ಸೆ.20 ರಂದು ವಿದ್ಯಾರ್ಥಿಗಳಿಗಾಗಿ ಮ್ಯಾರಥಾನ್ ಸ್ಪರ್ಧೆ
Marathon competition for students on September 20
ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ನ್ಯಾಕೋ ಅವರ ಮಾರ್ಗಸೂಚಿಯಂತೆ ಹೆಚ್.ಐ.ವಿ./ಏಡ್ಸ್ ,ಕುರಿತು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್.ಐ.ವಿ. ಮತ್ತು ಏಡ್ಸ್ (ತಡೆ) ಕಾಯ್ದೆ 2017, NACO AIDS APP, , ಉಚಿತ ರಾಷ್ಟಿçÃಯ ಸಹಾಯವಾಣಿ 1097, ಎಸ್‌ಟಿಐ, ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲಾಗುತ್ತಿದ್ದು, ಅದರ ಅಂಗವಾಗಿ ಜಿಲ್ಲಾ, ರಾಜ್ಯ, ಪ್ರಾದೇಶಿಕ ಹಾಗೂ ರಾಷ್ಟçಮಟ್ಟದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.
ಅದರಂತೆ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಡಳಿತ ಭವನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ 17-25 ವರ್ಷದ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬೇಕು. ಮ್ಯಾರಥಾನ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮೊದಲ ಬಹುಮಾನ ರೂ.5,000/-, ದ್ವಿತೀಯ ಬಹುಮಾನ ರೂ.3,500/- ಹಾಗೂ ತೃತೀಯ ಬಹುಮಾನ ರೂ.2,500/- ಗಳನ್ನು ನೀಡಲಾಗುವುದು.
ಸ್ಪರ್ಧೆಯಲ್ಲಿ ವಿಜೇತರಾದ ಮೊದಲನೇ ಬಹುಮಾನ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಭಾಗವಹಿಸಬೇಕಾಗಿರುತ್ತದೆ. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಪಿ.ಎಫ್.ಎಂ.ಎಸ್. ಮುಖಾಂತರ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿನ ಗುರುತಿನ ಚೀಟಿ, ಆಧಾರ್‌ಕಾರ್ಡ್ ಹಾಗೂ ಕಾಲೇಜಿನ ಪ್ರಾಂಶುಪಾಲರ ಧೃಢೀಕರಣ ಪತ್ರಗಳೊಂದಿಗೆ ಹಾಜರಾಗಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ದೈಹಿಕ ಆರೋಗ್ಯ ಅರ್ಹತಾ (‍Fitness Certificate) ಪ್ರಮಾಣಪತ್ರವನ್ನು ಕಡ್ಡಾಯವಾಗಿ ತರಬೇಕು. ತಪ್ಪಿದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿರುವುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9449846981, 9481732070 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ: ಪರಿಹಾರ ಮೊತ್ತ ಪಾವತಿಸುವಂತೆ ವಿಮಾ ಕಂಪನಿಗೆ ಆದೇಶ
District Consumer Disputes Redressal Commission: Order to insurance company to pay compensation amount

ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ದೂರುದಾರರ ಅಪಘಾತಕ್ಕೀಡಾದ ವಾಹನದ ನಷ್ಟ ಪರಿಹಾರವನ್ನು ನೀಡಲು ನಿರಾಕರಿಸಿ, ಸೇವಾ ನ್ಯೂನ್ಯತೆ ಎಸಗಿದ ಹುಬ್ಬಳ್ಳಿಯ ನ್ಯೂ ಇಂಡಿಯಾ ಅಶ್ಯೂರನ್ಸ್ ಕಂಪನಿ ಲಿ. ಗೆ ನಷ್ಟ ಪರಿಹಾರ ಮೊತ್ತವನ್ನು ಬಡ್ಡಿ ಸಮೇತ ಪಾವತಿಸುವಂತೆ ಆದೇಶಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ತೀರ್ಪು ಪ್ರಕಟಿಸಿದೆ.
