ಇಂದರಗಿಯಲ್ಲಿ ಅದ್ದೂರಿಯಾಗಿ ಜರುಗಿದ ಶಾಲಾ ವಾರ್ಷಿಕೋತ್ಸವ

School anniversary celebrated with grandeur in Indaragi

ಇಂದರಗಿಯಲ್ಲಿ ಅದ್ದೂರಿಯಾಗಿ ಜರುಗಿದ ಶಾಲಾ ವಾರ್ಷಿಕೋತ್ಸವ


ಗಂಗಾವತಿ:ಮಾ.14:ಶಾಲಾ ವಾರ್ಷಿಕೋತ್ಸವವು ಕೇವಲ ಒಂದು ಹಬ್ಬವಲ್ಲ; ಅದು ವಿದ್ಯಾರ್ಥಿಗಳ ಒಂದು ವರ್ಷದ ಪರಿಶ್ರಮ, ಶಿಸ್ತಿನ ಜೀವನ ಮತ್ತು ಸಾಧನೆಗಳ ಸಂಭ್ರಮವಾಗಿದೆ.ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್ಸಿ ಅಧ್ಯಕ್ಷ ಡಾ.ಅಮರೇಶ ಕುಂಬಾರ ಹೇಳಿದರು.
ಕೊಪ್ಪಳ ತಾಲೂಕು ಗಂಗಾವತಿ ವಿಧಾನ ಸಭಾ ಕ್ಷೇತ್ರದ ಇಂದರಗಿಯ ಶ್ರೀ ಇಂದ್ರೇಶ್ವರ ಹಿರಿಯ ಪ್ರಾಥಾಮಿಕ ಶಾಲೆಯ 16ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಶಿಕ್ಷಣ ಎಂದರೆ ಕೇವಲ ಪಠ್ಯಪುಸ್ತಕಗಳಲ್ಲಿನ ಜ್ಞಾನವಲ್ಲ ಅದು ವ್ಯಕ್ತಿತ್ವ ನಿರ್ಮಾಣ, ನೈತಿಕ ಮೌಲ್ಯಗಳು ಮತ್ತು ಆತ್ಮವಿಶ್ವಾಸ ಬೆಳೆಸುವ ಪ್ರಕ್ರಿಯೆ ಮತ್ತು ಕನ್ನಡ ಮತ್ತು ಇಂಗ್ಲಿಷ್ ಎರಡೂ ಮಾಧ್ಯಮಗಳಲ್ಲಿ ವಿದ್ಯಾಭ್ಯಾಸ ನೀಡುತ್ತಿರುವ ನಮ್ಮ ಶಾಲೆ, ವಿದ್ಯಾರ್ಥಿಗಳಿಗೆ ಜಾಗತಿಕ ಜ್ಞಾನದ ಜೊತೆಗೆ ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಅರಿವು ನೀಡುತ್ತಿರುವುದು ಅತ್ಯಂತ ಶ್ಲಾಘನೀಯ.


ಇಂದು ಮಕ್ಕಳು ಪ್ರದರ್ಶಿಸುವ ನೃತ್ಯ, ಗಾಯನ, ನಾಟಕ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಅವರ ಅಡಗಿದ ಪ್ರತಿಭೆಗಳ ಸುಂದರ ಅಭಿವ್ಯಕ್ತಿಯಾಗಿವೆ. ವೇದಿಕೆಯ ಮೇಲೆ ನಿಲ್ಲುವ ಧೈರ್ಯವೇ ಅವರ ಭವಿಷ್ಯದ ನಾಯಕತ್ವ ಗುಣಗಳ ಆರಂಭವಾಗಿದೆ.
ಶಿಕ್ಷಕರ ಪರಿಶ್ರಮ,ಮುಖ್ಯವಾಗಿ ಪೋಷಕರು ಪ್ರೋತ್ಸಾಹ ಮತ್ತು ಮಕ್ಕಳ ಶ್ರದ್ಧೆ ಈ ಮೂರೂ ಸೇರಿ ಶಾಲೆಯ ಯಶಸ್ಸಿನ ಆಧಾರಸ್ತಂಭಗಳು ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಇತ್ತೀಚಿಗೆ ನಿಧಾನರಾದ ಗ್ರಾ.ಪಂ.ಸದಸ್ಯರು,ಶಿಕ್ಷಣ ಪ್ರೇಮಿಗಳಾದ ಡಾ.ನಾಗರಾಜ ಕಂಬಳಿ ಇವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು 5ನಿಮಿಷ ಮೌನಚಾರಣೆ ಮಾಡಲಾಯಿತು, ಭಾಗವಹಿಸಿದ ಎಲ್ಲ ಗಣ್ಯರೊಂದಿಗೆ ಮಕ್ಕಳಿಗೆ ವಿವಿಧ ಆಟೋಟಗಳ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪ್ರಮಣ ಪತ್ರವನ್ನು ವಿತರಣೆಯ ಮಾಡಲಾಯಿತು,

ಈ ಸಂದರ್ಭದಲ್ಲಿ,ಶ್ರೀ ಇಂದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಇಂದ್ರೇಶ ಕೊಳ್ಳಿ,ಶಾಲೆಯ ಮುಖ್ಯೋಪಾಧ್ಯಾಯರಾದ ಮಧುಸೂಧನ್ ಡೊಳ್ಳಿನ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ ಕುರಿ,ಉಪನ್ಯಾಸಕ ಹನುಮಗೌಡ ಗಬ್ಬೂರು,ಹನಮಂತಪ್ಪ ಕೊಳ್ಳಿ, ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮಾಜಿ ಸದಸ್ಯ ಆನಂದ ಕುರಿ,ಗ್ರಾಮದ ಮುಖಂಡರಾದ ಬಾಳಪ್ಪ ಶಿರೂರು,ಮೈಲಾರಪ್ಪ. ಹರಿಜನ,,ಶಿವನಗೌಡ ಪೊ.ಪಾಟೀಲ್,ರಾಮಣ್ಣ ಮೂಗುತಿ,ಮಾರುತಿ ಹಡಪದ,ಶರಣಪ್ಪ ಬಿಳೇಬಾವಿ,ಆದೇಪ್ಪ ಬೆಟ್ಟಗೇರಿ, ಹನುಮೇಶ ಹರಿಜನ, ಅಮರೇಶ,ಕ.ಕಾ.ನಿ.ಪತ್ರಕರ್ತ ಸಂಘ ಕೊಪ್ಪಳ ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ಡಾ.ಕೆ.ಎಂ.ಶರಣಯ್ಯಸ್ವಾಮಿ, ವಿಧ್ಯಾರ್ಥಿಗಳು ಹಾಗೂ ಪಾಲಕರು ಸೇರಿದಂತೆ ಇತರರು ಇದ್ದರು.

