ಕನಕಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಖಾಸಗಿ ಅಭ್ಯರ್ಥಿಗಳಿಗೆ ಅವಕಾಶ

Kanakagiri: Private candidates allowed to apply for ITI admission

ಕನಕಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಖಾಸಗಿ ಅಭ್ಯರ್ಥಿಗಳಿಗೆ ಅವಕಾಶ


ಕೊಪ್ಪಳ ಮಾರ್ಚ್ 16 (ಕರ್ನಾಟಕ ವಾರ್ತೆ): ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2025–26ನೇ ಸಾಲಿಗೆ ಐಟಿಐ ವಿವಿಧ ವೃತ್ತಿಯಲ್ಲಿ ತರಬೇತಿಗಳಿಗಾಗಿ ಪ್ರವೇಶ ಬಯಸುವ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
 ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಅರ್ಹ ಖಾಸಗಿ ಅಭ್ಯರ್ಥಿಗಳ ಪ್ರವೇಶಾತಿಯನ್ನು ತೆಗೆದುಕೊಳ್ಳಲಾಗುತ್ತಿದ್ದು, ಡಿಜಿಟಿ ಮಾರ್ಗಸೂಚಿಗಳ ಪ್ರಕಾರ ಐಟಿಐ ತರಬೇತಿಗೆ ಸಂಬಂಧಿಸಿದ ಕೆಲವು ವೃತ್ತಿಗಳಲ್ಲಿ ಅನುಭವ ಮತ್ತು ಇತರ ಅರ್ಹತೆ ಹೊಂದಿರುವ ಕನಕಗಿರಿ ತಾಲ್ಲೂಕಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅರ್ಹ ಅಭ್ಯರ್ಥಿಗಳ ಡಿಜಿಟಿ ಮಾರ್ಗ ಸೂಚಿಗಳ ಪ್ರಕಾರ ಪ್ರವೇಶಾತಿಯನ್ನು ಕೈಗೊಳ್ಳಲಾಗುತ್ತದೆ.
 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 20 ಆಗಿದ್ದು, ಆಸಕ್ತ ಅಭ್ಯರ್ಥಿಗಳು ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8904448925 ಅಥವಾ 9448259832 ಗೆ ಸಂಪರ್ಕಿಸಬಹುದಾಗಿದೆ ಎಂದು ಕನಕಗಿರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೆಫ್ರಿಜರೇಷನ್, ಏರ್ ಕಂಡೀಷನಿಂಗ್ & ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Applications invited for Refrigeration, Air Conditioning & Sheep Farming Training

ರೆಫ್ರಿಜರೇಷನ್, ಏರ್ ಕಂಡೀಷನಿಂಗ್ & ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ


ಕೊಪ್ಪಳ ಮಾರ್ಚ್ 16 (ಕರ್ನಾಟಕ ವಾರ್ತೆ): ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ 30 ದಿನಗಳ ಉಚಿತ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ಹಾಗೂ ಕುರಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ.
 ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗಾಗಿ ಏಪ್ರಿಲ್ ತಿಂಗಳಿನಲ್ಲಿ 30 ದಿನಗಳ ಉಚಿತ ತರಬೇತಿಗಳು ಪ್ರಾರಂಭಿಸಲಾಗುತ್ತಿದ್ದು, ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.

ಸ್ವಯಂ ಉದ್ಯೋಗ ಮಾಡಲು ಈ ತರಬೇತಿಯು ಅನುಕೂಲವಾಗಲಿದ್ದು, 18 ರಿಂದ 50 ವಯಸ್ಸಿನ ಒಳಗಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
 ಈ ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿAದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
 ತರಬೇತಿಯಲ್ಲಿ ಭಾಗವಹಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ದೂರವಾಣಿ ಸಂಖ್ಯೆ: 8217236973, 9483485489, 9482188780 ಗೆ ಮಾರ್ಚ್ 30 ರೊಳಗಾಗಿ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳೊಂದಿಗೆ ನೋಂದಾಯಿಸಬಹುದಾಗಿದೆ ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಗಂಗಾವತಿ: ಐಟಿಐ ಪ್ರವೇಶಕ್ಕೆ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Gangavathi: Applications invited from private candidates for ITI admissions

ಗಂಗಾವತಿ: ಐಟಿಐ ಪ್ರವೇಶಕ್ಕೆ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ


ಕೊಪ್ಪಳ ಮಾರ್ಚ್ 16 (ಕರ್ನಾಟಕ ವಾರ್ತೆ): ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2025–26ನೇ ಸಾಲಿಗೆ ಐಟಿಐ ವಿವಿಧ ವೃತ್ತಿಯಲ್ಲಿ ತರಬೇತಿಗಳಿಗಾಗಿ ಪ್ರವೇಶ ಬಯಸುವ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಅರ್ಹ ಖಾಸಗಿ ಅಭ್ಯರ್ಥಿಗಳ ಪ್ರವೇಶಾತಿಯನ್ನು ತೆಗೆದುಕೊಳ್ಳಲಾಗುತ್ತಿದ್ದು, ಡಿಜಿಟಿ ಮಾರ್ಗಸೂಚಿಗಳ ಪ್ರಕಾರ ಐಟಿಐ ತರಬೇತಿಗೆ ಸಂಬಂಧಿಸಿದ ಕೆಲವು ವೃತ್ತಿಗಳಲ್ಲಿ ಅನುಭವ ಮತ್ತು ಇತರ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅರ್ಹ ಅಭ್ಯರ್ಥಿಗಳ ಡಿಜಿಟಿ ಮಾರ್ಗ ಸೂಚಿಗಳ ಪ್ರಕಾರ ಪ್ರವೇಶಾತಿಯನ್ನು ಕೈಗೊಳ್ಳಲಾಗುತ್ತದೆ.
 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 20 ಆಗಿದ್ದು, ಆಸಕ್ತ ಅಭ್ಯರ್ಥಿಗಳು ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8904448925 ಅಥವಾ 9448259832 ಗೆ ಸಂಪರ್ಕಿಸಬಹುದಾಗಿದೆ ಎಂದು ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕ ಅದಾಲತ್‌ನಲ್ಲಿ 49,953 ಪ್ರಕರಣಗಳ ಇತ್ಯರ್ಥ

