ಶಾಸಕ ಕೆ ಷಡಕ್ಷರಿ ಅವರಿಂದ ಕಾರ್ಮಿಕರಿಗೆ ಕಿಟ್ ವಿತರಣೆ
MLA K Shadakshari distributes kits to workers

ತಿಪಟೂರು.ಇಂದು ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಪಟ್ಟಣದ ಸಾಮರ್ಥಸೌಧ ಸಭಾಂಗಣದಲ್ಲಿ ವಿತರಿಸಿದರು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮುಖಾಂತರ ಉದ್ಘಾಟಿಸಿ ಮಾತನಾಡಿದ ಶಾಸಕರು ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಉದ್ಯೋಗ ಕಾರ್ಯವೈಕರಿಗಳಲ್ಲಿ ಕಾರ್ಮಿಕರ ಪಾತ್ರ ದೊಡ್ಡದಿದ್ದು, ಈ ನಿಟ್ಟಿನಲ್ಲಿ ವೆಲ್ಡಿಂಗ್ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಾರ್ಮಿಕರಿಗೆ ಸರ್ಕಾರ ಇಂತಹ ಸವಲತ್ತುಗಳನ್ನು ಕಾರ್ಮಿಕರಿಗೆ ಉಚಿತವಾಗಿ ಒದಗಿಸುತ್ತಿದ್ದು ಇಂತಹ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗ ಪಡೆದುಕೊಳ್ಳುವ ಮೂಲಕ ತಮ್ಮ ವೃತ್ತಿಯಲ್ಲಿ ಮುಂದುವರಿಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿ ಎಲ್ಲಾ ಬಡ ಕಾರ್ಮಿಕರು ಇದರ ಉಪಯೋಗವನ್ನು ಪಡೆದುಕೊಳ್ಳಿ ಎಂದರು.

ಈ ಸಂದರ್ಭದಲ್ಲಿ. ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ .ಹೇಮಂತ್. ಲೋಕನಾಥ್ ಸಿಂಗ್. ಕಾರ್ಮಿಕ ಇಲಾಖೆ ಅಧಿಕಾರಿಗಳು. ನಿಗಮದ ಅಧಿಕಾರಿಗಳು. ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ ಮಂಜು ಗುರುಗದಹಳ್ಳಿ

ಹುಬ್ಬಳ್ಳಿ: ಕರ್ನಾಟಕ ಚೇಂಬರ್ ಅಧ್ಯಕ್ಷರಾಗಿ ಸಂಶಿಮಠ ಆಯ್ಕೆ

Teacher’s Day Celebration at Azzipur Government Senior Primary School,

ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ಚೇಂಬರ್ ಆಫ಼್ ಕಾಮರ್ಸ್ & ಇಂಡಸ್ಟ್ರಿ ಅಧ್ಯಕ್ಷರಾಗಿ ಎಸ್.ಪಿ.ಸಂಶಿಮಠ ಆಯ್ಕೆಯಾಗಿದ್ದಾರೆ.ಪ್ರಸ್ತುತ ಇದೇ ಸಂಸ್ಥೆಯ ಉಪಾಧ್ಯಕ್ಷರಾಗಿರುವ ಅವರು ಪ್ರತಿಸ್ಪರ್ಧಿ ಅಭ್ಯರ್ಥಿಗಿಂತ 58 ಮತಗಳ ಅಂತರ ಸಾಧಿಸಿ, ಚುನಾವಣೆಯ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮೂಲತಃ ಗದಗ ನಗರದ ಪ್ರಮುಖ ಚಹಾ ಪುಡಿ ವ್ಯಾಪಾರಿಗಳಾದ ಇವರು ಗದಗ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ಮೂಲಕ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ.

ಇವರ ಆಯ್ಕೆಯಿಂದ ಕೊಪ್ಪಳ ಜಿಲ್ಲೆಯ ವಿವಿಧ ಕಾರ್ಯಗಳನ್ನು ಪರಸ್ಪರ ಹೊಂದಾಣಿಕೆಯಿಂದ ಮಾಡಲು ಸಾಧ್ಯವಾಗಲಿದೆ ಎಂದು ಬೆಂಗಳೂರಿನ ಫ಼ೆಡರೇಶನ್ ಆಫ಼್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಕಾರ್ಯಕಾರಿ ಮಂಡಳಿಯ ನೂತನ ಸದಸ್ಯ ಮತ್ತು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅಭಿಪ್ರಾಯ ಪಟ್ಟಿದ್ದಾರೆ. ಈ ಸಂಧರ್ಭದಲ್ಲಿ ನೂತನ ಅಧ್ಯಕ್ಷ ಸಂಶಿಮಠ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಂದೀಪ್ ಬಿಡಸಾರಿಯಾ ಅವರಿಗೆ ಅಭಿಂದನೆಗಳನ್ನು ಹೇರೂರ ತಿಳಿಸಿದ್ದಾರೆ.

