೨೫೦ ನಕಲಿ ಪಾಸ್‌ಗಳನ್ನು ವಶಪಡಿಸಿಕೊಂಡ ವಿಧಾನಸೌಧ ಭದ್ರತಾ ತಂಡ
Vidhansouda security team seized 250 fake passes

ಬೆಂಗಳೂರು, ಜುಲೈ ೧೫: ರಾಜ್ಯದ ಆಡಳಿತ ಕೇಂದ್ರವಾದ ವಿಧಾನಸೌಧದ ಭದ್ರತಾ ಪಡೆ ೨೫೦ಕ್ಕೂ ಹೆಚ್ಚು ನಕಲಿ ಪಾಸ್‌ಗಳನ್ನು ವಶಪಡಿಸಿಕೊಂಡಿದ್ದು, ಈ ಘಟನೆಯ ನಂತರ, ಪೊಲೀಸರು ಇಂತಹ ನಕಲಿ ಪಾಸ್‌ ಬಳಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ೪ ಜುಲೈ ೭ ರಂದು ೭೨ ರ‍್ಷದ ತಿಪ್ಪೇರುದ್ರ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಭದ್ರತೆಯನ್ನು ಉಲ್ಲಂಘಿಸಿ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಿದ ನಂತರ ವಿಧಾನಸೌಧ ಭದ್ರತಾ ಅಧಿಕಾರಿಗಳು ಅರ‍್ಟ್ ಆಗಿದ್ದಾರೆ. ಅದೇ ದಿನ ಸ್ಪೀಕರ್ ಯುಟಿ ಖಾದರ್ ಸಭೆ ನಡೆಸಿ ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದರು.
ಈ ಬಗ್ಗೆ ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ಎಸ್‌ಡಿ ಶರಣಪ್ಪ, ನಾವು ಸಾಮಾನ್ಯವಾಗಿ ಕಟ್ಟುನಿಟ್ಟಾದ ಭದ್ರತಾ ತಪಾಸಣೆಗಳನ್ನು ಹೊಂದಿರುತ್ತೇವೆ. ಬಜೆಟ್ ಅಧಿವೇಶನದಲ್ಲಿ ನಡೆದ ಘಟನೆಯ ನಂತರ, ನಾವು ಭದ್ರತೆಯನ್ನು ಹೆಚ್ಚಿಸಿದ್ದೇವೆ ಮತ್ತು ತಪಾಸಣೆಯನ್ನು ತೀವ್ರಗೊಳಿಸಿದ್ದೇವೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ನಾವು ಸುಮಾರು ೨೫೦ ನಕಲಿ ಪಾಸ್‌ಗಳನ್ನು ಪತ್ತೆ ಮಾಡಿ ಅವುಗಳನ್ನು ವಶಪಡಿಸಿಕೊಂಡಿದ್ದೇವೆ. ಹಲವಾರು ನೌಕರರು ಮತ್ತು ಶಾಸಕರ ಸಿಬ್ಬಂದಿ ಕೂಡ ಹಳೆಯ ಪಾಸ್‌ಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ಇಂತಹ ಘಟನೆಗಳು ಮರುಕಳಿಸಿದರೆ ನಾವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು. ಎಂಎಲ್‌ಎ, ಎಂಎಲ್‌ಸಿ‌ಗಳಿಗೆ ನೀಡಿರುವ ಪಾಸ್‌ಗಳನ್ನು ಕಲರ್ ಜೆರಾಕ್ಸ್ ಮಾಡಿ‌ ವಿಧಾನಸೌಧ ಬರುತ್ತಿದ್ದರು. ನಕಲಿ ಪಾಸ್‌ಗಳನ್ನ ಬಳಸಿ ಒಳ ಪ್ರವೇಶಿಸುವವರ ನಿಯಂತ್ರಣಕ್ಕೆ ವಿಧಾನಸೌಧಕ್ಕೆ ಪ್ರವೇಶ ನೀಡುವ ಎಲ್ಲಾ ಗೇಟ್‌ಗಳಲ್ಲಿ ಪ್ರತಿಯೊಬ್ಬರ ಪರಿಶೀಲನೆ ನಡೆಸಲಾಗುತ್ತಿದೆ. ಅವಧಿ‌ ಮುಗಿದಿರುವ ಪಾಸ್, ಕಲರ್ ಜೆರಾಕ್ಸ್ ಪಾಸ್‌ಗಳನ್ನು ಪೊಲೀಸರು ಸೀಜ್‌ ಮಾಡಿದ್ದಾರೆ. ಹಲವು ರಾಜಕಾರಣಿಗಳ ಬೆಂಬಲಿಗರಿಂದ ನಕಲಿ ಪಾಸ್‌ಗಳ ಬಳಕೆಯಾಗುತ್ತಿದೆ ಎನ್ನಲಾಗಿದೆ. ಸದ್ಯ ನಕಲಿ ಪಾಸ್‌ ಬಳಸುತ್ತಿದ್ದ ಎಲ್ಲರ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪರಿಶೀಲನೆ ನಂತರ ಮಾಜಿ ಎಂಎಲ್ಎ, ಎಂಎಲ್‌ಸಿ ಪಾಸ್‌ಗಳೇ ನಕಲಿಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ವಿಧಾನಸೌಧ ಸಿಬ್ಬಂದಿ ಎಂದೇ ನಕಲಿ ಪಾಸ್ ಬಳಕೆ ಮಾಡಿರುವುದು ಕಂಡುಬಂದಿದೆ.
ಈ ನಕಲಿ ಪಾಸ್‌ಗಳ ಹಿಂದಿನ ಉದ್ದೇಶ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವಿಧಾನಮಂಡಲ ಜಂಟಿ ಅಧಿವೇಶನದೊಳಕ್ಕೆ ಬಜೆಟ್ ಮಂಡನೆ ದಿನವೇ (ಜುಲೈ ೦೭) ಅನುಮಾನಾಸ್ಪದ ವ್ಯಕ್ತಿ ಆಗಮಿಸಿದ್ದ ಬೆನ್ನಲ್ಲೆ ಜುಲೈ ೧೦ರಂದು ಮಹಿಳೆಯೊಬ್ಬಳು ವಿಧಾನಸೌಧಕ್ಕೆ ಚಾಕು ಇಟ್ಟುಕೊಂಡು ಬಂದಿದ್ದ ಘಟನೆ ನಡೆದಿತ್ತು. ಸೋಮವಾರ ಎಂದಿನಂತೆ ವಿಧಾನಸೌಧ ಕರ‍್ಯಕಲಾಪಗಳು ಆರಂಭವಾಗಿದ್ದವು.
ಈ ವೇಳೆ ವಿಧಾನನೌಧ ಪ್ರವೇಶಿಸಲು ಆಗಮಿಸಿದ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಆಕೆಯನ್ನು ಅಲ್ಲಿದ್ದ ಭದ್ರತಾ ಸಿಬ್ಬಂದಿ ವಾಪಸ್ ಕಳುಹಿಸಿದ್ದರು. ಸದನಕ್ಕೆ ಶಾಸಕರ ಸೋಗಿನಲ್ಲಿ ವ್ಯಕ್ತಿಯೊಬ್ಬ ಪ್ರವೇಶಿಸಿದ ಹಿನ್ನೆಲೆಯಲ್ಲಿ ಭದ್ರತಾ ತಪಾಸಣೆ ಕರ‍್ಯ ಚುರುಕುಗೊಳಿಸಲಾಗಿದೆ. ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಪ್ರವೇಶಿಸುವ ಪ್ರತಿ ವ್ಯಕ್ತಿ ಹಾಗೂ ವಾಹನಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಒಳ ಬಿಡಲಾಗುತ್ತಿದೆ.
ವಿಧಾನಸೌಧ ಪ್ರವೇಶಿಸುವ ಎಲ್ಲಾ ಗೇಟ್‌ಗಳಲ್ಲಿ ರ‍್ತವ್ಯ ನರ‍್ವಹಿಸುವ ಸಿಬ್ಬಂದಿಗೆ ತಪಾಸಣೆ ಬಿಗಿಗೊಳಿಸುವಂತೆ ಸೂಚಿಸಲಾಗಿದೆ. ಕಾರು ಕೊಟ್ಟಿಲ್ಲ ಎಂದು ನಿಕಾಹ್ ಸಮಾರಂಭ ನಡೆದು ಎರಡು ಗಂಟಗಳಲ್ಲೇ ತ್ರಿವಳಿ ತಲಾಖ್ ಘೋಷಿಸಿದ ವರ! ಅಲ್ಲದೆ, ಬ್ಯಾಗ್ ಸೇರಿ ಇನ್ನಿತರ ವಸ್ತುಗಳನ್ನು ಇಟ್ಟುಕೊಂಡು ಅನುಮಾನಾಸ್ಪವಾಗಿ ಬರುವ ಎಲ್ಲರನ್ನು ಲೋಹಪರಿಶೋಧಕ ಯಂತ್ರಗಳ ಪರೀಕ್ಷೆಗೆ ಒಳಪಡಿಸಬೇಕು. ಅಲ್ಲದೆ, ಬ್ಯಾಗ್‌ಗಳನ್ನು ಕಡ್ಡಾಯವಾಗಿ ಸ್ಕ್ಯಾನಿಂಗ್‌ಗೆ ಒಳಪಡಿಸಬೇಕು. ಅಧಿಕೃತ ಗುರುತಿನ ಚೀಟಿ ಅಥವಾ ಪಾಸ್‌ ಇದ್ದರೆ ಮಾತ್ರ ಒಳಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.