49,953 cases disposed of in Lok Adalat

ಲೋಕ ಅದಾಲತ್‌ನಲ್ಲಿ 49,953 ಪ್ರಕರಣಗಳ ಇತ್ಯರ್ಥ


ಕೊಪ್ಪಳ ಮಾರ್ಚ್ 16 (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿದೆ.
 ಈ ಸಂದರ್ಭದಲ್ಲಿ ಒಟ್ಟು 7 ಪ್ರಕರಣಗಳಲ್ಲಿ ಗಂಡ-ಹೆಂಡತಿಯರು ತಮ್ಮ ಮನಸ್ತಾಪವನ್ನು ಬಿಟ್ಟು, ಮಧ್ಯಸ್ಥಿಕೆಗಾರರು, ವಕೀಲರು ಹಾಗೂ ನ್ಯಾಯಾಧೀಶರು ನೀಡಿದ ಸೂಕ್ತ ಮಾರ್ಗದರ್ಶನದ ಹಿನ್ನೆಲೆಯಲ್ಲಿ ಮತ್ತೆ ಒಟ್ಟಿಗೆ ಬಾಳು ನಡೆಸಲು ಒಪ್ಪಿಕೊಂಡಿರುವುದು ವಿಶೇಷವಾಗಿತ್ತು.
 ನ್ಯಾಯಾಲಯಗಳಲ್ಲಿ ನಡೆಯುತ್ತಿದ್ದ ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್, ಜನನ-ಮರಣ, ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಸೇರಿದಂತೆ ವಿವಿಧ ರೀತಿಯ ಒಟ್ಟು 5123 ಪ್ರಕರಣಗಳ ಪೈಕಿ 3032 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
 ಇದೇ ವೇಳೆ ವಿಮೆ, ನೀರಿನ ಕರ, ಮೋಟಾರ್ ವಾಹನ ಅಪಘಾತ ಸೇರಿದಂತೆ ವಿವಿಧ ಪೂರ್ವ ದಾವೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 52,194 ಪ್ರಕರಣಗಳ ಪೈಕಿ 46,921 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಯಿತು. ಇತ್ಯರ್ಥಗೊಂಡ ಪ್ರಕರಣಗಳ ಒಟ್ಟು ಮೌಲ್ಯ 3,21,81,082 ರೂ. ಆಗಿದೆ.
 ಒಟ್ಟಾರೆ ಒಂದೇ ದಿನದಲ್ಲಿ ನಡೆದ ಈ ಲೋಕ ಅದಾಲತ್‌ನಲ್ಲಿ ಒಟ್ಟು 57,316 ಪ್ರಕರಣಗಳ ಪೈಕಿ 49,953 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇತ್ಯರ್ಥಗೊಂಡ ಪ್ರಕರಣಗಳ ಒಟ್ಟು ಮೌಲ್ಯ 44,44,49,017 ರೂ. ಆಗಿದೆ.
 ಈ ಬಾರಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ಸಹಕರಿಸಿದ ಗೌರವಾನ್ವಿತ ನ್ಯಾಯಾಧೀಶರು, ವಕೀಲರು, ಕಕ್ಷಿಗಾರರು ಹಾಗೂ ಮಧ್ಯಸ್ಥಿಕೆಗಾರ ವಕೀಲರಿಗೆ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಲ್ಕು ವರೆ ಕೋಟಿ ವೆಚ್ಚದಲ್ಲಿ ಸೇತುವೆ ಮತ್ತು ಸಿಸಿ ರಸ್ತೆ ಕಾಮಾಗಾರಿಗೆ ಗುದ್ದಲಿ ಪೂಜೆ :ಶಾಸಕ ಎಮ್ ಆರ್ ಮಂಜುನಾಥ್ .

Hudali puja for bridge and CC road work at a cost of four and a half crores: MLA MR Manjunath.

ನಾಲ್ಕು ವರೆ ಕೋಟಿ ವೆಚ್ಚದಲ್ಲಿ ಸೇತುವೆ ಮತ್ತು ಸಿಸಿ ರಸ್ತೆ ಕಾಮಾಗಾರಿಗೆ ಗುದ್ದಲಿ ಪೂಜೆ :ಶಾಸಕ ಎಮ್ ಆರ್ ಮಂಜುನಾಥ್


ವರದಿ: ಬಂಗಾರಪ್ಪ .ಸಿ.
ಹನೂರು:ಕ್ಷೇತ್ರವ್ಯಾಪ್ತಿಯಲ್ಲಿನಲೊಕ್ಕನಹಳ್ಳಿ–ಒಡೆಯರಪಾಳ್ಯ ಮಾರ್ಗ ಮಧ್ಯದಲ್ಲಿರುವ ಮಸ್ಕಿತಹಳ್ಳ ಮತ್ತು ಜಡೆತಡೆ ಹಳ್ಳಗಳಿಗೆ ಅಡ್ಡಲಾಗಿ ದಾಟುವ ಸೇತುವೆ ಕಾಮಗಾರಿ ಹಾಗೂ ಮತ್ತೊಂದು ಸೇತುವೆಯನ್ನು ಮೇಲ್ಜರ್ಜೆಗೆರಿಸುವ ಕಾಮಗಾರಿಗೆ ಸುಮಾರು ಅಂದಾಜುವೆಚ್ಚ 04 ಕೋಟಿ ರೂಗಳ ವೆಚ್ಚದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಹನೂರು ತಾಲೂಕಿನ ಪಿಜಿ ಪಾಳ್ಯದ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ
ಬಳಿಕ ಮಾತನಾಡಿದ ಶಾಸಕರು, ಪಿಜಿ ಪಾಳ್ಯ–ಒಡೆಯರಪಾಳ್ಯ ಮುಖ್ಯ ರಸ್ತೆ ನೆರೆಯ ತಮಿಳುನಾಡು ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ದಿನನಿತ್ಯ ಅಪಾರ ಸಂಖ್ಯೆಯ ವಾಹನಗಳು ಹಾಗೂ ನೂರಾರು ಗೂಡ್ಸ್ ವಾಹನಗಳು ಸಂಚರಿಸುತ್ತವೆ. ಆದರೆ ಮಳೆಗಾಲದಲ್ಲಿ ಹಳ್ಳಗಳಲ್ಲಿ ರಭಸವಾಗಿ ನೀರು ಹರಿದು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಎಂದರು.

ಈ ಹಿನ್ನೆಲೆಯಲ್ಲಿ ಜಡೆತಡೆ ಹಳ್ಳಕ್ಕೆ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ ಹಾಗೂ ಪಿಜಿ ಪಾಳ್ಯ ಹತ್ತಿರದ ಮಸ್ಕಿತಹಳ್ಳಕ್ಕೆ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಾಗಾರಿಗೆ ಗುದ್ದಲಿ ಪೂಜೆ ಮಾಡುತ್ತಿದ್ದು . ಕಾಮಗಾರಿಯು ಉತ್ತಮ ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದವರಿಗೆ ಸೂಚಿಸಿದರು

