ಧರ್ಮಸ್ಥಳ ಕ್ಷೇತ್ರದಿಂದ ಸವುಳು ಹಳ್ಳದ ಕೆರೆಗೆ ಕಾಯಕಲ್ಪ – ಮಂಜುನಾಥ ರಾಟಿ

Kayakalp from Dharmasthala constituency to Savulu Halla lake - Manjunatha Rathi

ಧರ್ಮಸ್ಥಳ ಕ್ಷೇತ್ರದಿಂದ ಸವುಳು ಹಳ್ಳದ ಕೆರೆಗೆ ಕಾಯಕಲ್ಪ – ಮಂಜುನಾಥ ರಾಟಿ

ಕೊಪ್ಪಳ: ಜಿಲ್ಲೆಯ ಶಹಪುರ ಗ್ರಾಮದ ಸವುಳು ಹಳ್ಳದ ಕೆರೆಗೆ ಕಾಯಕಲ್ಪ ನೀಡಲು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ ಹೆಸರಿನ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಮುಂದಾಗಿದೆ ಎಂದು ಗ್ರಾಮದ ಯುವ ಧುರೀಣರು, ಸಮಾಜ ಸೇವಕರಾದ ಮಂಜುನಾಥ ರಾಟಿ ಅವರು ತಿಳಿಸಿದ್ದಾರೆ.

ಕಳೆದ ನೂರಾರು ವರ್ಷಗಳಿಂದ ಜನ-ಜಾನುವಾರುಗಳ ಜೀವನಾಡಿಯಾಗಿರುವ ಸವುಳು ಹಳ್ಳದ ಕೆರೆ ನಿರ್ಮಾಣಕ್ಕೆ ಗ್ರಾಮಸ್ಥರು ಚರ್ಚಿಸಿದ್ದೆವು. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹ ಸದಸ್ಯರಾಗಿರುವ ತಾವು ಅಧಿಕಾರಿಗಳೊಂದಿಗೆ ಮಾತನಾಡಿದ್ದು ಸೂಕ್ತ ಸ್ಪಂದನೆ ಲಭಿಸಿದೆ. ರಾಷ್ಟಿçÃಯ ಹೆದ್ದಾರಿ-೫೦ ರ ಬದಿಯಲ್ಲಿರುವ ಈ ಕೆರೆ ಅಭಿವೃದ್ಧಿಪಡಿಸಿದರೆ ಜನ-ಜಾನುವಾರುಗಳಿಗೆ ಅನುಕೂಲವಾಗುತ್ತದೆ. ೧೦ ಎಕರೆಗೂ ಅಧಿಕ ವಿಸ್ತೀರ್ಣ ಹೊಂದಿರುವ ಗೋಮಾಳ ಸ್ಥಳವು ಸಂಪೂರ್ಣ ಸರ್ಕಾರದ್ದಾಗಿದೆ. ಕೆರೆಯ ದಡದಲ್ಲಿ ಗ್ರಾಮದ ಕುರಿಗಾಹಿಗಳು ಮತ್ತು ದನಗಾಹಿಗಳು ಕಳೆದ ಹಲವಾರು ದಶಕಗಳಿಂದ ಇಲ್ಲಿ ಬೀಡು ಬಿಟ್ಟಿದ್ದಾರೆ. ಕೆರೆ ಅಭಿವೃದ್ಧಿ ಆದರೆ ವರ್ಷಪೂರ್ತಿ ನೀರು ಲಭಿಸುತ್ತದೆ. ಬೇಸಿಗೆ ಕಾಲದಲ್ಲಿ ನೀರಿನ ಬವಣೆಯಿಂದ ಮುಕ್ತಿ ಸಿಗುತ್ತದೆ ಎಂದು ತಿಳಿಸಿದ್ದಾರೆ.

ಈ ಕುರಿತು ಶ್ರೀ ತಿರುಗಲ್ ತಿಮ್ಮಪ್ಪ ಶ್ರೀ ಲಕ್ಷಿö್ಮÃದೇವಿ ಮತ್ತು ಶ್ರೀ ತೇರಿನ ಹನುಮಂತರಾಯ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ವೀರಣ್ಣ ಕೋಮಲಾಪುರ ಅವರೊಡಗೂಡಿ ಕೆರೆ ಸ್ಥಳ ಪರಿಶೀಲನೆ ನಡೆಸಿದ ಅವರು, ಈಗಾಗಲೇ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧಿಕಾರಿಗಳೊಂದಿಗೆ ಕೆರೆ ಅಭಿವೃದ್ಧಿ ಕುರಿತು ಚರ್ಚಿಸಲಾಗಿದೆ. ಕೆರೆಯ ಅಭಿವೃದ್ಧಿಗೆ ಧರ್ಮಸ್ಥಳ ಕ್ಷೇತ್ರವು ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಶೀಘ್ರವೇ ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ. ಈ ಕೆರೆ ಅಭಿವೃದ್ಧಿಪಡಿಸುವುದರಿಂದ ನೀರು ಸಂಗ್ರಹಗೊAಡು ಅಡವಿ ಜೀವಿಗಳಿಗೆ ಆಸರೆ ಆಗುತ್ತದೆ. ಕುರಿ, ದನಗಳಿಗೆ ವರ್ಷಪೂರ್ತಿ ನೀರು ಲಭಿಸುತ್ತದೆ. ಸುತ್ತಲೂ ಕೃಷಿ ಚಟುವಟಿಕೆಗಳು ನಡೆಯುತ್ತಿರುವುದರಿಂದ ಜಲಮರುಪೂರಣವಾಗುತ್ತದೆ. ಮೇಲಾಗಿ ರಾಷ್ಟಿçÃಯ ಹೆದ್ದಾರಿ ಪಕ್ಕದಲ್ಲಿಯೇ ಇರುವುದರಿಂದ ದಾರಿ ಹೋಕರಿಗೂ ನೀರಿನ ಅವಶ್ಯಕತೆ ಪೂರೈಸಲು ಸಾಧ್ಯವಾಗುತ್ತದೆ ಎಂದು ಮಂಜುನಾಥ ರಾಟಿ ಅವರು ತಿಳಿಸಿದ್ದಾರೆ.