ತಾಯಿಯ ಎದೆ ಹಾಲು ಅಮೃತಕ್ಕೆ ಸಮಾನ
Mother's breast milk is equal to nectar

ರೋಟರಿ ಯಿಂದ ವಿಶ್ವ ‌ಸ್ತನ್ಯಪಾನ ಸಪ್ತಾಹ ಆಚರಣೆ

 ತಾಯಿ ಮಗುವಿಗೆ ಹಾಲುಣಿಸುವ ಕ್ರಿಯೆ ಶತಮಾನಗಳಿಂದ ನಡೆದುಕೊಂಡು ಬಂದಿದೆ ಆದರೆ ನಾಗರಿಕತೆ ಬೆಳೆದಂತೆ ಸ್ತ್ರೀಯರ ಕಾರ್ಯಕ್ಷೇತ್ರವು ಬದಲಾಗುತ್ತದೆ. ಹಾಗಾಗಿ ತಾಯಿ ಮತ್ತು ಮಗುವಿಗೆ ಹಾಲುಣಿಸುವ ಕ್ರಿಯೆ ಮತ್ತು  ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ರೋಟರಿ ಡಿಸ್ಟ್ರಿಕ್ಟ್ ಸೆಕ್ರೆಟರಿ ಟಿ. ಆಂಜನೇಯ ರವರು  ಇಂದು ಜಯನಗರದ ಶ್ರೀ ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ದ ಅಂಗವಾಗಿ ರೋಟರಿ ಸಂಸ್ಥೆಯು  ಬಿಬಿಸಿ ನರ್ಸಿಂಗ್ ಕಾಲೇಜ್, ಜಯನಗರ ಅಂಗನವಾಡಿ ಕೇಂದ್ರದ ಸಹಕಾರದಿಂದ ನಡೆದ ತಾಯಿ ಎದೆ ಹಾಲು ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು
   ತಾಯಿಯ ಗರ್ಭದಿಂದಲೇ ಆರಂಭವಾದ ಈ ಸಂಬಂಧ ಮಗು ಜನಿಸಿದ ನಂತರ ಸ್ತನ್ಯಪಾನ ಮುಂದುವರಿಯುತ್ತೆ.

ಎದೆ ಹಾಲು ಪೌಷ್ಟಿಕಾಂಶವನ್ನು ಒದಗಿಸುವುದರ ಜೊತೆಗೆ ವಿವಿಧ ರೋಗಗಳ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತದೆ. ಮತ್ತು ತಾಯಿ ಮಗುವಿನ ಅನನ್ಯ ಸಂಬಂಧವನ್ನು ವೃದ್ಧಿಸುತ್ತದೆ ಎಂದು ತಾಯಂದಿರ ಕುರಿತು ಮಾತನಾಡಿದರು
*ರೋಟರಿ ಸಂಸ್ಥೆ ಅಧ್ಯಕ್ಷರಾದ ಶಿವಕುಮಾರ ರವರು ಸಂಸ್ಥೆ ಅನೇಕ ಸಾಮಾಜಿಕ, ಆರೋಗ್ಯ ಕಾರ್ಯಗಳ ಜೊತೆಗೆ ದೇಶದಲ್ಲಿ 1992 ರಿಂದ ಜಾರಿಯಲ್ಲಿರುವ ವಿಶ್ವ ಸ್ತನ್ಯಪಾನ ಕಾರ್ಯಕ್ರಮವ

ಕೆಸರಹಟ್ಟಿ:ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ
Kesarhatti: Health awareness program for students

ಗಂಗಾವತಿ.‌ 24 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕ್ಷಯ ವಿಭಾಗ ಉಪವಿಭಾಗ ಆಸ್ಪತ್ರೆ ಗಂಗಾವತಿ ಮತ್ತು ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನ ಸಂಸ್ಥೆಯ ಸಹಯೋಗದೊಂದಿಗೆ ತಾಲೂಕಿನ ಕೆಸರಹಟ್ಟಿ ಗ್ರಾಮದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಲಾಯಿತು.
ಡಾ.ನೆಹನಾಜ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಕಂಡು ಬರುವ ಮಾನಸಿಕ ಖಿನ್ನತೆ, ಮುಟ್ಟಿನ ಸಮಸ್ಯೆ, ದೈಹಿಕ ಬೆಳವಣಿಗೆಯ ಬದಲಾವಣೆಗಳ ಸಮಸ್ಯೆಗಳು, ಮತ್ತು ನೈರ್ಮಲ್ಯ ಜಾಗೃತಿ ಬಗ್ಗೆ ಅರಿವು ಮೂಡಿಸಿದರು. ಹಾಗೂ ವಿದ್ಯಾರ್ಥಿಗಳಲ್ಲಿ ಕಂಡುಬರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಬೇಟಿ ಕೊಡುವುದರ ಮೂಲಕ ಅರಿವು ಮೂಡಿಸಿದರು.
ಕವಿತಾ ಸಮುದಾಯ ಆರೋಗ್ಯ ಅಧಿಕಾರಿ ಮಾತನಾಡಿ ಈಗಾಗಲೇ ಕಂಡುಬರುವ ಮಲೇರಿಯಾ, ಭೇದಿ ಹಾಗೂ ವಾಂತಿಗಳ ಬಗ್ಗೆ ಸೂಚನೆ ನೀಡಿದರು. ಮತ್ತು ನಮ್ಮ ಸುತ್ತಮುತ್ತ ಇರುವ ಪ್ರದೇಶವನ್ನು ಸ್ವಚ್ಛವಾಗಿ ಇಡಬೇಕು ಮತ್ತು ಮಲೇರಿಯಾ, ಚಿಕ್ಕನ್ ಗುನ್ಯಾ ಬರುವುದಕ್ಕೆ ಕಾರಣಗಳನ್ನು ತಿಳಿಸಿದರು.