ಭೋವಿ ಸಮುದಾಯದ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಪುಷ್ಪಾಂಜಲಿ ಗುನ್ನಾಳ ಆಯ್ಕೆ

Pushpanjali Gunna elected as district president of Bhovi community women's unit

ಭೋವಿ ಸಮುದಾಯದ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಪುಷ್ಪಾಂಜಲಿ ಗುನ್ನಾಳ ಆಯ್ಕೆ

ಕೊಪ್ಪಳ ; ಇಲ್ಲಿನ ಪ್ರವಾಸಿಮಂದಿರದಲ್ಲಿ ರವಿವಾರದಂದು ನಡೆದ ಭೋವಿ ಸಮುದಾಯದ ಮುಖಂಡರ ಸಭೆಯಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಪುಷ್ಪಾಂಜಲಿ ಗುನ್ನಾಳ ನೇಮಕವಾಗಿದ್ದಾರೆ.

ಸಮುದಾಯದ ಮುಖಂಡರ ಸರ್ವಾನುಮತದಿಂದ ಒಪ್ಪಿಗೆ ಮೇರೆಗೆ ಸಮಾಜಮುಖಿ, ಮಹಿಳಾ ಸಂಘಟನೆಯಲ್ಲಿ ಛಾಪು ಮೂಡಿಸಿರುವ ಪುಷ್ಪಾಂಜಲಿ ಗುನ್ನಾಳ ಅವರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯಾದ ಬಳಿಕ ಮಾತನಾಡಿದ ಪುಷ್ಪಾಂಜಲಿ ಗುನ್ನಾಳ ಅವರು, ಸಮುದಾಯದ ಮುಖಂಡರು, ಯುವಮಿತ್ರರು, ಮಹಿಳಾ ಪ್ರಮುಖರು ನನ್ನ ಮೇಲೆ ವಿಶ್ವಾಸ ಇಟ್ಟು, ಆಯ್ಕೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಮುದಾಯದ ಏಳಿಗೆಗೆ, ಸಮುದಾಯದ ಬಡವರ್ಗದ ಮಕ್ಕಳ ಶೈಕ್ಷಣಿಕವಾಗಿ ಬೆಳವಣಿಗೆ ಶ್ರಮಿಸುವುದಾಗಿ‌ ಹೇಳಿದರು.
ಇನ್ನೂ ಇದೇ ವೇಳೆ ಭೋವಿ ಸಮುದಾಯದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ಹುಲಿಗೇಶ್ ಬಂಡಿ ಗಂಗಾವತಿಯವರನ್ನು ಸಹ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು..

ನಾಲ್ಕು ವರೆ ಕೋಟಿ ವೆಚ್ಚದಲ್ಲಿ ಸೇತುವೆ ಮತ್ತು ಸಿಸಿ ರಸ್ತೆ ಕಾಮಾಗಾರಿಗೆ ಗುದ್ದಲಿ ಪೂಜೆ :ಶಾಸಕ ಎಮ್ ಆರ್ ಮಂಜುನಾಥ್ .

Hudali puja for bridge and CC road work at a cost of four and a half crores: MLA MR Manjunath.

ನಾಲ್ಕು ವರೆ ಕೋಟಿ ವೆಚ್ಚದಲ್ಲಿ ಸೇತುವೆ ಮತ್ತು ಸಿಸಿ ರಸ್ತೆ ಕಾಮಾಗಾರಿಗೆ ಗುದ್ದಲಿ ಪೂಜೆ :ಶಾಸಕ ಎಮ್ ಆರ್ ಮಂಜುನಾಥ್


ವರದಿ: ಬಂಗಾರಪ್ಪ .ಸಿ.
ಹನೂರು:ಕ್ಷೇತ್ರವ್ಯಾಪ್ತಿಯಲ್ಲಿನಲೊಕ್ಕನಹಳ್ಳಿ–ಒಡೆಯರಪಾಳ್ಯ ಮಾರ್ಗ ಮಧ್ಯದಲ್ಲಿರುವ ಮಸ್ಕಿತಹಳ್ಳ ಮತ್ತು ಜಡೆತಡೆ ಹಳ್ಳಗಳಿಗೆ ಅಡ್ಡಲಾಗಿ ದಾಟುವ ಸೇತುವೆ ಕಾಮಗಾರಿ ಹಾಗೂ ಮತ್ತೊಂದು ಸೇತುವೆಯನ್ನು ಮೇಲ್ಜರ್ಜೆಗೆರಿಸುವ ಕಾಮಗಾರಿಗೆ ಸುಮಾರು ಅಂದಾಜುವೆಚ್ಚ 04 ಕೋಟಿ ರೂಗಳ ವೆಚ್ಚದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಹನೂರು ತಾಲೂಕಿನ ಪಿಜಿ ಪಾಳ್ಯದ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ
ಬಳಿಕ ಮಾತನಾಡಿದ ಶಾಸಕರು, ಪಿಜಿ ಪಾಳ್ಯ–ಒಡೆಯರಪಾಳ್ಯ ಮುಖ್ಯ ರಸ್ತೆ ನೆರೆಯ ತಮಿಳುನಾಡು ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ದಿನನಿತ್ಯ ಅಪಾರ ಸಂಖ್ಯೆಯ ವಾಹನಗಳು ಹಾಗೂ ನೂರಾರು ಗೂಡ್ಸ್ ವಾಹನಗಳು ಸಂಚರಿಸುತ್ತವೆ. ಆದರೆ ಮಳೆಗಾಲದಲ್ಲಿ ಹಳ್ಳಗಳಲ್ಲಿ ರಭಸವಾಗಿ ನೀರು ಹರಿದು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಎಂದರು.