ದೂರುದಾರರಾದ ಮೊಹಮ್ಮದ ಅಲಿ ತಂ. ಹಸನ್ ಸಾಬ್ ಎಂಬುವವರು ನರೇಂದ್ರ ರಾಜು ಜೆ. ಅವರಿಂದ ಕೆ.ಎ. 51/ಎಂ.ಕೆ.6199 ನೋಂದಣಿ ಸಂಖ್ಯೆಯ ಕ್ರೇಟಾ ಕಾರನ್ನು ಖರೀದಿಸಿ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು. ದಿನಾಂಕ: 30-09-2024 ರಂದು ಬೆಳಿಗ್ಗೆ 9.30 ಗಂಟೆ ಸುಮಾರಿಗೆ ದೂರುದಾರರ ಕಾರಿಗೆ ಅತೀ ವೇಗವಾಗಿ ಬಂದ ಲಾರಿ ಚಾಲಕನು ಕಾರಿನ ಬಲಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಕಾರಿಗೆ ತೀವ್ರ ಹಾನಿಯಾಗಿತ್ತು. ಲಾರಿ ಚಾಲಕನ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂ:0042/2024 ರಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿತ್ತು. ಅಪಘಾತದಿಂದಾದ ಹಾನಿಯ ಬಗ್ಗೆ ದೂರುದಾರರು ಎದುರುದಾರರಾದ ಡಿವಿಜನಲ್ ಮ್ಯಾನೇಜರ್, ನ್ಯೂ ಇಂಡಿಯಾ ಅಶ್ಯೂರನ್ಸ್ ಕಂಪನಿ ಲಿ. ಹುಬ್ಬಳ್ಳಿ ಇವರಿಗೆ ಮಾಹಿತಿ ನೀಡಿದ್ದರು. ಎದುರುದಾರರು ದೂರು ನೋಂದಾಯಿಸಿಕೊAಡು ತಮ್ಮ ಕಂಪನಿಯ ಸರ್ವೆಯರ್ ಅನ್ನು ನೇಮಕ ಮಾಡಿ, ವಾಹನವನ್ನು ಪರಿಶೀಲಿಸಿ ಮತ್ತು ಹಾನಿಗೊಳಗಾದ ವಾಹನವನ್ನು ದುರಸ್ತಿ ಮಾಡಲು ಶಿಫಾರಸ್ಸು ಮಾಡಿದ್ದರು.
ಎದುರುದಾರರ ಸರ್ವೇಯರ್ ಮಾಹಿತಿಯ ಮೇರೆಗೆ ದೂರುದಾರರ ವಾಹನವನ್ನು ಹೊಸಪೇಟೆಯ ಅಂಕಿತಾ ಆಟೋಮೊಬೈಲ್ಸ್ ಪ್ರೆöÊವೇಟ್ ಲಿಮಿಟೆಡ್ ನಲ್ಲಿ ಬಿಟ್ಟು, ದುರಸ್ತಿ ನಂತರ ದಿನಾಂಕ: 9-12-2024 ರಂದು ರೂ.1,79,929/- ಗಳ ಬಿಲ್‌ನೊಂದಿಗೆ, ನಷ್ಟ ಪರಿಹಾರ ಕೋರಿ ಸೂಕ್ತ ದಾಖಲಾತಿಗಳೊಂದಿಗೆ ಎದುರುದಾರರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಎದುರುದಾರರು ವಾಹನದ ಮಾಲೀಕತ್ವವನ್ನು ದಿನಾಂಕ:26-06-2024 ರಂದು ದೂರುದಾರರಿಗೆ ವರ್ಗಾಯಿಸಿದ್ದು, ದೂರುದಾರರ ಆರ್‌ಸಿ ವರ್ಗಾವಣೆಯಾದ ದಿನಾಂಕದಿAದ 14 ದಿನದೊಳಗೆ ವಿಮೆ ಪಾಲಸಿಯಲ್ಲಿ ಹೆಸರು ವರ್ಗಾವಣೆ ಮಾಡಲು ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ ದೂರುದಾರರ ಹೆಸರಿಗೆ ವಿಮಾ ಪಾಲಿಸಿ ವರ್ಗಾಯಿಸಲು ವಿಮಾ ಕಂಪನಿಗೆ ತಿಳಿಸಿಲ್ಲ. ಆದ್ದರಿಂದ ದೂರುದಾರರ ಹೆಸರಿಗೆ ಪಾಲಿಸಿ ವರ್ಗಾವಣೆ ಮಾಡಲು ಅರ್ಜಿ ಸಲ್ಲಿಸದೇ ಇರುವ ಕಾರಣಕ್ಕಾಗಿ ಕ್ಲೇಮ್ ಮಾಡಲು ಸಾಧ್ಯವಿಲ್ಲವೆಂದು ಎದುರುದಾರರು ಅರ್ಜಿಯನ್ನು ನಿರಾಕರಿಸಿದ್ದರು. ಅದನ್ನು ಒಪ್ಪದ ದೂರುದಾರರು ತಮಗೆ ಉಂಟಾದ ನಷ್ಟಕ್ಕೆ ಪರಿಹಾರವನ್ನು ಕೋರಿ ಎದುರುದಾರ ವಿರುದ್ಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಎದುರುದಾರರು ವಿಚಾರಣೆಗೆ ಹಾಜರಾಗಿ ದೂರಿನಲ್ಲಿನ ಆರೋಪಗಳನ್ನು ಅಲ್ಲಗಳೆಯುತ್ತಾ, ಅಪಘಾತದ ಸಮಯದಲ್ಲಿ ವಿಮೆ ಮಾಡಲಾದ ವಾಹನದ ಮಾಲೀಕರು ಮೊಹಮದ ಅಲಿ ಎಂದು ಮತ್ತು ಅದನ್ನು ದಿನಾಂಕ: 25-06-2024 ರಂದು ಆರ್‌ಸಿ ವರ್ಗಾಯಿಸಲಾಗಿದೆ. ಅಪಘಾತವು ದಿನಾಂಕ: 30-09-2024 ರಂದು ಸಂಭವಿಸಿದೆ ಮತ್ತು ಅಪಘಾತದ ಸಮಯದಲ್ಲಿ ವಿಮಾ ಪಾಲಸಿಯನ್ನು ದೂರುದಾರರ ಹೆಸರಿಗೆ ವರ್ಗಾಯಿಸಲಾಗಿಲ್ಲ. ಆದ್ದರಿಂದ ವಿಮಾ ಪ್ರಮಾಣ ಪತ್ರದ ವರ್ಗಾವಣೆಗೆ ಸಂಬAಧಿಸಿದAತೆ ಪಾಲಸಿಯಲ್ಲಿ ಆರ್‌ಸಿಯನ್ನು ವಿಮಾದಾರರಿಗೆ ವರ್ಗಾಯಿಸಿದ ದಿನಾಂಕದಿAದ 14 ದಿನಗಳಲ್ಲಿ ವಿಮೆಯ ವರ್ಗಾವಣೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಆದರೆ ಪ್ರಸ್ತುತ ಸಂದರ್ಭದಲ್ಲಿ ದೂರುದಾರರು ಆರ್‌ಸಿ ವರ್ಗಾವಣೆಯಾದ ತಕ್ಷಣವೇ ಪಾಲಸಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಂಡಿರುವುದಿಲ್ಲ. ಇದು ಪಾಲಸಿಯ ನಿಯಮಗಳು ಮತ್ತು ಷರತ್ತುಗಳ ಉಲ್ಲಂಘನೆಯಾಗಿದೆ. ಆದ್ದರಿಂದ ದೂರುದಾರರ ಕ್ಲೇಮ್ ಅನ್ನು ನಿರಾಕರಿಸಿದ್ದರು.