ಕೆ ಎಚ್ ಪಿ ಟಿ ಸಮುದಾಯ ಸಂಯೋಜಕರಾದ ಹನುಮಂತಪ್ಪ ಮಾತನಾಡಿ ಕ್ಷಯವನ್ನು ಮುಕ್ತ ಮಾಡುವಲ್ಲಿ ಶಿಕ್ಷಕರು ಸಹಾಯ ಮಾಡುವುದರಿಂದ ವಿದ್ಯಾರ್ಥಿಗಳು ಹಾಗೂ ಸಮುದಾಯ ಸಂಘದವರು ಹಾಗೂ ಸಾರ್ವಜನಿಕರ ಸಹಕಾರ ಮುಖ್ಯವಾಗಿರುತ್ತದೆ ಯಾಕೆಂದರೆ ಸಂಶಯಾಸ್ಪದ ವ್ಯಕ್ತಿಗಳಲ್ಲಿ ಕಂಡುಬರುವ ಕ್ಷಯ ಲಕ್ಷಣಗಳು ಇದ್ದರೆ ಚಿಕಿತ್ಸೆ ಪಡೆಯದೇ ಇದ್ದರೆ ಆ ವ್ಯಕ್ತಿ ವರ್ಷದಲ್ಲಿ ಸುಮಾರು 15 ರಿಂದ 20 ಜನರಿಗೆ ಕ್ಷಯವನ್ನು ಹರಡಿಸುತ್ತಾನೆ. ಲಕ್ಷಣಗಳಿರುವ ವ್ಯಕ್ತಿಗಳು ಕಪ ಪರೀಕ್ಷೆ ಮಾಡಿಸದೆ ಇದ್ದರೆ ಸಾಯುವಂತ ಪರಿಸ್ಥಿತಿಗಳು ಬರುತ್ತವೆ. ಮತ್ತು ವಿದ್ಯಾರ್ಥಿಗಳು ಕೆಟ್ಟ ಚಟಗಳಿಂದ ಮುಕ್ತರಾಗಬೇಕು. ಯಾಕೆಂದರೆ ಹಲವಾರು ರೀತಿಯ ದುಶ್ಚಟಗಳನ್ನು ಮಾಡುವುದರಿಂದ ಕ್ಯಾನ್ಸರ್, ಕ್ಷಯ ರೋಗ ಹಾಗೂ ಇನ್ನಿತರ ಖಾಯಿಲೆಗಳು ಬರುತ್ತವೆ ಎಂದು ತಿಳಿಸಿದರು.
ಮತ್ತು ಈ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕಿಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜು. 16 ರಂದು ಉಚಿತ ಕೃತಕ ಅಂಗಾಂಗ ಜೋಡಣಾ ಶಿಬಿರ
Ju. Free Prosthesis Camp on 16th

ಬೆಂಗಳೂರು; ನಾರಾಯಣ್‌ ಸೇವಾ ಸಂಸ್ಥಾನ್‌ ಸೇವಾ ಸಂಸ್ಥೆ ಯಿಂದ ಜುಲೈ 16 ರಂದು ಬೆಂಗಳೂರಿನಲ್ಲಿ ದಿವ್ಯಾಂಗರಿಗೆ ಹೊಂದಿಕೆಯಾಗುವಂತೆ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ಆಯೋಜಿಸಲಾಗಿದೆ. ವಿಶೇಷವಾಗಿ ಕರ್ನಾಟಕದ ಜನರಿಗಾಗಿ ಈ ಬೃಹತ್‌ ಶಿಬಿರ ಏರ್ಪಡಿಸಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದಯ್‌ ಪುರನ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಸ್ವಯಂ ಸೇವಾ ಸಂಸ್ಥೆ ನಾರಾಯಣ್‌ ಸೇವಾ ಸಂಸ್ಥಾನದ ಸಾರ್ವಜನಿಕ ಸಂಪರ್ಕಾಧಿಕಾರಿ ಭಗವಾನ್‌ ಪ್ರಸಾದ್‌ ಗೌರ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತ್ ಕುಮಾರ್, ಆಚಾರ್ಯ ವಿಮಲ್ ಸಾಗರ್ ಮಹಾರಾಜ್ ಅವರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಅರ್ಹ ಫಲಾನುಭವಿಗಳಿಗೆ ಹೊಂದಿಕೆಯಾಗುವಂತೆ ಕೃತಕ ಅಂಗಾಂಗಗಳ ಅಳತೆ ತೆಗೆದುಕೊಂಡು ನಂತರ ಸಿದ್ಧಪಡಿಸಿ ಇನ್ನೊಂದು ತಿಂಗಳಲ್ಲಿ ನಡೆಯಲಿರುವ ಬೃಹತ್‌ ಶಿಬಿರದಲ್ಲಿ ಅಳವಡಿಸಲಾಗುವುದು ಎಂದರು.