ಇದಲ್ಲದೆ ಪಿ. ಜಿ. ಪಾಳ್ಯ ಗ್ರಾಮದ ಪರಿಶಿಷ್ಟ ಜಾತಿ ಬಡವಣೆಯಲ್ಲಿ ಎಸ್.ಇ.ಪಿ ಯೋಜನೆಯಡಿ ಸುಮಾರು 25 ಲಕ್ಷ ರೂ. ಮತ್ತು ಹುಣಸೇ ಪಾಳ್ಯ ಗ್ರಾಮದ ಪರಿಶಿಷ್ಟ ಜಾತಿ ಬಡವಣೆಯಲ್ಲಿ ಎಸ್. ಇ. ಪಿ.ಪಿ ಯೋಜನೆ ಅನುಧಾನದಡಿ ಸುಮಾರು 25 ಲಕ್ಷ ರೂ ಅಂದಾಜು ವೆಚ್ಚದಲ್ಲಿ ಸಿಸಿರಸ್ತೆ ನಿರ್ಮಾಣ ಕಾಮಾಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಇದೆ ಸಮಯದಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್, ಎಇ ಸುರೇಂದ್ರ, ಮುಖಂಡರುಗಳಾದ ಬಿಳಿಗಿರಿ ಮಹದೇವಸ್ವಾಮಿ, ಜಿ ಎಂ ಮಾದೇಶ್, ನಿಂಗಶೆಟ್ಟಿ ಜಡರುದ್ರಸ್ವಾಮಿ, ಕೃಷ್ಣಮೂರ್ತಿ, ಸಿದ್ದರಾಜು, ಚಿಕ್ಕರಾಜಶೆಟ್ಟಿ, ಚಿನ್ನಸ್ವಾಮಿ, ಬೇಕ್ರಿ ಶಿವಕುಮಾರ್, ಸೆಲ್ವಂ, ಮಹೇಂದ್ರ,ರವಿ, ಸಣ್ಣಮಾದ, ಸೋಮಶೇಖರ್, ನಾಗೇಂದ್ರ, ಮಧುಸೂದನ್, ಎಂ ಎಸ್ ಸಿ ಮಹದೇಸ್ವಾಮಿ, ನಾಗರಾಜು, ಪುನೀತ್, ಉದ್ದನೂರು ಶಾಂತರಾಜು, ಗಿರೀಶ್ ಪ್ರಮೋದ್, ವೆಂಕಟೇಶ್, ಗೋವಿಂದ, ವಿಜಯ್ ಕುಮಾರ್, ನಟರಾಜು, ಪ್ರಭುಸ್ವಾಮಿ,ಹಾಗೂ ಇನ್ನಿತರರು ಹಾಜರಿದ್ದರು,

ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

Legal action if domestic gas is used for commercial purposes

ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

ವಿಜಯನಗರ, (ಹೊಸಪೇಟೆ):ಗೃಹ ಬಳಕೆಗಾಗಿ ರಿಯಾಯಿತಿ ದರದಲ್ಲಿ ನೀಡಲಾಗುವ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಜಿಲ್ಲೆಯ ವಾಣಿಜ್ಯ ಸಂಸ್ಥೆಗಳಲ್ಲಿ ನಿಯಮಬಾಹಿರವಾಗಿ ಬಳಸುತ್ತಿರುವುದನ್ನು ಪತ್ತೆ ಹಚ್ಚಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಹಾರ ನಿರೀಕ್ಷಕರು ಶನಿವಾರ ಜಿಲ್ಲೆಯಾದ್ಯಂತ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಹೋಟೆಲ್‌, ಬೇಕರಿ, ಫಾಸ್ಟ್ ಫುಡ್ ಸೆಂಟರ್‌, ಜನನಿಬಿಡ ಆಟೋ ಹಾಗೂ ಬಸ್ ನಿಲ್ದಾಣಗಳ ಬಳಿಯಿರುವ ಉಪಾಹಾರ ಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾಲೀಕರಿಗೆ ಗೃಹ ಬಳಕೆ ಸಿಲಿಂಡರ್‌ಗಳನ್ನು ಯಾವುದೇ ಕಾರಣಕ್ಕೂ ವಾಣಿಜ್ಯ ಉದ್ದೇಶಗಳಿಗೆ ಬಳಸಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿ ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ರುವುದು ಕಂಡುಬಂದಲ್ಲಿ, ಅಂತಹ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಮಾಲೀಕರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ಆಹಾರ ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಎಚ್ಚರಿಕೆ ನೀಡಿದರು.

ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ ದಿನಾಚರಣೆ ನ್ಯಾಯವಾದಿ ನಂದಿನಿ ಸಲಹೆ

Women need legal knowledge: Lawyer Nandini's advice on Women's Day

ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ ದಿನಾಚರಣೆ ನ್ಯಾಯವಾದಿ ನಂದಿನಿ ಸಲಹೆ

ಗಂಗಾವತಿ : 14 ಪ್ರತಿ ಕ್ಷೇತ್ರದಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚು ಸಾಧನೆ ಮಾಡಿದ್ದಾರೆ ಎಂದು ನ್ಯಾಯವಾದಿ ನಂದಿನಿ ಶ್ಲಾಘಿಸಿದರು.

ನಗರದ ಬಿಜೆಪಿ ಕಛೇರಿಯಲ್ಲಿ ನಗರ ಘಟಕ ಮಹಿಳಾ ಅಧ್ಯಕ್ಷರ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಿಳೆ ತಾಯಿ , ಮಗಳು, ಅಕ್ಕ-ತಂಗಿ, ಗೆಳತಿ, ಹೆಂಡತಿಯಾಗಿ ಸರ್ವರಿಗೂ ಒಳಿತು ಬಯಸುತ್ತ ಸಂಸಾರ ನೌಕೆಯನ್ನು ಉತ್ತಮವಾಗಿ ಸಾಗಿತ್ತಿದ್ದಾರೆ. ಮಹಿಳೆಯನ್ನು ದೇವತೆಗಳಿಗೆ ಹೋಲಿಕೆ ಮಾಡಲಾಗುತ್ತದೆ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಕೊಡಬೇಕು ಎಂಬ ಉದ್ಧೇಶದಿಂದ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಕಾನೂನಿನಲ್ಲಿ ಸಿಗುವ ಸ್ಥಾನಮಾನ, ಮಹಿಳೆಯರ ಶೋಷಣೆ ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚೆ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಪುರುಷರಂತೆ ಮಹಿಳೆಯರೂ ಇರಬೇಕು ಎಂಬ ಉದ್ದೇಶ ಸಂವಿಧಾನ ವಿಶೇಷ ಸ್ಥಾನಮಾನ ಕೊಟ್ಟಿದೆ. ಎಲ್ಲಾ ರಂಗದಲ್ಲಿಯೂ ಇಂದು ತಮ್ಮ ಛಾಪು ಮೂಡಿಸಿದ್ದಾರೆ. ಮಹಿಳೆಯರಿಗೆ ಕಾನೂನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