ಈ ಹಿನ್ನೆಲೆಯಲ್ಲಿ ಜಡೆತಡೆ ಹಳ್ಳಕ್ಕೆ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ ಹಾಗೂ ಪಿಜಿ ಪಾಳ್ಯ ಹತ್ತಿರದ ಮಸ್ಕಿತಹಳ್ಳಕ್ಕೆ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಾಗಾರಿಗೆ ಗುದ್ದಲಿ ಪೂಜೆ ಮಾಡುತ್ತಿದ್ದು . ಕಾಮಗಾರಿಯು ಉತ್ತಮ ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದವರಿಗೆ ಸೂಚಿಸಿದರು

ಇದಲ್ಲದೆ ಪಿ. ಜಿ. ಪಾಳ್ಯ ಗ್ರಾಮದ ಪರಿಶಿಷ್ಟ ಜಾತಿ ಬಡವಣೆಯಲ್ಲಿ ಎಸ್.ಇ.ಪಿ ಯೋಜನೆಯಡಿ ಸುಮಾರು 25 ಲಕ್ಷ ರೂ. ಮತ್ತು ಹುಣಸೇ ಪಾಳ್ಯ ಗ್ರಾಮದ ಪರಿಶಿಷ್ಟ ಜಾತಿ ಬಡವಣೆಯಲ್ಲಿ ಎಸ್. ಇ. ಪಿ.ಪಿ ಯೋಜನೆ ಅನುಧಾನದಡಿ ಸುಮಾರು 25 ಲಕ್ಷ ರೂ ಅಂದಾಜು ವೆಚ್ಚದಲ್ಲಿ ಸಿಸಿರಸ್ತೆ ನಿರ್ಮಾಣ ಕಾಮಾಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಇದೆ ಸಮಯದಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್, ಎಇ ಸುರೇಂದ್ರ, ಮುಖಂಡರುಗಳಾದ ಬಿಳಿಗಿರಿ ಮಹದೇವಸ್ವಾಮಿ, ಜಿ ಎಂ ಮಾದೇಶ್, ನಿಂಗಶೆಟ್ಟಿ ಜಡರುದ್ರಸ್ವಾಮಿ, ಕೃಷ್ಣಮೂರ್ತಿ, ಸಿದ್ದರಾಜು, ಚಿಕ್ಕರಾಜಶೆಟ್ಟಿ, ಚಿನ್ನಸ್ವಾಮಿ, ಬೇಕ್ರಿ ಶಿವಕುಮಾರ್, ಸೆಲ್ವಂ, ಮಹೇಂದ್ರ,ರವಿ, ಸಣ್ಣಮಾದ, ಸೋಮಶೇಖರ್, ನಾಗೇಂದ್ರ, ಮಧುಸೂದನ್, ಎಂ ಎಸ್ ಸಿ ಮಹದೇಸ್ವಾಮಿ, ನಾಗರಾಜು, ಪುನೀತ್, ಉದ್ದನೂರು ಶಾಂತರಾಜು, ಗಿರೀಶ್ ಪ್ರಮೋದ್, ವೆಂಕಟೇಶ್, ಗೋವಿಂದ, ವಿಜಯ್ ಕುಮಾರ್, ನಟರಾಜು, ಪ್ರಭುಸ್ವಾಮಿ,ಹಾಗೂ ಇನ್ನಿತರರು ಹಾಜರಿದ್ದರು,

ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

Legal action if domestic gas is used for commercial purposes

ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

ವಿಜಯನಗರ, (ಹೊಸಪೇಟೆ):ಗೃಹ ಬಳಕೆಗಾಗಿ ರಿಯಾಯಿತಿ ದರದಲ್ಲಿ ನೀಡಲಾಗುವ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಜಿಲ್ಲೆಯ ವಾಣಿಜ್ಯ ಸಂಸ್ಥೆಗಳಲ್ಲಿ ನಿಯಮಬಾಹಿರವಾಗಿ ಬಳಸುತ್ತಿರುವುದನ್ನು ಪತ್ತೆ ಹಚ್ಚಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಹಾರ ನಿರೀಕ್ಷಕರು ಶನಿವಾರ ಜಿಲ್ಲೆಯಾದ್ಯಂತ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಹೋಟೆಲ್‌, ಬೇಕರಿ, ಫಾಸ್ಟ್ ಫುಡ್ ಸೆಂಟರ್‌, ಜನನಿಬಿಡ ಆಟೋ ಹಾಗೂ ಬಸ್ ನಿಲ್ದಾಣಗಳ ಬಳಿಯಿರುವ ಉಪಾಹಾರ ಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾಲೀಕರಿಗೆ ಗೃಹ ಬಳಕೆ ಸಿಲಿಂಡರ್‌ಗಳನ್ನು ಯಾವುದೇ ಕಾರಣಕ್ಕೂ ವಾಣಿಜ್ಯ ಉದ್ದೇಶಗಳಿಗೆ ಬಳಸಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ರುವುದು ಕಂಡುಬಂದಲ್ಲಿ, ಅಂತಹ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಮಾಲೀಕರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ಆಹಾರ ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಎಚ್ಚರಿಕೆ ನೀಡಿದರು.

ಮಾ.16ರಂದು ನಗರಸಭೆ ಬಜೆಟ್ ಪೂರ್ವಭಾವಿ ಸಭೆಸಾರ್ವಜನಿಕರು ಭಾಗವಹಿಸಲು ಪೌರಾಯುಕ್ತರು ಕರೆ
Municipal Council budget pre-meeting on March 16th
Public invited to participate by civic commissioner

ಮಾ.16ರಂದು ನಗರಸಭೆ ಬಜೆಟ್ ಪೂರ್ವಭಾವಿ ಸಭೆ
ಸಾರ್ವಜನಿಕರು ಭಾಗವಹಿಸಲು ಪೌರಾಯುಕ್ತರು ಕರೆ

ಗಂಗಾವತಿ:ನಗರಸಭೆಯ 2026-27ನೇ ಸಾಲಿನ ಆಯ-ವ್ಯಯದ ಬಜೆಟ್ ಮಂಡಣೆ ಕುರಿತು ಮಾ.16 ರಂದು ಸೋಮವಾರ ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ.

ಈ ಸಭೆಗೆ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ನಗರಸಭೆ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ವ್ಯಾಪಾರಸ್ಥರು, ಉದ್ಯಮಿಗಳು, ಸಾರ್ವಜನಿಕರು, ಪತ್ರಕರ್ತರು ಆಗಮಿಸಿ ಬಜೆಟ್ ಮಂಡನೆ ಕುರಿತು ತಮ್ಮ ಸಲಹೆ ನೀಡಬೇಕು ಎಂದು ಪೌರಾಯುಕ್ತ ವಿರುಪಾಕ್ಷಮೂರ್ತಿ ಕರೆ ನೀಡಿದ್ದಾರೆ.
ಈ ಕುರಿತು ಅವರು ಮಾಧ್ಯಮಗಳಿಗೆ ಪ್ರಕಟಣೆ ನೀಡಿದ್ದಾರೆ.

