Breaking News
ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ರಚನೆಗೆ ಚುನಾವಣೆ ವೇಳಾಪಟ್ಟಿ ಪ್ರಕಟ

ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ರಚನೆಗೆ ಚುನಾವಣೆ ವೇಳಾಪಟ್ಟಿ ಪ್ರಕಟ

Election schedule announced for formation of Koppal District Planning Committee


ಕೊಪ್ಪಳ ಡಿಸೆಂಬರ್ 26 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ರಚನೆಗೆ ಚುನಾವಣೆ-2025ರ ವೇಳಾಪಟ್ಟಿ ಪ್ರಕಟಿಸಲಾಗಿದೆ.
 ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಅಧಿನಿಯಮ 1996 (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ನಿಯಮಗಳು 1996ರ ನಿಯಮ 8ರ ಪ್ರಕಾರ ಪುರಸಭೆ ಮತ್ತು ಪಟ್ಟಣ ಪಂಚಾಯತಿ ಮತ ಕ್ಷೇತ್ರದಿಂದ ಕೊಪ್ಪಳ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಗೆ ಸದಸ್ಯರ ಸ್ಥಾನಗಳಿಗೆ ಚುನಾವಣೆಯನ್ನು ನಡೆಸಬೇಕಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ, ಯೋಜನಾ ಸಮಿತಿಯ ಸದಸ್ಯರುಗಳ ಚುನಾವಣೆ) ನಿಯಮಗಳು-1996 ನಿಯಮ 8 ರನ್ವಯ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಯೋಜನಾ ಸಮಿತಿ ಚುನಾವಣೆಗಳ ಪದನಿಮಿತ್ತ ಚುನಾವಣಾ ಅಧಿಕಾರಿ ವರ್ಣಿತ್ ನೇಗಿ ಅವರು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾ ಯೋಜನಾ ಸಮಿತಿ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿರುತ್ತಾರೆ.
 ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ರಚನೆಗೆ ಚುನಾವಣೆ-2025ಕ್ಕೆ ಸಂಬಂಧಿಸಿದಂತೆ ಕಾರಟಗಿ ಪುರಸಭೆ ಮತ್ತು ಕುಕನೂರು, ಕನಕಗಿರಿ, ತಾವರಗೇರಾ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತಿ ಸೇರಿದಂತೆ ಈ ನಗರ ಸ್ಥಳೀಯ ಸಂಸ್ಥೆಗಳ ಪುರಸಭಾ ಕ್ಷೇತ್ರದ ಒಟ್ಟು 96 ಮತದಾರರಿದ್ದು, ಈ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಂದ 6 ಸದಸ್ಯರನ್ನು ಚುನಾಯಿಸಬೇಕಾಗಿದೆ.
*ಚುನಾವಣೆ ವೇಳಾಪಟ್ಟಿ ವಿವರ:* ಕೊಪ್ಪಳ ಜಿಲ್ಲಾ ಯೋಜನಾ ಸಮಿತಿ ರಚನೆಗೆ ಚುನಾವಣೆ-2025 ವೇಳಾಪಟ್ಟಿ ವಿವರ ಇಂತಿದೆ. ನಾಮ ನಿರ್ದೇಶನಗಳನ್ನು ಸಲ್ಲಿಸಲು 2025ರ ಡಿಸೆಂಬರ್ 23 ರಿಂದ 2026ರ ಜನವರಿ 5ರ ವರೆಗೆ ಬೆಳಿಗೆ 10 ರಿಂದ ಅಪರಾಹ್ನ 3 ಗಂಟೆಯವರೆಗೆ ಸಮಯವಕಾಶವಿದ್ದು, ಚುನಾವಣಾಧಿಕಾರಿಗಳು, ಜಿಲ್ಲಾ ಯೋಜನಾ ಸಮಿತಿ ಚುನಾವಣೆ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತಿ, ಕೊಪ್ಪಳ ಇಲ್ಲಿಗೆ ನಾಮ ನಿರ್ದೇಶನಗಳನ್ನು ಸಲ್ಲಿಸಬೇಕು. 2026ರ ಜನವರಿ 6 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿಯಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜನವರಿ 9 ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನಾಂಕವಾಗಿದ್ದು, ಜನವರಿ 13 ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 4 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಪಂಚಾಯತ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಮತದಾನದ ಜರುಗಲಿದೆ. ಜ. 13ರಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯುವ ಮೂಲಕ ಈ ಚುನಾವಣೆ ಪ್ರಕ್ರಿಯ ಕೊನೆಗೊಳ್ಳಲಿದೆ ಎಂದು ಜಿಲ್ಲಾ ಯೋಜನಾ ಸಮಿತಿ ಚುನಾವಣೆಯ ಚುನಾವಣಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
****

