ಗಂಗಾವತಿ: ೨೦೧೮ ರಿಂದ ಆಡಳಿತಾರೂಢ ಬಿಜೆಪಿಯು ಸುಮಾರು ೮,೨೫೨ ಕೋಟಿರೂಗಳ ಚುನಾವಣಾ ಬಾಂಡ್ ಗಳನ್ನು ಪಡೆದಿದ್ದು ಮೇಲ್ನೋಟಕ್ಕೆ ಇದೊಂದು ಅಧಿಕಾರ ದುರುಪಯೋಗದ ಭ್ರಷ್ಠಾಚಾರದ ಪ್ರಕರಣವಾಗಿದ್ದು ಸುಪ್ರಿಂ ಕೋರ್ಟ ಸುಪರ್ಧಿಯಲ್ಲಿ ಸಮಗ್ರ ತನಿಖೆ ನಡೆಸುವಂತೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿಯ ಮುಖಂಡರಾದ ಎಂ.ನಿರುಪಾದಿ ಬೆಣಕಲ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ, ತಾನು ತಿನ್ನುವುದಿಲ್ಲ ಮತ್ತು ತಿನ್ನಲು ಬಿಡುವುದಿಲ್ಲ ಮಾತ್ರವಲ್ಲಾ ಕಪ್ಪು ಹಣ ಬಯಲಿಗೆಳೆಯುತ್ತೇನೆ ಎಂದು ನೀಡಿದ ವಾಗ್ದಾನಕ್ಕೆ …
Read More »ಮತದಾನ ಬಹಿಷ್ಕಾರ: ಚಿಕ್ಕರಾಂಪೂರಕ್ಕೆದೌಡಾಯಿಸಿದ ಅಧಿಕಾರಿಗಳು
ಗಂಗಾವತಿ: ಮನೆಗಳಿಗೆ ಪಟ್ಟಾ, ಸ್ವಾಮೀಕ್ಷೆ ಯೋಜನೆ ಅನುಷ್ಠಾನ ಹಾಗೂ ಗ್ರಾಮಗಳಿಗೆ ಗಾಂವರಾಣಾ ಮಂಜೂರಿ ಮಾಡುವಂತೆ ಆಗ್ರಹಿಸಿ ತಾಲೂಕಿನ ಆನೆಗೊಂದಿ ಭಾಗದ ಐದು ಗ್ರಾಮಗಳ ಗ್ರಾಮಸ್ಥರು ಲೋಕಸಭಾ ಚುನಾವಣಾ ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ ಎರಡು ತಾಸಿನಲ್ಲೇ ಸಹಾಯಕ ಆಯುಕ್ತರ ನೇತೃತ್ವದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು ಚಿಕ್ಕರಾಂಪೂರ ಗ್ರಾಮಕ್ಕೆ ಆಗಮಿಸಿ ಸ್ಥಳೀಯರ ಸಭೆ ನಡೆಸಿ ಮತದಾನ ಬಹಿಷ್ಕಾರ ಮಾಡದಂತೆ ಮನವೊಲಿಸಲು ಯತ್ನಿಸಿದರು. ಈ ಸಂದರ್ಭದಲ್ಲಿ …
Read More »ಸಸಿ ನೆಟ್ಟು ನೀರುಣಿಸುವ ಮೂಲಕ ದಾಪಂತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು
ಮಾನವಿ ತಾಲೂಕಿನ ಭೋಗಾವತಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ನಡೆದ ವಿಶ್ವಕರ್ಮ ಬಂಧುಗಳ ಮದುವೆ ಸಮಾರಂಭದಲ್ಲಿ 501ಸಸಿಗಳ ವಿತರಣಾ ಕಾರ್ಯಕ್ರಮ ನೆರವೇರಿತು.ಈ ಸಂದರ್ಭದಲ್ಲಿ ನವ ದಂಪತಿಗಳು ಸಸಿ ನೆಟ್ಟು ನೀರುಣಿಸುವ ಮೂಲಕ ತಮ್ಮ ಮದುವೆ ಸಮಾರಂಭವನ್ನು ವಿಶೇಷವಾಗಿ ಆಚರಿಸಿಕೊಂಡರು. ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯರಿಗೆ,ಅತಿಥಿಗಳಿಗೆ, ಗಣ್ಯವ್ಯಕ್ತಿಗಳಿಗೆ,ಸಂಭಂದಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.ಮದುವೆ ಸಮಾರಂಭದಲ್ಲಿ501ಸಸಿಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಎಲ್ಲ ಸಾರ್ವಜನಿಕರು,ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿ ನೂತನ ವಧುವರರಿಗೆ …