ಮಾ.16ರಂದು ಸಂಜೆ 4 ಗಂಟೆಗೆ ಗಂಗಾವತಿ ನಗರಸಭೆಯ ಸಭಾಂಗಣದಲ್ಲಿ ನಗರಸಭೆಯ 2026-27ನೇ ಸಾಲಿನ ಆಯ-ವ್ಯಯ ಮುಂಗಡ ಪತ್ರದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.

ಗಂಗಾವತಿ ನಗರದ ಅಭಿವೃದ್ಧಿ, ತೆರಿಗೆ ಸಂಗ್ರಹ, ಕುಡಿಯುವ ನೀರು ಸೌಲಭ್ಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಹಾಗೂ ಸೌಂದರೀಕರಣಕ್ಕೆ 2026-27ರಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಡೆಯುವ ಆಯ ವ್ಯಯದ ಕುರಿತು ಚರ್ಚಿಸಲು ಮತ್ತು ಬಜೆಟ್ ಮಂಡನೆಗೆ ತಮ್ಮಿಂದ ಸೂಕ್ತ ಲಸಹೆಗಳನ್ನು ಸ್ವೀಕರಿಸಲು ಈ ಬಜೆಟ್ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ.
ಸರ್ವರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಪೌರಾಯುಕ್ತರು ಕೊರಿದ್ದಾರೆ.

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್
Let's have a plastic-free lifestyle: Nagaraj S. Guttedar

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್


ಗಂಗಾವತಿ: ನಗರದ ಪ್ರತಿಷ್ಠಿತ ಸಂಕಲ್ಪ ಮಹಿಳಾ ಮಹಾವಿದ್ಯಾಲಯದ ವಿದ್ಯರ‍್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಕರ‍್ಯಕ್ರಮದ ಅಡಿಯಲ್ಲಿ ಹಿರೇಜಂತಕಲ್ ಹಾಗೂ ವಿಪ್ರ ಪ್ರದೇಶದಲ್ಲಿ ಶ್ರಮದಾನ ಮಾಡುವ ಮೂಲಕ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ವಸ್ತುಗಳನ್ನು ಆಯ್ದು ಪ್ರದೇಶವನ್ನು ಸ್ವಚ್ಛಗೊಳಿಸುತ್ತಿರುವ ಸಂರ‍್ಭದಲ್ಲಿ ಅಲ್ಲಿಗೆ ಭೇಟಿ ನೀಡಿ ಮಾತನಾಡಿದ ಸಂಕಲ್ಪ ಪದವಿ ಮಹಿಳಾ ಮಹಾವಿದ್ಯಾಲಯ ಕರ‍್ಯಾಧ್ಯಕ್ಷರು ಹಾಗೂ ವಕೀಲರಾದ ನಾಗರಾಜ್ ಗುತ್ತೇದಾರ್ ಅವರು, ಪರಿಸರಕ್ಕೆ ಮಾರಕವಾದ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಾವುಗಳೆಲ್ಲ ಸ್ವ ಇಚ್ಛೆಯಿಂದ ತ್ಯಜಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಜೀವನಶೈಲಿಗೆ ಬದಲಾಗಬೇಕಿದೆ.

ಆ ಮೂಲಕ ಹಿರಿಯರಿಂದ ಬಳುವಳಿಯಾಗಿ ಬಂದ ಸುಂದರ-ಸ್ವಚ್ಚ ಪರಿಸರವನ್ನು ಯಥಾವತ್ತಾಗಿ ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಸಾಧ್ಯವಾಗುತ್ತದೆ.

ನಾಗರೀಕತೆಯ ಬೆಳವಣಿಗೆಯ ಭಾಗವಾಗಿ ದಿನನಿತ್ಯದ ಜೀವನಶೈಲಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಅತಿಯಾಗಿ ಅವುಗಳು ಪರಿಸರಕ್ಕೆ ಮತ್ತು ಮಾನವನ ಆರೋಗ್ಯಕ್ಕೆ ತೀವ್ರವಾದ ಹಾನಿಯನ್ನು ಉಂಟುಮಾಡುತ್ತಿವೆ ಎಂದು ತಿಳಿಸಿದರು.


ಪ್ಲಾಸ್ಟಿಕ್ ವಸ್ತುಗಳ ಬದಲಾಗಿ ರ‍್ಯಾಯ ಬಳಕೆಯ ಕಡೆಗೆ ನಾವೆಲ್ಲ ಗಮನಹರಿಸುವ ಮೂಲಕ ಆರೋಗ್ಯ ಪರ‍್ಣ ಸಮಾಜ ನರ‍್ಮಾಣಕ್ಕೆ ಮುನ್ನುಡಿ ಬರೆಯಬೇಕಾಗಿದೆ ಎಂದು ಕರೆ ನೀಡಿದರು. ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಹಲವಾರು ಕಾಯ್ದೆ ಕಾನೂನುಗಳಿದ್ದರೂ ಸಹ ಜನ ಅವುಗಳನ್ನು ಗಮನಿಸದೆ ಮುಂದುವರೆದಲ್ಲಿ ಮಾನವ ಸಂಕುಲ ಅಪಾಯಕ್ಕೆ ಸಿಲುಕುವುದರಲ್ಲಿ ಅನುಮಾನವಿಲ್ಲ.

ಹಾಗಾಗಿ ಈ ಪವಿತ್ರ ಪರಿಸರದಲ್ಲಿ ವಾಸಿಸುವ ನಾವೆಲ್ಲರೂ ನಮ್ಮ ಸ್ವ-ಇಚ್ಚೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಹಾಗೂ ನಮ್ಮಗಳ ಆರೋಗ್ಯಯುತ ಜೀವನಕ್ಕೆ ಸಂಕಲ್ಪ ಮಾಡಬೇಕಾಗಿದೆ ಎಂದು ತಿಳಿಸಿದರು.
೨೦೨೧ ಆಗಸ್ಟ್ ೧೨ರಂದು ಕೇಂದ್ರ ಹಾಗೂ ರಾಜ್ಯ ರ‍್ಕಾರಗಳು ಹೊರಡಿಸಿದ ಅಧಿಸೂಚನೆಯಂತೆ ರಾಜ್ಯದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧವಿದ್ದರೂ ಅದನ್ನು ಸಂಪರ‍್ಣವಾಗಿ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ.