ನಗರ ಬೆಳೆದರೆ ನಮ್ಮ ಕಸುಬುಗಳು ಉಳಿಯುತ್ತವೆ: ನಾಗರಾಜ್ ಸವಿತಾ

ನಗರ ಬೆಳೆದರೆ ನಮ್ಮ ಕಸುಬುಗಳು ಉಳಿಯುತ್ತವೆ: ನಾಗರಾಜ್ ಸವಿತಾ

If the city grows, our crafts will survive: Nagaraj Savita

ಕೊಪ್ಪಳ: ನಗರಸಭೆ ಆವರಣದಲ್ಲಿ 26ನೇ ದಿನದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಮತ್ತು ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯೆ ವೇದಿಕೆಯ ಬಲ್ಡೋಟ (ಬಿಎಸ್.ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸಿಂಡಿಯಾ ಇವುಗಳ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಲು ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಿದ ನಗರದ ಸವಿತಾ ಸಮಾಜ ಸಂಘ ಪಾಲ್ಗೊಂಡಿತು. ಸಂಘದ ಅಧ್ಯಕ್ಷ ನಾಗರಾಜ ಸವಿತಾ ಅವರು ಮಾತನಾಡಿ ಕೊಪ್ಪಳ ನಗರ ಯಾವತ್ತೂ ನಮ್ಮಂತವರಿಗೆ ಅನ್ನ ಕೊಟ್ಟಿದೆ. ನಾವು ಹಿರಿಯರ ಕಾಲದಿಂದ ಇಲ್ಲಿ ಬದುಕು ಕಟ್ಟಿಕೊಂಡಿದ್ದೇವೆ. ಗವಿಮಠ ಆಶೀರ್ವಾದ ನಮಗೆ ಇರುವದರಿಂದ ಯಾವತ್ತು ನಮಗೆ ಇಲ್ಲಿ ಅನ್ನದ ಕೊರತೆ ಆಗಿಲ್ಲ. ಆದರೆ ಕೊಪ್ಪಳ ಕಳೆದ ಐದು ವರ್ಷಗಳಿಂದ ಅಭಿವೃದ್ಧಿಯಾಗುವುದು ಕುಂಠಿತಗೊಂಡಿದದೆ. ಇಲ್ಲಿನ ನಿವೇಶನಗಳು ಮಾರಾಟಕ್ಕೆ ಇದ್ದರೂ ಖರೀದಿಸುವವರಿಲ್ಲ. ಕರಿದೂಳು, ಹೊಗೆ, ಬೂದಿ ಬಾಧಿಸುತ್ತಿದ್ದು ಪೂರ್ವ ಭಾಗ ಮತ್ತು ದಕ್ಷಿಣದ ಭಾಗ ಸಂಪೂರ್ಣ ಪಾಳು ಬಿದ್ದಿವೆ. ನಗರ ಬೆಳೆದರೆ ಅಷ್ಟೇ ನಮ್ಮ ಭವಿಷ್ಯ ಮತ್ತು ನಮ್ಮ ಮುಂದಿನ ಪೀಳಿಗೆ ಉಳಿಯುತ್ತವೆ. ಇಲ್ಲದಿದ್ದರೆ ಇಲ್ಲಿ ಬದುಕುವರು ಆತಂಕದಿಂದ ನಗರ ಬಿಟ್ಟು ಬೇರೆ ಕಡೆ ಸ್ಥಳಾಂತರವಾಗುವ ಆಸಕ್ತಿ ತೋರುತ್ತಿದ್ದಾರೆ. ಮುಂದೆ ಇಲ್ಲಿ ಜನವಸತಿ ಇಲ್ಲದಿದ್ದರೆ ನಮ್ಮ ವ್ಯವಹಾರ, ಕಸುಬುಗಳಾದರು ಹೇಗೆ ಉಳಿದಾವು ಎನ್ನುವ ಆತಂಕ ಉಂಟಾಗಿದೆ. ನಾವು ಸ್ವಚ್ಛ ಪರಿಸರ, ಸ್ವಚ್ಛ ಗಾಳಿ, ಸ್ವಚ್ಛ ಪರಿಸರ ಬಯಸಿದರೆ, ಕಾರ್ಖಾನೆಗಳು ಅದರಲ್ಲಿ ಬಲ್ದೋಟ ವಿಸ್ತರಣೆ ಆತಂಕವನ್ನು ಹೆಚ್ಚು ಮಾಡಿದೆ. ಶ್ರೀ ಗವಿಮಠವನ್ನು ಒಳಗೊಂಡು ಇಡೀ ನಗರವನ್ನು ಅಪಾಯಕ್ಕೆ ದೂಡಿದೆ. ಆದ್ದರಿಂದ ನಗರದ ಪ್ರತಿಯೊಬ್ಬರು ನಾವು ಒಗ್ಗಟ್ಟಾಗಿ ಗವಿಶ್ರೀಗಳು ಹೋರಾಟಕ್ಕೆ ಕೊಟ್ಟ ಕರೆಯಂತೆ ಅವರ ವಚನವನ್ನು ಪಾಲಿಸುತ್ತೇವೆ ಎಂದು ಹೇಳಿದರು. ಇನ್ನೊಬ್ಬ ಶಿವಮೂರ್ತಿ ಸವಿತಾ ಅವರು ನಾವು ವೇದಿಕೆ ಮತ್ತು ನಗರದ ಹಿರಿಯರು ನಿರ್ಣಯಿಸಿದಂತೆ ಕೊಪ್ಪಳದಿಂದ ಕಾರ್ಖಾನೆಗಳು ತೊಲಗುವವರೆಗೆ ಹೋರಾಡಲು ಸಿದ್ಧ ಎಂದರು. ಸವಿತಾ ಸಮಾಜ ಸಹಕಾರಿ ಸಂಘದ ಸದಸ್ಯರಾದ ರವಿ ಮೆಡಿಗುಂದ, ಈಶಪ್ಪ ಸವಿತಾ, ವಿಠಲ ಗೌರಿ ಅಂಗಳ, ಶ್ರೀನಿವಾಸ್ ಗೋಪದಿನ್ನಿ, ದೇವಪ್ಪ ಗೌರಿ ಅಂಗಳ, ರಾಘವೇಂದ್ರ ಸವಿತಾ, ಬಡೆಪ್ಪ ಮಲ್ಕಾಪುರ, , ಸಣ್ಣ ಯಲ್ಲಪ್ಪ ಯೋಗಿ ಸವಿತಾ, ಶ್ರೀನಿವಾಸ್ ಸವಿತಾ, ವೆಂಕಟೇಶ್ ಗೋಪದಿನ್ನಿ, ಗವಿಸಿದ್ದಪ್ಪ ಹಿರೇಬಗನಾಳ, ಶಿವಪ್ಪ ದೇವರಮನಿ, ಜಗದೀಶ್ ಕುಂಬಾರ್, ಗಣೇಶ್ ವಿಶ್ವಕರ್ಮ, ಮಹೇಶ್ ವದ್ನಾಳ, ಕಲ್ಲಪ್ಪ ಸವಿತಾ, ಮಂಜುನಾಥ ಸವಿತಾ, ದೇವಪ್ಪ ಸವಿತಾ ಇವರು ಭಾಗವಹಿಸಿದ್ದರು. ಧರಣಿ ನೇತೃತ್ವವನ್ನು ಜಂಟಿ ಕ್ರಿಯಾ ವೇದಿಕೆಯ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು ಸಂಚಲಕರಾದ ಮಲ್ಲಿಕಾರ್ಜುನ ಗೋನಾಳ (ಕೆ.ಬಿ.ಗೋನಾಳ), ರವಿ ಕಾಂತನವರ, ಶಿವಪ್ಪ ಹಡಪದ, ಮಖಬೂಲ್ ರಾಯಚೂರು, ಯಮನೂರಪ್ಪ ಹಾಲಳ್ಳಿ ಬಸಾಪುರ, ಮೂಕಪ್ಪ ಮೇಸ್ತ್ರಿ ಬಸಾಪುರ, ಬಸವರಾಜ ಶೀಲವಂತರ, ಕಾಶಪ್ಪ ಚಲವಾದಿ, ಎಸ್.ಎ.ಗಫಾರ್ ಇದ್ದರು

ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಸಿಡಿಸುವ ಮೂಲಕ ಪರಿಸರ ರಕ್ಷಣೆಗೆ ಮನವಿ
Appeal to protect the environment by bursting green crackers during Diwali festival

ಕೊಪ್ಪಳ ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಪ್ರತಿ ವರ್ಷದಂತೆ ಈ ಬಾರಿಯೂ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ಈಗಾಗಲೇ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಹಸಿರು ಪಟಾಕಿ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಇದ್ದು ಕ್ಯೂಆರ್  ಕೋಡ್ ಇರುವ ಪಟಾಕಿಗಳನ್ನೇ ಉಪಯೋಗಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಹಸಿರು ಪಟಾಕಿಗಳ ಹೊರತು ಪಡಿಸಿ ಉಳಿದ ಪಟಾಕಿಗಳನ್ನು ಬಳಕೆ ಮಾಡಬಾರದು. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಾಟಾಕಿ ಸಿಡಿಸಲು ಅವಕಾಶವಿದ್ದು, ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಪ್ರಾಣಿ ಪಕ್ಷಿಗಳು ಮಕ್ಕಳು ಮತ್ತು ವೃದ್ದರಿಗೆ ತೊಂದರೆಯಾಗದAತೆ ಬಳಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಿಡಿಮದ್ದುಗಳನ್ನು ಸ್ಪೋಟಿಸುವಂತಿಲ್ಲ.