ಕಳೆದ 38 ವರ್ಷಗಳಿಂದ ಅಪಘಾತ ಮತ್ತಿತರ ಅವಘಡಗಳಲ್ಲಿ ಅಂಗಾಂಗ ಕಳೆದುಕೊಂಡವರಿಗೆ ಕೃತಕ ಅಂಗಾಂಗ ಜೋಡಣೆ ಮಾಡುತ್ತಿದ್ದು, ಬೆಂಗಳೂರಿನ ವಿವಿಪುರದಲ್ಲಿರುವ ಅರಸೋಜಿ ರಾವ್‌ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿಶೇಷ ಚೇತನರಿಗೆ ಪರಿಣಿತ ವೈದ್ಯರು ಅಳವಡಿಕೆಮಾಡಲಿರುವ ಅಂಗಾಂಗಗಳ ಅಳತೆ ತೆಗೆದುಕೊಳ್ಳಲಿದ್ದಾರೆ. ಇದು ನಾರಾಯಣ್‌ ಸೇವಾ ಸಂಸ್ಥಾನ್‌ ನ 988 ನೇ ಶಿಬಿರವಾಗಿದ್ದು, ಶೀಘ್ರದಲ್ಲೇ ಈ ಸಂಖ್ಯೆ ಸಾವಿರದ ಗಡಿ ದಾಟಲಿದೆ ಎಂದರು.

ನಾರಾಯಣ್‌ ಸೇವಾ ಸಂಸ್ಥಾನ್‌ ನ ವಕ್ತಾರ ರಜತ್‌ ಗೌರ್‌ ಮಾತನಾಡಿ, ಸಂಸ್ಥೆಯ ಅನುಭವಿ ಮೂಳೆ ತಜ್ಞರು, ಪ್ರಾಸ್ತೆಟಿಕ್ ವೈದ್ಯರ ತಂಡದಿಂದ ವಿಕಲಚೇತನರಿಗಾಗಿ ಆರೈಕೆ ಜೊತೆಗೆ ಅಂಗಾಂಗ ಅಳವಡಿಸಲು ನೆರವು ನೀಡಲಾಗುವುದು. ರೋಗಿಗಳು ತಮ್ಮ ಅಗತ್ಯತೆಗಳಿಗೆ ಅನುಗುಣವಾಗಿ ಉತ್ತಮ ಗುಣಮಟ್ಟದ ಹಗುರ ಮತ್ತು ದೀರ್ಘಕಾಲ ಬಾಳಿಕೆ ಬರುವ ಕೃತಕ ಅಂಗಾಂಗಳನ್ನು ತಯಾರಿಸಿ ಅಳವಡಿಸಲಾಗುವುದು ಎಂದರು.

ಶಿಬಿರದ ಸಮನ್ವಯಕಾರ ರೋಹಿತ್‌ ತಿವಾರಿ ಮಾತನಾಡಿ, ಫಲಾನುಭವಿಗಳು ಶಿಬಿರಕ್ಕೆ ಆಧಾರ್‌ ಕಾರ್ಡ್‌, ವಿಕಲಚೇತನ ಇಲಾಖೆ ನೀಡಿರುವ ಪ್ರಮಾಣ ಪತ್ರ, ತಮ್ಮ ಅಂಗಾಂಗ ನ್ಯೂನತೆ ಪ್ರತಿಬಿಂಬಿಸುವ ಎರಡು ಭಾವಚಿತ್ರ ತರಬೇಕು. ಶಿಬಿರದಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ನೇಕಾರರ ಗಣತಿ, ಘಟಕಗಳ ಸಮೀಕ್ಷೆಗೆ ದಾಖಲೆ ಸಲ್ಲಿಸಲು ಸೂಚನೆ
Notice to submit records for census of weavers, survey of units

ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ವಿದ್ಯುತ್ ಮಗ್ಗ ನೇಕಾರರ ಮತ್ತು ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾರರ ಗಣತಿ ಹಾಗೂ ಘಟಕಗಳ ಸಮೀಕ್ಷೆಗೆ ದಾಖಲಾತಿ ಸಲ್ಲಿಸುವಂತೆ ಕೊಪ್ಪಳ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ವಿದ್ಯುತ್ ಮಗ್ಗ ನೇಕಾರರ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾರರ ಗಣತಿ ಮತ್ತು ಘಟಕಗಳ ಸಮೀಕ್ಷೆ ಈಗಾಗಲೇ ಮಾಡಲಾಗಿದೆ. ಈ ಸಮೀಕ್ಷೆ ಕಾರ್ಯ ಅಂತಿಮ ಹಂತದಲ್ಲಿದ್ದು, ಗಣತಿಯನ್ನು ಮಾಡಿಸದೇ ಇರುವ ಅಥವಾ ಬಿಟ್ಟು ಹೋದ ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಈ ಗಣತಿಯಲ್ಲಿ ನೋಂದಣಿ ಮಾಡಿಸಲು ವಿದ್ಯುತ್ ಮಗ್ಗ ಘಟಕದ ಮಾಲೀಕರು ತಮ್ಮ ಘಟಕದ ಆರ್.ಆರ್ ಸಂಖ್ಯೆ, ಉದ್ಯೋಗ ಆಧಾರ, ಇತ್ತೀಚಿನ ವಿದ್ಯುತ್ ಬಿಲ್, ಮೊಬೈಲ್ ಸಂಖ್ಯೆ ವಿವರಗಳುಳ್ಳ ದಾಖಲಾತಿಗಳನ್ನು ಘಟಕದ ಮೊಹರು ಹಾಗೂ ದೃಢೀಕರಣದೊಂದಿಗೆ ಜುಲೈ 25 ರೊಳಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಡಿ.ಐ.ಸಿ.ಕಂಪೌಂಡ್ ಅಶೋಕ್ ಸರ್ಕಲ್, ಕೊಪ್ಪಳ ಕಚೇರಿಗೆ ಸಲ್ಲಿಸಬಹುದಾಗಿದೆ.
ಗಣತಿ ಕಾರ್ಯ ಅಂತ್ಯಗೊಂಡ ನಂತರ ಯಾವುದೇ ಕಾರಣಕ್ಕೂ ಸೇರ್ಪಡೆ ಮಾಡಲು ಅವಕಾಶವಿರುವುದಿಲ್ಲ. ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೊಪ್ಪಳ ದೂರವಾಣಿ ಸಂಖ್ಯೆ: 08539-295469ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಜುಲೈ 12ಕ್ಕೆ
Receipt of report by Lokayukta on July 12

ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ತಾಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು ಜುಲೈ 12 ರಂದು ಬೆಳಿಗ್ಗೆ 11ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಕೊಪ್ಪಳ ತಾಲೂಕು ವ್ಯಾಪ್ತಿಯ ಸಾರ್ವಜನಿಕರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿ ಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಲಂಚ ಕೇಳುವುದು ಇತ್ಯಾದಿ ದುರಾಡಳಿತದಲ್ಲಿ ತೊಡಗಿದ್ದರ ಕುರಿತು ದೂರು ಸ್ವೀಕರಿಸಲು ಲೋಕಾಯುಕ್ತರಿಂದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನೆಡೆಸಲು ತೀರ್ಮಾನ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಲೋಕಾಯುಕ್ತರು ಅಧಿಕಾರಿಗಳು ಎಲ್ಲಾ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 & 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಈ ಸಭೆಯ ಸದುಪಯೋಗ ಪಡೆದುಕೊಳ್ಳಲು ಈ ಮೂಲಕ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08539-295200 & 220533 ಅಥವಾ 295833 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಕೊಪ್ಪಳ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲಾ ನೂತನ ಉಪವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅಧಿಕಾರ ಸ್ಚೀಕಾರ

Captain Mahesh Malagitthi has been sworn in as the new Sub Divisional Officer of Koppal District

ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ನೂತನ ಉಪ ವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಜುಲೈ 10ರಂದು ಅಧಿಕಾರ ಸ್ವೀಕರಿಸಿದರು.
ಇದಕ್ಕು ಮೊದಲ ಇವರು ವಿಜಯಪುರ ಜಿಲ್ಲೆಯ ಉಪ ವಿಭಾಗಾಧಿಕಾರಿಗಳಾಗಿ, ದೇವರ ಹಿಪ್ಪರಗಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಬೆಳಗಾವಿ ಸೇರಿದಂತೆ ಇನ್ನೀತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಹ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಬಸವಣ್ಣಪ್ಪ ಕಲಶೆಟ್ಟಿ ಅವರು ಈ ಮೊದಲು ಕೊಪ್ಪಳ ಜಿಲ್ಲೆಯ ಸಹಾಯಕ ಆಯುಕ್ತರಾಗಿದ್ದರು.