ದಿನಂಪ್ರತಿ ಈ ಭಾಗದಿಂದ ನೂರಾರು ಕೃಷಿ ಕೂಲಿ ಕಾರ್ಮಿಕರು ತಮ್ಮ ದೈನಂದಿನ ಹೊಲ-ಗದ್ದೆಗಳ ಚಟುವಟಿಕೆಗಳಿಗೆ ತೆರಳುತ್ತಿದ್ದಾರೆ. ಬಂಡಿ, ಎತ್ತುಗಳೊಂದಿಗೆ ರೈತರು ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಪ್ರಾಣಿ, ಪಕ್ಷಿಗಳು ಈ ಭಾಗದಲ್ಲಿ ಹೇರಳವಾಗಿದ್ದು ಕೆರೆ ಅಭಿವೃದ್ಧಿಯಾದಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ನೆರವಾಗುತ್ತದೆ. ಗ್ರಾಮದ ಬಹುತೇಕ ರೈತರ, ಕುರಿಗಾಹಿ ಮತ್ತು ದನಗಾಹಿಗಳ ಏಕೈಕ ಜೀವನಾಡಿಯಾಗಿರುವುದರಿಂದ ಕೆರೆ ಅಭಿವೃದ್ಧಿ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಸವುಳು ಹಳ್ಳದ ಕೆರೆ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಾದ ಈರನಗೌಡ(ಸುರೇಶ್) ಪಾಟೀಲ್, ಮಲ್ಲಿಕಾರ್ಜುನ ಕುರಿ, ಗಿರೀಶ್ ಹಿರೇಮಠ, ನಿಂಗಪ್ಪ ನಾಗಲಾಪುರ, ನಿಂಗಜ್ಜ ಚೌಧರಿ, ಅಮರೇಶ್ ಕಟ್ಟಿ, ಹುಲ್ಲೇಶ್ ಸಿಂದೋಗಿ, ಗ್ರಾಮ ಪಂಚಾಯಿತಿ ಸದಸ್ಯರಾದ ಹಾಲಪ್ಪ ತೋಟದ, ಹನುಮಂತ ಗೊಲ್ಲರ, ನಾಗರಾಜ ದೊಡ್ಡಮನಿ, ಗಂಗಮ್ಮ ಪೂಜಾರ ಸೇರಿದಂತೆ ಗ್ರಾಮದ ಸಮಸ್ತರು ಕೆರೆ ಅಭಿವೃದ್ಧಿಯ ಮಹತ್ವದ ಕುರಿತು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ – ಡಾ. ಸುರೇಶ ಬಿ. ಇಟ್ನಾಳ

There should be no negligence in the implementation of the Prime Minister's 15-point program - Dr. Suresh B. Itnal

ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ – ಡಾ. ಸುರೇಶ ಬಿ. ಇಟ್ನಾಳ


ಕೊಪ್ಪಳ ಮಾರ್ಚ್ 17 (ಕರ್ನಾಟಕ ವಾರ್ತೆ): ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳು ಹೆಚ್ಚಿನ ಆದ್ಯತೆ ನೀಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷ್ಯ ಬೇಡ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ 3ನೇ ತ್ರೈಮಾಸಿಕ (ಅಕ್ಟೋಬರ್-2025 ರಿಂದ ಡಿಸೆಂಬರ್-2025) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮವು ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿ ಹಾಗೂ ಬೌದ್ಧ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ರೂಪಿಸಲಾದ ಪ್ರಮುಖ ಯೋಜನೆಯಾಗಿದೆ. ಈ ಯೋಜನೆಗಳಡಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಉಚಿತ ಪರೀಕ್ಷಾ ಪೂರ್ವ ತರಬೇತಿ, ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಆಯಾ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸಾಧಿಸಿರುವ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಕೆಲವು ಇಲಾಖೆಗಳ ಸಾಧನೆ ತೃಪ್ತಿಕರವಾಗಿಲ್ಲವೆಂದು ಸೂಚಿಸಿ, ನಿಗದಿತ ಗುರಿಯಂತೆ ಪ್ರಗತಿ ಸಾಧನೆಗೆ ವಿಳಂಬವಾಗುತ್ತಿರುವ ಯೋಜನೆಗಳನ್ನು ಆದ್ಯತೆ ಮೆರೆಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಕೇವಲ ವರದಿಗಳಲ್ಲೇ ಪ್ರಗತಿ ತೋರಿಸುವುದಕ್ಕಿಂತ ನೆಲಮಟ್ಟದಲ್ಲಿ ಸ್ಪಷ್ಟ ಫಲಿತಾಂಶ ಕಾಣುವಂತೆ ಇಲಾಖೆಗಳ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿಶೇಷ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಿವೇಶನ, ಮನೆಗಳ ಹಂಚಿಕೆ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಯೋಜನೆಗಳು ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಾರುತಿ, ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ನಜೀರಸಾಬ್ ಮೂಲಿಮನಿ, ಮೆಹಬೂಬ್ ಪಾಷಾ ಮಾನ್ವಿ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಡಿಡಿಯು-ಜಿಕೆವೈ ಯೋಜನೆಯಡಿ ಉದ್ಯೋಗ ಮೇಳ

Job fair under DDU-GKY scheme

ಡಿಡಿಯು-ಜಿಕೆವೈ ಯೋಜನೆಯಡಿ ಉದ್ಯೋಗ ಮೇಳ

ಶಿಕ್ಷಣದ ಜತೆ ತಾಂತ್ರಿಕ ಕೌಶಲ್ಯಕ್ಕೆ ಹೆಚ್ಚು ಆದ್ಯತೆ ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

ಕೊಪ್ಪಳ ಮಾರ್ಚ್ 17 (ಕರ್ನಾಟಕ ವಾರ್ತೆ): ಉದ್ಯೋಗಾಕಾಂಕ್ಷಿಗಳು ತಮ್ಮ ಶಿಕ್ಷಣದ ಜತೆಗೆ ತಾಂತ್ರಿಕ ಕೌಶಲ್ಯಗಳಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
 ಅವರು ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿಕೆವೈ ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.
 ಯಾರು ಹೆಚ್ಚು ಓದಿಕೊಂಡಿರುತ್ತಾರೆ ಅವರು ಮಾತ್ರ ಬುದ್ದಿವಂತರು ಎಂದು ಒಂದು ಕಾಲದಲ್ಲಿ ಹೇಳಲಾಗುತ್ತಿತ್ತು. ಆದರೆ, ಈಗ ಅದು ಬದಲಾಗಿದೆ. ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾಭ್ಯಾಸ, ಜ್ಞಾನದ ಜೊತೆಗೆ ಕೌಶಲ್ಯ ಮತ್ತು ಮನೋಭಾವ ಬಹಳ ಮುಖ್ಯವಾಗಿದೆ.