ತಾತ್ಕಾಲಿಕವಾಗಿ ಪಟಾಕಿ ಮಳಿಗೆಗಳನ್ನು ತೆರೆಯುವ ಮಾಲೀಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅನುಮತಿ ಪತ್ರದಲ್ಲಿ ನೀಡಿದ ಷರತ್ತುಗಳನ್ನು ತಪ್ಪದೇ ಪಾಲಿಸಬೇಕು. ಸಾರ್ವಜನಿಕರಿಗೆ ಮತ್ತು ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಸಾಂಪ್ರದಾಯಿಕ ಪಟಾಕಿಗಳಿಗಿಂತ ಹಸಿರು ಪಟಾಕಿಗಳು ಕಡಿಮೆ ಗಾತ್ರದಲ್ಲಿದ್ದು, ಇವುಗಳ ತಯಾರಿಕೆಯಲ್ಲಿ ಬಳಸುವ ರಾಸಾಯನಿಕವು ಶೇ.30 ರಿಂದ 40 ರಷ್ಟು ಕಡಿಮೆ ಪ್ರಮಾಣದಲ್ಲಿರುತ್ತದೆ. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಹೊರಸೂಸುವ ರಾಸಾಯನಿಕ ಹೊಗೆಯಲ್ಲಿ ಧೂಳಿನ ಕಣಗಳು, So2 ಮತ್ತು ಓo2 ಅಂಶಗಳ ಪ್ರಮಾಣವು ಶೇ.30 ರಷ್ಟು ಕಡಿಮೆ ಇರುತ್ತದೆ.
ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ  ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಸಿಡಿಸಲು ವಿನಂತಿಸಲಾಗಿದೆ. ಅಲ್ಲದೇ ದೀಪಾವಳಿ ಹಬ್ಬವನ್ನು ಸಿಡಿಮದ್ದು, ಪಟಾಕಿಗಳನ್ನು ಉಪಯೋಗಿಸದೇ ದೀಪಾವಳಿ ಹಬ್ಬವನ್ನು ದೀಪದ ಹಬ್ಬವನ್ನಾಗಿ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಪ್ಪಳ ಪ್ರಾದೇಶಿಕ ಕಚೇರಿಯ ಜಿಲ್ಲಾ ಪರಿಸರ ಅಧಿಕಾರಿ ವೈ.ಎಸ್. ಹರಿಶಂಕರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Karnataka Minorities Development Corporation: Application submission period extended under various schemes

ಕೊಪ್ಪಳ ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
ನಿಗಮದಿಂದ ಶ್ರಮಶಕ್ತಿ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ (ಟ್ಯಾಕ್ಸಿ,  ಗೂಡ್ಸ್ ವಾಹನ ಖರೀದಿಗೆ ಸಹಾಯಧನ),  ವ್ಯಾಪಾರ, ಉದ್ಯಮಗಳಿಗೆ ನೇರ ಸಾಲ ಯೋಜನೆ,  ವಿದೇಶಿ ವ್ಯಾಸಂಗಕ್ಕಾಗಿ ಸಾಲ ಯೋಜನೆ, ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಸಾಂತ್ವನ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಈ ಯೋಜನೆಗಳಡಿ ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿತ್ತು. ಅರ್ಜಿದಾರರ ಅನುಕೂಲಕ್ಕಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಹಾಗೂ ಅರ್ಹ ಫಲಾನುಭವಿಗಳು ವೆಬ್‌ಸೈಟ್:   kmdconline.karnataka.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ಫಲಾನುಭವಿಗಳು ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು. 18 ರಿಂದ 55 ವರ್ಷ ವಯೋಮಿತಿ ಒಳಗಿರಬೇಕು. ಯೋಜನೆಗಳ ಕುರಿತಾದ ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ದೂ.ಸಂ: 08539-225008 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ನೋಂದಣಿ ಪ್ರಕ್ರಿಯೆ ಪ್ರಾರಂಭ
Karnataka North East Teachers Constituency: Voter Registration Process


ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣೆ ತಂಡ, ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರ ಸ್ಥಾಪನೆ