‘ಮಹಿಳೆ ತಾಯಿ , ಮಗಳು, ಅಕ್ಕ-ತಂಗಿ, ಗೆಳತಿ, ಹೆಂಡತಿಯಾಗಿ ಸರ್ವರಿಗೂ ಒಳಿತು ಬಯಸುತ್ತ ಸಂಸಾರ ನೌಕೆಯನ್ನು ಉತ್ತಮವಾಗಿ ಸಾಗಿತ್ತಿದ್ದಾರೆ. ಮಹಿಳೆಯನ್ನು ದೇವತೆಗಳಿಗೆ ಹೋಲಿಕೆ ಮಾಡಲಾಗುತ್ತದೆ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಕೊಡಬೇಕು ಎಂಬ ಉದ್ಧೇಶದಿಂದ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಕಾನೂನಿನಲ್ಲಿ ಸಿಗುವ ಸ್ಥಾನಮಾನ, ಮಹಿಳೆಯರ ಶೋಷಣೆ ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚೆ ಅತ್ಯಗತ್ಯವಾಗಿದೆ ಎಂದು ಹೇಳಿದರು.
ನಂತರ ಮಾತನಾಡಿದ ಬಿಜೆಪಿ ಮಹಿಳಾ ನಗರ ಘಟಕ ಅಧ್ಯಕ್ಷ ಭಾರತಿ ಕೃಷ್ಣ ಆಗಲೂರು ಪ್ರಥಮ ಬಾರಿಗೆ ಬಿಜೆಪಿ ಕಚೇರಿಯಲ್ಲಿ ಮಹಿಳಾ ದಿನಾಚರಣೆ ಆಚರಣೆ ಮಾಡಿದಕ್ಕೆ ನನಗೆ ಸಂತೋಷವಾಗಿ ಅದೆ ರೀತಿ ನಮಗೆ ಸಹಾಯ ಮತ್ತು ಸಹಕಾರ ನೀಡಿದ ಜನಪ್ರಿಯ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷರು ನಗರ ಘಟಕ ಅಧ್ಯಕ್ಷರು ಮತ್ತು ಬಿಜೆಪಿ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷರು ಕಾರ್ಯದರ್ಶಿ ಅದರ ಜೊತೆಗೆ ಗಂಗಾವತಿ ಎಲ್ಲಾ ಸಹೋದರಿಯರು ನನಗೆ ಪ್ರೋತ್ಸಾಹ ನೀಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾಡಕ್ಕೆ ಕೈ ಜೋಡಿಸಿದ್ದಾರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಪ್ರಮಾಣದ ಮಹಿಳೆಯರನ್ನು ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ ಎಂದು ಭರವಸೆ ನೀಡಿದರು.
ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಮಹಿಳೆಯರಿಗೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಿದರು..
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಜಿಲ್ಲಾಧ್ಯಕ್ಷರಾದ ರತ್ನಕುಮಾರಿ,ಪ್ರಧಾನ ಕಾರ್ಯದರ್ಶಿ ಶೈಲಜಾ,ಕೀರ್ತಿ ಪಾಟೀಲ್, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ಮಾಲಾ ನಾಯಕ, ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಡಿ.ಕೆ.ಆಗೋಲಿ, ನಗರ ಘಟಕ ಅಧ್ಯಕ್ಷರಾದ ಚಂದ್ರಶೇಖರ ಹಿರೂರು,ಮಹಿಳೆಯರಾದ ಕಮಲಮ್ಮ,ಲಲಿತಾ,ಹುಲಿಗೆಮ್ಮ ನಾಯಕ,ವಿಜಯಲಕ್ಷ್ಮಿ ಹಿರೇಮಠ, ಕಲ್ಲಮ್ಮ,ಸೌಭಾಗ್ಯ, ರಾಜೇಶ್ವರಿ,ರಾಧಾ ಉಮೇಶ,ಸೇರಿದಂತೆ ಇತರರು ಇದ್ದರು

ಲಿಂಗ ಸಾಮರಸ್ಯದಿಂದ ಮಹಿಳಾ ಸಬಲೀಕರಣ ಸಾಧ್ಯ ಡಾ. ಸುಷ್ಮಾ ಹೂಗಾರ

ಲಿಂಗ ಸಾಮರಸ್ಯದಿಂದ ಮಹಿಳಾ ಸಬಲೀಕರಣ ಸಾಧ್ಯ ಡಾ. ಸುಷ್ಮಾ ಹೂಗಾರ

Women empowerment is possible through gender harmony. Dr. Sushma Hoogara

ವಿಜಯನಗರ(ಹೊಸಪೇಟೆ): ವಿಜಯನಗರ ಮಹಾವಿದ್ಯಾಲಯ, ಹೊಸಪೇಟೆ ಎನ್.ಎಸ್.ಎಸ್ ಘಟಕದಿಂದ ಆಯೋಜಿಸಿದ ವಿಶೇಷ ವಾರ್ಷಿಕ ಶಿಬಿರದ ಮೂರನೇ ದಿನದ ವಿಶೇಷ ಉಪನ್ಯಾಸಕ ಕಾರ್ಯಕ್ರಮದಲ್ಲಿ
ಮಹಿಳೆ ಮತ್ತು ಪುರುಷ ತಮ್ಮ ನ್ಯೂನ್ಯತೆ ಮತ್ತು ಶಕ್ತಿಗಳನ್ನು ಅರಿತುಕೊಂಡು ಇಬ್ಬರೂ ಸಮ ಎಂದು ಸ್ವೀಕಾರ ಮಾಡಿಕೊಂಡು ಹೊಂದಾಣಿಕೆಯನ್ನು ರೂಢಿಸಿಕೊಂಡಲ್ಲಿ ಮಾತ್ರ ಬದುಕು ಅರ್ಥಪೂರ್ಣ ಎಂದು ವಿಜಯನಗರ ಕಾಲೇಜಿನ ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೂಷ್ಮಾಹೂಗಾರ್ ಮಾಹಿತಿ ನೀಡಿದರು.ವಿಜಯನಗರ ಕಾಲೇಜಿನ ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೂಷ್ಮಾಹೂಗಾರ್ ಅವರು ಮಹಿಳಾ ಸಬಲೀಕರಣ ಹಾಗೂ ಲಿಂಗಸಾಮರಸ್ಯದ ಅನಿವಾರ್ಯತೆಯ ಕುರಿತು ಮಾತನಾಡಿದರು.ಇಂದಿನ ಕಾಲದ ಮಹಿಳೆ,ಶಿಕ್ಷಣ ಪಡೆದಿದ್ದಾಳೆ,ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದಾಳೆ. ಆದರೆ ಇವುಗಳ ಆಧಾರದ ಮೇಲೆ ಮಹಿಳೆ ಸಬಲೆಯಾಗಿದ್ದಾಳೆ ಎಂದರೆ ಅದು ಕೇವಲ ಕಲ್ಪನೆ , ಮೊದಲಿನ ಕಾಲಕ್ಕೂ ಈಗಿನ ಕಾಲಕ್ಕೂ ಹೋಲಿಸಿದರೆ ಕೇವಲ ಶೋಷಣೆ ಆಯಾಮಗಳು ಬದಲಾಗಿವೆ, ಹೊರತು ಕಡಿಮೆಯಾಗಿಲ್ಲ. ಮಹಿಳಾ ಸಬಲೀಕರಣದ ಪ್ರಕ್ರಿಯೆ ನಡೆಯಬೇಕಾಗಿರುವುದು ಸಮಾಜದಲ್ಲಲ್ಲ ಸ್ತ್ರೀ ಹಾಗೂ ಪುರುಷನ ವೈಚಾರಿಕತೆಯಲ್ಲಿ ಮತ್ತು ಅವರ ದೃಷ್ಟಿ ಕೋನದಲ್ಲಿ ಬದಲಾವಣೆ ಅನಿವಾರ್ಯತೆ ಇದೆ. ಆತ್ಮವಿಶ್ವಾಸ ಆತ್ಮ ಗೌರವ ಮನುಷ್ಯನ ಅತಿ ದೊಡ್ಡ ಸಂಪತ್ತು, ಪ್ರತಿ ಮಹಿಳೆ ಆತ್ಮವಿಶ್ವಾಸ ಮತ್ತು ಆತ್ಮ ಗೌರವದಿಂದ ಜೀವನ ನಡೆಸಬೇಕು ಹಾಗೆಯೇ ಪ್ರತಿ ಸವಾಲುಗಳನ್ನು ಅವಕಾಶಗಳನ್ನಾಗಿ ಬದಲಾಯಿಸುವ ಛಲ ಹೊಂದಿರಬೇಕು ಎಂದು ಕರೆ ನೀಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರಿಬಸಯ್ಯ ಅವರು ಮಹಿಳೆ ಮತ್ತು ಪುರುಷ ಎಂಬ ಭೇದಭಾವನ್ನು ಮಾಡದೇ ಎಲ್ಲರೂ ಮುನ್ನಡದರೆ ಸಮಸಮಾಜವನ್ನು ಕಾಣಲು ಸಾಧ್ಯ ಎಂದು ಹೇಳಿದರು.
ಈ ವೇಳೆ ಎನ್. ಎಸ್. ಎಸ್ ನ ಕಾರ್ಯಕ್ರಮಾಧಿಕಾರಿ ಡಾ.ಗಾದೆಪ್ಪ ಹಾಗೂ ಡಾ. ವಿರೇಶ್ ಉಪಸ್ಥಿತರಿದ್ದರು ಮತ್ತು ಶಿಬಿರಾರ್ಥಿಗಳು, ಕಾಲೇಜಿನ ಉಪನ್ಯಾಸಕರು ಭಾಗವಹಿಸಿದ್ದರು.