ಹಾಗಾಗಿ ನಾವೆಲ್ಲರೂ ರಕ್ಕಸ ಪ್ಲಾಸ್ಟಿಕ್ ಅನ್ನು ತ್ಯಜಿಸಿ ಉತ್ತಮ ಪರಿಸರ ಮತ್ತು ಸ್ವಸ್ಥ ಸಮಾಜ ನರ‍್ಮಾಣಕ್ಕೆ ಕೈಜೋಡಿಸಬೇಕಿದೆ ಎಂದು ಶಿಬಿರರ‍್ಥಿಗಳಿಗೆ ಕರೆ ನೀಡಿದರು.
ಈ ಸಂರ‍್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕರ‍್ಯಕ್ರಮ ಅಧಿಕಾರಿಗಳಾದ ರಮೇಶ್, ಶಿವಶರಣ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿಯಾದ ರಾಹುಲ್ ಉಪಸ್ಥಿತರಿದ್ದರು.

ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ ದಿನಾಚರಣೆ ನ್ಯಾಯವಾದಿ ನಂದಿನಿ ಸಲಹೆ

Women need legal knowledge: Lawyer Nandini's advice on Women's Day

ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ ದಿನಾಚರಣೆ ನ್ಯಾಯವಾದಿ ನಂದಿನಿ ಸಲಹೆ

ಗಂಗಾವತಿ : 14 ಪ್ರತಿ ಕ್ಷೇತ್ರದಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚು ಸಾಧನೆ ಮಾಡಿದ್ದಾರೆ ಎಂದು ನ್ಯಾಯವಾದಿ ನಂದಿನಿ ಶ್ಲಾಘಿಸಿದರು.

ನಗರದ ಬಿಜೆಪಿ ಕಛೇರಿಯಲ್ಲಿ ನಗರ ಘಟಕ ಮಹಿಳಾ ಅಧ್ಯಕ್ಷರ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಿಳೆ ತಾಯಿ , ಮಗಳು, ಅಕ್ಕ-ತಂಗಿ, ಗೆಳತಿ, ಹೆಂಡತಿಯಾಗಿ ಸರ್ವರಿಗೂ ಒಳಿತು ಬಯಸುತ್ತ ಸಂಸಾರ ನೌಕೆಯನ್ನು ಉತ್ತಮವಾಗಿ ಸಾಗಿತ್ತಿದ್ದಾರೆ. ಮಹಿಳೆಯನ್ನು ದೇವತೆಗಳಿಗೆ ಹೋಲಿಕೆ ಮಾಡಲಾಗುತ್ತದೆ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಕೊಡಬೇಕು ಎಂಬ ಉದ್ಧೇಶದಿಂದ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಕಾನೂನಿನಲ್ಲಿ ಸಿಗುವ ಸ್ಥಾನಮಾನ, ಮಹಿಳೆಯರ ಶೋಷಣೆ ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚೆ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಪುರುಷರಂತೆ ಮಹಿಳೆಯರೂ ಇರಬೇಕು ಎಂಬ ಉದ್ದೇಶ ಸಂವಿಧಾನ ವಿಶೇಷ ಸ್ಥಾನಮಾನ ಕೊಟ್ಟಿದೆ. ಎಲ್ಲಾ ರಂಗದಲ್ಲಿಯೂ ಇಂದು ತಮ್ಮ ಛಾಪು ಮೂಡಿಸಿದ್ದಾರೆ. ಮಹಿಳೆಯರಿಗೆ ಕಾನೂನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

‘ಮಹಿಳೆ ತಾಯಿ , ಮಗಳು, ಅಕ್ಕ-ತಂಗಿ, ಗೆಳತಿ, ಹೆಂಡತಿಯಾಗಿ ಸರ್ವರಿಗೂ ಒಳಿತು ಬಯಸುತ್ತ ಸಂಸಾರ ನೌಕೆಯನ್ನು ಉತ್ತಮವಾಗಿ ಸಾಗಿತ್ತಿದ್ದಾರೆ. ಮಹಿಳೆಯನ್ನು ದೇವತೆಗಳಿಗೆ ಹೋಲಿಕೆ ಮಾಡಲಾಗುತ್ತದೆ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಕೊಡಬೇಕು ಎಂಬ ಉದ್ಧೇಶದಿಂದ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಕಾನೂನಿನಲ್ಲಿ ಸಿಗುವ ಸ್ಥಾನಮಾನ, ಮಹಿಳೆಯರ ಶೋಷಣೆ ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚೆ ಅತ್ಯಗತ್ಯವಾಗಿದೆ ಎಂದು ಹೇಳಿದರು.
ನಂತರ ಮಾತನಾಡಿದ ಬಿಜೆಪಿ ಮಹಿಳಾ ನಗರ ಘಟಕ ಅಧ್ಯಕ್ಷ ಭಾರತಿ ಕೃಷ್ಣ ಆಗಲೂರು ಪ್ರಥಮ ಬಾರಿಗೆ ಬಿಜೆಪಿ ಕಚೇರಿಯಲ್ಲಿ ಮಹಿಳಾ ದಿನಾಚರಣೆ ಆಚರಣೆ ಮಾಡಿದಕ್ಕೆ ನನಗೆ ಸಂತೋಷವಾಗಿ ಅದೆ ರೀತಿ ನಮಗೆ ಸಹಾಯ ಮತ್ತು ಸಹಕಾರ ನೀಡಿದ ಜನಪ್ರಿಯ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷರು ನಗರ ಘಟಕ ಅಧ್ಯಕ್ಷರು ಮತ್ತು ಬಿಜೆಪಿ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷರು ಕಾರ್ಯದರ್ಶಿ ಅದರ ಜೊತೆಗೆ ಗಂಗಾವತಿ ಎಲ್ಲಾ ಸಹೋದರಿಯರು ನನಗೆ ಪ್ರೋತ್ಸಾಹ ನೀಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾಡಕ್ಕೆ ಕೈ ಜೋಡಿಸಿದ್ದಾರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಪ್ರಮಾಣದ ಮಹಿಳೆಯರನ್ನು ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ ಎಂದು ಭರವಸೆ ನೀಡಿದರು.
ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಮಹಿಳೆಯರಿಗೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಿದರು..
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಜಿಲ್ಲಾಧ್ಯಕ್ಷರಾದ ರತ್ನಕುಮಾರಿ,ಪ್ರಧಾನ ಕಾರ್ಯದರ್ಶಿ ಶೈಲಜಾ,ಕೀರ್ತಿ ಪಾಟೀಲ್, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ಮಾಲಾ ನಾಯಕ, ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಡಿ.ಕೆ.ಆಗೋಲಿ, ನಗರ ಘಟಕ ಅಧ್ಯಕ್ಷರಾದ ಚಂದ್ರಶೇಖರ ಹಿರೂರು,ಮಹಿಳೆಯರಾದ ಕಮಲಮ್ಮ,ಲಲಿತಾ,ಹುಲಿಗೆಮ್ಮ ನಾಯಕ,ವಿಜಯಲಕ್ಷ್ಮಿ ಹಿರೇಮಠ, ಕಲ್ಲಮ್ಮ,ಸೌಭಾಗ್ಯ, ರಾಜೇಶ್ವರಿ,ರಾಧಾ ಉಮೇಶ,ಸೇರಿದಂತೆ ಇತರರು ಇದ್ದರು