ಪಶ್ಚಿಮ ಮೆಲ್ಬೋರ್ನ್ನಲ್ಲಿ ವಿಂಡ್ಯಮ್ ಕನ್ನಡ ಬಳಗ ಉದ್ಘಾಟನೆ
Inauguration of Wyndham Kannada Balaga in West Melbourne

ವಿದೇಶದಲ್ಲೂ ಕನ್ನಡದ ಕಂಪು ಬೀರುವವರೇ ಕನ್ನಡದ ರಾಯಭಾರಿಗಳು: ನಾಡೋಜ ಡಾ. ಮಹೇಶ ಜೋಶಿ

ಬೆಂಗಳೂರು: ಉದ್ಯೋಗ ಅರಸಿ ದೇಶ ಬಿಟ್ಟು ವಿದೇಶಕ್ಕೆ ಬಂದರೂ ಸ್ವಂತಿಕೆಯನ್ನು ಬಿಡದೇ ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಳ್ಳುವ ಮೂಲಕ ನಿಜವಾದ ಕನ್ನಡಭಾಷೆಯ ರಾಯಭಾರಿಗಳು ಎಂದು ಪಶ್ಚಿಮ ಮೆಲ್ಬೋರ್ನ್ನಲ್ಲಿ ನೆಲೆಸಿರುವ ವಿಂಡ್ಯಮ್ ಕನ್ನಡ ಬಳಗದ ಸದಸ್ಯರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶ್ಲಾಘಿಸಿದರು.
ಇಂದು ಆಸ್ಟ್ರೇಲಿಯಾ ದೇಶದ ವಿಕ್ಟೋರಿಯಾ ರಾಜ್ಯದ ರಾಜಧಾನಿಯಾದ ಪಶ್ಚಿಮ ಮೆಲ್ಬೋರ್ನ್ನಲ್ಲಿ ವಿಂಡ್ಯಮ್ ಪ್ರದೇಶದ ಕನ್ನಡಿಗರು ಸೇರಿ ಕಟ್ಟಿರುವ ʻವಿಂಡ್ಯಮ್ ಕನ್ನಡ ಬಳಗʼವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು, ವಿಂಡ್ಯಮ್ ಪ್ರದೇಶದಲ್ಲಿ ಹೆಚ್ಚು ಕನ್ನಡಿಗರು ನೆಲೆ ನಿಂತು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಕಳೆದ ೧೫ ವರ್ಷಗಳಿಂದ ಇಲ್ಲಿ ನೆಲೆ ನಿಂತಿರುವ ಕನ್ನಡಿಗರು ಪ್ರತೀ ವರ್ಷವೂ ರಾಜ್ಯೋತ್ಸವವನ್ನು ಆಚರಿಸುತ್ತಾ ಕನ್ನಡದ ಅಭಿಮಾನವನ್ನು ಮೆರೆಯುತ್ತಿದ್ದಾರೆ. ಮೆಲ್ಬೋರ್ನ್ನಲಿ ೨೦ ಸಾವಿರಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸವಿದ್ದು ಇದು ಆಸ್ಟ್ರೇಲಿಯಾದಲ್ಲಿಯೇ ಅತಿ ಹೆಚ್ಚು ಕನ್ನಡಿಗರು ವಾಸವಾಗಿರುವ ಪ್ರದೇಶವಾಗಿದೆ. ತಮ್ಮ ನಾಡು-ನುಡಿಯ ಮೇಲೆ ಅಪಾರ ಗೌರವವನ್ನು ಇಲ್ಲಿನ ಕನ್ನಡಿಗರು ಉಳಿಸಿಕೊಂಡಿದ್ದಾರೆ. ಅದಕ್ಕೆ ಕಾರಣ, ಇಲ್ಲಿನ ಕನ್ನಡಿಗರಲ್ಲಿ ಕಂಡು ಬರುವ ಕನ್ನಡಾಭಿಮಾನ. ನಾಡು ನುಡಿ, ಪರಂಪರೆ, ಸಂಸ್ಕೃತಿ, ಕಲೆ, ಸಾಹಿತ್ಯ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕನ್ನಡ ಭಾಷೆಯ ಗೌರವವನ್ನು ಕಾಂಗರೂ ನಾಡಿನಲ್ಲಿ ಗಟ್ಟಿಗೊಳಿಸಿದ್ದಾರೆ ಎಂದು ನಾಡೋಜ ಡಾ. ಮಹೇಶ ಜೋಶಿ ಅಭಿಪ್ರಾಯಪಟ್ಟರು.