ಸಾವಿನೊಡನೆ ಯುದ್ಧ ಮಾಡಿದ ಧರ್ಮಯೋಧಿನಿಲಿಂಗಾಯತ ಧರ್ಮದ ಪುನರುತ್ಥಾನಕ್ಕೆ ಬದುಕನ್ನೇ ಅರ್ಪಿಸಿದ ಪೂಜ್ಯ ಮಾತೆ ಮಹಾದೇವಿಯವರು

The warrior who fought with death, the revered Mother Mahadevi, who dedicated her life to the revival of Lingayat religion

ಸಾವಿನೊಡನೆ ಯುದ್ಧ ಮಾಡಿದ ಧರ್ಮಯೋಧಿನಿ
ಲಿಂಗಾಯತ ಧರ್ಮದ ಪುನರುತ್ಥಾನಕ್ಕೆ ಬದುಕನ್ನೇ ಅರ್ಪಿಸಿದ ಪೂಜ್ಯ ಮಾತೆ ಮಹಾದೇವಿಯವರು

https://youtu.be/ld3O0tazgTA?si=Hv7hRc5GmNWk4SHn

– ಶರಣ ರತ್ನ ಸಚ್ಚಿದಾನಂದ ಪ್ರಭು ಚಟ್ನಳ್ಳಿ

ಒಬ್ಬ ಮಹಾತ್ಮನ ಜೀವನವನ್ನು ಅಳೆಯುವುದು ಅವನು ಬದುಕಿದ ವರ್ಷಗಳಿಂದಲ್ಲ; ಅವನು ಬದುಕಿದ ಧ್ಯೇಯದಿಂದ. ಈ ದೃಷ್ಟಿಯಿಂದ ನೋಡಿದರೆ ಪರಮ ಪೂಜ್ಯ ಮಹಾಜಗದ್ಗುರು ಮಾತೆ ಮಹಾದೇವಿಯವರ ಜೀವನವು ಕೇವಲ ಒಂದು ವ್ಯಕ್ತಿಯ ಜೀವನಕಥೆಯಲ್ಲ, ಅದು ಲಿಂಗಾಯತ ಧರ್ಮದ ಪುನರುತ್ಥಾನ ಹೋರಾಟದ ಒಂದು ಮಹತ್ವದ ಅಧ್ಯಾಯ.

1946ರ ಮಾರ್ಚ್ 13ರಂದು ಜನಿಸಿದ ಅವರು, 2019ರ ಮಾರ್ಚ್ 14ರಂದು ಲಿಂಗೈಕ್ಯರಾದರು. ಹುಟ್ಟು ಮತ್ತು ಲಿಂಗೈಕ್ಯ ದಿನಾಂಕಗಳ ಈ ಸಮೀಪತೆ ಅವರ ಜೀವನದ ಒಂದು ತಾತ್ವಿಕ ಸಂಕೇತದಂತೆ ಕಾಣುತ್ತದೆ. ತಮ್ಮ ಪ್ರವಚನಗಳಲ್ಲಿ ಅವರು ಹೇಳುತ್ತಿದ್ದ ಮಾತು — “Date of Birth ಯಾವಾಗಲೂ Date of Death ಅನ್ನು ತನ್ನ ಹಿಂದೆಯೇ ಕಟ್ಟಿಕೊಂಡು ಬರುತ್ತದೆ.” — ಅವರ ಜೀವನದಲ್ಲೇ ಸಾರ್ಥಕವಾದಂತಾಗಿದೆ.

ಮಾತಾಜಿಯವರ ಜೀವನದ ಮಹತ್ವ ಕೇವಲ ಆಧ್ಯಾತ್ಮಿಕ ಕ್ಷೇತ್ರದಲ್ಲಷ್ಟೇ ಸೀಮಿತವಾಗಿಲ್ಲ. ಅದು ಸಾಮಾಜಿಕ ಜಾಗೃತಿ, ಧಾರ್ಮಿಕ ಪುನರುತ್ಥಾನ ಮತ್ತು ಮಾನವೀಯ ಮೌಲ್ಯಗಳ ಪುನರ್ ಸ್ಥಾಪನೆಯೊಂದಿಗೂ ಆಳವಾಗಿ ಜೋಡಿಕೊಂಡಿದೆ. ತಮ್ಮ 73 ವರ್ಷಗಳ ಜೀವನದಲ್ಲಿ 54 ವರ್ಷಗಳನ್ನು ಅವರು ಧರ್ಮಸೇವೆಗೆ ಸಮರ್ಪಿಸಿದರು. ಕೇವಲ 19ನೇ ವಯಸ್ಸಿನಲ್ಲಿ ಜಂಗಮ ದೀಕ್ಷೆ ಸ್ವೀಕರಿಸಿದ ಅವರು, ನಂತರದ ಜೀವನವನ್ನೆಲ್ಲ ಗುರು ಬಸವಣ್ಣನವರ ತತ್ವದ ಪ್ರಸಾರ ಮತ್ತು ಲಿಂಗಾಯತ ಧರ್ಮದ ಸ್ವತಂತ್ರ ಗುರುತಿನ ಹೋರಾಟಕ್ಕೆ ಮೀಸಲಿಟ್ಟರು.