ಇವೆಲ್ಲ ಅರ್ಹತೆ ಹೊಂದಿರುವವರು ಕಾರ್ಖಾನೆಗಳಲ್ಲಿ, ಖಾಸಗಿ ಅಥವಾ ಸರ್ಕಾರಿ ವಲಯಗಳಲ್ಲಿ ಸುಲಭವಾಗಿ ಉದ್ಯೋಗ ಪಡೆದುಕೊಳ್ಳಲು ಸಾದ್ಯವಾಗುತ್ತದೆ. ಇಂದಿನ ತಂತ್ರಜ್ಞಾನ ಯೋಗದಲ್ಲಿ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ತರಬೇತಿಗಳು ಅತ್ಯವಶ್ಯಕವಾಗಿರುವುದರಿಂದ ಸರ್ಕಾರಗಳು ಹಲವಾರು ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿವೆ. ಕೌಶಲಾಭಿವೃದ್ಧಿ ತರಬೇತಿಯ ಸದ್ಬಳಕೆಯನ್ನು ಮಾಡಿಕೊಳ್ಳಲು ವಿದ್ಯಾರ್ಥಿಗಳು, ಯುವ ಜನತೆ ಮುಂದೆ ಬರಬೇಕೆಂದರು.
 ಭಾರತದ ಪದವಿ ಪೂರ್ಣಗೊಳಿಸಿದವರಲ್ಲಿ ಶೇ. 50ರಷ್ಟು ಜನರಿಗೆ ಮಾತ್ರ ಉದ್ಯೋಗ ಸಿಗುತ್ತಿದೆ. ಬಹಳಷ್ಟು ಜನ ನಿರುದ್ಯೋಗಿಗಳಾಗಿ ಉಳಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಷ್ನಲ್ ಸ್ಕಿಲ್ ಕ್ವಾಲಿಫಿಕೇಶನ್ ಫ್ರೇಮ್‌ವರ್ಕ್ (ಎನ್.ಎಸ್.ಕ್ಯೂ.ಎಫ್) ಮೂಲಕ ನ್ಯಾಷ್ನಲ್ ಸ್ಕಿಲ್ ಡೆವಲೆಪ್ಮೆಂಟ್ ಕೌನ್ಸಿಲ್ ರವರು ಸುಮಾರು 8 ಹಂತಗಳಲ್ಲಿ ವೃತ್ತಿಪರ ತರಬೇತಿಯನ್ನು ನೀಡುತ್ತಾರೆ. ಇದರಿಂದ ಶಾಲಾ ಶಿಕ್ಷಣದೊಂದಿಗೆ ತಾಂತ್ರಿಕ ಕೌಶಲ್ಯಗಳನ್ನು ಜೋಡಿಸಿ, ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಮತ್ತು ಕಲಿಕೆಯಲ್ಲಿ ನಮ್ಯತೆಯನ್ನು ಒದಗಿಸಲು ಸಹಾಯವಾಗುತ್ತದೆ. ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಇದರಲ್ಲಿ ನೋಂದಾಯಿಸಿಕೊಂಡು ತರಬೇತಿ ಪಡೆದು ಪ್ರಮಾಣ ಪತ್ರ ಪಡೆದುಕೊಂಡಲ್ಲಿ ನಿಮಗೆ ಸುಲಭವಾಗಿ ಉದ್ಯೋಗವನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ನಮ್ಮ ಜಿಲ್ಲೆಯ ತಳಕಲ್‌ನಲ್ಲಿ ವಿಟಿಯು ಬಹು ಕೌಶಲ್ಯ ಕೇಂದ್ರವಿದ್ದು, ವಿವಿಧ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.


 ಜಿಲ್ಲಾ ಕೌಶಲ್ಯಾಭಿವೃದ್ಧಿ ಅಭಿವೃದ್ಧಿ ಅಧಿಕಾರಿ ಕೆ.ಗವಿಶಂಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಇಂದು ಉದ್ಯೋಗ ಮೇಳದಲ್ಲಿ ಸುಮಾರು 61ಕ್ಕೂ ಅಧಿಕ ಕಂಪನಿಗಳು ಪಾಲ್ಗೊಂಡಿವೆ. ಉದ್ಯೋಗಕ್ಕಾಗಿ ಎರಡು ಸಾವಿರ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದು, ಸುಮಾರು 300ಕ್ಕೂ ಹೆಚ್ಚು ಉದ್ಯೋಗಾಕಾಂಗಶಿಗಳು ಭಾಗವಹಿಸಿದ್ದಾರೆ. ಯಾವುದೇ ವಿದ್ಯಾರ್ಹತೆ ಇರಲ್ಲಿ ಎಲ್ಲರೂ ತಮ್ಮ ಕೌಶಲ್ಯಾಧಾರಿತ ಸಂದರ್ಶನ ನೀಡಿ ಉದ್ಯೋಗ ಪಡೆದುಕೊಳ್ಳಬೇಕು. ಉದ್ಯೋಗಾಕಾಂಕ್ಷೆ ಹೊಂದಿರು ಯುವಕರು ಇಂತಹ ಮೇಳಗಳಲ್ಲಿ ಭಾಗವಹಿಸಿ, ಉದ್ಯೋಗದ ನೆರವು ಪಡೆದುಕೊಳ್ಳಬೇಕು. ಉದ್ಯೋಗಾಕಾಂಕ್ಷಿಗಳು, ಈ ಮೇಳದಲ್ಲಿ ಬಂದಿರುವ ಎಲ್ಲಾ ಕಂಪನಿಗಳಿಗೆ ಸಂದರ್ಶನ ನೀಡಿ, ನಿಮಗೆ ಸಮಂಜಸ ಎನಿಸುವ ಕಂಪನಿಯನ್ನು ಆಯ್ಕೆ ಮಾಡಿಕೊಂಡು, ಸಂದರ್ಶನ ನೀಡಬೇಕು. ಉದ್ಯೋಗಾಕಾಂಕ್ಷಿಗಳು ಸರ್ಕಾರ, ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಮೂಲಕ ಹಮ್ಮಿಕೊಳ್ಳುವ ಇಂತಹ ಮೇಳಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಾಯ್.ಬಿ.ಅಂಗಡಿ ಅವರು ಮಾತನಾಡಿದರು.
 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಕಮಲರಾಜ್, ಜಿಲ್ಲಾ ಉದ್ಯೋಗ ವಿನಿಮಯ ಕೆಂದ್ರ ಉದ್ಯೋಗಾಧಿಕಾರಿ ಮಂಜುಳಾ ಉಪ್ಪಾರ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಮಂಜುನಾಥ, ಸಿಬ್ಬಂದಿ ಮೌನೇಶ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಜಿಟಿಟಿಸಿ ಮುಖ್ಯಸ್ಥರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರು, ಆರ್-ಸೇಟಿಯ ನಿರ್ದೇಶಕರು, ಜಿಲ್ಲಾ ಹಾಗೂ ತಾಲೂಕ ಸಂಜೀವಿನಿ ಯೋಜನೆಯ ಸಿಬ್ಬಂದಿ, ನಲ್ಮ್ ಸಿಬ್ಬಂದಿ, ಸ್ಕೌಟ್ & ಗೈಡ್ ಹಾಗೂ ವಿವಿಧ ಕಂಪನಿಗಳ ಪ್ರತಿನಿಧಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.
 ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಅರ್ಹ ಅಭ್ಯರ್ಥಿಗಳಿಗೆ ಜಾಬ್ ಆಫರ್ ಲೆಟರ್‌ಗಳನ್ನು ವಿತರಣೆ ಮಾಡಲಾಯಿತು. ಜಿ.ಪಂ ಎನ್.ಆರ್.ಎಲ್.ಎಂ. ಶಾಖೆಯ ಅಂಬಣ್ಣ ಅವರು ಕಾರ್ಯಕ್ರಮ ನಿರೂಪಿದರು.