ಕುವೆಂಪು ಅವರ ನುಡಿ ʻಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಕನ್ನಡವೇ ಸತ್ಯ ಕನ್ನಡವೇ ನಿತ್ಯʼ ಎನ್ನುವಂತೆ ಕನ್ನಡದ ಕೆಲಸಗಳಲ್ಲಿ ನಿರಂತರ ತೊಡಗಿರುವ ವಿಂಡ್ಯಮ್ ಕನ್ನಡ ಬಳಗ ಕನ್ನಡ ಭಾಷೆಯನ್ನು ಮಕ್ಕಳಿಗೆ ಕಲಿಸುತ್ತಿದ್ದಾರೆ. ನಮ್ಮ ಸಂಸ್ಕೃತಿ-ಪರಂಪರೆಯನ್ನು ಮರೆಯಬಾರದು ಎನ್ನುವ ಕಾರಣಕ್ಕೆ ಕಾಲಕಾಲಕ್ಕೆ ಕನ್ನಡ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದ್ದಾರೆ. ಈ ಪ್ರದೇಶದಲ್ಲಿ ಇರುವ ಕನ್ನಡಿಗರ ಮಕ್ಕಳಿಗೆ ಹಾಗೂ ಕನ್ನಡ ಭಾಷಾಭಿಮಾನ ಇರುವ ಇತರರಿಗೂ ಕನ್ನಡ ಕಲಿಸುವ ಕೆಲಸವನ್ನು ವಿಂಡ್ಯಮ್ ಕನ್ನಡ ಬಳಗ ಮಾಡುತ್ತ ಬಂದಿದೆ. ಇಂತಹ ಕನ್ನಡಿಗರ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ಹೆಮ್ಮೆಯನ್ನು ವ್ಯಕ್ತ ಪಡಿಸುತ್ತದೆ, ಅವರ ಕನ್ನಡದ ಕೈಂಕರ್ಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜೊತೆಯಾಗಿರಲಿದೆ ಎಂದರು.
ಈ ಬಾರಿ ಮಂಡ್ಯದಲ್ಲಿ ನಡೆಯಲಿರುವ ೮೭ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಮೆಲ್ಬೋರ್ನ್ ವೆಸ್ಟ್ನಲ್ಲಿ ನೆಲೆಸಿರುವ ವಿಂಡ್ಯಮ್ ಕನ್ನಡ ಬಳಗದ ಪದಾಧಿಕಾರಿಗಳನ್ನು ಹಾಗೂ ಸದಸ್ಯರುಗಳಿಗೆ ಮತ್ತು ಮೆಲ್ಬೋರ್ನ್ನಲ್ಲಿ ನೆಲೆಸಿರುವ ಕನ್ನಡಿಗರಿಗೆ ಗೌರವಪೂರ್ವಕ ಆಹ್ವಾನವನ್ನು ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಆಹ್ವಾನಕ್ಕೆ ವಿದೇಶಲ್ಲಿ ನೆಲೆಸಿರುವ ಸಮಸ್ತ ಕನ್ನಡಿಗರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ತಿಳಿಸಿದ್ದಾರೆ.