ದೂರನ್ನು ದಾಖಲಿಸಿಕೊಂಡು ಎರಡು ಪಕ್ಷಗಾರರ ವಾದ, ಪ್ರತಿವಾದಗಳನ್ನು ಆಲಿಸಿದ ಆಯೋಗದ ಅಧ್ಯಕ್ಷರಾದ ಜಿ.ಇ.ಸೌಭಾಗ್ಯಲಕ್ಷ್ಮೀ ಹಾಗೂ ಸದಸ್ಯರಾದ ರಾಜು ಎನ್.ಮೇತ್ರಿ ರವರು ಎದುರುದಾರರ ವಾಹನ ಅಪಘಾತವಾದ ಸಂದರ್ಭದಲ್ಲಿ ವಿಮಾ ಪಾಲಸಿಯು ಚಾಲ್ತಿಯಲ್ಲಿರುವ ಕಾರಣ ದೂರುದಾರರ ಕಾರಿನ ದುರಸ್ತಿವಮೊತ್ತ ರೂ.1,79,929/- ಗಳನನು ಎದುರುದಾರರಿಗೆ ನೀಡುವುದು ಅವಶ್ಯವಾಗಿರುತ್ತದೆ. ಆದ್ದರಿಂದ ಅಪಘಾತದಿಂದಾದ ನಷ್ಟ ಪರಿಹಾರವನ್ನು ನೀಡುವಲ್ಲಿ ಸೇವಾ ನ್ಯೂನ್ಯತೆ ಎಸಗಿರುವುದು ಸಾಬೀತಾಗಿರುವುದರಿಂದ ದೂರುದಾರರಿಗೆ ಎದುರುದಾರರ ನಷ್ಟ ಪರಿಹಾರವನ್ನು ವಾಹನ ಅಪಘಾತದ ದಿನಾಂಕದಿAದ ಪಾವತಿಯಾಗುವವರೆಗೆ ವಾರ್ಷಿಕ ಶೇ.6 ರ ಬಡ್ಡಿ ಸಮೇತ ನೀಡುವಂತೆ ಹಾಗೂ ದೂರುದಾರರಿಗೆ ಉಂಟಾದ ಮಾನಸಿಕ ಯಾತನೆಗಾಗಿ ರೂ.10,000/- ಗಳನ್ನು ಮತ್ತು ದೂರಿನ ಖರ್ಚು ರೂ.5000/- ಗಳನ್ನು ಆದೇಶದ ದಿನಾಂಕದಿAದ 45 ದಿನಗಳ ಒಳಗಾಗಿ ಎದುರುದಾರರು ದೂರುದಾರರಿಗೆ ಪಾವತಿಸುವಂತೆ ಆದೇಶ ನೀಡಿರುತ್ತಾರೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾçರ್ ಹಾಗೂ ಸಹಾಯಕ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನುದಾನ ಬಿಡುಗಡೆ ವಿಚಾರದಲ್ಲಿ ಸಾಕ್ಷ್ಯ ನೀಡಿದರೆ ರಾಜಕೀಯ ಬಿಡುತ್ತೇನೆ : ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ನೆಲಮಂಗಲದ ಗಾಣಿಗ ಸಮಾಜದ ಸ್ವಾಮಿಗಳು ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ನನ್ನ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸಿದರೆ ರಾಜಕೀಯದಿಂದ ದೂರವಾಗುತ್ತೇನೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು‌‌. ಸ್ವಾಮೀಗಳ ಬಗ್ಗೆ ಗೌರವವಿದೆ. ಆದರೆ, ಅವರು ನನ್ನ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಿದರೆ ರಾಜಕೀಯ ಬಿಡುತ್ತೇನೆ. ಹಣಕಾಸು ಇಲಾಖೆಯವರ ಸೂಚನೆಯಂತೆ ಹಣ ಬಿಡುಗಡೆಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ನನ್ನ ಮೇಲೆ ಸುಖಾಸುಮ್ಮನೆ ಮಾಡಿರುವ ಆರೋಪ ಮಾಡಿರುವ ಸ್ವಾಮೀಜಿಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು. ಈ ಕುರಿತು ವಕೀಲರೊಂದಿಗೆ ಚರ್ಚಿಸಿದ್ದೇನೆ. ಗಾಣಿಗ ಸಮಾಜದ ಸ್ವಾಮೀಜಿಗಳು ಕೇಳಿದ ತಕ್ಷಣ ಹಣ ನೀಡಬೇಕೆಂಬ ಧೋರಣೆ ಇದೆ. ಇದು ಸರಿಯಲ್ಲ‌. ಅದಕ್ಕೊಂದು ನೀತಿ- ನಿಯಮವಿದೆ. ಅದರಂತೆ ನಿಯಮಾನುಸಾರ ಬಿಡುಗಡೆಯಾಗಲಿದೆ ಎಂದರು.