ಲಿಂಗಾಯತ ಧರ್ಮದಲ್ಲಿ ಸಾವು ಭಯದ ವಿಷಯವಲ್ಲ; ಅದು ಜೀವನದ ಅಂತಿಮ ಸಂಭ್ರಮ. ಆದರೆ ಮಾತಾಜಿಯವರ ಜೀವನದಲ್ಲಿ ಒಂದು ವಿಶಿಷ್ಟ ವಿರೋಧಾಭಾಸ ಕಾಣುತ್ತದೆ. ಒಂದು ಕಡೆ ಅವರು ಸಾವನ್ನು ಸ್ವಾಗತಿಸಲು ಸಮಾಧಿಯನ್ನೇ ಮುಂಚಿತವಾಗಿ ಸಿದ್ಧಮಾಡಿಕೊಂಡಿದ್ದರು; ಇನ್ನೊಂದು ಕಡೆ ಧರ್ಮಕಾರ್ಯ ಅಪೂರ್ಣವಾಗಿರುವುದರಿಂದ ಇನ್ನೂ ಬದುಕಬೇಕು ಎಂಬ ಸಂಕಲ್ಪದಿಂದ ಅವರು ಸಾವಿನೊಡನೆ ಯುದ್ಧ ಮಾಡಿದರು. ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ದೊರಕಿಸಬೇಕೆಂಬ ಮಹತ್ತರ ಗುರಿ ಅವರ ಮುಂದಿತ್ತು. ಅದಕ್ಕಾಗಿಯೇ ತಮ್ಮ ಜೀವನದ ಕೊನೆಯ ವರ್ಷಗಳಲ್ಲಿ ಅವರು ದೇಹದ ಅಶಕ್ತಿಯ ನಡುವೆಯೂ ಅಸಾಧಾರಣ ಮನೋಬಲದಿಂದ ಬದುಕಿದರು.

ಮಾತಾಜಿಯವರ ತಪಸ್ಸಿನ ಆಳವನ್ನು ಅವರ ಜೀವನದ ಕೆಲವು ಘಟನೆಗಳು ಸ್ಪಷ್ಟಪಡಿಸುತ್ತವೆ. 1972ರಲ್ಲಿ ಬೆಂಗಳೂರಿನಲ್ಲಿ ಬಸವ ಮಂಟಪ ನಿರ್ಮಾಣವಾಗುವ ಸಂದರ್ಭದಲ್ಲಿ ಅವರು ಸ್ವತಃ ಕಟ್ಟಡ ಕಾಮಗಾರಿಯಲ್ಲಿ ಪಾಲ್ಗೊಂಡಿದ್ದರು. ತಲೆಯ ಮೇಲೆ ಸಿಮೆಂಟಿನ ಬುಟ್ಟಿಯನ್ನು ಹೊತ್ತು ದುಡಿಯುತ್ತಿದ್ದ ಅವರ ಚಿತ್ರಗಳು ಇಂದು ಕೇವಲ ನೆನಪುಗಳಲ್ಲ; ಅವು ಒಂದು ತತ್ವದ ಜೀವಂತ ರೂಪಕ.

ಈ ಸಂದರ್ಭದಲ್ಲಿ ಸರ್ವಜ್ಞನ ವಚನ ಅನಾಯಾಸವಾಗಿ ನೆನಪಾಗುತ್ತದೆ:

ಆಳಾಗ ಬಲ್ಲವನು ಆಳುವನು ಅರಸಾಗಿ
ಆಳಾಗಿ ಬಾಳಲರಿಯದವನು | ಕಡೆಯಲ್ಲಿ
ಹಾಳಾಗಿ ಹೋಹ ಸರ್ವಜ್ಞ||

ಇಂದು ಬೆಂಗಳೂರಿನ ಬಸವ ಮಂಟಪ ಕಟ್ಟಡವು ಕೇವಲ ಒಂದು ಧಾರ್ಮಿಕ ಕೇಂದ್ರವಲ್ಲ; ಅದು ತ್ಯಾಗ, ಪರಿಶ್ರಮ ಮತ್ತು ಆಧ್ಯಾತ್ಮಿಕ ದೃಢಸಂಕಲ್ಪಗಳ ಸಂಕೇತವಾಗಿದೆ.

ಮಾತಾಜಿಯವರು ಆಗರ್ಭ ಶ್ರೀಮಂತ ಮನೆತನದಲ್ಲಿ ಜನಿಸಿದರು. ಅವರ ತಂದೆ ಶರಣ ಡಾ. ಬಸಪ್ಪನವರು ಆ ನಿವೇಶನದಲ್ಲಿ ನರ್ಸಿಂಗ್ ಹೋಮ್ ನಿರ್ಮಿಸಿ ತಮ್ಮ ಮಗಳನ್ನು ವೈದ್ಯೆಯನ್ನಾಗಿ ಮಾಡುವ ಕನಸು ಕಂಡಿದ್ದರು. ಆದರೆ ಇತಿಹಾಸವು ಬೇರೆ ದಿಕ್ಕಿನಲ್ಲಿ ಸಾಗಿತು. ಆ ಸ್ಥಳದಲ್ಲಿ ಆಸ್ಪತ್ರೆಯ ಬದಲು ಬಸವ ಮಂಟಪ ನಿರ್ಮಾಣವಾಯಿತು. ಅವರು ವೈದ್ಯೆಯಾಗಲಿಲ್ಲ; ಆದರೆ ಭವರೋಗ ವೈದ್ಯೆಯಾದರು. ನಿರಾಶೆ, ನಿಸ್ಸಹಾಯಕತೆ ಮತ್ತು ಜೀವನದ ಸಂಕಟಗಳಲ್ಲಿ ಸಿಲುಕಿದ್ದ ಅನೇಕ ಜನರಿಗೆ ಅವರ ಪ್ರವಚನಗಳು ಹೊಸ ಆಶಾಕಿರಣವಾಗಿ ಪರಿಣಮಿಸಿದವು.