ಸರ್ಕಾರ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಾಲಾ ದಾಖಲಾತಿ ಪ್ರಾರಂಭಿಸಿದ ಸಾಮರ್ ಇಂಟರ್‌ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಗೆ ಎಚ್ಚರಿಕೆ

Government warns Samar International Islamic School for starting school enrollment in violation of court order

ಸರ್ಕಾರ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಾಲಾ ದಾಖಲಾತಿ ಪ್ರಾರಂಭಿಸಿದ ಸಾಮರ್ ಇಂಟರ್‌ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಗೆ ಎಚ್ಚರಿಕೆ


ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಶಿಕ್ಷಣ ಸಂಯೋಜಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸೂಚನೆ.


ಬೆಂಗಳೂರು,ಮಾ.14: ಥಣಿಸಂದ್ರದ ಸಾಮರ್ ಇಂಟರ್‌ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ನ ಮಾನ್ಯತೆ ರದ್ದಾಗಿದ್ದು, ಹೈಕೋರ್ಟ್ ಶಾಲಾ ದಾಖಲಾತಿ ಪ್ರಾರಂಭಿಸದಂತೆ ಆದೇಶಿಸಿದೆ.

ಸರ್ಕಾರ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಾಲಾ ದಾಖಲಾತಿ ಮಾಡಿಕೊಳ್ಳುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಶಾಲಾ ಶಿಕ್ಷಣ ಇಲಾಖೆ ಶಾಲಾ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದೆ.


ಹೈಕೋರ್ಟ್ ನಲ್ಲಿ ಪ್ರಕರಣ ವಿಚಾರಣಾ ಹಂತದಲ್ಲಿದ್ದು, 2026-2027 ನೇ ಸಾಲಿಗೆ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದಲ್ಲಿ ನ್ಯಾಯಾಲಯದ ನಿಂದನೆ ಮಾಡಿದಂತಾಗುತ್ತದೆ.

ಆದ್ದರಿಂದ ಹೈಕೋರ್ಟ್ ಆದೇಶದವರೆವಿಗೂ ಯಾವುದೇ ದಾಖಲಾತಿ ಪ್ರಾರಂಭಿಸಬಾರದು.

ಆದೇಶವನ್ನು ಉಲ್ಲಂಘಿಸಿ ದಾಖಲಾತಿ ಮಾಡಿಕೊಂಡರೆ ತಮ್ಮ ಶಾಲೆಯ ವಿರುದ್ಧ ನ್ಯಾಯಾಂಗ ನಿಂದನೆ ವರದಿಯನ್ನು ನ್ಯಾಯಾಲಯಕ್ಕೆ ಹಾಗೂ ಇಲಾಖಾ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ದಕ್ಷಿಣ ವಲಯದ -14 ರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಗಂಗೊಂಡನಹಳ್ಳಿಯ ಅಬ್ದುಲ್ ಹಮೀದ್ ಪಾಷ ಹಾಗೂ ಭಾರತಿ ನಗರದ ಅರ್ಷಿಯ ಮೊದಮ್ಮದಿ ಸರಿಷ್ ಸಲ್ಲಿಸಿರುವ ದೂರಿನ ಮೆರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಆಡಳಿತ ಮಂಡಳಿಗೆ ಸ್ಪಷ್ಟವಾದ ಎಚ್ಚರಿಕೆ ನೀಡಿದ್ದಾರೆ.


ದೂರು ಆಧರಿಸಿ ಪ್ರೌಢ ಶಾಲಾ ವಿಭಾಗದ ಶಿಕ್ಷಣ ಸಂಯೋಜಕರಾದ ರಂಗನಾಥ ಅವರಿಗೆ ಈ ಬಗ್ಗೆ ಪರಿಶೀಲಿಸಿ ಮೂರು ದಿನಗಳ ಒಳಗಾಗಿ ಸೂಕ್ತ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.


ಮಾನ್ಯತೆ ಇಲ್ಲದ ಈ ಸಂಸ್ಥೆ 6 ರಿಂದ 8 ನೇ ತರಗತಿಗೆ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಿದೆ, ಹೈ ಕೋರ್ಟ್ ನಲ್ಲಿ ದಾಖಲಾತಿ ಮಾಡಿಕೊಳ್ಳುವುದಿಲ್ಲ ಎಂದು ಒಪ್ಪಿ ಶಾಲಾ ನಡೆಸುತ್ತಿದ್ದು ಈ ಎಲ್ಲಾ ನೀತಿ, ನಿಯಮ, ಕಾನೂನುಗಳನ್ನು ಉಲ್ಲಂಘಿಸಿದ್ದು, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಇವರು ಶಾಲಾ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದರು. ಶಾಲಾ ಆಡಳಿತ ಮಂಡಳಿ ಧೋರಣೆಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಗೊಂದಲಕ್ಕೆ ಸಿಲುಕಿದ್ದಾರೆ.