ಇನ್ನೂ ಸಿಎಂ ಬದಲಾವಣೆ ವಿಷಯ ಯಾರೂ ಕೂಡ ಕುರಿತು ಬಹಿರಂಗವಾಗಿ ಮಾತನಾಡಬಾರದು ಎಂದು ನಮ್ಮ ಹೈಕಮಾಂಡ್ ತಿಳಿಸಿದೆ. ಅದರಂತೆ ನಾನು ನಡೆದುಕೊಳ್ಳುವೆ. ಕೆ.ಎನ್ ರಾಜಣ್ಣ ಅವರು ಸೆಪ್ಟಂಬರ್ ಕ್ರಾಂತಿ ಬಗ್ಗೆ ಯಾಕೆ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಅವರು, ಹಿರಿಯರು ಅವರ ಬಗ್ಗೆ ನಾನು ಮಾತನಾಡೋದಿಲ್ಲ. ಸಿಎಂ ಬದಲಾವಣೆ ಎಂದ ಇಕ್ಬಾಲ್ ಹುಸೇನ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ನನಗೆ ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಗೊತ್ತಿಲ್ಲ ಎಂದರು. ಇನ್ನೂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರನ್ನು ಪ್ರಮೋಷನ್- ಡಿಮೋಷನ್ ಮಾಡುವುದು ರಾಜ್ಯ ಜನತೆ. ಬಿಜೆಪಿಯರು ಹೇಳಿದರೇ ಇದು ಸಾಧ್ಯವಿಲ್ಲ ಎಂದರು.

ರಾಯರಡ್ಡಿಯವರು ಗ್ಯಾರಂಟಿ ಯೋಜನೆಯ ಬಗ್ಗೆ ಏನು ಹೇಳಿದ್ದಾರೆ ಎಂಬ ಮಾಹಿತಿ ನನಗಿಲ್ಲ. ವಿವಾದದ ಬಳಿಕ ರಾಯರೆಡ್ಡಿಯವರು ನಾನು ಹೇಳಿದ್ದೊಂದು, ಬರೆದಿದ್ದೊಂದು ಹೇಳಿದ್ದಾರೆ. ಹೀಗಾಗಿ ಈ ಕುರಿತು ಸಮರ್ಪಕ ಸ್ಪಷ್ಡಿಕರಣವನ್ನು ಹಿರಿಯರಾದ ರಾಯರಡ್ಡಿಯವರೇ ಹೇಳಬೇಕು. ರಾಯರೆಡ್ಡಿಯವರು ಹಿರಿಯರಿದ್ದಾರೆ. ಅವರು ಸಚಿವರಾಗಬೇಕು‌. ರಾಘವೇಂದ್ರ ಹಿಟ್ನಾಳ ಸಚಿವರಾಗಬೇಕು‌.‌ ಇದರ ಜತೆಗೆ ನಾನು ಸಚಿವನಾಗಿ ಮುಂದುವರಿಯಬೇಕೆನ್ನುವ ಆಸೆ ಇದೆ. ಇದೆಲ್ಲ ರಾಜಕೀಯದಲ್ಲಿ ಸಹಜವಾಗಿದೆ. ಯಾರು ಸಚಿವರಾಗಬೇಕೆನ್ನುವುದು ಪಕ್ಷ ನಿರ್ಧರಿಸಲಿದೆ ಎಂದರು.

ಬರುವ ಆಗಸ್ಟ್‌ನಲ್ಲಿ 4 ರಂದು ಕೊಪ್ಪಳದಲ್ಲಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಬರಲಿದ್ದಾರೆ. ಅಂದು ಕೊಪ್ಪಳ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ವಿವಿಧ ಯೋಜನೆಗಳ ಚಾಲನೆ ಎಂದರು.