ಕೊಪ್ಪಳ ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಅಂಗವಾಗಿ ಮತದಾರರ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಮತದಾರರ ನೋಂದಣಿ ಸಂದರ್ಭ ಮತದಾರರ ಗೊಂದಲ, ದೂರು ಪರಿಹರಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣೆ ತಂಡ, ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರ ಸ್ಥಾಪಿಸಲಾಗಿದೆ.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ದಪಡಿಸಬೇಕಾಗಿರುವುದರಿಂದ ಈ ಕಾರ್ಯಕ್ಕಾಗಿ ಅರ್ಹ ಮತದಾರರು ನೋಂದಣಿಗಾಗಿ  ಮಾಹಿತಿ ಕೋರಿದಲ್ಲಿ ಸೂಕ್ತ ಮಾಹಿತಿಯನ್ನು ನೀಡಿ, ಅವರ ಹೆಸರನ್ನು ನೋಂದಾಯಿಸಲು ಸಹ ಮತದಾರರ ನೋಂದಣಿ ಪ್ರಕ್ರಿಯೆ ಪ್ರಾರಂಭದಿAದ ಲಿಖಿತವಾಗಿ, ಮೌಖಿಕವಾಗಿ ಹಾಗೂ ದೂರವಾಣಿ ಮುಖಾಂತರ ಸ್ವೀಕೃತವಾಗುವಂತಹ ದೂರುಗಳ ಮೇಲೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಲು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇಲ್ಲಿ ಮೇಲ್ವಿಚಾರಣೆ ತಂಡ ಹಾಗೂ ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರ æ(Complaints Monitoring Cell & Voters helpdesk)     ಸ್ಥಾಪಿಸಲಾಗಿದೆ.
ಕಾರಣ ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ–2026 ರ ಈ ಚುನಾವಣೆಗೆ ಸ್ವೀಕೃತವಾಗುವ ದೂರು ಹಾಗೂ ಮತದಾರರ ನೋಂದಣಿ ಕಾರ್ಯಕ್ಕಾಗಿ ಹಾಗೂ ಮತದಾರರ ಪಟ್ಟಿಗಳ ಕುರಿತು ಮಾಹಿತಿ ಪಡೆಯಲು ಇಚ್ಛಿಸುವವರು ಕಛೇರಿ ಸಮಯದಲ್ಲಿ ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರದ ಮೂಲಕ ಹಾಗೂ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ: 08539-221895 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಮೇಲ್ವಿಚಾರಣೆ ತಂಡಗಳ ಯಶಸ್ವಿ ಕಾರ್ಯಾಚರಣೆಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಮೇಲ್ವಿಚಾರಣೆ ತಂಡದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಮಲ್ಲಪ್ಪ ಗುಂಡೂರ, ಮೊ.ಸಂ: 9731353397, ಜಿಲ್ಲಾ ನಗರಾಭಿವೃದ್ಧಿ ಕೋಶದ ಪುರಸಭೆ ತಹಶೀಲ್ದಾರ ರವಿ ಅಂಗಡಿ ಮೊ.ಸಂ: 9449294410 ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಸೀನಿಯರ್ ಪ್ರೊಗ್ರಾಮರ್ ರಾಘವೇಂದ್ರ ಮೊ.ಸಂ: 9538387488 ಇವರನ್ನು ನಿಯೋಜಿಸಲಾಗಿದೆ.
ತಾಲ್ಲೂಕು ಮಟ್ಟದ ಮೇಲ್ವಿಚಾರಣೆ ತಂಡದಲ್ಲಿ ಕೊಪ್ಪಳ ತಾಲ್ಲೂಕಿನಲ್ಲಿ ಗ್ರೇಡ್-2 ತಹಶೀಲ್ದಾರ ಗವಿಸಿದ್ದಪ್ಪ ಮಣ್ಣೂರ, ಮೊ.ಸಂ: 9449974896, ಚುನಾವಣಾ ಶಿರಸ್ತೇದಾರ ಸತೀಶ್ ಮೊ.ಸಂ: 9845791349, ಚುನಾವಣಾ ಆಪರೇಟರ್ ಮೌಲಾಹುಸೇನ ಮೊ.ಸಂ: 9108520419, ಗಂಗಾವತಿ ತಾಲ್ಲೂಕಿನಲ್ಲಿ ಗ್ರೇಡ್-2 ತಹಶೀಲ್ದಾರ ಮಹಾಂತಗೌಡ ಮೊ.ಸಂ: 9449622639, ಚುನಾವಣಾ ಶಿರಸ್ತೇದಾರ ರವಿಕುಮಾರ ಮೊ.ಸಂ: 9964221162, ಚುನಾವಣಾ ಆಪರೇಟರ್ ಮುತ್ತುರಾಜ್ ಕುರಿ ಮೊ.ಸಂ: 8884300019, ಕುಷ್ಟಗಿ ತಾಲ್ಲೂಕಿನಲ್ಲಿ ಗ್ರೇಡ್-2 ತಹಶೀಲ್ದಾರ ರಜನಿಕಾಂತ ಮೊ.ಸಂ: 9880655756, ಚುನಾವಣಾ ಶಿರಸ್ತೇದಾರ ಮಂಜುನಾಥ ನಂದನ್ ಮೊ.ಸಂ: 9449393400, ಚುನಾವಣಾ ಆಪರೇಟರ್ ಶರಣಬಸವ ಎಸ್ ಮೊ.ಸಂ: 8296536512, ಯಲಬುರ್ಗಾ ತಾಲ್ಲೂಕಿನಲ್ಲಿ ಗ್ರೇಡ್-1 ತಹಶೀಲ್ದಾರ ಬಸವರಾಜ ತೆನ್ನಳ್ಳಿ ಮೊ.ಸಂ: 8745932368, ಚುನಾವಣಾ ಶಿರಸ್ತೇದಾರ ವಿಜಯಕುಮಾರ ಮೊ.ಸಂ: 9449689289, ಚುನಾವಣಾ ಆಪರೇಟರ್ ಕಳಕನಗೌಡ ಮೊ.ಸಂ: 9535285818, ಕನಕಗಿರಿ ತಾಲ್ಲೂಕಿನಲ್ಲಿ ಗ್ರೇಡ್-1 ತಹಶೀಲ್ದಾರ ವಿಶ್ವನಾಥ ಮುರಡಿ ಮೊ.ಸಂ: 8197787999, ಚುನಾವಣಾ ಶಿರಸ್ತೇದಾರ ಶರಣಪ್ಪ ಮೊ.ಸಂ: 9916630442, ಚುನಾವಣಾ ಆಪರೇಟರ್ ಸಿದ್ದರಾಮನಗೌಡ ಮೊ.ಸಂ: 6362501720, ಕಾರಟಗಿ ತಾಲ್ಲೂಕಿನಲ್ಲಿ ಗ್ರೇಡ್-1 ತಹಶೀಲ್ದಾರ ಕುಮಾರಸ್ವಾಮಿ ಮೊ.ಸಂ: 9449670777, ಚುನಾವಣಾ ಶಿರಸ್ತೇದಾರ ಉಮಾಮಹೇಶ ಮೊ.ಸಂ: 9743600343, ಚುನಾವಣಾ ಆಪರೇಟರ್ ಸಿದ್ದರಾಮನಗೌಡ ಮೊ.ಸಂ: 6362501720, ಕುಕನೂರು ತಾಲ್ಲೂಕಿನಲ್ಲಿ ಗ್ರೇಡ್-2 ತಹಶೀಲ್ದಾರ ಮುರಳೀಧರ ಕುಲಕರ್ಣಿ ಮೊ.ಸಂ: 8792613069, ಚುನಾವಣಾ ಶಿರಸ್ತೇದಾರ ಸುರೇಶ ಬಾಳೆಹೊಸೂರ ಮೊ.ಸಂ: 9902488347, ಚುನಾವಣಾ ಆಪರೇಟರ್ ಕಳಕನಗೌಡ ಮೊ.ಸಂ: 9535285818 ಇವರನ್ನು ನಿಯೋಜಿಸಲಾಗಿದೆ.
ಮೇಲಿನಂತೆ ನೇಮಕ ಮಾಡಲಾಗಿರುವಂತ ದೂರು ಮೇಲ್ವಿಚಾರಣೆ ತಂಡ ಹಾಗೂ ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರ ತಕ್ಷಣದಿಂದಲೇ ಕಾರ್ಯನಿರ್ವಹಿಸಿ ಲಿಖಿತವಾಗಿ, ಮೌಖಿಕವಾಗಿ, ದೂರವಾಣಿ ಮುಖಾಂತರ ಸ್ವೀಕೃತವಾಗುವಂತಹ ಎಲ್ಲಾ ರೀತಿಯ ಸಲಹೆ ಹಾಗೂ ದೂರುಗಳಿಗೆ ದಾಖಲಾಧಾರಿತವಾದ ವಹಿಯನ್ನು ನಿರ್ವಹಿಸಿ ನಿಯಮಾನುಸಾರ ವಿಲೇಗೊಳಿಸಿ ಕಾಲೋಚಿತಗೊಳಿಸಲು ಸೂಚಿಸಲಾಗಿದ್ದು ಸಾರ್ವಜನಿಕರು ಈ ತಂಡದ ಮುಖಾಂತರ ಮತದಾರರ ನೋಂದಣಿ ಹಾಗೂ ಚುನಾವಣೆ ಕುರಿತಾದ ಮಾಹಿತಿ ಹಾಗೂ ದೂರನ್ನು ದಾಖಲಿಸಬಹುದೆಂದು ಜಿಲ್ಲಾಧಿಕಾರಿಗಳು ಹಾಗೂ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ
Special lightning voter registration campaign