Read More »ಸಸಿಗಳ ಪೋಷಣೆ ಮಾಡುತ್ತಿರುವ ಅರಣ್ಯ ಇಲಾಖೆ
ಸಾವಳಗಿ: ಬರಗಾಲದ ನಡುವೆ ಸಸಿಗಳಿಗೆ ನೀರು ಉಣಿಸುತಿರುವ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೌದು ಜಮಖಂಡಿ ತಾಲೂಕಿನ ಸಾವಳಗಿ ಹೋಬಳಿಯ ತುಂಗಳ ಗ್ರಾಮದಲ್ಲಿ ವಲಯ ಅರಣ್ಯಾಧಿಕಾರಿ ಪವನಕುಮಾರ್ ಕುರನಿಂಗ ಅವರ ಮಾರ್ಗದರ್ಶನದಲ್ಲಿ ಬರಗಾಲ ಮದ್ಯೆಯು ಸಸಿಗಳಿಗೆ ನೀರು ಉಣಿಸುತ್ತಿರುವ ಅರಣ್ಯ ಇಲಾಖೆ. ತುಂಗಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಳೆಗಾಲದ ಸಮಯದಲ್ಲಿ ಸಸಿಗಳನ್ನು ನೆಡಲಾಗಿತ್ತು.ಆದರೆ ಮಳೆ ಆಗದೆ ಸಸಿಗಳು ಒಣಗಲು ಪ್ರಾರಂಭಿಸಿದವು ಇದನ್ನು ಮನಗಂಡ ಅಧಿಕಾರಿಗಳು ಸುಮಾರು …
Read More »ಹಿರಿಯ ನಾಗರಿಕರ ರೈಲು ಟಿಕೆಟ್ ವಿನಾಯಿತಿ ರದ್ದು; ಇನ್ಮುಂದೆ ಪ್ರಯಾಣದ ದರ ಎಷ್ಟಿರಲಿದೆ ಗೊತ್ತೇ?
ಹಿರಿಯ ನಾಗರಿಕರಿಗೆ ರೈಲು ಟಿಕೆಟ್ ರಿಯಾಯಿತಿ:ಭಾರತೀಯ ರೈಲ್ವೆ ಇಲಾಖೆಯ ಬೆಳವಣಿಗೆ ಪ್ರತಿದಿನ ಹೆಚ್ಚುತ್ತಿದೆ. ಪ್ರಯಾಣಿಕರ ಟಿಕೆಟ್ಗಳ ಹೊರತಾಗಿ, ಭಾರತೀಯ ರೈಲ್ವೆ ಹಲವು ರೀತಿಯಲ್ಲಿ ಹಣವನ್ನು ಪಡೆದುಕೊಳ್ಳುತ್ತಿದೆ. ಈ ವಿನಾಯಿತಿಯನ್ನು ಹಿಂದೆ ಪಡೆಯುವ ಮೂಲಕ ರೈಲ್ವೆ ಸುಮಾರು ೫,೮೦೦ ಕೋಟಿ ರೂ. ಗಳಿಸಿದೆ ಎಂದು ಖಖಿI ಅಡಿ ಬಹಿರಂಗವಾಗಿದೆ. ಹಿರಿಯ ನಾಗರಿಕರಿಗೆ ರೈಲು ಪ್ರಯಾಣ ದರದಲ್ಲಿ ನೀಡಲಾಗಿದ್ದ ರಿಯಾಯಿತಿಯನ್ನು ಹಿಂಪಡೆದ ನಂತರ ಭಾರತೀಯ ರೈಲ್ವೆಯು ವೃದ್ಧರಿಂದ ೫,೮೦೦ ಕೋಟಿ ರೂ.ಗೂ ಹೆಚ್ಚುವರಿ …
Read More »ಕಾಂಗ್ರೆಸ್ ಬಿ ಫಾರ್ಮ್ ಪಡೆದ ಅಭ್ಯರ್ಥಿಹಿಟ್ನಾಳ : ಮಹಿಳಾ ಘಟಕ ಭಾಗಿ
ಕೊಪ್ಪಳ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ “ಬಿ” ಫಾರ್ಮ ಕೊಡುವ ಮೂಲಕ ಅಧಿಕೃತಗೊಳಿಸಿದ್ದಾರೆ.ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಶರಣೆಗೌಡ ಪಾಟೀಲ, ಕಾಡಾ ಅಧ್ಯಕ್ಷ ಹಸನ್ಸಾಬ ದೋಟಿಹಾಳ, ಕೆಪಿಸಿಸಿ …
Read More »ಡಾ|| ಶಿವಕುಮಾರ ಮಾಲಿಪಾಟೀಲರನ್ನು ಜಿಲ್ಲಾ ಚುನಾವಣಾ ರಾಯಭಾರಿಯನ್ನಾಗಿ ನೇಮಿಸಿರುವುದು ಹರ್ಷದಾಯಕ.