ಸಚಿವ ತಂಗಡಗಿ ವಿರುದ್ಧ ಭ್ರಷ್ಟಾಚಾರ ಆರೋಪ
ಗಾಣಿಗರ ಮಠದ ಜೀರ್ಣೋದ್ಧಾರಕ್ಕಾಗಿ ಹಿಂದಿನ ಸರಕಾರ ಬಿಡುಗಡೆ ಮಾಡಿದ್ದ ಅನುದಾನದ ಬಾಕಿ ಹಣ ನೀಡಲು ಸಚಿವರ ಆಪ್ತ ವಲಯ ಶೇ.25 ರಷ್ಟು ಕಮಿಷನ್‌ ಹಣ ಕೇಳುತ್ತಿದೆ. ಸರಕಾರದ ಈ ಭ್ರಷ್ಟಾಚಾರಕ್ಕೆ ಪ್ರಾಣ ತ್ಯಾಗ ಮಾಡಬೇಕಾಗುತ್ತದೆ ಎಂದು ಶ್ರೀ ತೈಲೇಶ್ವರ ಗಾಣಿಗರ ಮಠದ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದ್ದು, ಇದಕ್ಕೆ ನಾನೇ ಸಾಕ್ಷಿ ಇದ್ದೇನೆ. ನಮ್ಮ ಮಠದ ಅಭಿವೃದ್ಧಿಗೆ ಹಿಂದಿನ ಸರಕಾರ 3.5 ಕೋಟಿ ರೂ. ಅನುದಾನ ನೀಡಿದ್ದು ಅದರಲ್ಲಿಬಾಕಿ 1.5 ಕೋಟಿ ರೂ. ಬಿಡುಗಡೆಗೆ ಎಲ್ಲಾಅನುಮತಿಗಳು ಇದ್ದರೂ ಸಹ ಸಚಿವ ಶಿವರಾಜ್‌ ತಂಗಡಗಿ ಪರೋಕ್ಷವಾಗಿ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹರಿದು ಹೋಗಿದೆ ಕೌದಿ ಹೊಲಿಯುವವರ ಬದುಕು

The lives of those who sew clothes have been torn apart.


ಉತ್ತರ ಕರ್ನಾಟಕದಲ್ಲಿ ಕೌದಿಗೆ ತನ್ನದೇ ಆದ ವಿಶೇಷ ಸ್ಥಾನಮಾನವಿದೆ. ಇಲ್ಲಿನ ಬಹುತೇಕ ಕುಟುಂಬಗಳಲ್ಲಿ ಇಂದಿಗೂ ಮಲಗುವಾಗ ಹೊದ್ದುಕೊಳ್ಳಲು ಕೌದಿ ಬಳಸುತ್ತಾರೆ. ಕೌದಿ ಇರದ ಮನೆಯೇ ಇಲ್ಲ ಎನ್ನಬಹದು ಅಷ್ಟರಮಟ್ಟಿಗೆ ಕೌದಿ ಇಲ್ಲಿನ ಜನ ಜೀವನವನ್ನು ಆವರಿಸಿದೆ.
ಕೌದಿ ಹೊಲೆಯಲು ಇಂಥದ್ದೇ ಬಣ್ಣದ, ಇಷ್ಟೇ ಗಾತ್ರದ ಬಟ್ಟೆಗಳೇ ಬೇಕೆಂದೇನಿಲ್ಲ. ಮನೆಯಲ್ಲಿನ ಹಳೆಯ ಸೀರೆ, ನೈಟಿ, ಚೂಡಿದಾರ್ ಸೇರಿದಂತೆ ನಿಷ್ಪ್ರಯೋಜಕ ಯಾವ ಬಟ್ಟೆಗಳನ್ನಾದರೂ ಬಳಸಿ ಕೌದಿ ಹೊಲೆಯಲಾಗುತ್ತದೆ. ಸಾಂಪ್ರದಾಯಿಕ ಕೌದಿಗಳಲ್ಲಿ ಒಂದು ಕೌದಿಯಂತೆ ಮತ್ತೊಂದನ್ನು ತಯಾರಿಸಲು ಆಗುವುದಿಲ್ಲ. ಏಕೆಂದರೆ ಆ ಕೌದಿಗಳಲ್ಲಿ ಬಳಸುವ ಬಟ್ಟೆಗಳು ಬೇರೆಬೇರೆಯೇ ಆಗಿರುತ್ತವೆ. ಆ ಎಲ್ಲ ಬಟ್ಟೆಗಳನ್ನು ನಿರ್ದಿಷ್ಟ ಆಕಾರಕ್ಕೆ ಕತ್ತರಿಸಿ, ಜೋಡಿಸಿಕೊಂಡು, ಸೂಜಿ ದಾರದಿಂದ ಹೊಲೆದು ತಯಾರಾಗುವ ಬಣ್ಣ ಬಣ್ಣದ ಕೌದಿ ಜಾನಪದ ಸೊಗಡಿನ ಸಂಕೇತದಂತೆ ಕಾಣುತ್ತದೆ.