ಒಂದು ಪ್ರವಚನ ಕೇಳಿ ಆತ್ಮಹತ್ಯೆಯ ನಿರ್ಧಾರದಿಂದ ಹಿಂದಿರುಗಿದ ಜನರ ಕಥೆಗಳು ಅನೇಕ. ಅವರ ಮಾತುಗಳು ಕೇವಲ ಧಾರ್ಮಿಕ ಉಪದೇಶಗಳಲ್ಲ; ಅವು ಬದುಕನ್ನು ಮರು ರೂಪಿಸುವ ಆಧ್ಯಾತ್ಮಿಕ ಶಕ್ತಿ ಹೊಂದಿದ್ದವು.

ಮಾತಾಜಿಯವರು ಕೇವಲ ಧರ್ಮಗುರುಗಳಲ್ಲ. ಅವರು ವಿದ್ವಾಂಸಳು, ಕ್ರಾಂತಿಕಾರಿ ಲೇಖಕಿ, ಅಪೂರ್ವ ವಾಗ್ಮಿ ಮತ್ತು ಆಳವಾದ ಅಧ್ಯಯನಶೀಲ ಚಿಂತಕಿ. ಅವರ ಗ್ರಂಥಗಳು ಮತ್ತು ಪ್ರವಚನಗಳು ಲಿಂಗಾಯತ ಧರ್ಮದ ತಾತ್ವಿಕ ಪರಂಪರೆಗೆ ಹೊಸ ಜೀವ ತುಂಬಿವೆ.

https://youtu.be/ld3O0tazgTA?si=Hv7hRc5GmNWk4SHn

ಮಹಾತ್ಮ ಬುದ್ಧನು ಜೀವನದ ನಶ್ವರತೆಯನ್ನು ಅರಿತು ಸತ್ಯದ ಹುಡುಕಾಟಕ್ಕೆ ಹೊರಟಂತೆ, ಮಾತಾಜಿಯವರು ಕೂಡ ಒಂದು ಪ್ರವಚನದಿಂದಲೇ ಜೀವನದ ದಿಕ್ಕು ಬದಲಿಸಿಕೊಂಡರು. ಶ್ರೀಮಂತ ಜೀವನವನ್ನು ತೊರೆದು ಸರಳತೆಯನ್ನು ಆರಿಸಿಕೊಂಡು ಬಸವ ತತ್ವಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿದರು.

ಅವರು ನೊಂದವರ ನಂದಾದೀಪ, ಶೋಷಿತರ ಸಂಜೀವಿನಿ, ಸ್ತ್ರೀಕುಲದ ಪ್ರೇರಣಾಸ್ವರೂಪಿ, ಧರ್ಮಕ್ರಾಂತಿಯ ದಿವ್ಯಜ್ಯೋತಿ. ಲಿಂಗಾಯತ ಧರ್ಮದ ಪುನರುತ್ಥಾನದಲ್ಲಿ ಅವರ ಪಾತ್ರ ಅಪೂರ್ವ.

ಇಂದು ಅವರ ಜಯಂತಿಯನ್ನು ಸ್ಮರಿಸುವ ಸಂದರ್ಭದಲ್ಲಿ ಒಂದು ಪ್ರಶ್ನೆ ನಮ್ಮ ಮುಂದಿರುತ್ತದೆ: ಧರ್ಮಕ್ಕಾಗಿ, ಸಮಾಜಕ್ಕಾಗಿ ಮತ್ತು ಮಾನವೀಯ ಮೌಲ್ಯಗಳಿಗಾಗಿ ನಾವು ಎಷ್ಟು ತ್ಯಾಗ ಮಾಡಲು ಸಿದ್ಧರಾಗಿದ್ದೇವೆ?

ಮಾತಾಜಿಯವರ ಜೀವನವು ನಮಗೆ ನೀಡುವ ಸಂದೇಶ ಸ್ಪಷ್ಟ —
ಧರ್ಮಕ್ಕಾಗಿ ಬದುಕಿದ ಜೀವನವೇ ನಿಜವಾದ ಅಮರತ್ವ.

— ಶರಣ ರತ್ನ ಸಚ್ಚಿದಾನಂದ ಪ್ರಭು ಚಟ್ನಳ್ಳಿs

ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಲು ಶಿಕ್ಷಣ ಇಲಾಖೆ ಪ್ರಚಾರ ಮಾಡುವಂತೆ ಶಿಕ್ಷಣ ಸಚಿವರಿಗೆಮ್ಯಾಗಳಮನಿ ಒತ್ತಾಯ

Magalamani urges Education Minister to campaign for admission to government schools

ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಲು ಶಿಕ್ಷಣ ಇಲಾಖೆ ಪ್ರಚಾರ ಮಾಡುವಂತೆ ಶಿಕ್ಷಣ ಸಚಿವರಿಗೆ ಮ್ಯಾಗಳಮನಿ ಒತ್ತಾಯ

ಗಂಗಾವತಿ :13 ಬಸ್ ಹಾಗೂ ಬಸ್ ನಿಲ್ದಾಣದಲ್ಲಿ ಸರ್ಕಾರಿ ಶಾಲೆಗಳಿಗೆ ಮಕ್ಕಳ ನ್ನು ಸೇರಿಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇವರನ್ನು ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಒತ್ತಾಯಿಸಿದ್ದಾರೆ.

ನಗರದ ಆನೆಗುಂದಿ ರಸ್ತೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕ್ಷೆತ್ರಶಿಕ್ಷಣಾಧಿಕಾರಿ ಕಾರ್ಯಲಯದ ವ್ಯವಸ್ಥಾಪಕ ಶಿವಪ್ರಸಾದ ಇವರಿಗೆ ಮನವಿ ಸಲ್ಲಿಸಿ ಮಾತನಾಡಿ ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ನಮ್ಮ ಮಾತೃ ಭಾಷೆ ಅವನತಿ ಹೊಂದುವ ಪರಿಸ್ಥಿತಿ ಬರುತ್ತದೆ.

ಆದ್ದರಿಂದ ಕನ್ನಡ ಉಳಿಯಬೇಕಾದರೆ ಸರ್ಕಾರಿ ಶಾಲೆಗಳು ಉಳಿಯಲೇ ಬೇಕು. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಿ ಕನ್ನಡ ಭಾಷೆ ಉಳಿಸಿ ಎಂಬ ಘೋಷ ವಾಕ್ಯ ಉಳ್ಳ ಬ್ಯಾನರ್ ಬಸ್ ನಿಲ್ದಾಣದಲ್ಲಿ ಹಾಕಿಸುವದು ಮತ್ತು ಬಸ್ ಗಳ ಮೇಲೆ ಘೋಷಣೆ ಯ ಸ್ಟಿಕರ್ ಅಂಟಿಸುವದು ಹಾಗೂ ಬಸ್ ನಿಲ್ದಾಣದಲ್ಲಿರುವ ದ್ವನಿವರ್ಧಕಗಳ ಮೂಲಕಪ್ರಚಾರ ಮಾಡಬೇಕು ಶಾಲಾ ಅವಧಿಯಲ್ಲಿ ಮಕ್ಕಳು ಮತ್ತು ಬಾಲ ಕಾರ್ಮಿಕ ಕೆಲಸದಲ್ಲಿ ಕಂಡು ಬಂದಲ್ಲಿ ಕೂಡಲೇ 1098 ಅಥವಾ 112 ನಂಬರ್ ಗೆ ಕರೆಮಾಡಲು ಸಾರ್ವಜನಿಕಮಾಹಿತಿಗಾಗಿ ರ ಪ್ರಚಾರಪಡಿಸಬೇಕೆಂದು ಒತ್ತಾಯಿಸಿದರು.