ಶಿಕ್ಷಕರ ವರ್ಗಾವಣೆ: ಜುಲೈ 11ರಿಂದ ಜುಲೈ 14ರವರೆಗೆ ಕೌನ್ಸೆಲಿಂಗ್
Teacher Transfer: Counseling from 11th July to 14th July

ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ):2022-2023ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರ ಕೋರಿಕೆಯ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರುಗಳಿಗೆ ಗಣಕೀಕೃತ ಕೌನ್ಸೆಲಿಂಗ್ ಜುಲೈ 11ರಿಂದ ಜುಲೈ 14ರವರೆಗೆ ಉಪನಿರ್ದೇಶಕರ ಕಾರ್ಯಲಯ, ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಯಿAದ ಆನ್‌ಲೈನ್ ಕೌನ್ಸೆಲಿಂಗ್ ಆರಂಭವಾಗುವುದು.
ಪ್ರಾಥಮಿಕ ಶಾಲಾ ವಿಭಾಗ: ಪ್ರಾಥಮಿಕ ಶಾಲಾ ವಿಭಾಗದಲ್ಲಿ ಜುಲೈ 11ರಂದು ಮುಖ್ಯಗುರುಗಳು ಕ್ರಮ ಸಂಖ್ಯೆ 1ರಿಂದ ಪೂರ್ಣಪಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರು ಕ್ರಮ ಸಂಖ್ಯೆ 1ರಿಂದ ಪೂರ್ಣಪಟ್ಟಿ, ಸಹ ಶಿಕ್ಷಕರಿಗೆ ಕ್ರಮ ಸಂಖ್ಯೆ 1 ರಿಂದ 500ರವರೆಗೆ, ಜುಲೈ 12ರಂದು ಪ್ರಾಥಮಿಕ ಶಾಲಾ ವಿಭಾಗದ ಸಹ ಶಿಕ್ಷಕರಿಗೆ ಕ್ರಮ ಸಂಖ್ಯೆ 501 ರಿಂದ ಪೂರ್ಣಪಟ್ಟಿವರೆಗೆ ನಡೆಯಲಿದೆ.
ಪ್ರೌಢಶಾಲಾ ವಿಭಾಗದವÀರಿಗೆ: ಪ್ರೌಢಾಶಾಲಾ ವಿಭಾಗದಲ್ಲಿ ಜುಲೈ 13ರಂದು ವಿಶೇಷ ಶಿಕ್ಷಕರಿಗೆ ಕ್ರಮ ಸಂ 1ರಿಂದ ಪೂರ್ಣಪಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರು ಕ್ರಮ 1ರಿಂದ ಪೂರ್ಣಪಟ್ಟಿ, ಸಹ ಶಿಕ್ಷಕರಿಗೆ ಕ್ರಮ ಸಂಖ್ಯೆ 1ರಿಂದ ಪೂರ್ಣಪಟ್ಟಿ, ಜುಲೈ 14ರಂದು ಸಹ ಶಿಕ್ಷಕರಿಗೆ ಉಳಿದಲ್ಲಿ ಮುಂದುವರೆಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಕೊಪ್ಪಳದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗರೂ ನಾಡಿನಲ್ಲಿ ಬಸವ ಸಮಿತಿ ಕಾರ್ಯ ಶ್ಲಾಘನೀಯ:ನಾಡೋಜ ಡಾ. ಮಹೇಶ ಜೋಶಿ
The work of Basava Committee in Kangaroo Country is commendable: Nadoja Dr. Mahesh Joshi