ದುಡಿಯಲು ಬೇರೆ ಬೇರೆ ಊರುಗಳಿಗೆ ತೆರಳಿದ ಜನರಿಗೆ ಮನೆಯಲ್ಲಿದ್ದಾಗ ದೊರೆಯುತ್ತಿದ್ದ ಅಮ್ಮನ, ಅಜ್ಜಿಯ ಮಡಿಲು ಸಿಕ್ಕದೇ ಹೋಗುತ್ತದೆ. ಅವರಿಗೆಲ್ಲ ಪ್ರೀತಿಪಾತ್ರರ ನೆನಪು ಕಾಡುತ್ತಲೇ ಇರುತ್ತದೆ. ಆಗೆಲ್ಲ ಕೌದಿ ಸಹಾಯಕ್ಕೆ ಬರುತ್ತದೆ. ಅಮ್ಮ, ಅಜ್ಜಿಯಂದಿರ ಸೀರೆಗಳಿಂದಲೇ ತಯಾರು ಮಾಡಲಾದ ಕೌದಿಗಳು ಅವರು ದೂರದಲ್ಲಿದ್ದರೂ ಸಹ ಅವರ ಮಡಿಲಲ್ಲಿ ಮಲಗಿರುವಂತೆ ಭಾಸವಾಗುತ್ತದೆ. ಕೌದಿಯಲ್ಲಿನ ಪರಿಮಳ

ಮೀನುಗಾರಿಕಾ ಇಲಾಖೆಯಿಂದ ಮಾಸಿಕ ಸಭೆ

Monthly meeting by Fisheries Department

ಕೊಪ್ಪಳ ಅ.04 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತನ ಮೀನುಗಾರಿಕಾ ಇಲಾಖೆಯಿಂದ ಅಕ್ಟೋಬರ್ 04 ರಂದು ಮಾಸಿಕ ಸಭೆ ನಡೆಯಿತು.
ಒಳನಾಡು ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡಗಳನ್ನು ವಿತರಿಸುವ ಕುರಿತು ಪ್ರಚಾರದ ಅಭಿಯಾನದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಮಾಸಿಕ ಸಭೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ವೀರೆಂದ್ರಕುಮಾರ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಬಸವರಾಜ ಪಾಟೀಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಬೆಳಗಾವಿ‌ ಫ್ಲೈಓವರ್ ಯೋಜನೆ:ಅಧಿಕಾರಿಗಳ ಸಮನ್ವಯ ಸಭೆ

ಸುಗಮ ಸಂಚಾರಕ್ಕೆ ಫ್ಲೈಓವರ್ ಸಹಕಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ನಗರದಲ್ಲಿ ವಾಹನ ಸಂಚಾರ ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ-48 ರಿಂದ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಒಟ್ಟಾರೆ 4.50 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಮಾಡಬೇಕು ಎಂಬ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಹುದಿನಗಳ ಕನಸಿನ ಯೋಜನೆಗೆ ಇದೀಗ ಚಾಲನೆ ಲಭಿಸಿದೆ.ಬೆಳಗಾವಿ‌ ನಗರದ ಫ್ಲೈಓವರ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ(ಜ.6) ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆ ನಡೆಯಿತು.ಫ್ಲೈ ಓವರ್ ನಿರ್ಮಾಣವು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಕನಸಿನ ಯೋಜನೆಯಾಗಿದೆ. ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುವುದರಿಂದ ಮುಂಬರುವ ದಿನಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಫ್ಲೈಓವರ್ ನಿರ್ಮಿಸಲು ಉದ್ಧೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.ಈ ಫ್ಲೈಓವರ್ ನಿರ್ಮಾಣದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಅಶೋಕ ವೃತ್ತ, ಆರ್.