ಅಪ್ಪು ಅವರ 51ನೇ ಹುಟ್ಟು ಹಬ್ಬಕ್ಕೆ 51 ಅಭಿಮಾನಿಗಳಿಂದ ಸ್ವಯಂ ಪ್ರೇರಿತ ರಕ್ತದಾನ..

51 fans voluntarily donate blood on Appu's 51st birthday.

 

ಅಪ್ಪು ಅವರ 51ನೇ ಹುಟ್ಟು ಹಬ್ಬಕ್ಕೆ 51 ಅಭಿಮಾನಿಗಳಿಂದ ಸ್ವಯಂ ಪ್ರೇರಿತ ರಕ್ತದಾನ..

  ಗಂಗಾವತಿ :ಅಪ್ಪು ಅವರ 51ನೇ ಹುಟ್ಟು ಹಬ್ಬಕ್ಕೆ 51 ಅಭಿಮಾನಿಗಳಿಂದ ಸ್ವಯಂ ಪ್ರೇರಿತ ರಕ್ತದಾನ..
ನಗುವಿನ ಒಡೆಯ ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜಕುಮಾರ್ ಅವರ 51ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದು ಗಂಗಾವತಿಯ ಶ್ರೀ ನೀಲಕಂಠೇಶ್ವರ ನಗರದ ಮುಖ್ಯ ಮಹಾದ್ವಾರದಲ್ಲಿ
ಶ್ರೀ ನೀಲಕಂಠೇಶ್ವರ ನಗರದ ಅಪ್ಪು ಅಭಿಮಾನಿಗಳು, ಶ್ರೀ ನೀಲಕಂಠೇಶ್ವರ ಸಾಂಸ್ಕೃತಿಕ ಕಲಾ ವೇದಿಕೆ, ಸೃಷ್ಟಿ ಡೆಕೋರೇಟರ್, ಮತ್ತು ಗೋಪಿ ರಕ್ತ ಭಂಡಾರ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಪುಷ್ಪ ನಮನ, ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸುಮಾರು 51 ಜನ ಅಪ್ಪು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಅಪ್ಪು ಅವರಿಗೆ ಗೌರವಪೂರ್ವಕವಾಗಿ ನಮನವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುರುಹಿನಶೆಟ್ಟಿ ಸಮಾಜದ ಯಜಮಾನರಾದ ತಿಪ್ಪಣ್ಣ ಶಾವಿ,  ಬಸವರಾಜಪ್ಪ ಕುರುಗೋಡು, ವಾರ್ಡಿನ ಹಿರಿಯರಾದ ನಂಜುಂಡಪ್ಪ ಬಜಾರ್,  ಚಂದ್ರಪ್ಪ ಐಲಿ,  ಮಾರುತಿ ಐಲಿ,  ಗಾಳಿನಾಥ ಪೋಲಕಲ್  ಬಸವರಾಜ ಐಲಿ,  ಅಶೋಕ್ ಶಾವಿ,  ಮಲ್ಲಿಕಾರ್ಜುನ ಪೋಲಕಲ್,  ವಿರೂಪಾಕ್ಷ ಶಿರವಾರ, ಕಾರ್ಯಕ್ರಮದ ವ್ಯವಸ್ಥಾಪಕರಾದ  ನಂಜುಂಡ ಐಲಿ , ಅರುಣ್ ಕುಮಾರ್ ಬಜಾರ್ ಸೇರಿದಂತೆ ವಾರ್ಡಿನ ಜನರು ಅಭಿಮಾನಿಗಳು ಉಪಸ್ಥಿತರಿದ್ದರು..

ಹನೂರು ಕ್ಷೇತ್ರಕ್ಕೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿದ ಸುತ್ತುರು ಶ್ರೀಗಳ ಬೇಟಿ : ಡಾ. ದತ್ತೇಶ್ ಕುಮಾರ್ .

ಹನೂರು ಕ್ಷೇತ್ರಕ್ಕೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿದ ಸುತ್ತುರು ಶ್ರೀಗಳ ಬೇಟಿ : ಡಾ. ದತ್ತೇಶ್ ಕುಮಾರ್ .

Dr. Dattatreya Kumar: The visit of the Sutturu Sri who solved the drinking water problem in Hanur constituency.

ವರದಿ: ಬಂಗಾರಪ್ಪ .ಸಿ.
ಹನೂರು :ವಿಧಾನಸಭಾಕ್ಷೇತ್ರದ,ರಾಮಾಪುರ ,ಮಾರ್ಟಳ್ಳಿ,ಅಜ್ಜಿಪುರ ಭಾಗದ ಮುಖಂಡರಿಂದ ಇಂದು ಸುತ್ತುರು ಶ್ರೀ ಗಳ ಬೇಟಿ ಮಾಡಿ ಕೃತಜ್ಞತೆಯನ್ನು ಸಲ್ಲಿಸಲಾಯಿತು , ನಮ್ಮ ಭಾಗದ ನೀರಿನ ಸಮಸ್ಯೆಗಳನ್ನು ಬಗಹರಿಸಲು ಪ್ರಯತ್ನ ಮಾಡಿದ ಶ್ರೀ ಗಳಿಗೆ ನಾನು ಕ್ಷೇತ್ರದ ಜನತೆಯ ಪರವಾಗಿ ಅಬಾರಿಯಾಗಿದ್ದೇನೆ ಎಂದು ಡಾಕ್ಟರ್ ದತ್ತೇಶ್ ಕುಮಾರ್ ತಿಳಿಸಿದರು.