ಕಡಿಮೆ ಸಂಖ್ಯೆ ದಾಖಲಾತಿ ಇರುವ ಶಾಲೆಗಳನ್ನು ಕಡಿಮೆ ದಾಖಲಾತಿ ನೆಪದಲ್ಲಿ ಮುಚ್ಚುವ ಬದಲು ಪೂರ್ವ ಪ್ರಾಥಮಿಕ ತರಗತಿ ಪ್ರಾರಂಬಿಸುವದರ ಮೂಲಕ ಪುನಶ್ಚತನ ನೀಡಿ ಶಾಲೆಗಳನ್ನು ಮುಚ್ಚದಂತೆ ಕ್ರಮ ಕೈಗೊಳ್ಳಬೇಕು. ಈಗ ಜಾರಿಗೆ ತಂದಿರುವ ಕೆಪಿಸಿ ಮ್ಯಾಗ್ನೆಟ್ ಶಾಲೆಗಳನ್ನು ಆರಂಬಿಸುವದರಿಂದ ಸಾವಿರಾರು ಶಾಲೆಗಳು ಮುಚ್ಚಲಿವೆ ಇದರಿಂದ ಬಡ ಮಕ್ಕಳಿಗೆ ಸಾಕಷ್ಟು ತೊಂದರೆ ಉಂಟಾಗುತ್ತದೆ.

ಈ ಪದ್ಧತಿ ಅವೈದ್ನಾನಿಕವಾದದ್ದು ಕಿರಿಯ ಪ್ರಾಥಮಿಕ ಶಾಲೆಗಳು ಅದೇ ಗ್ರಾಮಗಳಲ್ಲಿ ಇರಲೆಬೇಕು.

ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಅಂದರೆ 6 ನೇ ತರಗತಿಯಿಂದ 10 ನೇ ತರಗತಿಯವರೆಗೆ ಗ್ರಾಮ ಪಂಚಾಯತ್ ಗೊಂದು ವಸತಿಯುತ ಶಾಲೆಗಳನ್ನು ಪ್ರಾರಂಬಿಸುವದರಿಂದ ಮಕ್ಕಳು ಶಾಲೆಯಿಂದ ಹೊರ ಉಳಿಯದೇ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಗ್ರಾಮ ಪಂಚಾಯತ್ ಗೊಂದು ವಸತಿ ಶಾಲೆ ಪ್ರಾರಂಭಿಸಬೇಕು.

ಸರ್ಕಾರಿ ಶಾಲಾ ಶಿಕ್ಷಕರು ಯಾವ ಉದ್ದೇಶಕ್ಕೆ ನೇಮಕಾತಿ ಹೊಂದಿರುವರೋ ಅದನ್ನು ಬಿಟ್ಟು ಅನ್ಯ ಕೆಲಸಗಳಿಗೆ ಸರ್ಕಾರ ಬಳಸಿಕೊಳ್ಳುತ್ತದೆ. ಬಿಸಿಯೂಟ, ಜನಗಣತಿ, ಜಾತಿ ಗಣತಿ, ಬಿ ಎಲ್, ಓ, ಸೇರಿದಂತೆ ಬೇರೆ ಕಾರ್ಯಗಳಿಗೆ ನಿಯೋಜನೆ ಮಾಡುವದರಿಂದ ಮಕ್ಕಳ ಕಲಿಕೆಗೆ ಹಿನ್ನಡೆಯಾಗುವದರಿಂದ ಪಾಲಕರು ತಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಖಾಸಗಿ ಶಾಲೆಗಳ ಮೊರೆ ಹೋಗುವ ಪರಿಸ್ಥಿತಿ ಅನಿವಾರ್ಯವಾಗುತ್ತದೆ ಇದರಿಂದ ಸರ್ಕಾರಿ ಶಾಲೆಗಳು ಸುಲಭವಾಗಿ ಮುಚ್ಚುತ್ತವೆ.

ಅನ್ಯ ಕೆಲಸಗಳಿಗೆ ನಿರುದ್ಯೋಗ ಪದವೀಧರರನ್ನು ಬಳಸಿಕೊಂಡರೆ ಅವರಿಗೂ ಉದ್ಯೋಗ ಲಭಿಸಿದಂತಾಗುತ್ತದೆ.ಗುಣ ಮಟ್ಟದ ಕಲಿಕೆಯೂ ಸಿಗುತ್ತದೆ.

ಕಾರಣ ಶಿಕ್ಷಕರನ್ನು ಅನ್ಯ ಕಾರ್ಯ ಗಳಿಗೆ ನಿಯೋಜನೆ ಮಾಡಬಾರದು ಮತ್ತು ಈಗ ಹೋರಾಡಿಸಿರುವ ಶಾಲೆಗೊಬ್ಬ ಶಿಕ್ಷಕರನ್ನು ಶ್ವಾನ ನೋಡಲ್ ಅಧಿಕಾರಿ ಎಂದು ನೇಮಿಸುವ ಆದೇಶ ಕೂಡಲೇ ಹಿಂಪಡೆಯಬೇಕು.

ಮಳೆಗಾಲದಲ್ಲಿಯೇ ಜೂನ್ ತಿಂಗಳು ಶಾಲೆಗಳು ಪುನಃ ಪ್ರಾರಂಭವಾಗುತ್ತವೆ.

ಸೋರುತ್ತಿರುವ ಮತ್ತು ಅಪಾಯವಾಗುವ ಕೊಠಡಿಗಳನ್ನು ಶಾಲೆಗಳುಆರಂಬುವಾಗುವದರೊಳಗೆ ರಿಪೇರಿ ಮಾಡಿಸಿ ಮಕ್ಕಳಿಗೆ ಆಗುವ ತೊಂದರೆ ತಪ್ಪಿಸಲು ಕ್ರಮ ಕೈಗೊಳ್ಳಬೇಕೆಂದು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಚಂದ್ರು ನಿಸರ್ಗ, ರಾಘವೇಂದ್ರ ಕಡೆಬಾಗಿಲು, ಬಸವರಾಜ್ ನಾಯಕ, ಮೇಘರಾಜ್, ಗಣೇಶ್, ಜಂಬಣ್ಣ ಮತ್ತಿತರರು ಇದ್ದರು