ಮಹಿಳಾ ಒಕ್ಕೂಟವತಿಯಿಂದ ಜಂಟಿಯಾಗಿ ಅಂತರ ರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ AIMSS ನ ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮಿ ರವರು ಮಾತನಾಡುತ್ತಾ “ಮಾರ್ಚ್ 8- ಮಹಿಳಾ ದಿನವು ಒಂದು ಐತಿಹಾಸಿಕ ದಿನವಾಗಿದ್ದು, ನಮ್ಮ ಸಂಘಟನೆ ಈ ದಿನವನ್ನು ಒಂದು ಅರ್ಥಪೂರ್ಣ ದಿನವನ್ನಾಗಿ ದೇಶದಾದ್ಯಂತ ಆಚರಿಸುತ್ತಾ ಬಂದಿದೆ.
ಇಂದಿನ ದಿನಗಳಲ್ಲಿ ಮಹಿಳಾ ದಿನವನ್ನು ಕೇವಲ ಮಹಿಳೆಯರ ವೈಯಕ್ತಿಕ ಕರಕುಶಲತೆಯನ್ನು ಹಾಗೂ ಚಾಕಚಕ್ಯತೆಯನ್ನು ಹಾಡಿಹೊಗಳುವ ದಿನವಾಗಿ ವಿಜೃಂಭಿಸುತ್ತಿದ್ದಾರೆ. ಆದರೆ ಮಹಿಳಾ ದಿನದ ಇತಿಹಾಸವೆಂದರೆ ವಿಶ್ವದ ತುಳಿತಕ್ಕೊಳಗಾದ ಮಹಿಳೆಯರು ಸಂಘಟಿತ ಹೋರಾಟಕ್ಕೆ ಸಂಕಲ್ಪ ತೊಟ್ಟ ದಿನ. 1908 ಮಾರ್ಚ್ 8ರಂದು ಅಮೆರಿಕಾದ ನ್ಯೂಯಾರ್ಕಿನಲ್ಲಿ ಸಮಾನ ವೇತನಕ್ಕಾಗಿ ಹಾಗೂ ದುಡಿಮೆಯ ಕಾಲಾವಧಿ ದಿನಕ್ಕೆ 8 ಗಂಟೆಗಳನ್ನು ಮೀರಬಾರದೆಂದು ಒತ್ತಾಯಿಸಿ ದುಡಿಯುವ ಮಹಿಳೆಯರು ಬೀದಿಗಿಳಿದರು.
20 ರಿಂದ 30 ಸಾವಿರ ಮಹಿಳಾ ಕಾರ್ಮಿಕರು ಕೊರೆಯುವ ಚಳಿಯನ್ನು ಲೆಕ್ಕಿಸದೆ 13 ವಾರಗಳ ಕಾಲ ಹೋರಾಟ ನಡೆಸಿದರು. ಈ ನಿಶ್ಯಸ್ತ್ರ ಮಹಿಳೆಯರ ಮೇಲೆ ಅಲ್ಲಿನ ಸರ್ಕಾರ ಗುಂಡಿನ ಮಳೆಗೆರೆದಿದ್ದರ ಪರಿಣಾಮ ನ್ಯೂಯಾರ್ಕ್ ನ ಬೀದಿಗಳು ಕೆಂಪಾದವು.
ಆದರೆ ಇದರಿಂದ ಮಹಿಳಾ ಹೋರಾಟ ಹಿಮ್ಮೆಟ್ಟುವ ಬದಲಿಗೆ ಇದು ಮುಂದಿನ ಅನೇಕ ಹೋರಾಟಗಳಿಗೆ ನಾಂದಿ ಹಾಡಿತು.