ನಂತರ ಮಾತನಾಡಿದ ಅವರು ಸುತ್ತುರು ಶ್ರೀ ಮಠದಲ್ಲಿ
ನಮ್ಮ ಭಾಗದ ಭಾಗದ ಹಲವು ಮುಖಂಡರು ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ದೇಶಿಕೇಂದ್ರ ಸ್ವಾಮೀಜಿಗಳನ್ನು ಭಕ್ತಿಪೂರ್ವಕವಾಗಿ ಭೇಟಿ ಮಾಡಿ ಗೌರವ ಸಲ್ಲಿಸಿದರು.
ಪರಮ ಪೂಜ್ಯರ ಆಶೀರ್ವಾದ ಹಾಗೂ ಅವರ ಮಾರ್ಗ ದರ್ಶನದಿಂದ
ಈ ಸಾಲಿನ ಬಜೆಟ್ ನಲ್ಲಿ ಮಾನ್ಯ ಮುಖ್ಯ ಮಂತ್ರಿಗಳು ಹನೂರು ವಿಧಾನಸಭಾ ಕ್ಷೇತ್ರಕ್ಕೆ ನೀರಿನ ಅಭಾವವಾಗದಂತೆ ಮಾಡಲು ಉಡುತೊeರೆ ಹಳ್ಳ ಕುಡಿಯುವ ನೀರಿನ ಯೋಜನೆ ಹಾಗು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 490 ಕೋಟಿ ರೂಗಳನ್ನು ಅನುದಾನ ಘೋಷಿಸಿರುವುದಕ್ಕೆ ಕಾರಣಕರ್ತರಾಗಿದ್ದರೆ , ಇದೇ ಸಮಯದಲ್ಲಿ ಶ್ರೀಗಳಿಗೆ ,ಹಾಗೂ ಮಾನ್ಯ ಮುಖ್ಯ ಮಂತ್ರಿ ಗಳಿಗೆ,ಮಾನ್ಯ ಮಂತ್ರಿ ಗಳಿಗೆ ,ಹನೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಜನಪ್ರತಿನಿಧಿಗಳಿಗೆ, ಮುಖಂಡರುಗಳು ಧನ್ಯವಾದ ಸಲ್ಲಿಸಿದರು .

ನಮ್ಮ ಪ್ರದೇಶದ ಜನರ ಹಿತಕ್ಕಾಗಿ ಕೈಗೊಂಡಿರುವ ಈ ಮಹತ್ವದ ಯೋಜನೆಗೆ ಸ್ವಾಮೀಜಿಗಳು ಸದಾ ಆಶೀರ್ವಾದ ಹಾಗೂ ಸಂಪೂರ್ಣ ಬೆಂಬಲ ನೀಡುತ್ತಿರುವುದು ನಮಗೆ ಅಪಾರ ಸಂತೋಷ ಮತ್ತು ಧೈರ್ಯವನ್ನು ನೀಡುತ್ತದೆ.
ಪರಮ ಪೂಜ್ಯ ಜಗದ್ಗುರುಗಳ ಆಶೀರ್ವಾದದಿಂದ ಈ ಯೋಜನೆ ಯಶಸ್ವಿಯಾಗಿ ನೆರವೇರಿಸಿ ಸಮಾಜಕ್ಕೆ ಉಪಯೋಗವಾಗಲಿ ಎಂದು ರಾಮಾಪುರ ಹೋಬಳಿ ಹಾಗೂ ಹನೂರು ವಿಧಾನ ಸಭಾ ಕ್ಷೇತ್ರ ದ ಸಮಸ್ಥ ಜನರ ಪರವಾಗಿ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ದೇಶಿಕೇಂದ್ರ ಸ್ವಾಮೀಜಿಗಳಿಗೆ ನನ್ನ ಕೋಟಿಕೋಟಿ ಪ್ರಣಾಮಗಳು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಮುಖಂಡರಾದ ಡಾ. ಎಸ್. ದತ್ತೇಶ್ ಕುಮಾರ್ ರವರು ಉಪಸ್ಥಿತರಿದ್ದರು.

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ ಹಾಗೂ ತಾರತಮ್ಯದ ತ್ಯಾಜ್ಯ ನಿರ್ವಹಣಾ ಶುಲ್ಕ ರದ್ದುಗೊಳಿಸಿ: ಸರ್ಕಾರಕ್ಕೆ 𝗕𝗔𝗙 ಆಗ್ರಹ


Enact the 2025 Act in the current session and abolish discriminatory waste management fees: 𝗕𝗔𝗙 demands the government

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ ಹಾಗೂ ತಾರತಮ್ಯದ ತ್ಯಾಜ್ಯ ನಿರ್ವಹಣಾ ಶುಲ್ಕ ರದ್ದುಗೊಳಿಸಿ: ಸರ್ಕಾರಕ್ಕೆ 𝗕𝗔𝗙 ಆಗ್ರಹ

ಬೆಂಗಳೂರು, ಮಾರ್ಚ್ 𝟭𝟳: ಬಹುನಿರೀಕ್ಷಿತ ‘ಕರ್ನಾಟಕ ಅಪಾರ್ಟ್‌ಮೆಂಟ್‌ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ’ಯನ್ನು (𝗞𝗔𝗢𝗠𝗔 𝟮𝟬𝟮𝟱) ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲೇ ಅಂಗೀಕರಿಸಬೇಕು ಹಾಗೂ ಅಪಾರ್ಟ್‌ಮೆಂಟ್‌ ಸಮುದಾಯಗಳ ಮೇಲೆ ವಿಧಿಸಲಾಗಿರುವ ತಾರತಮ್ಯದಿಂದ ಕೂಡಿದ ಘನತ್ಯಾಜ್ಯ ನಿರ್ವಹಣಾ ಶುಲ್ಕವನ್ನು ತಕ್ಷಣವೇ ಹಿಂಪಡೆಯಬೇಕು ಎಂದು‌ ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡೆರೇಷನ್ (𝗕𝗔𝗙) ಸರ್ಕಾರವನ್ನು ಮನವಿ ಮಾಡಿದೆ.