ಕೊಪ್ಪಳ ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ಸಿದ್ದಪಡಿಸುವ ವೇಳಾಪಟ್ಟಿಯನ್ವಯ ಅಕ್ಟೋಬರ್ 1 ರಿಂದ ನವೆಂಬರ್ 6 ರವರೆಗೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಅರ್ಹ ಮತದಾರರ ನೋಂದಣಿಗಾಗಿ ಅವಕಾಶ ಕಲ್ಪಿಸಲಾಗಿದೆ.
ಅದರನ್ವಯ ದಿನಾಂಕ:14-10-2025 ರವರೆಗೆ ನಿರೀಕ್ಷಿತ ಮಟ್ಟದಲ್ಲಿ ನೋಂದಣಿಗಾಗಿ ನಮೂನೆ-19 ರ ಅರ್ಜಿಗಳು ಸ್ವೀಕೃತಿಯಾಗದ ಕಾರಣ ನೋಂದಣಿ ಪ್ರಕ್ರಿಯೆಯ ಕಾರ್ಯವೇಗವನ್ನು ತೀವ್ರಗತಿಯಲ್ಲಿ ಚುರುಕುಗೊಳಿಸುವುದು ಅತ್ಯವಶ್ಯವಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ, ಅವರ ಹೆಸರನ್ನು ನೋಂದಾಯಿಸಿ, ಯಾವೊಬ್ಬ ಅರ್ಹ ಮತದಾರರು ನೋಂದಣಿ ಪ್ರಕ್ರಿಯೆಯಿಂದ ಹೊರಗಿರದೇ ಅಂಥವರನ್ನು ನೋಂದಾಯಿಸಿ ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಕ್ರಿಯಾತ್ಮಕ ಕಾರ್ಯನಿರ್ವಹಿಸುವುದು ಅತ್ಯಾವಶ್ಯಕವಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 27, 30 ಹಾಗೂ ನವೆಂಬರ್ 3 ರಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೊಳಪಡುವ ಸಂಪೂರ್ಣ ಕ್ಷೇತ್ರದಲ್ಲಿ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.
ವಿಶೇಷ ಮಿಂಚಿನ ನೋಂದಣಿ ಅಭಿಯಾನ ದಿನಾಂಕಗಳAದು ಆಯುಕ್ತರು, ಮಹಾನಗರ ಪಾಲಿಕೆ, ತಹಶೀಲ್ದಾರರು ಹಾಗೂ ಸಹಾಯಕ ಮತದಾನ ನೋಂದಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಗೊಳಪಡುವ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳ ಸೇವೆಯನ್ನು ಪಡೆದು ಅವರೊಂದಿಗೆ ಉಪ ತಹಶೀಲ್ದಾರರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಹಾಗೂ ಇತರ ಅಧಿಕಾರಿಗಳ ತಂಡವನ್ನು ರಚಿಸಿ(ಅವಶ್ಯಕತೆಗನುಗುಣವಾಗಿ) ಅರ್ಹ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಅಲ್ಲಿ ನೋಂದಣಿಗಾಗಿ ಅರ್ಹರಿರುವ ಮತದಾರರನ್ನು ಕಚೇರಿ ಮುಖ್ಯಸ್ಥರ ಮುಖಾಂತರ ಸಂಪರ್ಕಿಸಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ಬೀಡುಬಿಟ್ಟು ನಿಯಮಾನುಸಾರ ನಮೂನೆ-19 ರ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಸ್ವೀಕರಿಸಬೇಕು.
ಜಿಲ್ಲಾಧಿಕಾರಿಗಳು ಆದೇಶವೊಂದನ್ನು ಹೊರಡಿಸಿ ಪ್ರತಿ ತಾಲ್ಲೂಕಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ವಿಶೇಷ ಮಿಂಚಿನ ನೋಂದಣಿ ಅಭಿಯಾನದ ಮೇಲುಸ್ತುವಾರಿಯ ನೋಡಲ್ ಅಧಿಕಾರಿಯೆಂದು ನೇಮಿಸಿ, ತಾವು ಸಂಪೂರ್ಣ ಜಿಲ್ಲಾ ವ್ಯಾಪ್ತಿಗೆ ಹಾಗೂ ಸಹಾಯಕ ಆಯುಕ್ತರು ತಮ್ಮ ತಮ್ಮ ಉಪ ವಿಭಾಗ ವ್ಯಾಪ್ತಿಗೆ ಈ ಅಭಿಯಾನದ ಮೇಲುಸ್ತುವಾರಿ ವಹಿಸಬೇಕು. ಮಿಂಚಿನ ನೋಂದಣಿ ಪ್ರಕ್ರಿಯೆಯು ಯಶಸ್ವಿಯಾಗಿ ಪೂರ್ಣಗೊಳಿಸಲು ಎಲ್ಲರೂ ಶ್ರಮವಹಿಸಿ ಕ್ರಿಯಾತ್ಮಕವಾಗಿ, ಆಶಾದಾಯಕ ನಿರಾಳ ಸದುದ್ದೇಶದೊಂದಿಗೆ ಕಾರ್ಯನಿರ್ವಹಿಸಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಮತ್ತು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

17 ವರ್ಷದ ಬಾಲಕಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸೆಗಿರುವ ಘಟನೆಎ ಐ ಎಂ ಎಸ್ ಎಸ್  ಜಿಲ್ಲಾ ಸಂಘಟನಾಕಸಮಿತಿ ಇಂದ ಖಂಡನೆ
AIMSS District Organizing Committee condemns the incident of assault and rape of a 17-year-old girl

ಕೊಪ್ಪಳ:ಕುಷ್ಟಗಿ ತಾಲೂಕಿನ ಮಾಟೂರು ಗ್ರಾಮದ ಬೀರಪ್ಪ ಇಲಕಲ್ ಎಂಬಾತ 17 ವರ್ಷದ ಬಾಲಕಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸೆಗಿರುವ ಘಟನೆಯನ್ನು ಎ ಐ ಎಂ ಎಸ್ ಎಸ್ (ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ) ಕೊಪ್ಪಳ ಜಿಲ್ಲಾ ಸಂಘಟನಾ ಸಮಿತಿಯು ಅತ್ಯುಗ್ರವಾಗಿ ಖಂಡಿಸುತ್ತದೆ ಎಂದು  ಜಿಲ್ಲಾ ಕಾರ್ಯದರ್ಶಿಶಾರದಾ ಗಡ್ಡಿಯವರು ಹೇಳಿದರು.

ಮುಂದು ಮಾತನಾಡಿ  ದೋಟಿಹಾಳ ಗ್ರಾಮ ಪಂಚಾಯತಿಯಲ್ಲಿ ಕರವಸೂಲಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿ ಹತ್ತಿ ಬಿಡಿಸುವ ಕೆಲಸಕ್ಕೆ ಹೋಗಿ ಬಾಲಕಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಆಕೆಯನ್ನು ಬಲವಂತವಾಗಿ ಎಳೆದೊಯ್ದು, ಆಕೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಿಗಿದ್ದಾನೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆದರೆ ಇದು ಇಷ್ಟಕ್ಕೆ ಸೀಮಿತಗೊಳ್ಳದೆ ಶೀಘ್ರಗತಿಯಲ್ಲಿ ತನಿಖೆಯನ್ನು ನಡೆಸಿ ಆರೋಪಿಗೆ ಅತ್ಯುಗ್ರ ಶಿಕ್ಷೆಯನ್ನು ವಿಧಿಸಬೇಕು, ಸಂತ್ರಸ್ತ ಬಾಲಕಿಗೆ ನ್ಯಾಯ ಒದಗಿಸಬೇಕೆಂದು
ಎ ಐ ಎಂ ಎಸ್ ಎಸ್ ಆಗ್ರಹಿಸುತ್ತದೆ.