ಟಿ.ಓ. ವೃತ್ತ ಮತ್ತು ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಸಂಚಾರ ಸುಗಮಗೊಳ್ಳಲಿದೆ.ನೂತನ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಗಳಿಗೆ ಅನುಕೂಲವಾಗುವಂತೆ ಫ್ಲೈಓವರ್ ವಿನ್ಯಾಸಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.ಫ್ಲೈಓವರ್ ಯೋಜನೆ ಪಕ್ಷಿನೋಟ:ರಾಷ್ಟ್ರೀಯ ಹೆದ್ದಾರಿ(ಎನ್.ಎಚ್-48)ಯಿಂದ ಸಂಕಮ್ ಹೋಟೆಲ್, ಅಶೋಕ‌ ವೃತ್ತ, ಆರ್.ಟಿ.ಓ. ವೃತ್ತದ ಮೂಲಕ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಫ್ಲೈ ಓವರ್ ನಿರ್ಮಾಣಗೊಳ್ಳಲಿದೆ.ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಅಶೋಕ ವೃತ್ತ ಮತ್ತು ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ “ರೋಟರಿ” ನಿರ್ಮಿಸಲಾಗುತ್ತದೆ.ಅಶೋಕ ವೃತ್ತದಲ್ಲಿ ಒಂದು ರ್ಯಾಂಪ್ ಬಸ್ ನಿಲ್ದಾಣ, ಒಂದು ಆರ್.ಟಿ.ಓ. ವೃತ್ತದ ಕಡೆ ಹಾಗೂ ಇನ್ನೊಂದು ರ್ಯಾಂಪ್ ಮಹಾಂತೇಶ ನಗರ ಕಡೆಯ ರಸ್ತೆಗೆ ಸೇರಲಿದೆ.ಅದೇ ರೀತಿ ಆರ್.ಟಿ.ಓ. ವೃತ್ತದಲ್ಲಿ ಕೂಡ ಮೂರು ರ್ಯಾಂಪ್ ಗಳಿರಲಿವೆ. ಚೆನ್ನಮ್ಮ ವೃತ್ತ, ಕೃಷ್ಣ ದೇವರಾಯ ವೃತ್ತ(ಕೊಲ್ಲಾಪುರ ಸರ್ಕಲ್) ಹಾಗೂ ಬಸ್ ನಿಲ್ದಾಣ ಕಡೆ ಸಂಪರ್ಕ ಕಲ್ಪಿಸಲಿವೆ.ಇದಲ್ಲದೇ ಒಂದು ರಸ್ತೆ ಮೇಲ್ಸೇತುವೆ(ಆರ್.ಓ.ಬಿ) ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸರ್ವೀಸ್ ರಸ್ತೆ‌ಯನ್ನು ಕೂಡ ಕಲ್ಪಿಸಲು ಉದ್ದೇಶಿಸಲಾಗಿರುತ್ತದೆ.ನಗರದ ಹೃದಯಭಾಗವಾಗಿರುವ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಕೂಡು ರಸ್ತೆಗಳಲ್ಲಿ ದೊಡ್ಡ ಕಮಾನುಗಳಿರಲಿವೆ. ಒಟ್ಟಾರೆ 4.50 ಕಿ.ಮೀ. ಉದ್ದದ ಫ್ಲೈಓವರ್ ಇದಾಗಿರಲಿದೆ.ಬಿಎಸ್ಎನ್ಎಲ್, ಹೆಸ್ಕಾಂ, ಕೆ.ಎಸ್.ಆರ್.ಟಿ.ಸಿ ಹಾಗೂ ನಗರ ನೀರು ಸರಬರಾಜು ಮಂಡಳಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸದರಿ ಕಾಮಗಾರಿ ವ್ಯಾಪ್ತಿಯಲ್ಲಿರುವ ಆಯಾ ಇಲಾಖೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ತಾತ್ಕಾಲಿಕ ಸ್ಥಳಾಂತರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿರ್ದೇಶನ ನೀಡಿದರು.ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಎಸ್.ಸೊಬರದ, ಉಪ ವಿಭಾಗಾಧಿಕಾರಿ ಶ್ರವಣ ನಾಯಕ, ಭೂಸ್ವಾಧೀನ ಇಲಾಖೆಯ ಅಧಿಕಾರಿ ಬಲರಾಮ್ ಚವಾಣ, ಪಾಲಿಕೆ, ಲೋಕೋಪಯೋಗಿ, ಬಿಎಸ್ಎನ್ಎಲ್, ಹೆಸ್ಕಾಂ, ಕೆ.ಎಸ್.ಆರ್.ಟಿ.ಸಿ ಹಾಗೂ ನಗರ ನೀರು ಸರಬರಾಜು ಮಂಡಳಿ, ಸ್ಮಾರ್ಟ್ ಸಿಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯ ಸಭೆಯಲ್ಲಿ ಉಪಸ್ಥಿತರಿದ್ದರು.****