ಇಂದು ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಫೆಡರೇಷನ್‌ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು, ಹಳೆಯ 𝟭𝟵𝟳𝟮 ರ ಕಾಯ್ದೆಯ ಬದಲಿಗೆ ಹೊಸ ಕಾನೂನನ್ನು ತರಲಾಗುವುದು ಎಂದು ಮಾನ್ಯ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಭರವಸೆ ನೀಡಿ ಎರಡು ವರ್ಷಗಳು ಕಳೆದಿದೆ. ಜುಲೈ 𝟮𝟬𝟮𝟱 ರಿಂದಲೇ 𝗞𝗔𝗢𝗠𝗔 𝟮𝟬𝟮𝟱 ಕರಡು ಸಿದ್ಧವಾಗಿದೆ. ಕಳೆದ ವರ್ಷ ಡಿಸೆಂಬರ್‌ 2 ರಂದು ಪತ್ರಿಕಾಗೋಷ್ಠಿಯನ್ನು ನಡೆಸಿ ಬೆಳಗಾವಿ ಅಧಿವೇಶನದಲ್ಲಿ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಲಾಗಿತ್ತು. ಆ ನಂತರ ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಅವರು ಬೆಂಗಳೂರು ನಗರದ ಅಪಾರ್ಟ್‌ಮೆಂಟ್‌ ಫೆಡರೇಷನ್‌ ಸದಸ್ಯರನ್ನು ಆಹ್ವಾನಿಸಿ ಸಾರ್ವಜನಿಕವಾಗಿ ನಮ್ಮ ಸಲಹೆಗಳನ್ನು ಪಡೆದುಕೊಂಡಿದ್ದಾರೆ. ಸಲಹೆಗಳನ್ನು ನೀಡುವ ಮತ್ತು ಅದನ್ನು ಪರಿಶೀಲಿಸುವ ಕಾರ್ಯ ಮುಗಿದಿದ್ದರೂ ಕೂಡಾ ಈ ಮಸೂದೆಯನ್ನು ಇನ್ನೂ ಮಂಡಿಸುವ ತಯಾರಿ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

“ಲಕ್ಷಾಂತರ ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ನೀಡಿದ್ದ ಭರವಸೆಗಳ ಬಗ್ಗೆ ಸರ್ಕಾರವನ್ನ ನೆನಪಿಸಲು ನಾವು ಇಂದು ಈ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದ್ದೇವೆ. 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಅಂಗೀಕಾರದಲ್ಲಿನ ವಿಳಂಬದಿಂದಾಗಿ, ನಾಗರಿಕರು ತಮ್ಮ ಅಪಾರ್ಟ್‌ಮೆಂಟ್‌ಗಳನ್ನು ನಿರ್ವಹಿಸಲು, ವಿವಾದಗಳನ್ನು ಪರಿಹರಿಸಿಕೊಳ್ಳಲು ಮತ್ತು ಮಾಲೀಕತ್ವದ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಕಾನೂನು ಚೌಕಟ್ಟಿಲ್ಲದೆ ಪರದಾಡುವಂತಾಗಿದೆ. ಕರ್ನಾಟಕದಾದ್ಯಂತ ಲಕ್ಷಾಂತರ ಅಪಾರ್ಟ್‌ಮೆಂಟ್‌ ಮಾಲೀಕರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಪ್ರಸ್ತುತ ಬಜೆಟ್ ಅಧಿವೇಶನದಲ್ಲೇ ಈ ಕಾಯ್ದೆಯನ್ನು ಅಂಗೀಕರಿಸುವಂತೆ ನಾವು ಸನ್ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಎಲ್ಲಾ ಶಾಸಕರಲ್ಲಿ ಕಳಕಳಿಯಿಂದ ವಿನಂತಿಸುತ್ತೇವೆ,” ಎಂದು 𝗕𝗔𝗙 ಅಧ್ಯಕ್ಷರಾದ ಸತೀಶ್ ಮಲ್ಯ ತಿಳಿಸಿದರು.

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (𝗕𝗦𝗪𝗠𝗟) ಇತ್ತೀಚೆಗೆ ನೀಡಿರುವ ನೋಟಿಸ್‌ಗಳ ಬಗ್ಗೆಯೂ ಫೆಡೆರೇಷನ್ ತೀವ್ರ ಕಳವಳ ವ್ಯಕ್ತಪಡಿಸಿತು. ಜನವರಿ 𝟮𝟬𝟮𝟲 ರ ಮಧ್ಯಭಾಗದಿಂದ, ಹೊಸ ನಿಯಮಗಳ ಅಡಿಯಲ್ಲಿ 𝟭𝟬𝟬 ಕ್ಕೂ ಹೆಚ್ಚು ಘಟಕಗಳಿರುವ (𝘂𝗻𝗶𝘁𝘀) ಅಪಾರ್ಟ್‌ಮೆಂಟ್‌ಗಳಲ್ಲಿನ ಘನತ್ಯಾಜ್ಯದ ಮೇಲಿನ ಬಳಕೆದಾರರ ಶುಲ್ಕವನ್ನು ವಿಧಿಸಲು ಅವುಗಳನ್ನು ‘ಬೃಹತ್ ತ್ಯಾಜ್ಯ ಉತ್ಪಾದಕರು’ (𝗕𝘂𝗹𝗸 𝗪𝗮𝘀𝘁𝗲 𝗚𝗲𝗻𝗲𝗿𝗮𝘁𝗼𝗿𝘀) ಎಂದು ಅನ್ಯಾಯವಾಗಿ ವರ್ಗೀಕರಿಸಲಾಗಿದೆ.