ಹೆಣ್ಣನ್ನು ತನ್ನ ಆಸ್ತಿ ಎಂದೇ ಪರಿಗಣಿಸುವ ಪುರುಷ ಪ್ರಧಾನ ಮನೋಧೋರಣೆ, ಜಾತಿ ವೈಶಮ್ಯ, ಇಂದಿನ ಸಾಮಾಜಿಕ ಮಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುವ ಅಶ್ಲೀಲ ಸಿನಿಮಾ -ಸಾಹಿತ್ಯ, ಪೋರ್ನ್ ವೆಬ್ಸೈಟ್ ಗಳು, ಮದ್ಯ – ಮಾದಕ ವಸ್ತುಗಳು, ಇಂತಹ ಹಲವಾರು ಕಾರಣಗಳು ಎಷ್ಟೋ ಹೆಣ್ಣು ಜೀವಗಳನ್ನು ಪ್ರತಿ ಕ್ಷಣವು ಬಲಿ ತೆಗೆದುಕೊಳ್ಳುತ್ತಿವೆ. ಪ್ರಕರಣಗಳ ತನಿಖೆ, ಶಿಕ್ಷೆ ನೀಡುವಲ್ಲಿನ ವಿಳಂಬ ಹಾಗೂ ಸುಲಭವಾಗಿ ಸಿಗುವ ಜಾಮೀನು, ಅಪರಾಧಿಗಳಿಗೆ ಮತ್ತಷ್ಟು ಬಲ ತುಂಬುತ್ತಿವೆ. ಇತ್ತೀಚಿಗೆ ಮೈಸೂರಿನ ದಸರಾ ಸಂದರ್ಭದಲ್ಲಿ ಬಲೂನು ಮಾರಲು ಬಂದಿದ್ದ ಬಾಲಕಿಯ ಮೇಲಿನ ಅತ್ಯಾಚಾರ, ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವಿದ್ಯಾರ್ಥಿನಿಯ ಹಾಗೂ ಮುದ್ದೇಬಿಹಾಳದ ಬನೋಶಿ ಗ್ರಾಮದಲ್ಲಿ 17 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರಗಳೇ ಇದಕ್ಕೆ ಸಾಕ್ಷಿ. ಈ ಪಟ್ಟಿ ಹೀಗೆ ಬೆಳೆಯುತ್ತಾ ಹೋಗುತ್ತಿದ್ದರು ಸರ್ಕಾರಗಳ ದಿವ್ಯ ನಿರ್ಲಕ್ಷ್ಯ ಮಾತ್ರ ಅತ್ಯಂತ ಖಂಡನೀಯ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜನತೆ ಒಗ್ಗಟ್ಟಾಗಿ ಹೋರಾಟಗಳನ್ನು ಕಟ್ಟಬೇಕು, ಮೂಕ ಪ್ರೇಕ್ಷಕರಾಗಿರುವ ಸರ್ಕಾರಗಳಿಗೆ ಎಚ್ಚರಿಕೆಯ ಗಂಟೆಯನ್ನು ಬಾರಿಸುವ ಜರೂರು ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಜನತೆ ಮುಂದೆ ಬರಬೇಕು ಎಂದು ಎ ಐ ಎಂ ಎಸ್ ಎಸ್ ಕರೆ ನೀಡುತ್ತದೆ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎ ಐ ಎಂ ಎಸ್ ಎಸ್) ಜಿಲ್ಲಾ ಕಾರ್ಯದರ್ಶಿ ಶಾರದಾ ಗಡ್ಡಿಯವರು  ಪ್ರಕಟಣೆ  ಮೂಲಕ ತಿಳಿಸಿದ್ದಾರೆ.

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎ ಐ ಎಂ ಎಸ್ ಎಸ್) ಜಿಲ್ಲಾ ಕಾರ್ಯದರ್ಶಿ ಶಾರದಾ ಗಡ್ಡಿ


 

ಅಕ್ಟೋಬರ್. 29 ರಿಂದ 31 ರವರೆಗೆ ಕೊಪ್ಪಳ ಜಿಲ್ಲೆಗೆ ಉಪ ಲೋಕಾಯುಕ್ತರ ಭೇಟಿ,ಹೆಚ್ಚಿನ ಪ್ರಚಾರ ನೀಡಿ- ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ
Upa Lokayukta to visit Koppal district from Oct. 29 to 31, give more publicity - Upa Lokayukta Justice B. Veerappa