ಬೆಂಗಳೂರು: ಮಹಾನ್ ಮಾನವತಾವಾದಿ ಬಸವಣ್ಣನವರು ಸಮಸ್ತ ಸಮಾಜಕ್ಕೆ- ವಿಶ್ವಕ್ಕೆ ಗುರುವಾಗಿದ್ದವರು. ಕಾಯಕ ಧರ್ಮದ ತಿರುಳನ್ನು ಮನುಜಕುಲಕ್ಕೆ ತಿಳಿಸಿದ ವಿಶ್ವಮಾನವರು. ಅವರ ತತ್ವಗಳನ್ನು ಕಾಂಗರೂ ನಾಡಿನಲ್ಲಿ ಪಾಲಿಸುತ್ತಿರುವ ಆಸ್ಟ್ರೇಲಿಯನ್ ಏಷಿಯಾ ಬಸವ ಸಮಿತಿಯ ಮೆಲ್ಬೋರ್ನ್ ಘಟಕವು ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಹರ್ಷವ್ಯಕ್ತ ಪಡಿಸಿದ್ದಾರೆ.
ಇಂದು ಆಸ್ಟ್ರೇಲಿಯಾ ಏಶಿಯಾದ ಬಸವ ಸಮಿತಿಯ ಮೆಲ್ಬೋರ್ನ್ ಘಟಕದಲ್ಲಿ ಹಮ್ಮಿಕೊಂಡ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿ, ೧೯೯೯ರ ಏಪ್ರಿಲ್ ತಿಂಗಳಿನಲ್ಲಿ ಮೆಲ್ಬೋರ್ನ್ನಲ್ಲಿ ಬಸವ ಸಮಿತಿ ಸ್ಥಾಪನೆಯಾಗಿತ್ತು. ಡಾ. ಮಲ್ಲಿಕಾರ್ಜುನ ಮಾಲಿಪಾಟೀಲ್ ಅವರು ಸಂಸ್ಥಾಪಕ ಅಧ್ಯಕ್ಷರಾಗಿ, ಶ್ರೀ ಗಂಗಾಧರ ಬೇವಿನಕೊಪ್ಪ ಅವರು ಉಪಾಧ್ಯಕ್ಷರಾಗಿ ಘಟಕವನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದು ಅವರು ಶ್ಲಾಘಿಸಿದರು.
ಮೆಲ್ಬೋರ್ನ್ನಲ್ಲಿರುವ ಬಸವ ಸಮಿತಿಯ ಮಾಹಾಮನೆ ಕಾರ್ಯಮದಲ್ಲಿ ಯಲ್ಲಿ ನಡೆಯುವ ಚಟುಟಿಕೆಗಳ ಬಗ್ಗೆ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದರು. ಬಸವಣ್ಣನವರ ತತ್ವವನ್ನು ಒಪ್ಪಿಕೊಂಡು ಅದನ್ನು ಅರ್ಥಪೂರ್ಣವಾಗಿ ಕಾರ್ಯರೂಪಕ್ಕೆ ತರುವ ಮೂಲಕ ಈ ʻಮಹಾಮನೆʼ ಸಾರ್ಥಕತೆ ಮೆರೆಯುತ್ತಿದೆ. ಬಸವಣ್ಣನವರು ಮನುಕುಲಕ್ಕೆ ಮಾನವೀಯ ನೆಲೆಯನ್ನು ವಚನಗಳ ಮೂಲಕ ನೀಡಿದವರು. ವಚನಗಳು ಕನ್ನಡದಲ್ಲಿ ರಚಿಸುವ ಮೂಲಕ ಜಗತ್ತಿಗೆ ಕನ್ನಡಭಾಷೆಯಲ್ಲಿ ತತ್ವಗಳನ್ನು ನೀಡಿದವರು. ಅವರ ವಚನಗಳನ್ನು ಹೊರನಾಡಿನಲ್ಲಿ ನೆಲೆಸಿರುವ ಕನ್ನಡಿಗರಿಗೆ ಹೇಳಿಕೊಡುವ ಮೂಲಕ ಉತ್ತಮ ಕೆಲಸವನ್ನು ಮಾಡಲಾಗುತ್ತಿದೆ ಎಂದು ನಾಡೋಜ ಡಾ. ಮಹೇಶ ಜೊಶಿ ಅಭಿಪ್ರಾಯ ವ್ಯಕ್ತ ಪಡಿಸಿದರು.
ಈಗಾಗಲೆ ಮೆಲ್ಬೋರ್ನ್ ಕನ್ನಡ ಸಂಘದವರಿಗೆ ಕನ್ನಡ ಭಾಷೆಯ ಕಲಿಯುವಲ್ಲಿ ಹಾಗೂ ಅಧ್ಯಯನ ಮಾಡುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಹಾಯ ಮಾಡಬೇಕು. ಬಸವಣ್ಣನವರ ವಚನಗಳಲ್ಲಿ ಬರುವ ಕೆಲವು ಕನ್ನಡ ಪದಗಳು ಅರ್ಥವಾಗದ ಸಂದರ್ಭದಲ್ಲಿ ಅದಕ್ಕೆ ಬೇಕಾದ ಪುಸ್ತಕಗಳನ್ನು ಪರಿಷತ್ತು ಕಲ್ಪಿಸಬೇಕು ಎನ್ನುವ ಬೇಡಿಕೆಗಳನ್ನು ಇಟ್ಟರು. ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪರಿಷತ್ತಿನಲ್ಲಿ ಲಭ್ಯ ಇರುವ ಪುಸ್ತಕಗಳನ್ನು ಪೂರೈಸಲಾಗುವುದು ಜೊತೆಗೆ ಯಾವುದೇ ಕನ್ನಡ ಪದಗಳ ಅರ್ಥಗಳು ಸಾಲುಗಳ ಅರ್ಥಗಳ ಬಗ್ಗೆ ಗೊಂದಲ ಉಂಟಾದಾಗ ವಾಟ್ಸ್ ಆಪ್ ಅಥವಾ ಇಮೇಲ್ ಮೂಲಕ ಪರಿಷತ್ತಿಗೆ ಬರೆದು ಕಳಿಸಿದರೆ ಅದಕ್ಕೆ ತಜ್ಞರಿಂದ ಸಮರ್ಪಕ ಉತ್ತರವನ್ನು ನೀಡುವ ಕೆಲಸವನ್ನು ಪರಿಷತ್ತು ಮಾಡಲಿದೆ. ಜೊತೆಗೆ ಈ ಬಾರಿ ಮಂಡ್ಯದಲ್ಲಿ ನಡೆಯಲಿರುವ ೮೭ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಅಧ್ಯಕ್ಷರು ಮೆಲ್ಬೋರ್ನ್ ಬಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಮತ್ತು ಮೆಲ್ಬೋರ್ನ್ ನಲ್ಲಿ ನೆಲೆಸಿರುವ ಕನ್ನಡಿಗರಿಗೆ ಗೌರವ ಪೂರ್ವಕ ಆಹ್ವಾನವನ್ನು ನೀಡಿದರು. ವಿದೇಶಲ್ಲಿ ನೆಲೆಸಿರುವ ಸಮಸ್ತ ಕನ್ನಡಿಗರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ತಿಳಿಸಿದ್ದಾರೆ,
ಮೆಲ್ಬೋರ್ನ್ ಬಸವ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಜಯಾ ಪವಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮೆಲ್ಬೋರ್ನ್ ಬಸವ ಸಮಿತಿಯ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಸಮಿತಿಯು ʻಅಕ್ಷರ ದಾಸೋಹʼ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದ್ದು ಕನ್ನಡ ಕಲಿಸುವದರ ಜೊತೆಗೆ ಕನ್ನಡ ಭಾಷೆಯನ್ನು ಅಂತರ್ಗತವಾಗಿರಿಸಿಕೊಂಡ ವಚನಗಳನ್ನು ಎಲ್ಲರಿಗೂ ಕಲಿಸುವ ಕೆಲಸವನ್ನು ಬಸವ ಸಮಿತಿ ಹಮ್ಮಿಕೊಂಡಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ವಚನಗಳಲ್ಲಿ ಬಳಸಲಾಗಿರುವ ಕನ್ನಡ ಪದಗಳನ್ನು ಎಲ್ಲರಿಗೂ ಅರ್ಥ ಮಾಡಿಸುವುದರ ಜೊತೆಗೆ ವಚನಗಳ ಸಾರವನ್ನು ತಿಳಿಸಿಕೊಡುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಮೆಲ್ಬೋರ್ನ್ ಬಸವ ಸಮಿತಿಯ ಶ್ರೀ ಗಂಗಾಧರ ಬೇವಿನಕೊಪ್ಪ ಅವರು ಪರಿಷತ್ತಿನ ಅದ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರೊಂದಿಗೆ ಮಾತನಾಡುತ್ತ, ದೂರದ ಕಾಂಗರೂ ನಾಡಿನಲ್ಲಿ ನೆಲೆಸಿದ ಕನ್ನಡಿಗರ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಅಪಾರ ವಿಶ್ವಾಸವನ್ನು ಇರಿಸಿದೆ. ಕನ್ನಡ ಕಟ್ಟುವ ಕೆಲಸದಲ್ಲಿ ನಾವೆಲ್ಲಾ ಸಾಹಿತ್ಯ ಪರಿಷತ್ತಿನ ಜೊತೆ ಕೈಜೋಡಿಸಿ ಕೆಲಸ ಮಾಡಲಿದ್ದೇವೆ. ಬಸವಣ್ಣನರು ಹೇಳಿಕೊಟ್ಟ ಕಾಯಕವೇ ಕೈಲಾಸ ಎನ್ನುವ ತತ್ವವನ್ನು ನಾವು ಇಲ್ಲಿ ತ್ರಿಕರಣರ್ಪೂರ್ವಕವಾಗಿ ಒಪ್ಪಿಕೊಂಡು ನಡೆದುಕೊಳ್ಳುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಹೆಮ್ಮೆಯಿಂದ ಒಪ್ಪಿಕೊಳ್ಳುವ ಮೂಲಕ ಕನ್ನಡ ಕಟ್ಟುವ ಕೆಲಸಕ್ಕೆ ಪರಿಷತ್ತಿನ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ ಎಂದು ಹೇಳಿದರು.
ಈ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮೆಲ್ಬೋರ್ನ್ ಬಸವ ಸಮಿತಿಯ ಟ್ರಸ್ಟಿ ಡಾ. ಮಲ್ಲಿಕಾರ್ಜುನ ಮಾಲಿಪಾಟೀಲ್, ಸಮಿತಿಯ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಛಾಯಾಚಿತ್ರ: ಆಸ್ಟ್ರೇಲಿಯಾ ಏಶಿಯಾದ ಬಸವ ಸಮಿತಿಯ ಮೆಲ್ಬೋರ್ನ್ ಘಟಕದಲ್ಲಿ ಹಮ್ಮಿಕೊಂಡ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಭಾಗವಹಿಸಿದ್ದರು.