𝟮𝟬𝟬𝟬 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದ ಸ್ವತಂತ್ರ ಮನೆಯೊಂದು ಆಸ್ತಿ ತೆರಿಗೆಯ ಮೂಲಕ ತಿಂಗಳಿಗೆ ಕೇವಲ 𝟭𝟬𝟬 ರೂಪಾಯಿಗಳ ನಾಮಮಾತ್ರ ಶುಲ್ಕವನ್ನು ಪಾವತಿಸುತ್ತಿದ್ದರೆ, ಅಪಾರ್ಟ್‌ಮೆಂಟ್‌ ನಿವಾಸಿಗಳ ಮೇಲೆ ಪ್ರತಿ ಕೆಜಿಗೆ 𝟭𝟮 ರೂಪಾಯಿಗಳ ಶುಲ್ಕವನ್ನು ವಿಧಿಸಲಾಗುತ್ತಿದೆ. ಇದರ ಜೊತೆಗೆ ಶೇ. 𝟭𝟴 ರಷ್ಟು 𝗚𝗦𝗧 (𝟭𝟴% 𝗚𝗦𝗧) ಹೊರೆಯೂ ಸೇರಿ, ಪ್ರತಿ ಫ್ಲಾಟ್‌ಗೆ ತಿಂಗಳಿಗೆ ಸರಿಸುಮಾರು 𝟯𝟲𝟬 ರೂಪಾಯಿಗಳಷ್ಟು ಶುಲ್ಕ ಬೀಳುತ್ತಿದೆ. ಇದರಿಂದ ತ್ಯಾಜ್ಯ ವಿಲೇವಾರಿ ವೆಚ್ಚದಲ್ಲಿ ಬರೋಬ್ಬರಿ ಶೇ. 𝟲𝟬𝟬 (𝟲𝟬𝟬%) ರಷ್ಟು ಹೆಚ್ಚಳವಾದಂತಾಗಿದೆ. 𝟱𝟬𝟬-ಘಟಕಗಳಿರುವ ಅಪಾರ್ಟ್‌ಮೆಂಟ್‌ಗೆ ಇದು ಪ್ರತಿ ತಿಂಗಳು ಲಕ್ಷಾಂತರ ರೂಪಾಯಿಗಳ ಹೆಚ್ಚುವರಿ ಹೊರೆಯಾಗಲಿದೆ.

“ನಮ್ಮ ಸಮುದಾಯಗಳು ಸುಸ್ಥಿರ ಕಸನಿರ್ವಹಣೆಗೆ ಬದ್ಧವಾಗಿವೆ ಮತ್ತು 𝟮𝟬𝟭𝟲 ರಿಂದಲೂ ಹಸಿ ಕಸದ ನಿರ್ವಹಣೆ ಮತ್ತು ಮೂಲದಲ್ಲೇ ಕಸ ವಿಂಗಡಣೆಯನ್ನು ಪಾಲಿಸುತ್ತಿವೆ. ಆದಾಗ್ಯೂ, ಅತಿರೇಕದ ಶುಲ್ಕಗಳೊಂದಿಗೆ ನಮಗೆ ದಂಡ ವಿಧಿಸುವುದು ಮತ್ತು ಫ್ಲಾಟ್‌ಗಳಲ್ಲಿ ವಾಸಿಸುವ ಕುಟುಂಬಗಳನ್ನು ಇಂಡಿಪೆಂಡೆಂಟ್‌ ಮನೆಗಳಲ್ಲಿ ವಾಸಿಸುವವರಿಗಿಂತ ಭಿನ್ನವಾಗಿ ಪರಿಗಣಿಸುವುದು ತೀವ್ರ ತಾರತಮ್ಯವಾಗಿದೆ. ಸಂಘಗಳೇ ತ್ಯಾಜ್ಯ ಸಂಸ್ಕರಣಾ ಘಟಕಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವಂತೆ ಒತ್ತಾಯಿಸುವ ಬದಲು, 𝗕𝗦𝗪𝗠𝗟 ನೇರವಾಗಿ ಅಪಾರ್ಟ್‌ಮೆಂಟ್‌ಗಳಿಂದ ಯಾವುದೇ 𝗚𝗦𝗧 ಇಲ್ಲದೆ ಸಮಾನತೆಯ ಆಧಾರದ ಮೇಲೆ ಬಳಕೆದಾರರ ಶುಲ್ಕವನ್ನು ಸಂಗ್ರಹಿಸಬೇಕು ಮತ್ತು ತ್ಯಾಜ್ಯ ಸಂಸ್ಕರಣುದಾರರನ್ನು ನೇರವಾಗಿ ನೇಮಿಸಬೇಕು. ನಮ್ಮ ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆಗಾಗಿ ನಮಗೆ ಗ್ರೀನ್ ಕ್ರೆಡಿಟ್‌ಗಳು (𝗚𝗿𝗲𝗲𝗻 𝗖𝗿𝗲𝗱𝗶𝘁𝘀) ಬೇಕೇ ಹೊರತು ಆರ್ಥಿಕ ದಂಡನೆಗಳಲ್ಲ,” ಎಂದು 𝗕𝗔𝗙 ಪದಾಧಿಕಾರಿಗಳು ಆಗ್ರಹಿಸಿದರು.

ಬಿಕ್ಕಟ್ಟನ್ನು ಪರಿಹರಿಸಲು ಮತ್ತು ಸರ್ಕ್ಯುಲರ್ ಎಕಾನಮಿಯನ್ನು (𝗖𝗶𝗿𝗰𝘂𝗹𝗮𝗿 𝗘𝗰𝗼𝗻𝗼𝗺𝘆) ಉತ್ತೇಜಿಸಲು 𝗕𝗔𝗙 ಈ ಕೆಳಗಿನ ತುರ್ತು ಕ್ರಮಗಳನ್ನು ಪ್ರಸ್ತಾಪಿಸಿದೆ:

  • 𝗚𝗦𝗧 ಸೋರಿಕೆಯನ್ನು ತಡೆಗಟ್ಟಲು ಅಪಾರ್ಟ್‌ಮೆಂಟ್‌ಗಳಿಂದ ನೇರವಾಗಿ ವೆಂಡರ್‌ಗಳಿಗೆ ಪಾವತಿಸುವ ವ್ಯವಸ್ಥೆಯನ್ನು ರದ್ದುಗೊಳಿಸಬೇಕು.
  • ಕಾಂಪೋಸ್ಟ್ ಬೈ-ಬ್ಯಾಕ್ (𝗖𝗼𝗺𝗽𝗼𝘀𝘁 𝗕𝘂𝘆-𝗯𝗮𝗰𝗸) ವ್ಯವಸ್ಥೆಯನ್ನು ಪರಿಚಯಿಸಬೇಕು.
  • ಯಾವುದೇ ಬೆಲೆ ಬದಲಾವಣೆಗಳನ್ನು ಜಾರಿಗೊಳಿಸುವ ಮೊದಲು ಪಾರದರ್ಶಕವಾಗಿ ಸಂಘಗಳೊಂದಿಗೆ ಸಮಾಲೋಚನೆ ನಡೆಸಬೇಕು.

ಪತ್ರಿಕಾಗೋಷ್ಠಿಯಲ್ಲಿ 𝗕𝗔𝗙 ಅಧ್ಯಕ್ಷರಾದ ಶ್ರೀ ಸತೀಶ್ ಮಲ್ಯ, ಉಪಾಧ್ಯಕ್ಷರಾದ ಶ್ರೀ ಪ್ರದೀಪ್ ಪೈ, ಪ್ರಧಾನ ಕಾರ್ಯದರ್ಶಿ ಶ್ರೀ ಕೆ. ಅರುಣ್ ಕುಮಾರ್, ಆಡಳಿತ ಮಂಡಳಿ ಸದಸ್ಯ ಹಾಗೂ ಲೀಡ್ ಕಮ್ಯುನಿಕೇಷನ್ಸ್ ನ ಶ್ರೀ ವಿಶ್ವ ವೆಂಕಟ ರೆಡ್ಡಿ ಉಪಸ್ಥಿತರಿದ್ದರು.

ಕನಕಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಖಾಸಗಿ ಅಭ್ಯರ್ಥಿಗಳಿಗೆ ಅವಕಾಶ

Kanakagiri: Private candidates allowed to apply for ITI admission

ಕನಕಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಖಾಸಗಿ ಅಭ್ಯರ್ಥಿಗಳಿಗೆ ಅವಕಾಶ


ಕೊಪ್ಪಳ ಮಾರ್ಚ್ 16 (ಕರ್ನಾಟಕ ವಾರ್ತೆ): ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2025–26ನೇ ಸಾಲಿಗೆ ಐಟಿಐ ವಿವಿಧ ವೃತ್ತಿಯಲ್ಲಿ ತರಬೇತಿಗಳಿಗಾಗಿ ಪ್ರವೇಶ ಬಯಸುವ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
 ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಅರ್ಹ ಖಾಸಗಿ ಅಭ್ಯರ್ಥಿಗಳ ಪ್ರವೇಶಾತಿಯನ್ನು ತೆಗೆದುಕೊಳ್ಳಲಾಗುತ್ತಿದ್ದು, ಡಿಜಿಟಿ ಮಾರ್ಗಸೂಚಿಗಳ ಪ್ರಕಾರ ಐಟಿಐ ತರಬೇತಿಗೆ ಸಂಬಂಧಿಸಿದ ಕೆಲವು ವೃತ್ತಿಗಳಲ್ಲಿ ಅನುಭವ ಮತ್ತು ಇತರ ಅರ್ಹತೆ ಹೊಂದಿರುವ ಕನಕಗಿರಿ ತಾಲ್ಲೂಕಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅರ್ಹ ಅಭ್ಯರ್ಥಿಗಳ ಡಿಜಿಟಿ ಮಾರ್ಗ ಸೂಚಿಗಳ ಪ್ರಕಾರ ಪ್ರವೇಶಾತಿಯನ್ನು ಕೈಗೊಳ್ಳಲಾಗುತ್ತದೆ.
 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 20 ಆಗಿದ್ದು, ಆಸಕ್ತ ಅಭ್ಯರ್ಥಿಗಳು ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8904448925 ಅಥವಾ 9448259832 ಗೆ ಸಂಪರ್ಕಿಸಬಹುದಾಗಿದೆ ಎಂದು ಕನಕಗಿರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೆಫ್ರಿಜರೇಷನ್, ಏರ್ ಕಂಡೀಷನಿಂಗ್ & ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Applications invited for Refrigeration, Air Conditioning & Sheep Farming Training

ರೆಫ್ರಿಜರೇಷನ್, ಏರ್ ಕಂಡೀಷನಿಂಗ್ & ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ


ಕೊಪ್ಪಳ ಮಾರ್ಚ್ 16 (ಕರ್ನಾಟಕ ವಾರ್ತೆ): ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ 30 ದಿನಗಳ ಉಚಿತ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ಹಾಗೂ ಕುರಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ.
 ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗಾಗಿ ಏಪ್ರಿಲ್ ತಿಂಗಳಿನಲ್ಲಿ 30 ದಿನಗಳ ಉಚಿತ ತರಬೇತಿಗಳು ಪ್ರಾರಂಭಿಸಲಾಗುತ್ತಿದ್ದು, ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.

ಸ್ವಯಂ ಉದ್ಯೋಗ ಮಾಡಲು ಈ ತರಬೇತಿಯು ಅನುಕೂಲವಾಗಲಿದ್ದು, 18 ರಿಂದ 50 ವಯಸ್ಸಿನ ಒಳಗಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
 ಈ ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿAದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
 ತರಬೇತಿಯಲ್ಲಿ ಭಾಗವಹಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ದೂರವಾಣಿ ಸಂಖ್ಯೆ: 8217236973, 9483485489, 9482188780 ಗೆ ಮಾರ್ಚ್ 30 ರೊಳಗಾಗಿ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳೊಂದಿಗೆ ನೋಂದಾಯಿಸಬಹುದಾಗಿದೆ ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಗಂಗಾವತಿ: ಐಟಿಐ ಪ್ರವೇಶಕ್ಕೆ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Gangavathi: Applications invited from private candidates for ITI admissions

ಗಂಗಾವತಿ: ಐಟಿಐ ಪ್ರವೇಶಕ್ಕೆ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ


ಕೊಪ್ಪಳ ಮಾರ್ಚ್ 16 (ಕರ್ನಾಟಕ ವಾರ್ತೆ): ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2025–26ನೇ ಸಾಲಿಗೆ ಐಟಿಐ ವಿವಿಧ ವೃತ್ತಿಯಲ್ಲಿ ತರಬೇತಿಗಳಿಗಾಗಿ ಪ್ರವೇಶ ಬಯಸುವ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಅರ್ಹ ಖಾಸಗಿ ಅಭ್ಯರ್ಥಿಗಳ ಪ್ರವೇಶಾತಿಯನ್ನು ತೆಗೆದುಕೊಳ್ಳಲಾಗುತ್ತಿದ್ದು, ಡಿಜಿಟಿ ಮಾರ್ಗಸೂಚಿಗಳ ಪ್ರಕಾರ ಐಟಿಐ ತರಬೇತಿಗೆ ಸಂಬಂಧಿಸಿದ ಕೆಲವು ವೃತ್ತಿಗಳಲ್ಲಿ ಅನುಭವ ಮತ್ತು ಇತರ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅರ್ಹ ಅಭ್ಯರ್ಥಿಗಳ ಡಿಜಿಟಿ ಮಾರ್ಗ ಸೂಚಿಗಳ ಪ್ರಕಾರ ಪ್ರವೇಶಾತಿಯನ್ನು ಕೈಗೊಳ್ಳಲಾಗುತ್ತದೆ.
 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 20 ಆಗಿದ್ದು, ಆಸಕ್ತ ಅಭ್ಯರ್ಥಿಗಳು ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8904448925 ಅಥವಾ 9448259832 ಗೆ ಸಂಪರ್ಕಿಸಬಹುದಾಗಿದೆ ಎಂದು ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.