ಕೂಡಲೇ ಮಧ್ಯ ಪ್ರವೇಶಿಸಿ ಸ್ಪಷ್ಟ ನಿರ್ದೇಶನ ನೀಡಬೇಕೆಂದು ದೂರುದಾರರು ಕೋರಿದ್ದರು.
ಆಡಳಿತ ಮಂಡಳಿಯವರು ಶಾಲಾ ದಾಖಲಾತಿಯನ್ನು ಗುಪ್ತವಾಗಿ ಪ್ರಾರಂಭಿಸಿದ್ದು, ಸಂಗ್ರಹಿಸುತ್ತಿರುವ ಹಣಕ್ಕೆ ರಸೀದಿ ನೀಡುತ್ತಿಲ್ಲ. ನ್ಯಾಯಾಲಯದ ಅನುಮತಿ ಇಲ್ಲದೇ ಮುಂದಿನ ಶೈಕ್ಷಣಿಕ ಸಾಲಿಗೆ ದಾಖಲಾತಿ ಪ್ರಾರಂಭಿಸಬಾರದು.

ಮುಂದಿನ ವಿಚಾರಣೆವರೆಗೆ ಶಾಲೆಯ ಎಲ್ಲಾ ಚಟುವಟಿಕೆಗಳಿಗೆ ನ್ಯಾಯಾಲಯ ತಡೆ ನೀಡಿದೆ. ಹೀಗಿದ್ದರೂ ಶಾಲಾ ದಾಖಲಾತಿ ಪ್ರಾರಂಭಿಸಿರುವುದು ಸರಿಯಲ್ಲ ಎಂದು ದೂರುದಾರರು ಸರ್ಕಾರದ ಗಮನ ಸೆಳೆದಿದ್ದಾರೆ.

ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ.

Karnataka Provincial Farmers' Association demands justice for Kudathini land victims.

ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ.

ಬಳ್ಳಾರಿ: ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕುಡತಿನಿ ಸೇರಿದಂತೆ ಹಲವು ಗ್ರಾಮಗಳ ರೈತರ ಭೂ ಸಮಸ್ಯೆಗೆ ನ್ಯಾಯ ಒದಗಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಸರ್ಕಾರವನ್ನು ಆಗ್ರಹಿಸಿದೆ.

ಸಂಘದ ಆರೋಪದ ಪ್ರಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕುಡತಿನಿ, ಹರಗಿನಡೋಣಿ, ಜಾನೆಕುಂಟೆ, ವೇಣಿವೀರಾಪುರ, ಕೊಳಗಲ್ಲು, ಎರ್ರೆಂಗಳಿ ಮತ್ತು ಸಿದ್ದಮ್ಮನಹಳ್ಳಿ ಗ್ರಾಮಗಳ ಸುಮಾರು 13 ಸಾವಿರ ಎಕರೆ ಜಮೀನುಗಳನ್ನು ರೈತರ ಒಪ್ಪಿಗೆ ಇಲ್ಲದೆ ಕೈಗಾರಿಕೆಗಳಿಗಾಗಿ ಸ್ವಾಧೀನಪಡಿಸಿಕೊಂಡು ಕಳಪೆ ಬೆಲೆ ನಿಗದಿ ಮಾಡಲಾಗಿದೆ. ಇದರಿಂದ ಸಾವಿರಾರು ರೈತ ಕುಟುಂಬಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದ್ದಾರೆ.

ಕಳೆದ 16 ವರ್ಷಗಳಿಂದ ಕೈಗಾರಿಕೆಗಳು ಸ್ಥಾಪನೆಯಾಗದೆ ರೈತರಿಗೆ ಉದ್ಯೋಗವೂ ಸಿಗಲಿಲ್ಲ, ಇದರಿಂದ ರೈತರು ದೊಡ್ಡ ನಷ್ಟ ಅನುಭವಿಸಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ತಿಳಿಸಿದೆ.

ಆದ್ದರಿಂದ ವಂಚಕ ಭೂ ಬೆಲೆ ರದ್ದುಪಡಿಸಿ, ರೈತರಿಗೆ ನ್ಯಾಯಸಮ್ಮತ ಭೂ ಬೆಲೆ ನಿಗದಿ ಮಾಡಬೇಕು ಅಥವಾ ಜಮೀನುಗಳನ್ನು ಮರಳಿ ನೀಡಬೇಕು. ಜೊತೆಗೆ 16 ವರ್ಷಗಳ ನಿರುದ್ಯೋಗ ಭತ್ಯೆಯಾಗಿ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತು ರೈತ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ಹೊಸಳ್ಳಿ, ಜಿಲ್ಲಾ ಕಾರ್ಯದರ್ಶಿ ಶಿವಣ್ಣ ಬೆಣಕಲ್ ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.

ಗೊರಗೋಡನಹಳ್ಳಿ 31ನೇ ವಾರ್ಡ್ ನಲ್ಲಿ 11 ಕೆ ವಿ ವಿದ್ಯುತ್ ಕಂಬ ಸೇರಿಸಿಕೊಂಡು ಧನದ ಶೆಡ್ ನಿರ್ಮಾಣ.ಬೆಸ್ಕಾಂ ಅಧಿಕಾರಿಗಳ ಜಾಣ ಮೌನ
Construction of a money shed by adding an 11 KV electricity pole in Ward 31 of Goragodanahalli. The wise silence of BESCOM officials.

ಗೊರಗೋಡನಹಳ್ಳಿ 31ನೇ ವಾರ್ಡ್ ನಲ್ಲಿ 11 ಕೆ ವಿ ವಿದ್ಯುತ್ ಕಂಬ ಸೇರಿಸಿಕೊಂಡು ಧನದ ಶೆಡ್ ನಿರ್ಮಾಣ.ಬೆಸ್ಕಾಂ ಅಧಿಕಾರಿಗಳ ಜಾಣ ಮೌನ.ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದರೂ ಕ್ರಮವಹಿಸಿಲ್ಲ.

ತಿಪಟೂರು.ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ್ ಅವರ ತವರಿನ ಕ್ಷೇತ್ರದಲ್ಲೇ ದಿನೇ ದಿನೇ ದಲಿತ ಕುಟುಂಬಗಳು ಅನ್ಯಾಯಕ್ಕೆ ಒಳಗಾಗುತ್ತಿರುವ ಘಟನೆ ಬೆಳಕಿಗೆ ಬರುತ್ತಲೇ ಇವೆ .