ಕೊನೆಗೆ 1910ರಲ್ಲಿ ಸಮಾಜವಾದಿ ನಾಯಕಿ ಕ್ಲಾರಾ ಜೆಟ್ಕಿನ್ ರವರು ಕೊಪೆನ್ ಹೆಗನ್ ನಲ್ಲಿ ನಡೆದ ಎರಡನೇ ಅಂತರರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ನಲ್ಲಿ ಮಾರ್ಚ್ 8ನ್ನು ಅಂತರರಾಷ್ಟೀಯ ಮಹಿಳಾ ದಿನವಾಗಿ ಘೋಷಿಸಿದರು. ಅಂದಿನಿಂದ ಈ ದಿನವು ವಿಶ್ವದಾದ್ಯಂತ ಹೋರಾಟದ ದಿನವಾಗಿ ಆಚರಿಸಲ್ಪಡುತ್ತಿದೆ.
ಆದರೆ ಈ ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ನೈಜ ಸ್ವಾತಂತ್ರ್ಯ, ಸಮಾನತೆ, ಗೌರವ ಮರೀಚಿಕೆಯಾಗಿಯೇ ಉಳಿದಿದೆ. ಬದಲಾಗಿ ದಿನನಿತ್ಯ ಮಹಿಳೆಯರು ಗರ್ಭಾವಸ್ಥೆಯಿಂದ ಹಿಡಿದು ಮಸಣದವರೆಗೂ ಅನೇಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ಸಂಖ್ಯೆ ಮಿತಿಮೀರಿದೆ.
ಮೂರು ತಿಂಗಳ ಹಸುಗೂಸಿನಿಂದ ಹಿಡಿದು ವಯೋವೃದ್ಧರ ಮೇಲೂ ಕೂಡ ಅತ್ಯಾಚಾರ ಹಾಗೂ ಕೊಲೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ.
ಸ್ತ್ರೀ ಭ್ರೂಣ ಹತ್ಯೆ, ಮರ್ಯಾದೆಗೇಡು ಹತ್ಯೆ , ಆಸಿಡ್ ದಾಳಿ ಹಾಗೆಯೇ ಸರ್ಕಾರವೇ ಹೇಳುತ್ತಿರುವ ಸಮೀಕ್ಷೆಯಂತೆ ಇತ್ತೀಚೆಗಂತೂ ಬಾಲಗರ್ಭಿಣಿಯರ ಸಂಖ್ಯೆ ಸಮಾಜವನ್ನು ಆಘಾತಕ್ಕೀಡು ಮಾಡಿದೆ. ಇದಕ್ಕೆಲ್ಲಾ ಪ್ರಮುಖ ಕಾರಣ ಸಾಂಸ್ಕೃತಿಕ ಅಧ:ಪತನ. ಅಶ್ಲೀಲ ಸಿನಿಮಾ-ಸಾಹಿತ್ಯ ಹಾಗೂ ಮದ್ಯ-ಮಾದಕ ವಸ್ತುಗಳು.
ಸರ್ಕಾರ ಈ ಸಮಸ್ಯೆಗಳನ್ನ ಗಂಭೀರವಾಗಿ ಪರಿಗಣಿಸಿ ಅಶ್ಲೀಲತೆಗೆ ಕಡಿವಾಣ ಹಾಕಿ, ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಖಾತ್ರಿಪಡಿಸಬೇಕು.
ಜೊತೆಗೆ ಮಹಾನ್ ಚೇತನಗಳಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಮೇಡಂ ಕ್ಯೂರಿ ಅವರಂತಹ ಆದರ್ಶ ವ್ಯಕ್ತಿತ್ವಗಳನ್ನು ಪಠ್ಯ ಪುಸ್ತಕಗಳಲ್ಲಿ ಅಳವಡಿಸಬೇಕು ಎನ್ನುತ್ತಾ, ಸಮಾಜದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸ್ತ್ರೀ-ಪುರುಷರು ಒಗ್ಗಟ್ಟಾಗಿ ಧ್ವನಿ ಎತ್ತಿದರೆ ಮಾತ್ರ ಇಂತಹ ಮಹಿಳಾ ದಿನಾಚರಣೆಗಳು ನಿಜಕ್ಕೂ ಸಾರ್ಥಕವಾಗುತ್ತವೆ.
ಇದು ಕೇವಲ ಒಂದು ದಿನದ ಆಚರಣೆಗೆ ಮಾತ್ರ ಸೀಮಿತವಾಗಬಾರದು ಬದಲಿಗೆ ನಮ್ಮ ಮನೆ – ಮನಸ್ಸುಗಳನ್ನು ಹೊಕ್ಕು ಬದಲಾವಣೆಗೆ ನಾಂದಿ ಹಾಡಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಸನ್ನದ್ಧರಾಗೋಣ” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಚಿಗುರು ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಆರ್. ನಿಲ್ಲಮ್ಮ, ಪದಾಧಿಕಾರಿಗಳಾದ ಭಾಗ್ಯಲಕ್ಷ್ಮಿ, ಹುಸೇನ್ ಬೀ, ಯಮನೂರಮ್ಮ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ನಿಲ್ಲಮ್ಮ ಹಾಗೂ ಮಹಿಳೆಯರು ಉಪಸ್ಥಿತರಿದ್ದರು.
ಗಂಗಾವತಿ: ತಾಲೂಕಿನ ಹೊಸಕೇರಾ ಡಗ್ಗಿ ಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “HPV ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಡಾಕ್ಟರ್ ಫರ್ಜಾನಾ ಜಾಸ್ಮಿನ್ ಚಾಲನೆ ನೀಡಿದರು, ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಡಿ ಶ್ರೀನಿವಾಸ್ ಹಾಗೂ ಶ್ರೀ ಮಂಜುನಾಥ ARS ಸಮಿತಿ ಸದಸ್ಯರು ಭಾಗಿಯಾಗಿದ್ದರು, ಜ್ಯೋತಿ ಬೆಳಗಿಸುವ ಮೂಲಕ ಮಾತನಾಡಿದ ಡಾಕ್ಟರ್ ಫರ್ಜಾನಾ ಜಾಸ್ಮಿನ್ , ಇಂದು ಅಂತರಾಷ್ಟ್ರೀಯ ಕಿಡ್ನಿ ದಿನ, ” ಆರೋಗ್ಯವೇ ಭಾಗ್ಯ” ಗಾದೆಗಳು ವೇದಗಳಿಗೆ ಸಮವಾಗಿವೆ. ಗಾದೆಗಳು ಹಿರಿಯರು ನುಡಿದ ನುಡಿಮುತ್ತುಗಳಾಗಿವೆ. ಆರೋಗ್ಯವೇ ಭಾಗ್ಯ ಎಂಬ ಗಾದೆ ಮಾತು ತುಂಬಾ ಅರ್ಥಪೂರ್ಣವಾದ ಗಾದೆ ಮಾತಾಗಿದೆ.ಮನುಷ್ಯನಿಗೆ ಆರೋಗ್ಯಕ್ಕಿಂತ ಬೆಲೆ ಬಾಳುವ ವಸ್ತು ಮತ್ತೊಂದಿಲ್ಲ. ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳೋಣ ಎಂದು ಹೇಳಿದರು, ನಿಮ್ಮ ಜನನಾಂಗಗಳ ಮೇಲೆ ಪರಿಣಾಮ ಬೀರುವ HPV ಸಾಮಾನ್ಯವಾಗಿ ರೋಗಲಕ್ಷಣಗಳನ್ನು ಉಂಟುಮಾಡುವುದಿಲ್ಲ. ರೋಗಲಕ್ಷಣಗಳು ಕಂಡುಬಂದಾಗ, ವೈರಸ್ನ ಸಾಮಾನ್ಯ ಲಕ್ಷಣವೆಂದರೆ ನಿಮ್ಮ ಜನನಾಂಗದ ಪ್ರದೇಶದಲ್ಲಿನ ನರಹುಲಿಗಳು. ಜನನಾಂಗದ ನರಹುಲಿಗಳು ನಿಮ್ಮ ಚರ್ಮದ ಮೇಲೆ ಬೆಳೆಯುವ ಒರಟಾದ, ಹೂಕೋಸು ತರಹದ ಉಂಡೆಗಳಾಗಿವೆ. ಅವು ಚರ್ಮದ ಟ್ಯಾಗ್ಗಳಂತೆಯೂ ಕಾಣಿಸಿಕೊಳ್ಳಬಹುದು. ನೀವು ಕಡಿಮೆ-ಅಪಾಯದ HPV ಸೋಂಕಿಗೆ ಒಳಗಾದ ವಾರಗಳು, ತಿಂಗಳುಗಳು ಅಥವಾ ವರ್ಷಗಳ ನಂತರವೂ ಅವು ಕಾಣಿಸಿಕೊಳ್ಳಬಹುದು. ಜನನಾಂಗದ ನರಹುಲಿಗಳು ಸಾಂಕ್ರಾಮಿಕವಾಗಿವೆ (ಎಲ್ಲಾ ರೀತಿಯ HPV ಗಳಂತೆ). ಅವು ತುರಿಕೆ ಮತ್ತು ತುಂಬಾ ಅನಾನುಕೂಲತೆಯನ್ನು ಉಂಟುಮಾಡಬಹುದು. ಹ್ಯೂಮನ್ ಪ್ಯಾಪಿಲೋಮವೈರಸ್ (HPV) ನಿಮ್ಮ ದೇಹದ ವಿವಿಧ ಭಾಗಗಳ ಮೇಲೆ ಪರಿಣಾಮ ಬೀರುವ ಒಂದು ಸಾಮಾನ್ಯ ವೈರಸ್ ಆಗಿದೆ. ನಿಮ್ಮ ಕೈಗಳು, ಪಾದಗಳು ಮತ್ತು ಮುಖದ ಮೇಲೆ ನರಹುಲಿಗಳನ್ನು ಉಂಟುಮಾಡುವ HPV ತಳಿಗಳು ಸೇರಿದಂತೆ 100 ಕ್ಕೂ ಹೆಚ್ಚು ರೀತಿಯ HPVಗಳಿವೆ . ಸುಮಾರು 30 HPV ತಳಿಗಳು ನಿಮ್ಮ ಜನನಾಂಗಗಳ ಮೇಲೆ ಪರಿಣಾಮ ಬೀರಬಹುದು, ನಿಮ್ಮ ಯೋನಿ, ಯೋನಿ , ಗರ್ಭಕಂಠ, ಶಿಶ್ನ ಮತ್ತು ಸ್ಕ್ರೋಟಮ್ , ಹಾಗೆಯೇ ನಿಮ್ಮ ಗುದನಾಳ ಮತ್ತು ಗುದದ್ವಾರ ಸೇರಿದಂತೆ. ಇದು ಜನನಾಂಗದ ನರಹುಲಿಗಳನ್ನು ಉಂಟುಮಾಡುವ HPV ಪ್ರಕಾರವನ್ನು ಒಳಗೊಂಡಿದೆ ಎಂದರು. ಈ ಸಂದರ್ಭದಲ್ಲಿ ವೀರಣ್ಣ ಹರ್ತಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾಗಳು ಮತ್ತು ಶ್ರೀಮತಿ ಡಿ ಅಕ್ಕಿಮ್ಮ PHCO ಶ್ರೀಮತಿ ಸರಸ್ವತಿ PHCO ಶ್ರೀ ಮಾದಗೊಂಡ ಮಹೇಂದ್ರ HIO ಶ್ರೀ ಶರಣಪ್ಪ ಎಸ್ HIO, ಹೊಸಕೇರಾ ಗ್ರಾಮದ ಗುರು ಹಿರಿಯರು, ಗ್ರಾಮ ಪಂಚಾಯತ್ ಸದಸ್ಯರು, ಹಿರಿಯ ನಾಗರಿಕರು, ಫಲಾನುಭವಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.