ಗಂಗಾವತಿ: ಮತದಾನದ ಮಹತ್ವವನ್ನು ಎತ್ತಿಹಿಡಿಯುವ “ನನ್ನ ಮತ ಮಾರಾಟಕ್ಕಿಲ್ಲ’ ಎಂಬ ಪುಸ್ತಕ ಬರೆದು, ರಾಜ್ಯಾಧ್ಯಂತ ಸಂಚಲನ ಮೂಡಿಸಿದ ಗಂಗಾವತಿಯ ಕ್ರಿಯಾಶೀಲರಾದ ಸಾಹಿತಿಗಳು, ಸಂಘಟಕರು ಹಾಗೂ ಪರಿಸರ ಪ್ರೇಮಿಗಳು ಹಾಗೂ ದಂತವೈದ್ಯರಾದ ಡಾ|| ಶಿವಕುಮಾರ ಮಾಲಿಪಾಟೀಲರವರನ್ನು ಜಿಲ್ಲಾ ಚುನಾವಣಾ ರಾಯಭಾರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ನಗರದ ಲಯನ್ಸ್ ಕ್ಲಬ್, ಪಬ್ಲಿಕ್ ಕ್ಲಬ್ ಸ್ಪೋರ್ಟ್ಸ್ ಅಕಾಡೆಮಿ, ಚಾರಣ ಬಳಗ, ಕಾವ್ಯಲೋಕ ಸಂಘಟನೆಗಳ ಸದಸ್ಯರು ಸ್ವಾಗತಿಸಿ, ಜಿಲ್ಲಾಡಳಿತ ಉತ್ತಮ ಚುನಾವಣಾ ರಾಯಭಾರಿಯನ್ನು ನೇಮಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಅದೇತರಹ …
Read More »ಕಳೆದ ೭೦ ವರ್ಷಗಳಿಂದ ಮನೆಗಳಪಟ್ಟಾವಿತರಣೆಗೆ ವಿಳಂಭ ಆನೆಗೊಂದಿ ಭಾಗದಐದುಗ್ರಾಮಗಳಲ್ಲಿ ಲೋಕಸಭಾ ಚುನಾವಣೆ ಮತದಾನ ಬಹಿಷ್ಕಾರಕ್ಕೆ ನಿರ್ಧಾರ.
ಗಂಗಾವತಿ: ಕಳೆದ 70 ವರ್ಷಗಳಿಂದ ಆನೆಗೊಂದಿ ಸಾಣಾಪೂರ, ಮಲ್ಲಾಪುರ ಹಾಗೂ ಸಂಗಾಪೂರ ಭಾಗದ ಕೆಲ ಗ್ರಾಮಗಳಲ್ಲಿ ವಾಸ ಮಾಡುವ ನಿವಾಸಿಗಳ ಮನೆಗಳಿಗೆ ಪಟ್ಟ ನೀಡುವಲ್ಲಿ ಕಂದಾಯ ಇಲಾಖೆ ಮತ್ತು ತಾಲೂಕ ಆಡಳಿತ ವಿಳಂಬ ಮಾಡುತ್ತಿದ್ದು ಇದನ್ನು ಖಂಡಿಸಿ ಆನೆಗೊಂದಿ ಭಾಗದ 5 ಗ್ರಾಮಗಳ ಗ್ರಾಮಸ್ಥರು ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕಾರ ಮಾಡಲು ನಿರ್ಧರಿಸಿ ತಹಸಿಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಚಿಕ್ಕರಾಂಪೂರ (ನಂದಯ್ಯನ ಕ್ರಾಸ್) ಗ್ರಾಮದ ನೀಲಪ್ಪ ಹೋಟೆಲ್ …
Read More »ಸುಮಲತಾಅಂಬರೀಶ್ ಬಿಜೆಪಿಸೇರಲಿದ್ದಾರೆ
ಬೆಂಗಳೂರು,: ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ರ್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ , ಈ ಬಾರಿ ಬಿಜೆಪಿಯಿಂದ ಸ್ರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ ಸೇರುತ್ತಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ …
Read More »ಅನ್ಸಾರಿ ನಿವಾಸದಲ್ಲಿ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ಸಭೆ
ಸಿದ್ದ ರಾಮಯ್ಯ ನವರ ಸರಕಾರ ಮುಂದುವರಿಕೆಗೆ ಲೋಕ ಸಮರದ ಟಾಸ್ಕ್ ನೀಡಿದ ಹೈಕಮಾಂಡ್ :ಇಕ್ಬಾಲ್ ಅನ್ಸಾರಿ ಗಂಗಾವತಿ: ಈ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಗೆದ್ದರೆ ಅವರು ಸಿಎಂ ಆಗಿ ಮುಂದುವರಿಯಲಿದ್ದು ಇದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಗೆ ತಾವು ಹಳೆಯದನ್ನು ಮರೆತು ಬೆಂಬಲಿಸಿ ಅಧಿಕ ಮತ ಹಾಕಿಸುವುದಾಗಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದರು.ಅವರು ತಮ್ಮ ನಿವಾಸದಲ್ಲಿ ಲೋಕ ಚುನಾವಣೆಯ ನಿಮಿತ್ತ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಮಾಜಿ ಸಂಸದ ಎಚ್.ಜಿ.ರಾಮುಲು …
Read More »