ಕೊಪ್ಪಳ ಅಕ್ಟೋಬರ್ 10 (ಕರ್ನಾಟಕ ವಾರ್ತೆ): ಅಕ್ಟೋಬರ್ 29. ರಿಂದ 31 ರವರೆಗೆ ನಾವು ಕೊಪ್ಪಳ ಜಿಲ್ಲೆಗೆ ಭೇಟಿ ನೀಡುತ್ತಿರುವ ಮಾಹಿತಿಯನ್ನು ಸ್ಥಳೀಯವಾಗಿ ಆಯಾ ತಾಲ್ಲೂಕಿನ ತಹಶೀಲ್ದಾರರು ಮತ್ತು ಗ್ರಾಮ ಪಂಚಾಯತಿ ಹಂತದಲ್ಲಿ ಹೆಚ್ಚಿನ ಪ್ರಚಾರ ಮಾಡಿ ಈ ಮಾಹಿತಿ ಜನರಿಗೆ ತಿಳಿಯುವಂತಾಗಬೇಕೆAದು ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು.
 ಅವರು ಗುರುವಾರ ಲೋಕಾಯುಕ್ತ ಕಚೇರಿ ಬೆಂಗಳೂರಿನಿಂದ ಕೊಪ್ಪಳ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.
 ಲೋಕಾಯುಕ್ತ ಕಛೇರಿಯಲ್ಲಿ ಕೊಪ್ಪಳ ಜಿಲ್ಲೆಯ 105 ಕೇಸಗಳು ಪೆಂಡಿಂಗ್ ಇವೆ. ಕಂದಾಯ ಇಲಾಖೆ, ತಹಶಿಲ್ದಾರರು, ಸಹಾಯಕ ಆಯುಕ್ತರು ಸೇರಿದಂತೆ ಎಲ್ಲಾ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ಅವುಗಳನ್ನು ಕ್ಲಿಯರ್ ಆಗಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಮಾತ್ರೆಗಳು ಸಿಗದಿದ್ದರೆ ಹೊರಗಡೆ ಬರೆದು ಕೊಡುತ್ತಾರೆ, ಹಾಗೆ ಆಗಭಾರದು. ಆಸ್ಪತ್ರೆಯಲ್ಲಿ ಔಷಧಿಗಳನ್ನು ಕೊಡಬೇಕು. ಕೆಲವು ವೈದ್ಯರು ಕೇಂದ್ರ ಸ್ಥಾನದಲ್ಲಿ ಇರುವುದಿಲ್ಲ. ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಅಂಬುಲೆನ್ಸ್ ಇವೆಯಾ. ಜಿಲ್ಲೆಯಲ್ಲಿ ಎಷ್ಟು ನಕಲಿ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನುವುದನ್ನು ಪಟ್ಟಿ ಮಾಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
 ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸರಿಯಾಗಿ ಆಹಾರ ವಿತರಿಸುವುದರ ಜೊತೆಗೆ ಸ್ವಚ್ಚತೆ ಇರುವಂತೆ ನೋಡಿಕೊಳ್ಳಬೇಕು. ಶಿಕ್ಷಣ ಇಲಾಖೆಯಲ್ಲಿ ಶಾಲೆಯ ಎಷ್ಟು ಕಟ್ಟಡಗಳು ಮಳೆಯಿಂದ ಬಿದ್ದು ಹೋಗಿವೆ. ನಗರಸಭೆಯವರು ಎಷ್ಟು ಖಾಸಗಿ ಭೂಮಿ ಅತಿಕ್ರಮಣ ಆಗಿದೆ ಎನ್ನುವುದರ ಮಾಹಿತಿ ನೀಡಬೇಕು. ಆಹಾರ ಸುರಕ್ಷತೆಯ ಅಧಿಕಾರಿಗಳು ಹೋಟೆಲ ಮತ್ತು ರಸ್ತೆಯ ಪಕ್ಕದಲ್ಲಿ ಆಹಾರ ತೈಯಾರಿಸುವವರು ಜನರು ತಿನ್ನುವ ಆಹಾರದಲ್ಲಿ ಕಲರ್ ಹಾಕುತ್ತಾರೆ ಅದೆಲ್ಲವನ್ನು ಹಾಕಬಾರದು ಇದನ್ನು ಎಲ್ಲಾ ಕಡೆ ಹೋಗಿ ಪರಿಶೀಲನೆ ಮಾಡಬೇಕೆಂದು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಹೇಳಿದರು.
 ಕೆಲವೊಂದು ಗ್ರಾಮ ಪಂಚಾಯತಿಗಳಲ್ಲಿ ಸರಿಯಾದ ದಾಖಲೆಗಳನ್ನು ನಿರ್ವಹಿಸುತ್ತಿಲ್ಲ. ಒಂದು ಬೋರವೆಲ್ ವರ್ಷದಲ್ಲಿ ಎಷ್ಟು ಸಲ ಕೆಡಬಹುದು ಆದರೆ ಇವರು ತಿಂಗಳಲ್ಲಿ ಎರಡು ಸಲ ಕೆಟ್ಟಿದೆ ಎಂದು ಅನಾವಶ್ಯಕವಾಗಿ ಬಿಲ್ಲುಮಾಡಿ ದುಡ್ಡು ಹೊಡೆಯುವ ಮೂಲಕ ಪಿಡಿಒ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರು ಸೇರಿ ಜನರು ಕಟ್ಟಿದ ತೆರಿಗೆಯಲ್ಲಿ ಇವರು ಹಗಲು ದರೋಡೆ ಮಾಡುತ್ತಾರೆ. ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಸಾರ್ವಜನಿಕರ ಪ್ರತಿ ನಿಧಿಗಳು. ಈ ಕುರಿತು ಮಾಹಿತಿ ಪಡೆಯುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
 ಅರಣ್ಯ ಇಲಾಖೆಯ ಸರಕಾರಿ ಭೂಮಿ ಜಿಲ್ಲೆಯಲ್ಲಿ ಎಷ್ಟು ಒತ್ತುವರಿಯಾಗಿದೆ. ಜಿಲ್ಲೆಯಲ್ಲಿ ಎಷ್ಟು ಫ್ಯಾಕ್ಟರಿಗಳು, ಕ್ವಾರಿ, ಗಣಿಗಳಿವೆ, ಇದರಲ್ಲಿ ಲೀಗಲ್, ಇಲ್ಲಿಗಲ್ ಎಷ್ಟಿವೆ. ಜಿಲ್ಲೆಯಲ್ಲಿ ಎಷ್ಟು ವಾಹನಗಳಿವೆ ಎನ್ನುವುದರ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಬೇಕು. ಕೃಷಿ ಇಲಾಖೆಯಲ್ಲಿ ಜನರು ಅರ್ಜಿ ಹಾಕಿದವರಿಗೆ ಲೋನ ಕೊಡಲ್ಲ. ಅರ್ಜಿ ಹಾಕದವರಿಗೆ ಲೋನ ಕೊಡುತ್ತಿರಾ. ಬೆಳೆ ಪರಿಹಾರವನ್ನು ಹಾಗೆ ಮಾಡುತ್ತಿರಾ, ಬೆಳೆ ಹಾಳಾದವರಿಗೆ ಪರಿಹಾರ ಬಂದಿರುವುದಿಲ್ಲ. ಆದರೆ ಪಕ್ಕದ ಹೊಲದವರಿಗೆ ಪರಿಹಾರ ಬಂದಿರುತ್ತದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
 ಕಾರ್ಮಿಕ ಇಲಾಖೆಯಿಂದ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಲೇಬರ್ ಕಾರ್ಡ ವಿತರಿಸಿದ್ದಿರಾ. ಎಷ್ಟು ಜನ ಕಾರ್ಮಿಕರಿದ್ದಾರೆ. ಅವರಿಗೆ ಇಎಸ್‌ಐ ಮತ್ತು ಪಿ.ಎಫ್ ಮಾಡಿಸಲಾಗಿದೆಯಾ. ಅವರಿಗೆ ಇನ್ಸೂರೆನ್ಸ್ ಸಹ ಮಾಡಿಸಬೇಕು. ಎಪಿಎಂಸಿ ಹಮಾಲರಿಗೂ ಇನ್ಸೂರೆನ್ಸ ಮಾಡಿಸಿ ಎಂದು ಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೊಲೀಸರು ಸಿವಿಲ್ ಡಿಸಪ್ಯೂಟಗಳಲ್ಲಿ ಎಂಟರ್ ಆಗುತ್ತಾರೆ, ಅವರಿಗೆ ಇದರಲ್ಲಿ ಭಾಗಿಯಾಗದಂತೆ ನಿರ್ದೆಶನ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೇಳಿದರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕುರಿತು ಎಲ್ಲಾ ಅಧಿಕಾರಿಗಳನ್ನು ಕರೆಸಿ ಮತ್ತೆ ಸಭೆ ಮಾಡಿ ಯಾವುದೇ ಕೇಸಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು ಮತ್ತು ಈ ಕುರಿತು ಹೆಚ್ಚಿನ ಪ್ರಚಾರ ನೀಡಬೇಕೆಂದು ಹೇಳಿದರು.
 ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಿAದ ವಿಡಿಯೋ ಸಂವಾದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ಜಿಲ್ಲೆಯಿಂದ ತಮ್ಮಲ್ಲಿ ದಾಖಲಾದ 105 ಕೇಸಗಳನ್ನು ಪೆಂಡಿಂಗ್ ಉಳಿಯದಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಇತರೆ ಎಲ್ಲಾ ಅಧಿಕಾರಿಗಳು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತೆವೆ ಹಾಗೂ ತಾವು ಅಕ್ಟೋಬರ್ 29 ರಿಂದ 31 ರವರೆಗೆ ಜಿಲ್ಲೆಗೆ ಆಗಮಿಸುವ ಮಾಹಿತಿಯನ್ನು ಹೆಚ್ಚಿನ ರೀತಿಯಲ್ಲಿ ಪ್ರಚಾರ ಮಾಡಲಾಗುವುದು ಎಂದು ಹೇಳಿದರು.
 ಈ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಜಿಲ್ಲಾ ಪಂಚಾಯತ ನೋಜನಾ ನಿರ್ದೆಶಕ ಪ್ರಕಾಶ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಅಜ್ಜಪ್ಪ ಸೊಗಲದ ಸೇರಿದಂತೆ ಜಿಲ್ಲಾ ಮಟ್ಟದ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಗೌರಿಶಂಕರ ಮಹಿಳಾ ಸಂಘದಿಂದ ಶಿಕ್ಷಕರ ದಿನಾಚರಣೆ
Teachers' Day celebrated by Gourishankar Women's Association