ತಿಪಟೂರು ನಗರದ 31ನೇ ವಾರ್ಡ್‌ನ ಗೊರಗೊಂಡನಹಳ್ಳಿ ಗ್ರಾಮದ ದಲಿತ ಕುಟುಂಬಗಳು ಸವರ್ಣೀಯರ ದೌರ್ಜನ್ಯ ಹಾಗೂ ದಬ್ಬಾಳಿಕೆಯಿಂದ ಭಯಭೀತದ ಜೀವನ ಸಾಗಿಸುವಂತಾಗಿದೆ ಎಂದು ದಲಿತ ಕುಟುಂಬಗಳು ಆರೋಪಿಸಿದ್ದಾರೆ.

ಸ್ವಾತಂತ್ರ್ಯ ಬಂದು ಸುಮಾರು ದಶಕಗಳೇ ಕಳೆದರೂ ದಲಿತರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬ ತಮ್ಮ ಅಳಲನ್ನ ಗ್ರಾಮಸ್ಥರು ಮಾಧ್ಯಮದ ಮುಂದೆ ತೊಡಿಕೊಂಡರು.

ಗೊರಗೊಂಡನಹಳ್ಳಿ ಗ್ರಾಮದ ಸರ್ವೆ ನಂ. 90/4ಎ2ರಲ್ಲಿ ರಸ್ತೆಗೆ ಅಡ್ಡವಾಗಿ ದನದ ಸಾಕಾಣಿಕೆ ಶೆಡ್ ಸಂಪೂರ್ಣವಾಗಿ ಕಬ್ಬಿಣದ ದಿಂದ ಮಾಡಲಾಗಿದ್ದು 11 ಕೆ.ವಿ. ವಿದ್ಯುತ್ ಲೈನ್ ಕಂಬ ಶೆಡ್ ಒಳಗೆ ಸೇರಿಸಿಕೊಂಡು ನಿರ್ಮಾಣ ಮಾಡಿರುವುದರಿಂದ ಯಾವಾಗ ಬೇಕಾದರೂ ಅಪಘಾತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರ ಆತಂಕವಾಗಿದೆ

ಗ್ರಾಮದ ಸವರ್ಣೀಯರಾದ ಚೇರ್ಮನ್ ಶಿವನಂಜಪ್ಪ ಅವರ ಕುಟುಂಬದವರು ಈ ಶೆಡ್ ನಿರ್ಮಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಶೆಡ್‌ನಲ್ಲಿ ಸುಮಾರು 7-9 ಸೀಮೆ ಹಸುಗಳನ್ನು ಸಾಕಲಾಗುತ್ತಿದೆ. ಆದರೆ ವಿದ್ಯುತ್ ಕಂಬದ ಪಕ್ಕದಲ್ಲೇ ಈ ಶೆಡ್ ನಿರ್ಮಾಣವಾದರೂ, ಒಂದು ವರ್ಷದ ಹಿಂದೆ ತೆರವುಗೊಳಿಸಲು ಅರ್ಜಿ ಸಲ್ಲಿಸಿದರು ಕೆ.ಇ.ಬಿ. ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದಲಿತ ಕುಟುಂಬಗಳು ಆರೋಪಿಸುತ್ತಿವೆ.

ಈ ಬಗ್ಗೆ ಮಾತನಾಡಿದ ದಲಿತ ಸಮುದಾಯದ ಕಾಂತರಾಜ್, “ಒಂದು ವರ್ಷದ ಹಿಂದೆ ಕೆ.ಇ.ಬಿ. ಇಲಾಖೆಗೆ ದೂರು ನೀಡಿದ್ದೇವೆ. ಆದರೆ ಇಂದಿಗೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ರಾಜಕೀಯ ಒತ್ತಡವೋ ಅಥವಾ ಬೇರೆ ಕಾರಣವೋ ಗೊತ್ತಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಲ್ಲದೆ, ಈ ವಿಷಯವನ್ನು ಪ್ರಶ್ನಿಸಲು ಹೋದಾಗ ನಮ್ಮ ಮೇಲೆ ಹಲ್ಲೆ ಮಾಡಲು ಮಚ್ಚು ಹಾರೆಗಳನ್ನು ತಂದು ದೌರ್ಜನ್ಯ ಹಲ್ಲೇ ಮಾಡಲು ಬರುತ್ತಾರೆ ಎಂದು ಅವರ ಆರೋಪವಾಗಿದೆ

ಇದರಿಂದ ದಲಿತ ಕುಟುಂಬಗಳು ನಿರಂತರ ಮಾನಸಿಕ ಒತ್ತಡದಲ್ಲಿ ಬದುಕುವ ದುಸ್ಥಿತಿ ನಿರ್ಮಾಣವಾಗಿದೆ

ಅದೇ ರೀತಿ, ಶೆಡ್‌ನಿಂದ ಬರುವ ಗಂಜಲು ಮತ್ತು ತ್ಯಾಜ್ಯವನ್ನು ನೇರವಾಗಿ ಚರಂಡಿ ಹಾಗೂ ರಸ್ತೆಗೆ ಬಿಡಲಾಗುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ಮಲೇರಿಯಾ ಡೆಂಗ್ಯೂ ಅಂತಹ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ

ಈ ಹಿನ್ನೆಲೆಯಲ್ಲಿ ತಕ್ಷಣವೇ ಅಪಾಯಕಾರಿಯಾದ 11 ಕೆ.ವಿ. ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಅಕ್ರಮವಾಗಿ ನಿರ್ಮಿಸಿರುವ ಶೆಡ್ ಮತ್ತು ಬೇಲಿಗಳನ್ನು ತೆರವುಗೊಳಿಸಬೇಕು. ಇಲ್ಲವಾದರೆ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ದಲಿತ ಕುಟುಂಬಗಳು ಎಚ್ಚರಿಕೆ ನೀಡಿದ್ದಾರೆ.

ಈ ವಿಷಯವನ್ನು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಎಸ್. ಪರಮೇಶ್ವರ್ ಪರಿಶೀಲಿಸಿ ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರ ದಲಿತ ಕುಟುಂಬಗಳ ಆಗ್ರಹವಾಗಿದೆ

ಸಂಬಂಧಪಟ್ಟವರ ಮೇಲೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

ಈಗಾದರೂ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಹಾಗೂ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸುತ್ತಾರ ಎಂದು ಕಾದುನೋಡಬೇಕಾಗಿದೆ.
ವರದಿ ಮಂಜು ಗುರುಗದಹಳ್ಳಿ