ವಿಂಡ್ಯಮ್ ಕನ್ನಡ ಬಳಗ ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಚೇತನಾ ಪ್ರಭಾಕರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮೆಲ್ಬೋರ್ನ್ನ ವೆಸ್ಟ್ನಲ್ಲಿ ನೆಲೆಸಿರುವ ವಿಂದಮ್ ಕನ್ನಡ ಬಳಗದ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ವಿಂದಮ್ ಕನ್ನಡ ಬಳಗವು ತಾವು ನೆಲೆಸಿರುವ ನೆಲದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದಕ್ಕೆ ಕಾರ್ಯಯೋಜನೆಯನ್ನು ಹಮ್ಮಿಕೊಂಡಿದ್ದು ಕನ್ನಡ ಕಲಿಸುವುದರ ಜೊತೆಗೆ ಕನ್ನಡ ಭಾಷೆಯ ಕುರಿತ ಎಲ್ಲಾ ಆಯಾಮವನ್ನು ಮಕ್ಕಳಲ್ಲಿ ತಿಳಿಸಿ ಹೇಳುವ ಕೆಲಸ ಮಾಡಲಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಕಾರ್ಯಕ್ರಮವನ್ನು ನಡೆಸುವುದಕ್ಕೆ ಯೋಜನೆ ರೂಪಿಸಲಾಗಿದೆ ಎಂದರು.
ವಿಂಡ್ಯಮ್ ಕನ್ನಡ ಬಳಗ ಕೋಶಾಧ್ಯಕ್ಷ ಶ್ರೀ ಅನಿಲ ಕುಮಾರ ಮಾತನಾಡಿ, ನಮ್ಮ ಬಳಗದ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ಅಪಾರ ವಿಶ್ವಾಸವನ್ನು ಇರಿಸಿದೆ. ಕನ್ನಡ ಕಟ್ಟುವ ಕೆಲಸದಲ್ಲಿ ನಾವೆಲ್ಲಾ ಸಾಹಿತ್ಯ ಪರಿಷತ್ತಿನ ಜೊತೆ ಕೈಜೋಡಿಸಿ ಕೆಲಸ ಮಾಡಲಿದ್ದೇವೆ. ಭಾಷೆ ಕಟ್ಟಿ ಬೆಳೆಸುವಲ್ಲಿ ಕಾರ್ಯವನ್ನು ಶ್ರದ್ಧಾಭಕ್ತಿಯಿಂದ ಒಪ್ಪಿಕೊಂಡು ಕಾರ್ಯ ಮಾಡಲಿದ್ದೇವೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳು ನಮಗೆ ಕನ್ನಡದ ಕೆಲಸ ಮಾಡಲು ಪ್ರೋತ್ಸಾಹ ನೀಡುತ್ತಿವೆ. ನಾವೆಲ್ಲರೂ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆಗೆ ಇರಲು ಇಷ್ಟಪಡುತ್ತೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೆಲ್ಬೋರ್ನ್ನ ವಿಂಡ್ಯಮ್ ಕನ್ನಡ ಬಳಗದ ಗೌರವ ಕಾರ್ಯದರ್ಶಿಗಳಾದ ವನಿತಾ ಗಣೇಶರಾವ್, ನಿರ್ದೇಶಕರುಗಳಾದ ಶ್ರೀ ಮುಕುಂದ ವೆಂಕಟಾಚಾರ್, ಕೀರ್ತನಾರಾವ್ ಸಿಂದ್ಯಾ, ಸದಸ್ಯರುಗಳಾದ ಪ್ರಭಾಕರ ಯಾದವಾಡ, ಗಣೇಶ ಕೃಷ್ಣಯ್ಯ, ರಮೇಶ ರಾಮಕೃಷ್ಣಯ್ಯ, ಕೃಪಾ ಕೃಷ್ಣಯ್ಯ, ಉಷಾ ಗೌಡ ಇತರರು ಉಪಸ್ಥಿತರಿದ್ದರು.

ಛಾಯಾಚಿತ್ರ: ಆಸ್ಟ್ರೇಲಿಯಾ ಏಶಿಯಾದ ಮೆಲ್ಬೋರ್ನ್ ವೆಸ್ಟ್ನ ವಿಂಡ್ಯಮ್ ಪ್ರದೇಶದ ಕನ್ನಡಿಗರು ಸೇರಿ ಕಟ್ಟಿರುವ ವಿಂಡ್ಯಮ್ ಕನ್ನಡ ಬಳಗವನ್ನು ವಿಲಿಯನ್ಸ್ ಲ್ಯಾಂಡಿಂಗ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಉದ್ಘಾಟಿಸಿದರು