ಕೊಪ್ಪಳ: ಇಲ್ಲಿನ ಬನ್ನಿಕಟ್ಡಿ ಹತ್ತಿರದ ಗೌರಿಶಂಕರ ಮಹಿಳಾ ಸಂಘದಿಂದ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ಸುಧೀಂದ್ರ ಕುಮಾರ್ ದೇಸಾಯಿ, ಬಾಲನಾಗಮ್ಮ, ಗಾಯತ್ರಿ ಶಿವನಗುತ್ತಿ, ಶೀಲಾ ಹಾಲಿಗೇರಿ, ವಿಜಯ್ ಕುಮಾರ್ ಪದಕಿ ಮತ್ತು ಲತಾ ಮಟ್ಟಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ವಕೀಲರಾದ ವಿ. ಎಂ. ಭೂಸನೂರಮಠ ಅವರು, ಶಿಕ್ಷಕರೆಂದರೆ ಎರಡನೇ‌ ತಾಯಿ ತಂದೆಯರಿದ್ದಂತೆ, ಅವರು ದೇಶವನ್ನು ಕಟ್ಟುವ ನಿಜವಾದ ಶಕ್ತಿವಂತರು ಮತ್ತು ಅವರಿಗೆ ತಾಯಿ ಮನಸ್ಸು ಇದ್ದರೆ ಖಂಡಿತ ಎಲ್ಲರ ಬಾಳು ಬೆಳಗುತ್ತದೆ ಎಂದರು. ಸಂಘದ ಅಧ್ಯಕ್ಷೆ ಗೌರಿ ಅಮರೇಶ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯರಾದ‌ ಮಲ್ಲಿಕಾರ್ಜುನ ಸಜ್ಜನ್, ಉಪಾಧ್ಯಕ್ಷರಾದ ಶೋಭಾ ಸೊಪ್ಪಿಮಠ ಇದ್ದರು. ಪೂಜಾ ಕುರಗೋಡ ಸ್ವಾಗತಿಸಿದರು, ಸೌಮ್ಯ ನಾಲ್ವಾಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು, ಕಾವ್ಯ ಸಜ್ಜನ್ ನಿರೂಪಿಸಿದರು, ದೀಪಾ ಬಳ್ಳಾಬಳ್ಳಿ ವಂದಿಸಿದರು. ಸಂಘದ ಪ್ರಮುಖರಾದ ಸೌಮ್ಯ ಅಳವಂಡಿ, ಶ್ವೇತಾ ಕೋಣಂಗಿ, ಪ್ರತೀಕ್ಷಾ, ಸರಸ್ವತಿ ಕುರಗೋಡ, ಭಾಗ್ಯ ಶಿಗನಹಳ್ಳಿ ಕಾರ್ಯಕ್ರಮ ನಡೆಸಿದರು.

ಸೆ.20 ರಂದು ವಿದ್ಯಾರ್ಥಿಗಳಿಗಾಗಿ ಮ್ಯಾರಥಾನ್ ಸ್ಪರ್ಧೆ
Marathon competition for students on September 20
ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ನ್ಯಾಕೋ ಅವರ ಮಾರ್ಗಸೂಚಿಯಂತೆ ಹೆಚ್.ಐ.ವಿ./ಏಡ್ಸ್ ,ಕುರಿತು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್.ಐ.ವಿ. ಮತ್ತು ಏಡ್ಸ್ (ತಡೆ) ಕಾಯ್ದೆ 2017, NACO AIDS APP, , ಉಚಿತ ರಾಷ್ಟಿçÃಯ ಸಹಾಯವಾಣಿ 1097, ಎಸ್‌ಟಿಐ, ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲಾಗುತ್ತಿದ್ದು, ಅದರ ಅಂಗವಾಗಿ ಜಿಲ್ಲಾ, ರಾಜ್ಯ, ಪ್ರಾದೇಶಿಕ ಹಾಗೂ ರಾಷ್ಟçಮಟ್ಟದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.
ಅದರಂತೆ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಡಳಿತ ಭವನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ 17-25 ವರ್ಷದ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬೇಕು. ಮ್ಯಾರಥಾನ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮೊದಲ ಬಹುಮಾನ ರೂ.5,000/-, ದ್ವಿತೀಯ ಬಹುಮಾನ ರೂ.3,500/- ಹಾಗೂ ತೃತೀಯ ಬಹುಮಾನ ರೂ.2,500/- ಗಳನ್ನು ನೀಡಲಾಗುವುದು.
ಸ್ಪರ್ಧೆಯಲ್ಲಿ ವಿಜೇತರಾದ ಮೊದಲನೇ ಬಹುಮಾನ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಭಾಗವಹಿಸಬೇಕಾಗಿರುತ್ತದೆ. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಪಿ.ಎಫ್.ಎಂ.ಎಸ್. ಮುಖಾಂತರ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿನ ಗುರುತಿನ ಚೀಟಿ, ಆಧಾರ್‌ಕಾರ್ಡ್ ಹಾಗೂ ಕಾಲೇಜಿನ ಪ್ರಾಂಶುಪಾಲರ ಧೃಢೀಕರಣ ಪತ್ರಗಳೊಂದಿಗೆ ಹಾಜರಾಗಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ದೈಹಿಕ ಆರೋಗ್ಯ ಅರ್ಹತಾ (‍Fitness Certificate) ಪ್ರಮಾಣಪತ್ರವನ್ನು ಕಡ್ಡಾಯವಾಗಿ ತರಬೇಕು. ತಪ್ಪಿದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿರುವುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9449846981, 9481732070 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.